Homeಮುಖಪುಟಧಾರಾವಿ ಪುನರಾಭಿವೃದ್ಧಿ ಯೋಜನೆ ಅದಾನಿ ತೆಕ್ಕೆಗೆ: ಭುಗಿಲೆದ್ದ ಪ್ರತಿಭಟನೆ

ಧಾರಾವಿ ಪುನರಾಭಿವೃದ್ಧಿ ಯೋಜನೆ ಅದಾನಿ ತೆಕ್ಕೆಗೆ: ಭುಗಿಲೆದ್ದ ಪ್ರತಿಭಟನೆ

- Advertisement -
- Advertisement -

ಧಾರಾವಿ ಕೊಳೆಗೇರಿ ಪ್ರದೇಶ ಪುನರಾಭಿವೃದ್ಧಿ ಯೋಜನೆಯನ್ನು ಅದಾನಿ ಗ್ರೂಪ್‌ಗೆ ನೀಡಿರುವುದನ್ನು ವಿರೋಧಿಸಿ ಮಹರಾಷ್ಟ್ರದಲ್ಲಿ ಭಾರೀ ಪ್ರತಿಭಟನೆ ಭುಗಿಲೆದ್ದಿದ್ದು,ಸಾವಿರಾರು ಪ್ರತಿಭಟನಾಕಾರರು ಗೌತಮ್ ಅದಾನಿ ಅವರ ಕಚೇರಿಗೆ ಸ್ಲಮ್‌ನಿಂದ ಮೆರವಣಿಗೆ ನಡೆಸಿದ್ದಾರೆ.

ಪ್ರತಿಭಟನಾಕಾರರು ‘ಅದಾನಿಯನ್ನು ತೆಗೆದುಹಾಕಿ, ಧಾರವಿಯನ್ನು ಉಳಿಸಿ’ ಎಂದು ಬರೆದಿರುವ ಪೋಸ್ಟರ್‌ಗಳನ್ನು ಪ್ರದರ್ಶಿಸಿದ್ದು,  ಧಾರವಿ ನಿವಾಸಿಗಳಿಗೆ 500 ಚದರ ಅಡಿಯ ಮನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಪಾದಯಾತ್ರೆಯ ನೇತೃತ್ವ ವಹಿಸಿದ್ದ ಶಿವಸೇನೆ (ಯುಬಿಟಿ ಬಣ) ಮುಖ್ಯಸ್ಥ ಉದ್ಧವ್ ಠಾಕ್ರೆ ಮಾತನಾಡಿ, ಮಹಾ ವಿಕಾಸ್ ಅಘಾಡಿ ಸರ್ಕಾರವು ಧಾರವಿ ಪುನರಾಭಿವೃದ್ಧಿ ಯೋಜನೆಗೆ (ಡಿಆರ್‌ಪಿ) ಟೆಂಡರ್ ನೀಡಿದೆ ಎಂದು ಭಾರತೀಯ ಜನತಾ ಪಕ್ಷವು ಸುಳ್ಳು ಹೇಳಿಕೆ ನೀಡುತ್ತಿದೆ. ಧಾರಾವಿ ನಿವಾಸಿಗಳು ಮಾತ್ರವಲ್ಲದೆ ಪೊಲೀಸರು, ನೈರ್ಮಲ್ಯ ಕಾರ್ಮಿಕರು ಮತ್ತು ಗಿರಣಿ ಕಾರ್ಮಿಕರಿಗೂ ಧಾರಾವಿಯಲ್ಲಿ ಮನೆ ಸಿಗಬೇಕು. ನಾನು ಅಭಿವೃದ್ಧಿಯ ವಿರೋಧಿಯಲ್ಲ. ಆದರೆ ಇದು ಅತಿ ದೊಡ್ಡ ಹಗರಣವಾಗಿದೆ. ಅದಾನಿ ಕೋಟ್ಯಂತರ ರೂ.ಗಳ ಟಿಡಿಆರ್ ಪಡೆಯುತ್ತಿದ್ದಾರೆ ಎಂದರೆ ಅವರ ಮುಂದಿನ ಪೀಳಿಗೆಗಳು ಸಹ ಕೆಲಸ ಮಾಡದೆ ನೆಮ್ಮದಿಯಿಂದ ಬದುಕಬಹುದು. ಅಷ್ಟರಮಟ್ಟಿಗೆ ಟಿಡಿಆರ್ ಅವರಿಗೆ ಸರ್ಕಾರ ಉಡುಗೊರೆಯಾಗಿ ನೀಡುತ್ತಿದೆ. ಆದರೆ ನಾವು ಅದಕ್ಕೆ ಬಿಡುವುದಿಲ್ಲ ಎಂದು ಠಾಕ್ರೆ ಹೇಳಿದ್ದಾರೆ.

ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿಯಾಗಿದ್ದಾಗ 2018ರಲ್ಲಿ ಧಾರಾವಿಯನ್ನು ಮರು ಅಭಿವೃದ್ಧಿ ಪಡಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಬಿಜೆಪಿಯ ಫಡ್ನವೀಸ್ ಪ್ರಸ್ತುತ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿದ್ದಾರೆ. ನನ್ನ ಸರ್ಕಾರವನ್ನು ಪತನಗೊಳಿಸಲು ಯಾರು ಹಣಕಾಸು ಒದಗಿಸಿದ್ದಾರೆಂದು ಈಗ ಯಾರಾದರೂ ಅರ್ಥಮಾಡಿಕೊಳ್ಳಬಹುದು. ನಮ್ಮ ಸರಕಾರವಿದ್ದಾಗ ಬಿಜೆಪಿಗೆ ತನ್ನ ಸ್ನೇಹಿತರಿಗೆ ಸಹಾಯ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಹಾಗಾಗಿ ನನ್ನ ಪಕ್ಷವನ್ನು ಒಡೆಯಲಾಯಿತು ಮತ್ತು ಪಕ್ಷದ ಚಿಹ್ನೆಯನ್ನು ಕಳ್ಳತನ ಮಾಡಲಾಯಿತು ಎಂದು ಠಾಕ್ರೆ ಹೇಳಿದ್ದಾರೆ.

ಮಹಾರಾಷ್ಟ್ರದ ಉದ್ದವ್‌ ಸರಕಾರ ಅದಾನಿ ಗ್ರೂಪ್ ಜೊತೆ ಈ ಕುರಿತು ಒಪ್ಪಂದ ಮಾಡಿಕೊಂಡಿದೆ ಎಂದು ಬಿಜೆಪಿ ಮತ್ತು ಅದಾನಿ ಗ್ರೂಪ್ ಹೇಳಿಕೊಂಡಿವೆ. ಧಾರವಿ ಯೋಜನೆಯನ್ನು ನ್ಯಾಯಯುತ, ಮುಕ್ತ ಹರಾಜು ಪ್ರಕ್ರಿಯೆಯ ಮೂಲಕ ಅದಾನಿ ಗ್ರೂಪ್‌ಗೆ ನೀಡಲಾಗಿದೆ. ಎಂವಿಎ ಸರ್ಕಾರದ ಅವಧಿಯಲ್ಲಿ ಟೆಂಡರ್ ಷರತ್ತುಗಳನ್ನು ಅಂತಿಮಗೊಳಿಸಲಾಗಿದೆ ಎಂದು ಗ್ರೂಪ್ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನು ಓದಿ: ಸಂಸತ್ತಿನ ಭದ್ರತಾ ಲೋಪ: ಅವಲೋಕನ ಮಾಡಬೇಕಾದ ಅಂಶಗಳಿವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...