Homeಮುಖಪುಟಬಿಹಾರ ಎಸ್‌ಐಆರ್, ಮತಗಳ್ಳತನದ ವಿರುದ್ಧ ಸಂಸತ್ ಮುಂದೆ ಪ್ರತಿಭಟನೆ: ವಿಶೇಷ ಟೀ-ಶರ್ಟ್ ಧರಿಸಿ ಗಮನಸೆಳೆದ ಪ್ರತಿಪಕ್ಷ...

ಬಿಹಾರ ಎಸ್‌ಐಆರ್, ಮತಗಳ್ಳತನದ ವಿರುದ್ಧ ಸಂಸತ್ ಮುಂದೆ ಪ್ರತಿಭಟನೆ: ವಿಶೇಷ ಟೀ-ಶರ್ಟ್ ಧರಿಸಿ ಗಮನಸೆಳೆದ ಪ್ರತಿಪಕ್ಷ ಸಂಸದರು

- Advertisement -
- Advertisement -

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಮತ್ತು 2024ರ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಪ್ರತಿಪಕ್ಷ ಸಂಸದರು ಮಂಗಳವಾರವೂ (ಆ.12) ಸಂಸತ್ತಿನ ಮುಂದೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ವೇಳೆ ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ, ದಾವಣಗೆರೆ ಕಾಂಗ್ರೆಸ್ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ಹಲವರು ‘ಮಿಂಟಾ ದೇವಿ’ ಎಂದು ಬರೆದ ಮಹಿಳೆಯೊಬ್ಬರ ಚಿತ್ರವಿರುವ ಟೀ- ಶರ್ಟ್ ಧರಿಸಿ ಗಮನ ಸೆಳೆದರು. ಟೀ-ಶರ್ಟ್ ಹಿಂಭಾಗದಲ್ಲಿ ‘124 ನಾಟ್‌ ಔಟ್’ ಎಂದು ಬರೆಯಲಾಗಿತ್ತು.

‘ಮಿಂಟಾ ದೇವಿ ಎಂಬ ಹೆಸರು ಬಿಹಾರದ ಮತದಾರರ ಪಟ್ಟಿಯಲ್ಲಿದ್ದು, 124 ವರ್ಷ ವಯಸ್ಸಿನ ಅವರು ಮೊದಲ ಬಾರಿಗೆ ಮತ ಚಲಾಯಿಸುತ್ತಿದ್ದಾರೆ’ಎಂದು ಉಲ್ಲೇಖಿಸಿರುವುದಾಗಿ ಪ್ರತಿಪಕ್ಷ ನಾಯಕರು ಆರೋಪಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ, ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್, ಡಿಎಂಕೆ ಸಂಸದ ಟಿಆರ್ ಬಾಲು, ಎನ್‌ಸಿಪಿ (ಎಸ್‌ಪಿ) ಸಂಸದೆ ಸುಪ್ರಿಯಾ ಸುಳೆ, ಡಿಎಂಕೆ ಮತ್ತು ಎಡ ಪಕ್ಷಗಳ ಇತರ ಸಂಸದರು ಮಂಗಳವಾರ ಸಂಸತ್ತಿನ ಮಕರ ದ್ವಾರದ ಬಳಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರತಿಭಟನಾ ನಿರತರು ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕೈಬಿಡುವಂತೆ ಆಗ್ರಹಿಸಿ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು, ಘೋಷಣೆಗಳನ್ನು ಕೂಗಿದರು. ಅವರ ಮುಂದೆ ಇದ್ದ ಒಂದು ಬ್ಯಾನರ್‌ನಲ್ಲಿ “ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ” ಮತ್ತು ಇನ್ನೊಂದು ಬ್ಯಾನರ್‌ನಲ್ಲಿ “ಎಸ್‌ಐಆರ್‌-ಸೈಲೆಂಟ್ ಇನ್ವಿಸಿಬಲ್ ರಿಗ್ಗಿಂಗ್” ಎಂದು ಬರೆಯಲಾಗಿತ್ತು.

ಸಂಸತ್ ಮುಂದೆ ಕಳೆದ 15 ದಿನಗಳಿಂದ ಪ್ರತಿಪಕ್ಷ ಸಂಸದರು ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಜೀವ್ ಕುಮಾರ್ ಮತ್ತು ಜ್ಞಾನೇಶ್ ಕುಮಾರ್ ನೇತೃತ್ವದ ಚುನಾವಣಾ ಆಯೋಗವು ಬಿಜೆಪಿಯ ಇಲಾಖೆಯಾಗಿದೆ ಎಂದು ಕಾಂಗ್ರೆಸ್‌ನ ಮಾಣಿಕ್ಕಂ ಟ್ಯಾಗೋರ್ ಆರೋಪಿಸಿದರು.

“ಮಿಂಟಾ ದೇವಿ ಮೊದಲ ಬಾರಿಗೆ ಮತ ಚಲಾಯಿಸಿದವರು ಮತ್ತು ಅವರಿಗೆ 124 ವರ್ಷ ವಯಸ್ಸಾಗಿದೆ. ಮತದಾರರ ಪಟ್ಟಿಯಲ್ಲಿ ಅವರ ಹೆಸರು ಮೊದಲ ಬಾರಿಗೆ ಮತ ಚಲಾಯಿಸಿದವರಂತೆ ಇದೆ. ಇಂತಹ ವಿಷಯಗಳ ಕುರಿತು ನಾವು ಚರ್ಚೆಯನ್ನು ಬಯಸುತ್ತಿದ್ದೇವೆ. ಚುನಾವಣಾ ಆಯೋಗವು ಬಿಜೆಪಿಗೆ ಹೇಗೆ ಒಂದು ಪಕ್ಷವಾಗಿದೆ. ಮತದಾರರ ಪಟ್ಟಿಯು ಅಂತಹ ವಂಚನೆಯಿಂದ ತುಂಬಿದೆ” ಎಂದು ಪ್ರತಿಭಟನೆಯ ವೇಳೆ ಟ್ಯಾಗೋರ್ ಕಿಡಿಕಾರಿದರು.

ಚುನಾವಣಾ ಆಯೋಗ ಮತ್ತು ಸರ್ಕಾರದ ನಡುವಿನ ಒಪ್ಪಂದವನ್ನು ಆರೋಪಿಸಿ ಸಂಸದ “ಸ್ಟಾಪ್ ಎಸ್‌ಐಆರ್” ಮತ್ತು “ವೋಟ್ ಚೋರಿ” ಎಂಬ ಭಿತ್ತಪತ್ರಗಳನ್ನು ಹಿಡಿದಿದ್ದರು.

ಈ ವರ್ಷದ ಕೊನೆಯಲ್ಲಿ ಬಿಹಾರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಕ್ಕೂ ಮುನ್ನ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಗುರಿಯೊಂದಿಗೆ ಚುನಾವಣಾ ಆಯೋಗದ ಮತದಾರರ ಪಟ್ಟಿಯ ಪರಿಷ್ಕರಣೆ ಕೈಗೊಂಡಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಸಂಸತ್ತಿನ ಎರಡೂ ಮನೆಗಳಲ್ಲಿ ವಿರೋಧ ಪಕ್ಷಗಳು ಎಸ್‌ಐಆರ್ ವಿರುದ್ಧ ಪ್ರತಿಭಟನೆ ನಡೆಸುತ್ತಿವೆ.

ಉಭಯ ಸದನಗಳಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆಸಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸುತ್ತಿವೆ.
ಈ ವಿಚಾರವಾಗಿ ಸಂಸತ್ತಿನ ಕಲಾಪದಲ್ಲಿ ಗದ್ದಲ ನಡೆಯುತ್ತಿದೆ.

ಜುಲೈ 21 ರಂದು ಮಳೆಗಾಲದ ಅಧಿವೇಶನ ಪ್ರಾರಂಭವಾದಾಗಿನಿಂದ, ಆಪರೇಷನ್ ಸಿಂಧೂರ್ ಕುರಿತು ಚರ್ಚೆಗಳು ನಡೆದಿರುವುದನ್ನು ಹೊರತುಪಡಿಸಿ, ಸಂಸತ್ತಿನಲ್ಲಿ ಯಾವುದೇ ವ್ಯವಹಾರಗಳು ನಡೆದಿಲ್ಲ. ಎಸ್‌ಐಆರ್ ವಿಚಾರವಾಗಿಯೇ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಗದ್ದಲ ನಡೆಯುತ್ತಿದೆ.

ಸೋಮವಾರ ಕೇಂದ್ರ ಚುನಾವಣಾ ಆಯೋಗದ ಪ್ರಧಾನ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದ ರಾಹುಲ್ ಗಾಂಧಿ ಸೇರಿದಂತೆ ಪ್ರತಿಪಕ್ಷಗಳ ಸಂಸದರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಅಸ್ಸಾಂ ತೆರವು ಕಾರ್ಯಾಚರಣೆ ವೇಳೆ ಮುಸ್ಲಿಂ ಯುವಕ ಗುಂಡಿನ ದಾಳಿಗೆ ಬಲಿ: ನ್ಯಾಯಾಂಗ ತನಿಖೆಗೆ ಆಗ್ರಹಿಸಿ ತಾಯಿ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...