Homeಕರ್ನಾಟಕರಿಲಾಯನ್ಸ್ ಬಹಿಷ್ಕರಿಸಲು ಕರೆ: ರೈತ ಹೋರಾಟ ಬೆಂಬಲಿಸಿ ಸಿಂಧನೂರಿನಲ್ಲಿ ಪ್ರತಿಭಟನೆ

ರಿಲಾಯನ್ಸ್ ಬಹಿಷ್ಕರಿಸಲು ಕರೆ: ರೈತ ಹೋರಾಟ ಬೆಂಬಲಿಸಿ ಸಿಂಧನೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ದೇಶದ ಬೃಹತ್‌ ಕಾರ್ಪೊರೇಟ್‌‌‌ಗಳಾದ ಅಂಬಾನಿ-ಅದಾನಿಗಳಿಗೆ ಅನುಕೂಲ ಮಾಡಲು, ಕೇಂದ್ರದ ಬಿಜೆಪಿ ಸರ್ಕಾರ ರೈತವಿರೋಧಿ ಕಾನೂನಗಳನ್ನು ಜಾರಿಗೆ ತಂದಿದೆ ಎಂದು ಆರೋಪಿಸಿ, ಸಿಂಧನೂರಿನ ರಿಲಾಯನ್ಸ್ ಪೆಟ್ರೋಲ್ ಬಂಕ್‌‌ ಮುಂದೆ ’ಸಿಂಧನೂರು ರೈತವಿರೋಧಿ ಕೃಷಿ ಕಾನೂನು ರದ್ದತಿ ಹೋರಾಟ ಸಮಿತಿ’ ಶುಕ್ರವಾರ ಪ್ರತಿಭಟನೆ ನಡೆಸಿತು.

ಕೇಂದ್ರ ಹಾಗೂ ಜಿಯೋ ರಿಲಾಯನ್ಸ್ ವಿರುದ್ದ ಘೋಷಣೆ ಕೂಗಿದ ಪ್ರತಿಭಟನಾಕಾರರು, ರಿಲಯನ್ಸ್ ಸರಕುಗಳನ್ನು ಬಹಿಷ್ಕರಿಸುವಂತೆ ಸಾರ್ವಜನಿಕರಲ್ಲಿ ವಿನಂತಿ ಮಾಡಿದರು. ಕೇಂದ್ರ ಸರಕಾರ ಅಪ್ರಜಾತಾಂತ್ರಿಕ ಮತ್ತು ಅಸಂವಿಧಾನಿಕವಾಗಿ ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದಿರುವ ನೂತನ ಕೃಷಿ ಕಾನೂನುಗಳನ್ನು ವಾಪಸ್‌ ಪಡೆಯುವಂತೆ ಒತ್ತಾಯಿಸಿದರು.

ಇದನ್ನೂ ಓದಿ: ರೈತ ಹೋರಾಟ: ರಾಜಸ್ಥಾನ-ಹರಿಯಾಣ ಗಡಿಯಲ್ಲಿನ ಬ್ಯಾರಿಕೇಡ್‌ಗಳನ್ನು ಮುರಿದು ಮುನ್ನುಗ್ಗಿದ ರೈತರು

“ದೇಶೀಯ ಮತ್ತು ವಿದೇಶೀಯ ಕಾರ್ಪೊರೇಟ್‌ ಕಂಪನಿಗಳಿಗೆ ಕೃಷಿ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಕ್ಷೇತ್ರವನ್ನು ಮಾರಾಟ ಮಾಡಲು ಹೊರಟಿರುವ ಕೇಂದ್ರ ಸರಕಾರದ ನಡೆ ರೈತ ವಿರೋಧಿಯಾಗಿದೆ. ಕಾರ್ಪೊರೇಟ್ ಕುಳಗಳಾದ ರಿಲಾಯನ್ಸ್ ಅಂಬಾನಿ, ಅದಾನಿಗಳ ಸಂಪತ್ತು ಹೆಚ್ಚಿಸುವುದಕ್ಕಾಗಿ ದೇಶದ ಸಮಸ್ತ ರೈತರ ಕೃಷಿ ಭೂಮಿ ಹಾಗೂ ಉತ್ಪನ್ನಕ್ಕೆ ಕನ್ನ ಹಾಕಲು ಹೊರಟಿರುವುದು ದೇಶದ ರೈತರಗೆ ಮಾಡಿದ ದ್ರೋಹವಾಗಿದೆ” ಎಂದು ಹೋರಾಟ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಕೇಂದ್ರ ಸರಕಾರದ ಈ ಕಾನೂನುಗಳು ಜಾರಿಯಾದರೆ ದೇಶದ ಕೃಷಿ ಭೂಮಿ ಮತ್ತು ಮಾರುಕಟ್ಟೆ ಕಾರ್ಪೊರೇಟ್‌ ಬಂಡವಾಳಶಾಹಿಗಳ ಶಕ್ತಿಗಳ ಏಕಸ್ವಾಮ್ಯಕ್ಕೆ ಒಳಪಚ್ಚು ರೈತರು ಬೀದಿಗೆ ಬೀಳಲಿದ್ದಾರೆ ಎಂದು ಎಚ್ಚರಿಸಿರುವ ಹೋರಾಟ ಸಮಿತಿಯು, “ಕೃಷಿ ಸೇರಿದಂತೆ ಇನ್ನಿತರೆ ಸಬ್ಸಿಡಿಯನ್ನು ವರ್ಷದಿಂದ ವರ್ಷಕ್ಕೆ ಕಡಿತಗೊಳಿಸುತ್ತಿರುವ ಕೇಂದ್ರ ಸರಕಾರ, ಈಗ ಕೃಷಿ ಭೂಮಿಯನ್ನು ಬಂಡವಾಳಗರಿಗೆ ಒತ್ತೆಯಿಡಲು ಹೊರಟಿದೆ. ಯಾವುದೆ ಚರ್ಚೆಯಲ್ಲದೇ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿರುವುದು ಕೃಷಿಯನ್ನೇ ನಂಬಿ ಬದುಕುತ್ತಿರುವ ರೈತರ ಪಾಲಿಗೆ ಮರಣ ಶಾಸನವಾಗಿದೆ” ಎಂದು ಅದು ಹೇಳಿದೆ.

“ಈ ಕಾಯ್ದೆಗಳ ಜಾರಿಯ ಹಿಂದೆ ರಿಲಯನ್ಸ್‌ ಫ್ರೆಶ್‌, ಬಿಗ್ ಬಝಾರ್‌, ಅಮೆಜಾನ್‌ ಸೇರಿದಂತೆ ದೈತ್ಯ ಕಾರ್ಪೊರೇಟ್‌ ಕಂಪೆನಿಳಿಗೆ ಅನುಕೂಲ ಮಾಡಿಕೊಡುವ ಹುನ್ನಾರ ಅಡಗಿದೆ. ಈ ಕಾಯ್ದೆಗಳ ಜಾರಿಯಿಂದ ಇಡೀ ಕೃಷಿ ವಲಯವೆ ಸಂಕಷ್ಟಕ್ಕೀಡಾಗಲಿ. ಆದ್ದರಿಂದ ಕೇಂದ್ರ ಸರ್ಕಾರವು ದೇಶದ ರೈತರೊಂದಿಗೆ ಬೇಷರತ್ತಾಗಿ‌ ಕ್ಷಮೆಯಾಚಿಸಿ, ಈ ಕೂಡಲೇ ರೈತವಿರೋಧಿ ಕೃಷಿ ಕಾನೂನುಗಳನ್ನು ವಾಪಸ್‌ ಪಡೆಯಬೇಕು” ಎಂದು ಹೋರಾಟ ಸಮಿತಿಯು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಪ್ರತಿಭಟನೆಯನ್ನು ಉದ್ದೇಶಿಸಿ ಚಂದ್ರಶೇಖರ್ ಗೋರೆಬಾಳ್, ಡಿ.ಎಚ್ ಕಂಬಳಿ, ಬಸವರಾಜ ಗೂಗೆಬಾಳ್, ಎಸ್‌ ದೇವೇಂದ್ರ ಗೌಡ ಮಾತನಾಡಿದರು. ಹುಷೇನ್ ಸಾಬ್, ನಾಗರಾಜ್ ಪೂಜಾರ್, ಶೇಕ್ಷಾ ಖಾದ್ರಿ, ರಮೇಶ್ ಪಾಟೀಲ್, ಶಂಕರ್ ವಾಲೇಕರ್, ಬಸವರಾಜ ಬಾದರ್ಲಿ, ಅಬ್ದುಲ್ ಸಮದ್ ಚೌದ್ರಿ ಸೇರಿದಂತೆ ಇತರರು ಭಾಗವಹಿಸಿದ್ದರು.


ಇದನ್ನೂ ಓದಿ: ಕಾರ್ಮಿಕರ ಹೋರಾಟವನ್ನು ಹತ್ತಿಕ್ಕಿದ ಶ್ರೀರಂಗಪಟ್ಟಣದ ಗಾರ್ಮೆಂಟ್ಸ್‌: ಅಧ್ಯಯನ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...