Homeಕರ್ನಾಟಕ‘ಇದು ಕುಪ್ಪಳ್ಳಿ ಕಹಳೆ’-ಪಠ್ಯಪುಸ್ತಕ ಹಗರಣ ವಿರೋಧಿಸಿ ನಡೆದ ಪ್ರತಿಭಟನಾ ರ್‍ಯಾಲಿಯಲ್ಲಿ ಹಂಸಲೇಖ

‘ಇದು ಕುಪ್ಪಳ್ಳಿ ಕಹಳೆ’-ಪಠ್ಯಪುಸ್ತಕ ಹಗರಣ ವಿರೋಧಿಸಿ ನಡೆದ ಪ್ರತಿಭಟನಾ ರ್‍ಯಾಲಿಯಲ್ಲಿ ಹಂಸಲೇಖ

ಕುವೆಂಪು ಅಂದ್ರೆ ಕನ್ನಡ, ಬಸವಣ್ಣ ಅಂದ್ರೆ ಕರ್ನಾಟಕ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಬಿಜೆಪಿ ಬೆಂಬಲಿತ ಟ್ರೋಲರ್‌‌‌ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿದ ಪಠ್ಯಪುಸ್ತಕಗಳ ಪರಿಷ್ಕರಣೆಯನ್ನು ವಿರೋಧಿಸಿ, ಶಿವಮೊಗ್ಗ ಜಿಲ್ಲೆಯ ಕುಪ್ಪಳ್ಳಿಯಲ್ಲಿರುವ ರಾಷ್ಟ್ರಕವಿ ಕುವೆಂಪು ಅವರ ಸ್ಮಾರಕವಾದ ಕವಿಶೈಲದಲ್ಲಿ, ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಪ್ರತಿಭಟನಾ ರ್‍ಯಾಲಿ ಬುಧವಾರ ನಡೆಯಿತು. ಬೆಳಿಗ್ಗೆ 7 ಗಂಟೆಗೆ ಕವಿಶೈಲದಲ್ಲಿ ಕುವೆಂಪು ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಪ್ರಾರಂಭವಾದ ಪಾದಯಾತ್ರೆ, ತೀರ್ಥಹಳ್ಳಿಯ ಪಟ್ಟಣ ಪಂಚಾಯತಿ ಆವರಣದಲ್ಲಿ ಸಾರ್ವಜನಿಕ ಸಭೆ ಜರಗಲಿದೆ.

ಪ್ರತಿಭಟನಾ ರ್‍ಯಾಲಿಯನ್ನು ಖ್ಯಾತ ಸಾಹಿತಿ, ಸಂಗೀತ ನಿರ್ದೇಶಕ ಹಂಸಲೇಖ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, “ನಾಡಿನ ಆದರ್ಶ ಪುರುಷರಾದ ಬಸವಣ್ಣ ಮತ್ತು ಕುವೆಂಪು ಅವರನ್ನು ಅವಮಾನಿಸುವುದನ್ನು ಕರ್ನಾಟಕದ ಜನರು ಸಹಿಸುವುದಿಲ್ಲ. ಈ ಪ್ರತಿಭಟನೆಯು ಕನ್ನಡ ಭಾಷೆ ಮತ್ತು ಧ್ವಜವನ್ನು ಅವಮಾನಿಸಿದವರಿಗೆ ಬಲವಾದ ಸಂದೇಶವನ್ನು ನೀಡುತ್ತದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹಿಂದೆ ಗೋಕಾಕ್ ಚಳುವಳಿ ನಡೆದಿತ್ತು. ಇದು ಕುಪ್ಪಳ್ಳಿ ಕಹಳೆ. ಕುವೆಂಪು ಅಂದರೆ ಕನ್ನಡ, ಬಸವಣ್ಣ ಅಂದರೆ ಕರ್ನಾಟಕ. ಈಗ ಅವರುಗಳಿಗೇ ಕುತ್ತು ಬಂದಿದೆ ಅಂದಮೇಲೆ ನಾವಿದ್ದು ಮಾಡುವುದೇನು. ಇದು ನಾಡಿನಾದ್ಯಂತ ಮೊಳಗಬೇಕಿದೆ. ನಮ್ಮ ನಾಡು, ನಾಡಗೀತೆ ಎರಡಕ್ಕೂ ಅವಮಾನವಾಗಿದೆ. ಹೀಗಾಗಿ ಇದರ ವಿರುದ್ಧ ನಿರಂತರ ಹೋರಾಟ ನಡೆಯಬೇಕಿದೆ” ಎಂದು ಹಂಸಲೇಖ ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ವಿರುದ್ಧ ‘ಚಾರ್ಜ್‌ ಶೀಟ್‌’ ಹೊರಡಿಸಿದ ಬಹುತ್ವ ಕರ್ನಾಟಕ!

ಸಾಹಿತಿ ಎಸ್.ಜಿ.ಸಿದ್ದರಾಮಯ್ಯ, ಅಂಕಣಕಾರ ಬಿ.ಚಂದ್ರೇಗೌಡ, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಸೇರಿದಂತೆ ಹಲವರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ.

ಚಕ್ರತೀರ್ಥ ನೇತೃತ್ವದ ಪರಿಷ್ಕರಣಾ ಸಮಿತಿ ಕುವೆಂಪು, ಬಸವಣ್ಣ ಸೇರಿದಂತೆ ನಾಡಿನ ಹಲವು ಮಹನೀಯರಿಗೆ ಅಪಮಾನ ಮಾಡಿದ್ದು, ಹೀಗಾಗಿ ಅವರು ಪರಿಷ್ಕರಿಸಿದ ಪಠ್ಯಪುಸ್ತಕಗಳನ್ನು ಹಿಂಪಡೆದು ಈ ಹಿಂದಿನ ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯ ಪಠ್ಯಗಳನ್ನೇ ಮುಂದುವರಿಸಬೇಕೆಂದು ರ್‍ಯಾಲಿಯಲ್ಲಿ ಒತ್ತಾಯಿಸಲಾಯಿತು.

ಸಾಹಿತಿಗಳು, ಕನ್ನಡ ಪರ ಸಂಘಟನೆಗಳು, ನಾಗರೀಕರು ಮತ್ತು ವಿವಿಧ ಸಂಘ ಸಂಸ್ಥೆಗಳು ಒಟ್ಟುಗೂಡಿ ಪಕ್ಷಾತೀತವಾಗಿ ಹೋರಾಟವನ್ನು ರೂಪಿಸಲಾಗಿದ್ದು ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಕ್ಷಣಾ ವೇದಿಕೆ, ವಿದ್ಯಾರ್ಥಿ- ಯುವಜನ- ಮಹಿಳಾ ಸಂಘಟನೆಗಳು ಸೇರಿದಂತೆ ಅನೇಕ ಜನಪರ ಸಂಘಟನೆಗಳು ಪಾದಯಾತ್ರೆಯಲ್ಲಿ ಭಾಗವಹಿಸಿವೆ.

ಇದನ್ನೂ ಓದಿ: ಹಿಂದಿ ಭಾಷೆ ಬಲ್ಲ ಮಕ್ಕಳಿಗೆ ಮಾತ್ರ ಪ್ರವಾಸ – ಕನ್ನಡಕ್ಕೆ ಬಗೆಯುವ ದ್ರೋಹ: ಎಚ್‌ಡಿಕೆ ಆಕ್ರೋಶ

ಸಮಾರೋಪ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್  ಸೇರಿದಂತೆ ಇನ್ನೂ ಹಲವರು ಭಾಗವಹಿಸುವ ನಿರೀಕ್ಷೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...