Homeಕರ್ನಾಟಕ‘ಇದು ಕುಪ್ಪಳ್ಳಿ ಕಹಳೆ’-ಪಠ್ಯಪುಸ್ತಕ ಹಗರಣ ವಿರೋಧಿಸಿ ನಡೆದ ಪ್ರತಿಭಟನಾ ರ್‍ಯಾಲಿಯಲ್ಲಿ ಹಂಸಲೇಖ

‘ಇದು ಕುಪ್ಪಳ್ಳಿ ಕಹಳೆ’-ಪಠ್ಯಪುಸ್ತಕ ಹಗರಣ ವಿರೋಧಿಸಿ ನಡೆದ ಪ್ರತಿಭಟನಾ ರ್‍ಯಾಲಿಯಲ್ಲಿ ಹಂಸಲೇಖ

ಕುವೆಂಪು ಅಂದ್ರೆ ಕನ್ನಡ, ಬಸವಣ್ಣ ಅಂದ್ರೆ ಕರ್ನಾಟಕ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಬಿಜೆಪಿ ಬೆಂಬಲಿತ ಟ್ರೋಲರ್‌‌‌ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿದ ಪಠ್ಯಪುಸ್ತಕಗಳ ಪರಿಷ್ಕರಣೆಯನ್ನು ವಿರೋಧಿಸಿ, ಶಿವಮೊಗ್ಗ ಜಿಲ್ಲೆಯ ಕುಪ್ಪಳ್ಳಿಯಲ್ಲಿರುವ ರಾಷ್ಟ್ರಕವಿ ಕುವೆಂಪು ಅವರ ಸ್ಮಾರಕವಾದ ಕವಿಶೈಲದಲ್ಲಿ, ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಪ್ರತಿಭಟನಾ ರ್‍ಯಾಲಿ ಬುಧವಾರ ನಡೆಯಿತು. ಬೆಳಿಗ್ಗೆ 7 ಗಂಟೆಗೆ ಕವಿಶೈಲದಲ್ಲಿ ಕುವೆಂಪು ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಪ್ರಾರಂಭವಾದ ಪಾದಯಾತ್ರೆ, ತೀರ್ಥಹಳ್ಳಿಯ ಪಟ್ಟಣ ಪಂಚಾಯತಿ ಆವರಣದಲ್ಲಿ ಸಾರ್ವಜನಿಕ ಸಭೆ ಜರಗಲಿದೆ.

ಪ್ರತಿಭಟನಾ ರ್‍ಯಾಲಿಯನ್ನು ಖ್ಯಾತ ಸಾಹಿತಿ, ಸಂಗೀತ ನಿರ್ದೇಶಕ ಹಂಸಲೇಖ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, “ನಾಡಿನ ಆದರ್ಶ ಪುರುಷರಾದ ಬಸವಣ್ಣ ಮತ್ತು ಕುವೆಂಪು ಅವರನ್ನು ಅವಮಾನಿಸುವುದನ್ನು ಕರ್ನಾಟಕದ ಜನರು ಸಹಿಸುವುದಿಲ್ಲ. ಈ ಪ್ರತಿಭಟನೆಯು ಕನ್ನಡ ಭಾಷೆ ಮತ್ತು ಧ್ವಜವನ್ನು ಅವಮಾನಿಸಿದವರಿಗೆ ಬಲವಾದ ಸಂದೇಶವನ್ನು ನೀಡುತ್ತದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹಿಂದೆ ಗೋಕಾಕ್ ಚಳುವಳಿ ನಡೆದಿತ್ತು. ಇದು ಕುಪ್ಪಳ್ಳಿ ಕಹಳೆ. ಕುವೆಂಪು ಅಂದರೆ ಕನ್ನಡ, ಬಸವಣ್ಣ ಅಂದರೆ ಕರ್ನಾಟಕ. ಈಗ ಅವರುಗಳಿಗೇ ಕುತ್ತು ಬಂದಿದೆ ಅಂದಮೇಲೆ ನಾವಿದ್ದು ಮಾಡುವುದೇನು. ಇದು ನಾಡಿನಾದ್ಯಂತ ಮೊಳಗಬೇಕಿದೆ. ನಮ್ಮ ನಾಡು, ನಾಡಗೀತೆ ಎರಡಕ್ಕೂ ಅವಮಾನವಾಗಿದೆ. ಹೀಗಾಗಿ ಇದರ ವಿರುದ್ಧ ನಿರಂತರ ಹೋರಾಟ ನಡೆಯಬೇಕಿದೆ” ಎಂದು ಹಂಸಲೇಖ ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ವಿರುದ್ಧ ‘ಚಾರ್ಜ್‌ ಶೀಟ್‌’ ಹೊರಡಿಸಿದ ಬಹುತ್ವ ಕರ್ನಾಟಕ!

ಸಾಹಿತಿ ಎಸ್.ಜಿ.ಸಿದ್ದರಾಮಯ್ಯ, ಅಂಕಣಕಾರ ಬಿ.ಚಂದ್ರೇಗೌಡ, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಸೇರಿದಂತೆ ಹಲವರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ.

ಚಕ್ರತೀರ್ಥ ನೇತೃತ್ವದ ಪರಿಷ್ಕರಣಾ ಸಮಿತಿ ಕುವೆಂಪು, ಬಸವಣ್ಣ ಸೇರಿದಂತೆ ನಾಡಿನ ಹಲವು ಮಹನೀಯರಿಗೆ ಅಪಮಾನ ಮಾಡಿದ್ದು, ಹೀಗಾಗಿ ಅವರು ಪರಿಷ್ಕರಿಸಿದ ಪಠ್ಯಪುಸ್ತಕಗಳನ್ನು ಹಿಂಪಡೆದು ಈ ಹಿಂದಿನ ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯ ಪಠ್ಯಗಳನ್ನೇ ಮುಂದುವರಿಸಬೇಕೆಂದು ರ್‍ಯಾಲಿಯಲ್ಲಿ ಒತ್ತಾಯಿಸಲಾಯಿತು.

ಸಾಹಿತಿಗಳು, ಕನ್ನಡ ಪರ ಸಂಘಟನೆಗಳು, ನಾಗರೀಕರು ಮತ್ತು ವಿವಿಧ ಸಂಘ ಸಂಸ್ಥೆಗಳು ಒಟ್ಟುಗೂಡಿ ಪಕ್ಷಾತೀತವಾಗಿ ಹೋರಾಟವನ್ನು ರೂಪಿಸಲಾಗಿದ್ದು ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಕ್ಷಣಾ ವೇದಿಕೆ, ವಿದ್ಯಾರ್ಥಿ- ಯುವಜನ- ಮಹಿಳಾ ಸಂಘಟನೆಗಳು ಸೇರಿದಂತೆ ಅನೇಕ ಜನಪರ ಸಂಘಟನೆಗಳು ಪಾದಯಾತ್ರೆಯಲ್ಲಿ ಭಾಗವಹಿಸಿವೆ.

ಇದನ್ನೂ ಓದಿ: ಹಿಂದಿ ಭಾಷೆ ಬಲ್ಲ ಮಕ್ಕಳಿಗೆ ಮಾತ್ರ ಪ್ರವಾಸ – ಕನ್ನಡಕ್ಕೆ ಬಗೆಯುವ ದ್ರೋಹ: ಎಚ್‌ಡಿಕೆ ಆಕ್ರೋಶ

ಸಮಾರೋಪ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್  ಸೇರಿದಂತೆ ಇನ್ನೂ ಹಲವರು ಭಾಗವಹಿಸುವ ನಿರೀಕ್ಷೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...