Homeಕರ್ನಾಟಕರಿಲಾಯನ್ಸ್ ಬಹಿಷ್ಕರಿಸಲು ಕರೆ: ರೈತ ಹೋರಾಟ ಬೆಂಬಲಿಸಿ ಸಿಂಧನೂರಿನಲ್ಲಿ ಪ್ರತಿಭಟನೆ

ರಿಲಾಯನ್ಸ್ ಬಹಿಷ್ಕರಿಸಲು ಕರೆ: ರೈತ ಹೋರಾಟ ಬೆಂಬಲಿಸಿ ಸಿಂಧನೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ದೇಶದ ಬೃಹತ್‌ ಕಾರ್ಪೊರೇಟ್‌‌‌ಗಳಾದ ಅಂಬಾನಿ-ಅದಾನಿಗಳಿಗೆ ಅನುಕೂಲ ಮಾಡಲು, ಕೇಂದ್ರದ ಬಿಜೆಪಿ ಸರ್ಕಾರ ರೈತವಿರೋಧಿ ಕಾನೂನಗಳನ್ನು ಜಾರಿಗೆ ತಂದಿದೆ ಎಂದು ಆರೋಪಿಸಿ, ಸಿಂಧನೂರಿನ ರಿಲಾಯನ್ಸ್ ಪೆಟ್ರೋಲ್ ಬಂಕ್‌‌ ಮುಂದೆ ’ಸಿಂಧನೂರು ರೈತವಿರೋಧಿ ಕೃಷಿ ಕಾನೂನು ರದ್ದತಿ ಹೋರಾಟ ಸಮಿತಿ’ ಶುಕ್ರವಾರ ಪ್ರತಿಭಟನೆ ನಡೆಸಿತು.

ಕೇಂದ್ರ ಹಾಗೂ ಜಿಯೋ ರಿಲಾಯನ್ಸ್ ವಿರುದ್ದ ಘೋಷಣೆ ಕೂಗಿದ ಪ್ರತಿಭಟನಾಕಾರರು, ರಿಲಯನ್ಸ್ ಸರಕುಗಳನ್ನು ಬಹಿಷ್ಕರಿಸುವಂತೆ ಸಾರ್ವಜನಿಕರಲ್ಲಿ ವಿನಂತಿ ಮಾಡಿದರು. ಕೇಂದ್ರ ಸರಕಾರ ಅಪ್ರಜಾತಾಂತ್ರಿಕ ಮತ್ತು ಅಸಂವಿಧಾನಿಕವಾಗಿ ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದಿರುವ ನೂತನ ಕೃಷಿ ಕಾನೂನುಗಳನ್ನು ವಾಪಸ್‌ ಪಡೆಯುವಂತೆ ಒತ್ತಾಯಿಸಿದರು.

ಇದನ್ನೂ ಓದಿ: ರೈತ ಹೋರಾಟ: ರಾಜಸ್ಥಾನ-ಹರಿಯಾಣ ಗಡಿಯಲ್ಲಿನ ಬ್ಯಾರಿಕೇಡ್‌ಗಳನ್ನು ಮುರಿದು ಮುನ್ನುಗ್ಗಿದ ರೈತರು

“ದೇಶೀಯ ಮತ್ತು ವಿದೇಶೀಯ ಕಾರ್ಪೊರೇಟ್‌ ಕಂಪನಿಗಳಿಗೆ ಕೃಷಿ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಕ್ಷೇತ್ರವನ್ನು ಮಾರಾಟ ಮಾಡಲು ಹೊರಟಿರುವ ಕೇಂದ್ರ ಸರಕಾರದ ನಡೆ ರೈತ ವಿರೋಧಿಯಾಗಿದೆ. ಕಾರ್ಪೊರೇಟ್ ಕುಳಗಳಾದ ರಿಲಾಯನ್ಸ್ ಅಂಬಾನಿ, ಅದಾನಿಗಳ ಸಂಪತ್ತು ಹೆಚ್ಚಿಸುವುದಕ್ಕಾಗಿ ದೇಶದ ಸಮಸ್ತ ರೈತರ ಕೃಷಿ ಭೂಮಿ ಹಾಗೂ ಉತ್ಪನ್ನಕ್ಕೆ ಕನ್ನ ಹಾಕಲು ಹೊರಟಿರುವುದು ದೇಶದ ರೈತರಗೆ ಮಾಡಿದ ದ್ರೋಹವಾಗಿದೆ” ಎಂದು ಹೋರಾಟ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಕೇಂದ್ರ ಸರಕಾರದ ಈ ಕಾನೂನುಗಳು ಜಾರಿಯಾದರೆ ದೇಶದ ಕೃಷಿ ಭೂಮಿ ಮತ್ತು ಮಾರುಕಟ್ಟೆ ಕಾರ್ಪೊರೇಟ್‌ ಬಂಡವಾಳಶಾಹಿಗಳ ಶಕ್ತಿಗಳ ಏಕಸ್ವಾಮ್ಯಕ್ಕೆ ಒಳಪಚ್ಚು ರೈತರು ಬೀದಿಗೆ ಬೀಳಲಿದ್ದಾರೆ ಎಂದು ಎಚ್ಚರಿಸಿರುವ ಹೋರಾಟ ಸಮಿತಿಯು, “ಕೃಷಿ ಸೇರಿದಂತೆ ಇನ್ನಿತರೆ ಸಬ್ಸಿಡಿಯನ್ನು ವರ್ಷದಿಂದ ವರ್ಷಕ್ಕೆ ಕಡಿತಗೊಳಿಸುತ್ತಿರುವ ಕೇಂದ್ರ ಸರಕಾರ, ಈಗ ಕೃಷಿ ಭೂಮಿಯನ್ನು ಬಂಡವಾಳಗರಿಗೆ ಒತ್ತೆಯಿಡಲು ಹೊರಟಿದೆ. ಯಾವುದೆ ಚರ್ಚೆಯಲ್ಲದೇ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿರುವುದು ಕೃಷಿಯನ್ನೇ ನಂಬಿ ಬದುಕುತ್ತಿರುವ ರೈತರ ಪಾಲಿಗೆ ಮರಣ ಶಾಸನವಾಗಿದೆ” ಎಂದು ಅದು ಹೇಳಿದೆ.

“ಈ ಕಾಯ್ದೆಗಳ ಜಾರಿಯ ಹಿಂದೆ ರಿಲಯನ್ಸ್‌ ಫ್ರೆಶ್‌, ಬಿಗ್ ಬಝಾರ್‌, ಅಮೆಜಾನ್‌ ಸೇರಿದಂತೆ ದೈತ್ಯ ಕಾರ್ಪೊರೇಟ್‌ ಕಂಪೆನಿಳಿಗೆ ಅನುಕೂಲ ಮಾಡಿಕೊಡುವ ಹುನ್ನಾರ ಅಡಗಿದೆ. ಈ ಕಾಯ್ದೆಗಳ ಜಾರಿಯಿಂದ ಇಡೀ ಕೃಷಿ ವಲಯವೆ ಸಂಕಷ್ಟಕ್ಕೀಡಾಗಲಿ. ಆದ್ದರಿಂದ ಕೇಂದ್ರ ಸರ್ಕಾರವು ದೇಶದ ರೈತರೊಂದಿಗೆ ಬೇಷರತ್ತಾಗಿ‌ ಕ್ಷಮೆಯಾಚಿಸಿ, ಈ ಕೂಡಲೇ ರೈತವಿರೋಧಿ ಕೃಷಿ ಕಾನೂನುಗಳನ್ನು ವಾಪಸ್‌ ಪಡೆಯಬೇಕು” ಎಂದು ಹೋರಾಟ ಸಮಿತಿಯು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಪ್ರತಿಭಟನೆಯನ್ನು ಉದ್ದೇಶಿಸಿ ಚಂದ್ರಶೇಖರ್ ಗೋರೆಬಾಳ್, ಡಿ.ಎಚ್ ಕಂಬಳಿ, ಬಸವರಾಜ ಗೂಗೆಬಾಳ್, ಎಸ್‌ ದೇವೇಂದ್ರ ಗೌಡ ಮಾತನಾಡಿದರು. ಹುಷೇನ್ ಸಾಬ್, ನಾಗರಾಜ್ ಪೂಜಾರ್, ಶೇಕ್ಷಾ ಖಾದ್ರಿ, ರಮೇಶ್ ಪಾಟೀಲ್, ಶಂಕರ್ ವಾಲೇಕರ್, ಬಸವರಾಜ ಬಾದರ್ಲಿ, ಅಬ್ದುಲ್ ಸಮದ್ ಚೌದ್ರಿ ಸೇರಿದಂತೆ ಇತರರು ಭಾಗವಹಿಸಿದ್ದರು.


ಇದನ್ನೂ ಓದಿ: ಕಾರ್ಮಿಕರ ಹೋರಾಟವನ್ನು ಹತ್ತಿಕ್ಕಿದ ಶ್ರೀರಂಗಪಟ್ಟಣದ ಗಾರ್ಮೆಂಟ್ಸ್‌: ಅಧ್ಯಯನ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...