Homeಮುಖಪುಟಆನಂದ್‌ ತೇಲ್ತುಂಬ್ಡೆ ಬಿಡುಗಡೆಗೆ ಒತ್ತಾಯಿಸಿ ಮೈಸೂರಿನಲ್ಲಿ ಪ್ರತಿಭಟನೆ

ಆನಂದ್‌ ತೇಲ್ತುಂಬ್ಡೆ ಬಿಡುಗಡೆಗೆ ಒತ್ತಾಯಿಸಿ ಮೈಸೂರಿನಲ್ಲಿ ಪ್ರತಿಭಟನೆ

ಕೋವಿಡ್-19ರ ಸೋಂಕು ತಗಲುವ ಸಾಧ್ಯತೆಯಿರುವುದರಿಂದ ಜೈಲಲ್ಲಿರುವ ಅಪರಾಧಿಗಳನ್ನೇ ಬಿಡುಗಡೆ ಮಾಡುತ್ತಿರುವ ಈ ಸಂದರ್ಭದಲ್ಲಿ 69 ವರ್ಷದ ಸೂಕ್ಷ್ಮ ಆರೋಗ್ಯ ಪರಿಸ್ಥಿತಿಯ ತೇಲ್ತುಂಬ್ಡೆಯವರನ್ನು ಜೈಲಿಗೆ ಕಳುಹಿಸಿದ್ದು ಕ್ರೌರ್ಯದ ಪರಮಾವಧಿ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಪ್ರೊ. ಆನಂದ್‌ ತೇಲ್ತುಂಬ್ಡೆ ಮತ್ತು ಇತರ ಮಾನವ ಹಕ್ಕು ಹೋರಾಟಗಾರರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಮೈಸೂರಿನ ವಿವಿಧ ಸಂಘಟನೆಗಳ ಕಾರ್ಯಕರ್ತರು ಪುರಭವನದ ಎದುರು ಪ್ರತಿಭಟನೆ ನಡೆಸಿದ್ದಾರೆ.

ಏಪ್ರಿಲ್‌ 14ರಿಂದ ಬಂಧನದಲ್ಲಿರುವ ಆನಂದ್‌ ತೇಲ್ತುಂಬ್ಡೆ ಮತ್ತು ಇತರ ಹೋರಾಟಗಾರರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ಕೈಬಿಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಕೋವಿಡ್‌91 ಕಾರಣಕ್ಕಾಗಿ ಪುರಭವನದ ಒಳಗೆ ಹೋಗದೆ ಹೊರಗೆ ಇರುವ ಅಂಬೇಡ್ಕರ್‌ ಪ್ರತಿಮೆಯ ಬಳಿ ಜಮಾಯಿಸಿದ ಹತ್ತಾರು ಕಾರ್ಯಕರ್ತರು ಮುಖಕ್ಕೆ ಮಾಸ್ಕ್‌ ಧರಿಸಿ, ಕೈಯಲ್ಲಿ ತೇಲ್ತುಂಬ್ಡೆಯವರು ಚಿತ್ರಗಳನ್ನು ಹಿಡಿದು ಮೌನ ಪ್ರತಿಭಟನೆ ದಾಖಲಿಸಿದ್ದಾರೆ.

ಕೋವಿಡ್-19ರ ಸೋಂಕು ತಗಲುವ ಸಾಧ್ಯತೆಯಿರುವುದರಿಂದ ಜೈಲಲ್ಲಿರುವ ಅಪರಾಧಿಗಳನ್ನೇ ಬಿಡುಗಡೆ ಮಾಡುತ್ತಿರುವ ಈ ಸಂದರ್ಭದಲ್ಲಿ 69 ವರ್ಷದ ಸೂಕ್ಷ್ಮ ಆರೋಗ್ಯ ಪರಿಸ್ಥಿತಿಯ ತೇಲ್ತುಂಬ್ಡೆಯವರನ್ನು ಜೈಲಿಗೆ ಕಳುಹಿಸಿದ್ದು ಕ್ರೌರ್ಯದ ಪರಮಾವಧಿ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟಿದ್ದಾರೆ.

ಡಾ. ಆನಂದ್ ತೇಲ್ತುಂಬ್ಡೆಯವರನ್ನು ಬಂಧಿಸಿ ಒಂದು ತಿಂಗಳಾಗುತ್ತದೆ. ತೇಲ್ತುಂಬ್ಡೆ ಭಾರತದ ಒಬ್ಬ ಪ್ರಮುಖ ವಿದ್ವಾಂಸ, ಲೋಕಚಿಂತಕ ಹಾಗೂ ಮಾನವ ಹಕ್ಕುಗಳ ಸಕ್ರಿಯ ಪ್ರತಿಪಾದಕ. ಅವರೊಂದಿಗೆ ಹಾಗು ಭೀಮಾಕೋರೆಗಾವ್ ಪ್ರಕರಣದಲ್ಲಿ ಬಂಧಿತರಾಗಿರುವ ಚಿಂತಕರೊಂದಿಗೆ ನಾವಿದ್ದೀವಿ ಎನ್ನುವುದನ್ನು ವ್ಯಕ್ತಪಡಿಸಲು ಮೇ 16 ರಂದು ನಾವೆಲ್ಲರೂ ನ್ಯಾಯದ ದಿನವನ್ನಾಗಿ ಆಚರಿಸೋಣ ಎಂದು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಪಿಯುಸಿಎಲ್‌ ಸಂಘಟೆನಯ ಪ್ರೊ.ಕುಮಾರಸ್ವಾಮಿ, ಪ.ಮಲ್ಲೇಶ್, ಕಾ. ಜಗನ್ನಾಥ್, ಜಿ.ಪಿ. ಬಸವರಾಜು, ಪ್ರೊ. ಷಬೀರ್ ಮುಸ್ತಫಾ, ಪಂಡಿತಾರಾಧ್ಯ, ಚಂದ್ರಶೇಖರ್ ಮೇಟಿ ಸೇರಿದಂತೆ ಮೊದಲಾದವರು ಭಾಗವಹಿಸಿದ್ದರು.


ಇದನ್ನೂ ಓದಿ: ಮೇ 16 ನ್ಯಾಯದ ದಿನ : ಡಾ. ಆನಂದ್ ತೇಲ್ತುಂಬ್ಡೆ ಪರ ದನಿಯೆತ್ತಿದ ಚಿಂತಕರು 

Also Read: Ambedkar Jayanti, Anand Teltumbde arrest and the casteist face of power

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...