Homeಕರ್ನಾಟಕದೇವನಹಳ್ಳಿಯಲ್ಲಿ ರೈತರು, ಹೋರಾಟಗಾರರ ಬಂಧನ: ಇಂದು ಸಿಎಂ ಮನೆ ಮುಂದೆ ಪ್ರತಿಭಟನೆ

ದೇವನಹಳ್ಳಿಯಲ್ಲಿ ರೈತರು, ಹೋರಾಟಗಾರರ ಬಂಧನ: ಇಂದು ಸಿಎಂ ಮನೆ ಮುಂದೆ ಪ್ರತಿಭಟನೆ

- Advertisement -
- Advertisement -

ಭೂ ಸ್ವಾಧೀನ ವಿರೋಧಿಸಿ ‘ದೇವನಹಳ್ಳಿ ಚಲೋ’ ಹಮ್ಮಿಕೊಂಡಿದ್ದ ರೈತರು ಮತ್ತು ಹೋರಾಟಗಾರರನ್ನು ಬಂಧಿಸಿದ ಪೊಲೀಸರ ನಡೆ ಖಂಡಿಸಿ, ಇಂದು (ಜೂನ್, 26) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಮುಂದೆ ಪ್ರತಿಭಟಿಸಲು ನಿರ್ಧರಿಸಲಾಗಿದೆ.

ನಟರಾದ ಪ್ರಕಾಶ್ ರಾಜ್, ಚೇತನ್ ಅಹಿಂಸಾ, ಸಾಹಿತಿ ಬರಗೂರು ರಾಮಚಂದ್ರಪ್ಪ, ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಹೋರಾಟಗಾರ್ತಿ ವಿಜಯಮ್ಮ ಸೇರಿದಂತೆ ಪ್ರಮುಖ ಸಾಹಿತಿಗಳು, ಚಿಂತಕರು ಮತ್ತು ಬುದ್ಧಿಜೀವಿಗಳು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ, ಸಂಯುಕ್ತ ಹೋರಾಟ ಕರ್ನಾಟಕ ಮತ್ತು ವಿವಿಧ ರೈತ, ದಲಿತ, ಪ್ರಗತಿಪರ ಸಂಘಟನೆಗಳು ಈ ಪ್ರತಿಭಟನೆಯನ್ನು ಬೆಂಬಲಿಸಿವೆ.

ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಪ್ರತಿಭಟನೆ ನಡೆಯಲಿದೆ ಎಂಬ ಮಾಹಿತಿ ದೊರೆತಿದೆ.

ಮುಂದಿನ ನಡೆ ಬಗ್ಗೆ ಪತ್ರಿಕಾಗೋಷ್ಠಿ

ಹೋರಾಟ ನಿರತ ರೈತರು, ಹೋರಾಟಗಾರರನ್ನು ಬಂಧಿಸಿದ ಪೊಲೀಸರ ನಡೆ ಖಂಡಿಸಿ ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ, ಸಂಯುಕ್ತ ಹೋರಾಟ ಕರ್ನಾಟ ಸೇರಿದಂತೆ ಹೋರಾಟದ ನೇತೃತ್ವ ವಹಿಸಿರುವ ಸಂಘಟನೆಗಳು ಇಂದು ಪತ್ರಿಕಾಗೋಷ್ಠಿ ಕರೆದಿವೆ.

ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಯಲಿದೆ. ದೇವನಹಳ್ಳಿ ಹೋರಾಟದ ಮುಂದಿನ ಹಂತಗಳನ್ನು ಈ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಲಿದ್ದಾರೆ.

ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ

ರೈತರು, ಹೋರಾಟಗಾರರನ್ನು ಅಮಾನುಷವಾಗಿ ಬಂಧಿಸಿರುವುದನ್ನು ಖಂಡಿಸಿ ಇಂದು (ಜೂ.26) ರಾಜ್ಯಾದ್ಯಂತ ಪ್ರತಿಭಟನೆಗೆ ಸಂಯುಕ್ತ ಹೋರಾಟ ಕರೆ ಕೊಟ್ಟಿದೆ. ಹಾಗಾಗಿ, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ.

ರೈತರು, ಹೋರಾಟಗಾರರ ಜೊತೆ ಅಮಾನುಷವಾಗಿ ವರ್ತಿಸಿದ ಡಿಎಸ್‌ಪಿ ಸಜಿತ್ ವಿರುದ್ದ ಕ್ರಮ ಕೈಗೊಳ್ಳಬೇಕು. ಅವರನ್ನು ಅಮಾನತು ಮಾಡಿ, ಇಲಾಖಾ ತನಿಖೆಗೆ ಆದೇಶಿಸಬೇಕು. ಭೂ ಸ್ವಾಧೀನ ಪ್ರಕ್ರಿಯೆ ಸಂಪೂರ್ಣವಾಗಿ ಕೈ ಬಿಡಬೇಕು. ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ 13 ಹಳ್ಳಿಗಳ ರೈತರ ಸುಮಾರು 1700 ಎಕರೆಗೂ ಹೆಚ್ಚು ಕೃಷಿ ಭೂಮಿಯ ಸ್ವಾಧೀನಕ್ಕೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿ (ಕೆಐಎಡಿಬಿ) ಮುಂದಾಗಿದೆ. ಇದನ್ನು ವಿರೋಧಿಸಿ ಕಳೆದ 1,180 ದಿನಗಳಿಂದ ರೈತರು ನಿರಂತರ ಹೋರಾಟ ನಡೆಸುತ್ತಿದ್ದರು.

ಹೋರಾಟದ ನಿರ್ಣಾಯಕ ಹಂತವಾಗಿ ನಿನ್ನೆ (ಜೂನ್ 25, ಬುಧವಾರ) ದೇವನಹಳ್ಳಿ ಪಟ್ಟಣದಲ್ಲಿ ‘ದೇವನಹಳ್ಳಿ ಚಲೋ’ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆಯಿಂದ ಸಂಜೆಯವರೆಗೆ ಶಾಂತಿಯುತವಾಗಿ ಸಮಾವೇಶ ನಡೆದಿತ್ತು. ಆದರೆ, ಸಂಜೆ 5 ಗಂಟೆಯ ಬಳಿಕ ಹೋರಾಟ ಮುಂದುವರಿಸಲು ಅವಕಾಶ ನಿರಾಕರಿಸಿದ ಪೊಲೀಸರು ರೈತರು, ವಿವಿಧ ಸಂಘಟನೆಗಳ ಮುಖಂಡರು, ವೃದ್ದರು, ಮಹಿಳೆಯರನ್ನು ಬಂಧಿಸಿದ್ದರು.

ಬಂಧಿತರ ಬಿಡುಗಡೆ

ನಮ್ಮನ್ನು ಬಂಧಿಸಿದರೆ ಜಾಮೀನು ಪಡೆಯುವುದಿಲ್ಲ ಎಂದು ಹೋರಾಟಗಾರರು ಹೇಳಿದ್ದರು. ಆದರೆ, ಬಂಧಿತ ಎಲ್ಲರನ್ನು ತಡರಾತ್ರಿ ಬಿಡುಗಡೆ ಮಾಡಲಾಗಿದೆ. ದೇವನಹಳ್ಳಿಯಲ್ಲಿ ಬಂಧಿಸಿ ಕರೆದೊಯ್ದು ಹೆಗ್ಗಡೆ ನಗರ ಪೊಲೀಸ್ ಮೈದಾನದಲ್ಲಿ ಬಿಡಲಾಗಿತ್ತು. ಎಲ್ಲರೂ ಅಲ್ಲಿಯೇ ತಡರಾತ್ರಿವರೆಗೆ ಪ್ರತಿಭಟನೆ ಮುಂದುವರಿಸಿದ್ದರು.

ರೈತರ ಒತ್ತಾಯಕ್ಕೆ ಸಿದ್ದರಾಮಯ್ಯ ಮಣಿಯಲೇಬೇಕು : ನಗರಗೆರೆ ರಮೇಶ್

ರಾಜ್ಯದ ವಿವಿಧ ಪ್ರದೇಶಗಳಿಗೆ ಹರಡುತ್ತಿರುವ ರೈತರ ಹೋರಾಟದ ಕಿಚ್ಚನ್ನು ಗಮನಿಸಿಯಾದರೂ, ಎಂ.ಬಿ ಪಾಟೀಲ್ ಅವರಂತಹ ಕಾರ್ಪೊರೇಟ್ ಕುಳಗಳ ದಾಸರ ಮಾತನ್ನು ಪಕ್ಕಕ್ಕೆ ಸರಿಸಿ ಹಿಂದೆ ತಾವೇ ನೀಡಿದ ಮಾತಿನಂತೆ ಈಗ ರೈತರ ಒತ್ತಾಯಕ್ಕೆ ಸಿದ್ದರಾಮಯ್ಯನವರು ಮಣಿಯಲೇ ಬೇಕಾಗಿದೆ. ಇಲ್ಲವಾದಲ್ಲಿ ಅವಕಾಶವಾದಿ ರಾಜಕಾರಣಿಗಳ ಪಟ್ಟಿಯಲ್ಲಿ ಅವರ ಹೆಸರೂ ಸೇರಿಕೊಂಡು ರಾಜ್ಯದಲ್ಲಿ ಕೆಟ್ಟ ಚರಿತ್ರೆಯ ಹುಟ್ಟಿಗೆ ಕಾರಣರಾದರೆಂದೇ ಜನರ ನೆನಪಿನಲ್ಲಿ ಉಳಿಯುತ್ತಾರೆ. ಈ ವಿಷಯವನ್ನು ಅವರನ್ನು ಸುತ್ತುವರೆದಿರುವ ರಾಜಕಾರಣಿಗಳು ಅವರಿಗೆ ಅರ್ಥ ಮಾಡಿಸುವುದಿಲ್ಲ. ಅವರಿಗೇ ಪ್ರಬುದ್ಧತೆ ಇದ್ದರೆ ಅರ್ಥ ಮಾಡಿಕೊಳ್ಳಬೇಕು. ಪಕ್ಷದೊಳಗೆ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಗರಂ ಆಗಿರುವ ಹೈಕಮಾಂಡ್‌ಗೆ ರಾಜ್ಯದ ರಾಜಧಾನಿಯ ಸಮೀಪವೇ ನಡೆಯುತ್ತಿರುವ ರೈತರ ಹೋರಾಟ ಗಮನಕ್ಕೆ ಬರಲಿಲ್ಲವೇ? ಇಲ್ಲವೆಂದರೆ, ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ದಿವಾಳಿತನ ಎಷ್ಟು ಆಳವಾಗಿ ಬೇರೂರಿದೆ ಅನ್ನುವುದು ಪ್ರಗಾಢವಾಗಿ ಪ್ರದರ್ಶಿತವಾಗುತ್ತದೆ ಎಂದು ಪ್ರಗತಿಪರ ಹೋರಾಟಗಾರ ನಗರಗೆರೆ ರಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...