Homeಕರ್ನಾಟಕರಿಲಾಯನ್ಸ್ ಬಹಿಷ್ಕರಿಸಲು ಕರೆ: ರೈತ ಹೋರಾಟ ಬೆಂಬಲಿಸಿ ಸಿಂಧನೂರಿನಲ್ಲಿ ಪ್ರತಿಭಟನೆ

ರಿಲಾಯನ್ಸ್ ಬಹಿಷ್ಕರಿಸಲು ಕರೆ: ರೈತ ಹೋರಾಟ ಬೆಂಬಲಿಸಿ ಸಿಂಧನೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ದೇಶದ ಬೃಹತ್‌ ಕಾರ್ಪೊರೇಟ್‌‌‌ಗಳಾದ ಅಂಬಾನಿ-ಅದಾನಿಗಳಿಗೆ ಅನುಕೂಲ ಮಾಡಲು, ಕೇಂದ್ರದ ಬಿಜೆಪಿ ಸರ್ಕಾರ ರೈತವಿರೋಧಿ ಕಾನೂನಗಳನ್ನು ಜಾರಿಗೆ ತಂದಿದೆ ಎಂದು ಆರೋಪಿಸಿ, ಸಿಂಧನೂರಿನ ರಿಲಾಯನ್ಸ್ ಪೆಟ್ರೋಲ್ ಬಂಕ್‌‌ ಮುಂದೆ ’ಸಿಂಧನೂರು ರೈತವಿರೋಧಿ ಕೃಷಿ ಕಾನೂನು ರದ್ದತಿ ಹೋರಾಟ ಸಮಿತಿ’ ಶುಕ್ರವಾರ ಪ್ರತಿಭಟನೆ ನಡೆಸಿತು.

ಕೇಂದ್ರ ಹಾಗೂ ಜಿಯೋ ರಿಲಾಯನ್ಸ್ ವಿರುದ್ದ ಘೋಷಣೆ ಕೂಗಿದ ಪ್ರತಿಭಟನಾಕಾರರು, ರಿಲಯನ್ಸ್ ಸರಕುಗಳನ್ನು ಬಹಿಷ್ಕರಿಸುವಂತೆ ಸಾರ್ವಜನಿಕರಲ್ಲಿ ವಿನಂತಿ ಮಾಡಿದರು. ಕೇಂದ್ರ ಸರಕಾರ ಅಪ್ರಜಾತಾಂತ್ರಿಕ ಮತ್ತು ಅಸಂವಿಧಾನಿಕವಾಗಿ ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದಿರುವ ನೂತನ ಕೃಷಿ ಕಾನೂನುಗಳನ್ನು ವಾಪಸ್‌ ಪಡೆಯುವಂತೆ ಒತ್ತಾಯಿಸಿದರು.

ಇದನ್ನೂ ಓದಿ: ರೈತ ಹೋರಾಟ: ರಾಜಸ್ಥಾನ-ಹರಿಯಾಣ ಗಡಿಯಲ್ಲಿನ ಬ್ಯಾರಿಕೇಡ್‌ಗಳನ್ನು ಮುರಿದು ಮುನ್ನುಗ್ಗಿದ ರೈತರು

“ದೇಶೀಯ ಮತ್ತು ವಿದೇಶೀಯ ಕಾರ್ಪೊರೇಟ್‌ ಕಂಪನಿಗಳಿಗೆ ಕೃಷಿ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಕ್ಷೇತ್ರವನ್ನು ಮಾರಾಟ ಮಾಡಲು ಹೊರಟಿರುವ ಕೇಂದ್ರ ಸರಕಾರದ ನಡೆ ರೈತ ವಿರೋಧಿಯಾಗಿದೆ. ಕಾರ್ಪೊರೇಟ್ ಕುಳಗಳಾದ ರಿಲಾಯನ್ಸ್ ಅಂಬಾನಿ, ಅದಾನಿಗಳ ಸಂಪತ್ತು ಹೆಚ್ಚಿಸುವುದಕ್ಕಾಗಿ ದೇಶದ ಸಮಸ್ತ ರೈತರ ಕೃಷಿ ಭೂಮಿ ಹಾಗೂ ಉತ್ಪನ್ನಕ್ಕೆ ಕನ್ನ ಹಾಕಲು ಹೊರಟಿರುವುದು ದೇಶದ ರೈತರಗೆ ಮಾಡಿದ ದ್ರೋಹವಾಗಿದೆ” ಎಂದು ಹೋರಾಟ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಕೇಂದ್ರ ಸರಕಾರದ ಈ ಕಾನೂನುಗಳು ಜಾರಿಯಾದರೆ ದೇಶದ ಕೃಷಿ ಭೂಮಿ ಮತ್ತು ಮಾರುಕಟ್ಟೆ ಕಾರ್ಪೊರೇಟ್‌ ಬಂಡವಾಳಶಾಹಿಗಳ ಶಕ್ತಿಗಳ ಏಕಸ್ವಾಮ್ಯಕ್ಕೆ ಒಳಪಚ್ಚು ರೈತರು ಬೀದಿಗೆ ಬೀಳಲಿದ್ದಾರೆ ಎಂದು ಎಚ್ಚರಿಸಿರುವ ಹೋರಾಟ ಸಮಿತಿಯು, “ಕೃಷಿ ಸೇರಿದಂತೆ ಇನ್ನಿತರೆ ಸಬ್ಸಿಡಿಯನ್ನು ವರ್ಷದಿಂದ ವರ್ಷಕ್ಕೆ ಕಡಿತಗೊಳಿಸುತ್ತಿರುವ ಕೇಂದ್ರ ಸರಕಾರ, ಈಗ ಕೃಷಿ ಭೂಮಿಯನ್ನು ಬಂಡವಾಳಗರಿಗೆ ಒತ್ತೆಯಿಡಲು ಹೊರಟಿದೆ. ಯಾವುದೆ ಚರ್ಚೆಯಲ್ಲದೇ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿರುವುದು ಕೃಷಿಯನ್ನೇ ನಂಬಿ ಬದುಕುತ್ತಿರುವ ರೈತರ ಪಾಲಿಗೆ ಮರಣ ಶಾಸನವಾಗಿದೆ” ಎಂದು ಅದು ಹೇಳಿದೆ.

“ಈ ಕಾಯ್ದೆಗಳ ಜಾರಿಯ ಹಿಂದೆ ರಿಲಯನ್ಸ್‌ ಫ್ರೆಶ್‌, ಬಿಗ್ ಬಝಾರ್‌, ಅಮೆಜಾನ್‌ ಸೇರಿದಂತೆ ದೈತ್ಯ ಕಾರ್ಪೊರೇಟ್‌ ಕಂಪೆನಿಳಿಗೆ ಅನುಕೂಲ ಮಾಡಿಕೊಡುವ ಹುನ್ನಾರ ಅಡಗಿದೆ. ಈ ಕಾಯ್ದೆಗಳ ಜಾರಿಯಿಂದ ಇಡೀ ಕೃಷಿ ವಲಯವೆ ಸಂಕಷ್ಟಕ್ಕೀಡಾಗಲಿ. ಆದ್ದರಿಂದ ಕೇಂದ್ರ ಸರ್ಕಾರವು ದೇಶದ ರೈತರೊಂದಿಗೆ ಬೇಷರತ್ತಾಗಿ‌ ಕ್ಷಮೆಯಾಚಿಸಿ, ಈ ಕೂಡಲೇ ರೈತವಿರೋಧಿ ಕೃಷಿ ಕಾನೂನುಗಳನ್ನು ವಾಪಸ್‌ ಪಡೆಯಬೇಕು” ಎಂದು ಹೋರಾಟ ಸಮಿತಿಯು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಪ್ರತಿಭಟನೆಯನ್ನು ಉದ್ದೇಶಿಸಿ ಚಂದ್ರಶೇಖರ್ ಗೋರೆಬಾಳ್, ಡಿ.ಎಚ್ ಕಂಬಳಿ, ಬಸವರಾಜ ಗೂಗೆಬಾಳ್, ಎಸ್‌ ದೇವೇಂದ್ರ ಗೌಡ ಮಾತನಾಡಿದರು. ಹುಷೇನ್ ಸಾಬ್, ನಾಗರಾಜ್ ಪೂಜಾರ್, ಶೇಕ್ಷಾ ಖಾದ್ರಿ, ರಮೇಶ್ ಪಾಟೀಲ್, ಶಂಕರ್ ವಾಲೇಕರ್, ಬಸವರಾಜ ಬಾದರ್ಲಿ, ಅಬ್ದುಲ್ ಸಮದ್ ಚೌದ್ರಿ ಸೇರಿದಂತೆ ಇತರರು ಭಾಗವಹಿಸಿದ್ದರು.


ಇದನ್ನೂ ಓದಿ: ಕಾರ್ಮಿಕರ ಹೋರಾಟವನ್ನು ಹತ್ತಿಕ್ಕಿದ ಶ್ರೀರಂಗಪಟ್ಟಣದ ಗಾರ್ಮೆಂಟ್ಸ್‌: ಅಧ್ಯಯನ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....