Homeಕರ್ನಾಟಕದೇವನಹಳ್ಳಿಯಲ್ಲಿ ರೈತರು, ಹೋರಾಟಗಾರರ ಬಂಧನ: ಇಂದು ಸಿಎಂ ಮನೆ ಮುಂದೆ ಪ್ರತಿಭಟನೆ

ದೇವನಹಳ್ಳಿಯಲ್ಲಿ ರೈತರು, ಹೋರಾಟಗಾರರ ಬಂಧನ: ಇಂದು ಸಿಎಂ ಮನೆ ಮುಂದೆ ಪ್ರತಿಭಟನೆ

- Advertisement -
- Advertisement -

ಭೂ ಸ್ವಾಧೀನ ವಿರೋಧಿಸಿ ‘ದೇವನಹಳ್ಳಿ ಚಲೋ’ ಹಮ್ಮಿಕೊಂಡಿದ್ದ ರೈತರು ಮತ್ತು ಹೋರಾಟಗಾರರನ್ನು ಬಂಧಿಸಿದ ಪೊಲೀಸರ ನಡೆ ಖಂಡಿಸಿ, ಇಂದು (ಜೂನ್, 26) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಮುಂದೆ ಪ್ರತಿಭಟಿಸಲು ನಿರ್ಧರಿಸಲಾಗಿದೆ.

ನಟರಾದ ಪ್ರಕಾಶ್ ರಾಜ್, ಚೇತನ್ ಅಹಿಂಸಾ, ಸಾಹಿತಿ ಬರಗೂರು ರಾಮಚಂದ್ರಪ್ಪ, ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಹೋರಾಟಗಾರ್ತಿ ವಿಜಯಮ್ಮ ಸೇರಿದಂತೆ ಪ್ರಮುಖ ಸಾಹಿತಿಗಳು, ಚಿಂತಕರು ಮತ್ತು ಬುದ್ಧಿಜೀವಿಗಳು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ, ಸಂಯುಕ್ತ ಹೋರಾಟ ಕರ್ನಾಟಕ ಮತ್ತು ವಿವಿಧ ರೈತ, ದಲಿತ, ಪ್ರಗತಿಪರ ಸಂಘಟನೆಗಳು ಈ ಪ್ರತಿಭಟನೆಯನ್ನು ಬೆಂಬಲಿಸಿವೆ.

ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಪ್ರತಿಭಟನೆ ನಡೆಯಲಿದೆ ಎಂಬ ಮಾಹಿತಿ ದೊರೆತಿದೆ.

ಮುಂದಿನ ನಡೆ ಬಗ್ಗೆ ಪತ್ರಿಕಾಗೋಷ್ಠಿ

ಹೋರಾಟ ನಿರತ ರೈತರು, ಹೋರಾಟಗಾರರನ್ನು ಬಂಧಿಸಿದ ಪೊಲೀಸರ ನಡೆ ಖಂಡಿಸಿ ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ, ಸಂಯುಕ್ತ ಹೋರಾಟ ಕರ್ನಾಟ ಸೇರಿದಂತೆ ಹೋರಾಟದ ನೇತೃತ್ವ ವಹಿಸಿರುವ ಸಂಘಟನೆಗಳು ಇಂದು ಪತ್ರಿಕಾಗೋಷ್ಠಿ ಕರೆದಿವೆ.

ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಯಲಿದೆ. ದೇವನಹಳ್ಳಿ ಹೋರಾಟದ ಮುಂದಿನ ಹಂತಗಳನ್ನು ಈ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಲಿದ್ದಾರೆ.

ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ

ರೈತರು, ಹೋರಾಟಗಾರರನ್ನು ಅಮಾನುಷವಾಗಿ ಬಂಧಿಸಿರುವುದನ್ನು ಖಂಡಿಸಿ ಇಂದು (ಜೂ.26) ರಾಜ್ಯಾದ್ಯಂತ ಪ್ರತಿಭಟನೆಗೆ ಸಂಯುಕ್ತ ಹೋರಾಟ ಕರೆ ಕೊಟ್ಟಿದೆ. ಹಾಗಾಗಿ, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ.

ರೈತರು, ಹೋರಾಟಗಾರರ ಜೊತೆ ಅಮಾನುಷವಾಗಿ ವರ್ತಿಸಿದ ಡಿಎಸ್‌ಪಿ ಸಜಿತ್ ವಿರುದ್ದ ಕ್ರಮ ಕೈಗೊಳ್ಳಬೇಕು. ಅವರನ್ನು ಅಮಾನತು ಮಾಡಿ, ಇಲಾಖಾ ತನಿಖೆಗೆ ಆದೇಶಿಸಬೇಕು. ಭೂ ಸ್ವಾಧೀನ ಪ್ರಕ್ರಿಯೆ ಸಂಪೂರ್ಣವಾಗಿ ಕೈ ಬಿಡಬೇಕು. ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ 13 ಹಳ್ಳಿಗಳ ರೈತರ ಸುಮಾರು 1700 ಎಕರೆಗೂ ಹೆಚ್ಚು ಕೃಷಿ ಭೂಮಿಯ ಸ್ವಾಧೀನಕ್ಕೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿ (ಕೆಐಎಡಿಬಿ) ಮುಂದಾಗಿದೆ. ಇದನ್ನು ವಿರೋಧಿಸಿ ಕಳೆದ 1,180 ದಿನಗಳಿಂದ ರೈತರು ನಿರಂತರ ಹೋರಾಟ ನಡೆಸುತ್ತಿದ್ದರು.

ಹೋರಾಟದ ನಿರ್ಣಾಯಕ ಹಂತವಾಗಿ ನಿನ್ನೆ (ಜೂನ್ 25, ಬುಧವಾರ) ದೇವನಹಳ್ಳಿ ಪಟ್ಟಣದಲ್ಲಿ ‘ದೇವನಹಳ್ಳಿ ಚಲೋ’ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆಯಿಂದ ಸಂಜೆಯವರೆಗೆ ಶಾಂತಿಯುತವಾಗಿ ಸಮಾವೇಶ ನಡೆದಿತ್ತು. ಆದರೆ, ಸಂಜೆ 5 ಗಂಟೆಯ ಬಳಿಕ ಹೋರಾಟ ಮುಂದುವರಿಸಲು ಅವಕಾಶ ನಿರಾಕರಿಸಿದ ಪೊಲೀಸರು ರೈತರು, ವಿವಿಧ ಸಂಘಟನೆಗಳ ಮುಖಂಡರು, ವೃದ್ದರು, ಮಹಿಳೆಯರನ್ನು ಬಂಧಿಸಿದ್ದರು.

ಬಂಧಿತರ ಬಿಡುಗಡೆ

ನಮ್ಮನ್ನು ಬಂಧಿಸಿದರೆ ಜಾಮೀನು ಪಡೆಯುವುದಿಲ್ಲ ಎಂದು ಹೋರಾಟಗಾರರು ಹೇಳಿದ್ದರು. ಆದರೆ, ಬಂಧಿತ ಎಲ್ಲರನ್ನು ತಡರಾತ್ರಿ ಬಿಡುಗಡೆ ಮಾಡಲಾಗಿದೆ. ದೇವನಹಳ್ಳಿಯಲ್ಲಿ ಬಂಧಿಸಿ ಕರೆದೊಯ್ದು ಹೆಗ್ಗಡೆ ನಗರ ಪೊಲೀಸ್ ಮೈದಾನದಲ್ಲಿ ಬಿಡಲಾಗಿತ್ತು. ಎಲ್ಲರೂ ಅಲ್ಲಿಯೇ ತಡರಾತ್ರಿವರೆಗೆ ಪ್ರತಿಭಟನೆ ಮುಂದುವರಿಸಿದ್ದರು.

ರೈತರ ಒತ್ತಾಯಕ್ಕೆ ಸಿದ್ದರಾಮಯ್ಯ ಮಣಿಯಲೇಬೇಕು : ನಗರಗೆರೆ ರಮೇಶ್

ರಾಜ್ಯದ ವಿವಿಧ ಪ್ರದೇಶಗಳಿಗೆ ಹರಡುತ್ತಿರುವ ರೈತರ ಹೋರಾಟದ ಕಿಚ್ಚನ್ನು ಗಮನಿಸಿಯಾದರೂ, ಎಂ.ಬಿ ಪಾಟೀಲ್ ಅವರಂತಹ ಕಾರ್ಪೊರೇಟ್ ಕುಳಗಳ ದಾಸರ ಮಾತನ್ನು ಪಕ್ಕಕ್ಕೆ ಸರಿಸಿ ಹಿಂದೆ ತಾವೇ ನೀಡಿದ ಮಾತಿನಂತೆ ಈಗ ರೈತರ ಒತ್ತಾಯಕ್ಕೆ ಸಿದ್ದರಾಮಯ್ಯನವರು ಮಣಿಯಲೇ ಬೇಕಾಗಿದೆ. ಇಲ್ಲವಾದಲ್ಲಿ ಅವಕಾಶವಾದಿ ರಾಜಕಾರಣಿಗಳ ಪಟ್ಟಿಯಲ್ಲಿ ಅವರ ಹೆಸರೂ ಸೇರಿಕೊಂಡು ರಾಜ್ಯದಲ್ಲಿ ಕೆಟ್ಟ ಚರಿತ್ರೆಯ ಹುಟ್ಟಿಗೆ ಕಾರಣರಾದರೆಂದೇ ಜನರ ನೆನಪಿನಲ್ಲಿ ಉಳಿಯುತ್ತಾರೆ. ಈ ವಿಷಯವನ್ನು ಅವರನ್ನು ಸುತ್ತುವರೆದಿರುವ ರಾಜಕಾರಣಿಗಳು ಅವರಿಗೆ ಅರ್ಥ ಮಾಡಿಸುವುದಿಲ್ಲ. ಅವರಿಗೇ ಪ್ರಬುದ್ಧತೆ ಇದ್ದರೆ ಅರ್ಥ ಮಾಡಿಕೊಳ್ಳಬೇಕು. ಪಕ್ಷದೊಳಗೆ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಗರಂ ಆಗಿರುವ ಹೈಕಮಾಂಡ್‌ಗೆ ರಾಜ್ಯದ ರಾಜಧಾನಿಯ ಸಮೀಪವೇ ನಡೆಯುತ್ತಿರುವ ರೈತರ ಹೋರಾಟ ಗಮನಕ್ಕೆ ಬರಲಿಲ್ಲವೇ? ಇಲ್ಲವೆಂದರೆ, ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ದಿವಾಳಿತನ ಎಷ್ಟು ಆಳವಾಗಿ ಬೇರೂರಿದೆ ಅನ್ನುವುದು ಪ್ರಗಾಢವಾಗಿ ಪ್ರದರ್ಶಿತವಾಗುತ್ತದೆ ಎಂದು ಪ್ರಗತಿಪರ ಹೋರಾಟಗಾರ ನಗರಗೆರೆ ರಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...