Homeಕರ್ನಾಟಕಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಖಂಡಿಸಿ ಮಳವಳ್ಳಿಯಲ್ಲಿ ಪ್ರತಿಭಟನೆ

ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಖಂಡಿಸಿ ಮಳವಳ್ಳಿಯಲ್ಲಿ ಪ್ರತಿಭಟನೆ

- Advertisement -
- Advertisement -

ಹುಬ್ಬಳ್ಳಿಯಲ್ಲಿ ನಡೆದ ಗರ್ಭಿಣಿ ಯುವತಿಯ ಮರ್ಯಾದೆಗೇಡು ಹತ್ಯೆ ಖಂಡಿಸಿ ಮಂಡ್ಯದ ಮಳವಳ್ಳಿ ಪಟ್ಟಣದ ಅನಂತ್ ರಾವ್ ವೃತ್ತದಲ್ಲಿ ಜನವಾದಿ ಮಹಿಳಾ ಸಂಘಟನೆ, ಡಿವೈಎಫ್‌ಐ, ಎಸ್‌ಎಫ್‌ಐ ಸಂಘಟನೆಗಳ ನೇತೃತ್ವದಲ್ಲಿ ಬುಧವಾರ (ಡಿ.24) ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಕಾರ್ಯದರ್ಶಿ ದೇವಿ ಅವರು, ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಏಳು ತಿಂಗಳ ಗರ್ಭಿಣಿ ಮಗಳನ್ನೇ ಕೊಡಲಿಯಿಂದ ಕೊಚ್ಚಿ ಕೊಂದಿರುವ ಕ್ರೂರ ಘಟನೆಯನ್ನು ಮಾನವೀಯ ನಾಗರಿಕ ಸಮಾಜ ಸಹಿಸುವುದಿಲ್ಲ ಎಂದರು.

ಎಂಟು ಶತಮಾನಗಳ ಹಿಂದೆಯೇ ಬಸವಣ್ಣನವರು ಅಂತರ್ಜಾತಿ ವಿವಾಹ ಮಾಡಿ ಜಾತಿಯತೆಯನ್ನು ಹೋಗಲಾಡಿಸಲು ಅಡಿಪಾಯ ಹಾಕಿದ್ದರು. ಆದರೆ, ಸಮಾಜದಲ್ಲಿ ಇಂದಿಗೂ ಮೇಲ್ಜಾತಿಯವರ ಅಟ್ಟಹಾಸ, ಜಾತಿ ತಾರತಮ್ಯ, ಜಾತಿ ದ್ವೇಷ, ಅಸ್ಪೃಶ್ಯತೆ, ದಲಿತರನ್ನು ಒಪ್ಪಿಕೊಳ್ಳಲಾಗದಂತ ಮನಸ್ಥಿತಿ ಆಳವಾಗಿದೆ ಎಂಬುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಗರ್ಭಿಣಿಯಾದ ತನ್ನ ಮಗಳನ್ನೇ ಅಮಾನುಷವಾಗಿ ತಂದೆಯೇ ಕೊಲ್ಲುವ ಜಾತಿ ಪ್ರತಿಷ್ಠೆಯು ಘನ ಘೋರವಾಗಿದೆ. ಈ ಜಾತಿ ತಾರತಮ್ಯ, ಜಾತಿ ದ್ವೇಷ, ಅಸ್ಪೃಶ್ಯತೆ ನಿರ್ಭೀಜಗೊಳಿಸದೆ ಸಮಾಜದಲ್ಲಿ ಬೆಳವಣಿಗೆ, ಸಾಮರಸ್ಯ ತರುವುದು ಸಾಧ್ಯವಿಲ್ಲ ಎಂದು ತಿಳಿಸಿದರು.

ಮರ್ಯಾದೆಗೇಡು ಹತ್ಯೆ ನಡೆಸಿದ ಎಲ್ಲರ ಮೇಲೂ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಮೃತ ಮಾನ್ಯಾಳ ಪತಿ ವೀವೇಕಾನಂದ ದೊಡ್ಡಮನಿ ಹಾಗೂ ಅವರ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸಬೇಕು. ಸರ್ಕಾರ ಅಂತರ್ಜಾತಿ ವಿವಾಹವಾಗುವ ಎಲ್ಲಾ ಯುವಕ, ಯುವತಿಯರಿಗೆ ಸೂಕ್ತ ಕಾನೂನು ರಕ್ಷಣೆ ನೀಡಬೇಕು. ಅವರಿಗೆ ಸಾಮಾಜಿಕ, ಆರ್ಥಿಕ ಬಲ ತುಂಬಲು ಪ್ರೋತ್ಸಾಹ ಧನ ಹೆಚ್ಚಳಗೊಳಿಸಬೇಕು ಹಾಗೂ ಮೀಸಲಾತಿ ಸೌಲಭ್ಯ ಒದಗಿಸುವುದು ಸೇರಿದಂತೆ ವಿಶೇಷ ಸೌಲಭ್ಯಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಮರ್ಯಾದಗೇಡು ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ ಸುಪ್ರೀಂ ‌ಕೋರ್ಟ್ ಹಲವು ಮಹತ್ವದ ಆದೇಶಗಳನ್ನು ನೀಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಬದ್ದತೆಯಿಂದ ಪಾಲಿಸುವ ಮೂಲಕ ಸಮಾಜದಲ್ಲಿ ಮರ್ಯಾದೆಗೇಡು ಹತ್ಯೆಯ ವಿರುದ್ದ ಕಠಿಣ ಕಾನೂನು ಜಾರಿಗೆ ತರಬೇಕು. ಮಹಿಳೆಯರ ಮೇಲಾಗುವ ಎಲ್ಲ ತರಹದ ದೌರ್ಜನ್ಯಗಳನ್ನು ತಡೆಗಟ್ಟಲು ನ್ಯಾ. ಜಿ.ಎಸ್ ವರ್ಮಾ ಸಮಿತಿಯ ಹಾಗೂ ಉಗ್ರಪ್ಪ ಸಮಿತಿಯ ಶಿಫಾರಸ್ಸುಗಳನ್ನು ತ್ವರಿತವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಜನವಾದಿ ಮಹಿಳಾ ಸಂಘಟನೆಯ ಮಂಡ್ಯ ಜಿಲ್ಲಾ ಕಾರ್ಯದರ್ಶಿ ಸುಶೀಲಾ ಹಾಗೂ ಜಿಲ್ಲಾ ಉಪಾಧ್ಯಕ್ಷೆ ಶೋಭಾ ಪ್ರತಿಭಟನೆಯಲ್ಲಿ ಮಾತನಾಡಿದರು. ತಾಲೂಕು ಅಧ್ಯಕ್ಷ ಜಯಶೀಲ, ಪ್ರೇಮ, ಸಿಐಟಿಯು ರಾಜ್ಯ ಮುಖಂಡ ರಾಮಕೃಷ್ಣ, ಆನಂದ ಮತ್ತಯ ಇತರರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...