Homeಚಳವಳಿಅಗ್ನಿಪಥ್‌‌‌‌‌ ಯೋಜನೆ ವಿರೋಧಿಸಿ ಹಲವು ರಾಜ್ಯಗಳಲ್ಲಿ ಪ್ರತಿಭಟನೆ: ಬಿಹಾರ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ ಧ್ವಂಸ

ಅಗ್ನಿಪಥ್‌‌‌‌‌ ಯೋಜನೆ ವಿರೋಧಿಸಿ ಹಲವು ರಾಜ್ಯಗಳಲ್ಲಿ ಪ್ರತಿಭಟನೆ: ಬಿಹಾರ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ ಧ್ವಂಸ

ಬಿಹಾರ, ಉತ್ತರ ಪ್ರದೇಶ, ಹರಿಯಾಣ ಮತ್ತು ಜಮ್ಮುವಿನಲ್ಲಿ ಸೇನಾ ಉದ್ಯೋಗಾಕಾಂಕ್ಷಿಗಳು ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ‘ಅಗ್ನಿಪಥ್‌‌’ ಯೋಜನೆ ವಿರೋಧಿಸಿ ಮತ್ತು ಸೇನಾ ನೇಮಕಾತಿ ಮಾಡುವಂತೆ ಆಗ್ರಹಿಸಿ ಬಿಹಾರ, ಉತ್ತರ ಪ್ರದೇಶ, ಹರಿಯಾಣ ಮತ್ತು ಜಮ್ಮುವಿನಲ್ಲಿ ಸೇನಾ ಉದ್ಯೋಗಾಕಾಂಕ್ಷಿಗಳು ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಹಾರದಲ್ಲಿ ಪ್ರತಿಭಟನೆ ಹಿಂಸೆಗೆ ತಿರುಗಿದೆ.

ಇದೇ ವೇಳೆ ಬಿಹಾರದ ನಾವಡದಲ್ಲಿ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಲಾಗಿದ್ದು, ಕಚೇರಿಯನ್ನು ಧ್ವಂಸ ಮಾಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಹಾರದಲ್ಲಿ ಪ್ರತಿಭಟನೆ ಎರಡನೇ ದಿನವೂ ಮುಂದುವರೆದಿದ್ದು ರಾಜ್ಯದ ಹಲವು ಜಿಲ್ಲೆಗಳಿಗೆ ಹರಡಿದೆ. ಉದ್ರಿಕ್ತ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿ ರೈಲು, ರಸ್ತೆ ತಡೆಯನ್ನು ನಡೆಸಿದ್ದಾರೆ. ಪೊಲೀಸರು ಜನರನ್ನು ಚದುರಿಸಲು ಲಾಠಿ ಚಾರ್ಜ್‌ ಮಾಡಿದ್ದು, ಆಶ್ರುವಾಯು ಹಾಗೂ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

“ಪಾಪದ ರೈತರು ಇಡೀ ವರ್ಷ ನಿಮ್ಮ ದೌರ್ಜನ್ಯವನ್ನು ಸಹಿಸಿಕೊಂಡರು. ಇವರು ಬಿಸಿ ರಕ್ತದ ಯುವಕರು, ಬಿಜೆಪಿಯವರನ್ನು 6 ತಿಂಗಳಲ್ಲಿ ಬೆತ್ತಲೆ ಮಾಡುತ್ತಾರೆ” ಎಂದು ದೆಹಲಿ ಶಾಸಕ ಗುಲಾಬ್ ಸಿಂಗ್‌‌ ಅವರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಯುವಕರು ರೈಲ್ವೇ ಹಳಿಯ ಮೇಲೆ ನಿಂತು ಬಸ್ಕಿ ಹೊಡೆಯುತ್ತಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್‌ ಮಾಡಿದ್ದಾರೆ.

ಉತ್ತರ ಭಾರತದ ಭಾಗಲ್ಪುರ್, ಅರ್ವಾಲ್, ಬಕ್ಸರ್, ಗಯಾ, ಮುಂಗೇರ್, ನವಾಡ, ಸಹರ್ಸಾ, ಸಿವಾನ್ ಮತ್ತು ಔರಂಗಾಬಾದ್ ಜಿಲ್ಲೆಗಳಲ್ಲಿ ಅಗ್ನಿಪಥ್‌‌ ಯೋಜನೆ ವಿರೋಧಿಸಿ ಮತ್ತು ಸೇನಾ ನೇಮಕಾತಿ ಮಾಡುವಂತೆ ಆಗ್ರಹಿಸಿ ಪ್ರತಿಭಟನೆಗಳು ನಡೆಯುತ್ತಿವೆ.

ಉತ್ತರ ಪ್ರದೇಶದ ಆಗ್ರಾದಲ್ಲಿ ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟಿಸಿದ ಯುವಕರನ್ನು ಲಾಠಿ ಚಾರ್ಜ್‌ ಮಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಅಲ್ಪಾವದಿ ಸೇನಾ ನೇಮಕಾತಿ ಯೋಜನೆಯಾದ ಅಗ್ನಿಪಥ್‌ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಯುವಕರೊಂದಿಗೆ ಪೊಲೀಸರು ವಾಗ್ವಾದ ನಡೆಸಿದರು.

ಮೋದಿ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್‌ ಯೋಜನೆ ವಿರೋಧಿಸಿ ಬಿಹಾರದಾದ್ಯಂತ ಪ್ರತಿಭಟನೆ ನಡೆಯುತ್ತಿರುವ ವೇಳೆ, ರಾಜ್ಯ ನಾವಡದಲ್ಲಿ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಲಾಗಿದೆ ಎಂದು ವರದಿಯಾಗಿದೆ.

ಬಿಹಾರದ ಭಬುವಾ ನಗರದಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ರೈಲಿಗೆ ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ.

ಪ್ರತಿಭಟನೆಯ ವೇಳೆ ಬಿಹಾರದ ಅರಾ ರೈಲು ನಿಲ್ದಾಣದಲ್ಲಿ ಪೊಲೀಸರು ವಿದ್ಯಾರ್ಥಿಗಳ ಮೇಲೆ ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದ್ದಾರೆ.

ಪ್ರತಿಭಟನೆಯ ವೇಳೆ ಯುವಕರು ಪೊಲೀಸರೊಂದಿಗೆ ವಾಗ್ವಾದ ನಡೆಸಿದರು.

ಪ್ರತಿಭಟನಾಕಾರರು ಬಿಹಾರದ ಬಕ್ಸರ್‌ನಲ್ಲಿ ರೈಲ್ವೆ ನಿಲ್ದಾಣಕ್ಕೆ ನುಗ್ಗಿ ಬಿಜೆಪಿಯ ಮೋದಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಪೊಲೀಸರು ಹರಿಯಾಣದ ರೇವಾರಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಸೇನಾ ಉದ್ಯೋಗಾಕಾಂಕ್ಷಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ.

ಬಿಹಾರದ ಜೆಹಾನಾಬಾದ್‌ನಲ್ಲಿ ಸೇನಾ ಉದ್ಯೋಗಾಕಾಂಕ್ಷಿಗಳು ರಾಷ್ಟ್ರೀಯ ಹೆದ್ದಾರಿ-83 ರಲ್ಲಿ ಪ್ರತಿಭಟನೆ ನಡೆಸಿ, ಪಾಟ್ನಾ-ಗಯಾ ಪ್ಯಾಸೆಂಜರ್ ರೈಲನ್ನು ತಡೆದಿದ್ದಾರೆ.

ಬಿಹಾರದ ಛಾಪ್ರಾದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಬಸ್‌ನ ಗಾಜುಗಳನ್ನು ಒಡೆದು, ರಟ್ಟಿನ ಪೆಟ್ಟಿಗೆಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರಪ್ರದೇಶದ ಉನ್ನಾವೋದಲ್ಲಿ ಅಗ್ನಿಪಥ್‌ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ ಯುವಜನರು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ವಿರುದ್ಧ ದಿಕ್ಕಾರ ಕೂಗಿದ್ದಾರೆ.

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಯುವಕರನ್ನು ಪೊಲೀಸರು ಅಟ್ಟಾಡಿಸಿ ಲಾಠಿಚಾರ್ಜ್ ಮಾಡಿದ್ದಾರೆ.

ಅಗ್ನಿಪಥ್‌ ಯೋಜನೆಗೆ ಹರಿಯಾಣದಲ್ಲೂ ವಿರೋಧ ವ್ಯಕ್ತವಾಗಿದ್ದು, ಸೇನಾ ಉದ್ಯೋಗಾಂಕ್ಷಿಗಳು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಹಿಂಸೆ ಭುಗಿಲೆದ್ದಿದೆ. ಉದ್ರಿಕ್ತ ಯುವಕರ ಗುಂಪು ಹಲವಾರು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿ, ಡಿಸಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದೆ. ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿ, ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಹರಿಯಾಣದ ರೋಹ್ಟಕ್‌ನಲ್ಲಿ 4 ವರ್ಷಗಳಿಂದ ಸೇನಾ ನೇಮಕಾತಿಗೆ ತಯಾರಿ ನಡೆಸಿದ್ದ ‘ಸಚಿನ್‌’ ಎಂಬ ಯುವಕ ನೇಣು ಬಿಗಿದು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಅವರು ತಮ್ಮ ಪಿಜಿಯಲ್ಲಿ ನೇಣುಬಿಗಿದಿದ್ದಾಗಿ ವರದಿಗಳು ಉಲ್ಲೇಖಿಸಿವೆ. ರಾಜ್ಯದ ಪಲ್ವಾಲ್‌ನಲ್ಲಿ ಹಿಂಸೆ ಭುಗಿಲೆದ್ದಿದ್ದು ಸರ್ಕಾರಿ ವಾಹನಗಳನ್ನು ಧ್ವಂಸಗೊಳಿಸಲಾಗಿದೆ.

ಉತ್ತರ ಪ್ರದೇಶದ ಅಲಿಗಢ್‌‌‌ನಲ್ಲಿ ಉದ್ರಿಕ್ತ ಯುವಕರ ಗುಂಪು ಗಭಾನಾ ಬಳಿ ಬಸ್‌ನ ಗಾಜು ಒಡೆದು ಹಾಕಿ, ಟೈರ್‌ಗಳಿಗೆ ಬೆಂಕಿ ಹಚ್ಚಿದ್ದಾರೆ.

ಉದ್ರಿಕ್ತ ಪ್ರತಿಭಟನಾಕಾರರು ರಾಜ್ಯದ ಸರ್ಕಾರಿ ಬಸ್‌‌ಗಳ ಗಾಜುಗಳನ್ನು ಒಡೆದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಹರಿಯಾಣದ ಪಲ್ವಾಲ್‌ನಲ್ಲಿ ಪೊಲೀಸರು ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಬಿಹಾರದ ಮೋತಿಹಾರಿಯಲ್ಲಿ ರೈಲಿಗೆ ಕಲ್ಲು ತೂರಾಟ ನಡೆಸಲಾಗಿದೆ.

ಮೋದಿ ಸರ್ಕಾರ ಜಾರಿಗೆ ತರುತ್ತಿರುವ ಅಗ್ನಿಪಥ್ ಯೋಜನೆ ವಿರುದ್ಧದ ಪ್ರತಿಭಟನೆಗಳು ಜಮ್ಮುವಿನಲ್ಲೂ ಪ್ರತಿಧ್ವನಿಸಿದ್ದು, ಸೇನಾ ಉದ್ಯೋಗಾಕಾಂಕ್ಷಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.

ಸೇನಾ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಚದುರಿಸಲು ಹರಿಯಾಣದ ಪಲ್ವಾಲ್‌ನಲ್ಲಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...