Homeಮುಖಪುಟಎಲ್ಐಸಿ ಖಾಸಗೀಕರಣ ಪ್ರಸ್ತಾಪ : ಕೇಂದ್ರದ ವಿರುದ್ಧ ಅಧಿಕಾರಿಗಳು, ನೌಕರರ ಪ್ರತಿಭಟನೆ

ಎಲ್ಐಸಿ ಖಾಸಗೀಕರಣ ಪ್ರಸ್ತಾಪ : ಕೇಂದ್ರದ ವಿರುದ್ಧ ಅಧಿಕಾರಿಗಳು, ನೌಕರರ ಪ್ರತಿಭಟನೆ

- Advertisement -
- Advertisement -

ಭಾರತೀಯ ಜೀವವಿಮಾ ನಿಗಮದ ಶೇರು ಮಾರಾಟಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ ಅಖಿಲ ಭಾರತ ಜೀವವಿಮಾ ನೌಕರರ ಸಂಘ, ಅಭಿವೃದ್ಧಿ ಅಧಿಕಾರಿಗಳ ಸಂಘ ಮತ್ತು ಅಧಿಕಾರಿಗಳ ಸಂಘಟನೆಗಳು ನೇತೃತ್ವದಲ್ಲಿ ತುಮಕೂರಿನ ಜಿಲ್ಲೆಯಾದ್ಯಂತ ಎಲ್ಲಾ ಶಾಖೆಗಳ ಮುಂದೆ ನೌಕರರು ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಅಖಿಲ ಭಾರತ ಜೀವ ವಿಮಾ ನೌಕರರ ಸಂಘದ ಜಿಲ್ಲಾಧ್ಯಕ್ಷ ನಂಜುಡಸ್ವಾಮಿ ಮಾತನಾಡಿ “ಬಜೆಟ್‍ನಲ್ಲಿ ಎಲ್‍ಐಸಿ ಶೇರು ವಿಕ್ರಯಕ್ಕೆ ತೀರ್ಮಾನಿಸಿರುವುದು ಆಘಾತಕಾರಿ ಬೆಳವಣಿಗೆ. ಸದ್ಯಕ್ಕೆ ಗ್ರಾಹಕರ ಹಣಕ್ಕೆ ಭಯವಿಲ್ಲ. ಆದರೆ ಭಾರತೀಯ ಜೀವ ವಿಮಾ ನಿಗಮ ಖಾಸಗೀಕರಣಗೊಳಿಸಿದರೆ ಸಾರ್ವಜನಿಕರ ಹಣಕ್ಕೆ ಭದ್ರತೆ ಇರುವುದಿಲ್ಲ ಎಂದು ಹೇಳಿದರು.

ಭಾರತೀಯ ಜೀವ ವಿಮಾನ ನಿಗಮ ಇದುವರೆಗೂ ಸಾವಿರಾರು ಕೋಟಿ ರೂಪಾಯಿ ಲಾಭವನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತ ಬಂದಿದೆ. 2017ರಲ್ಲಿ, 2206 ಕೋಟಿ, 2018ರಲ್ಲಿ 2430 ಕೋಟಿ, 2019ರಲ್ಲಿ 2611 ಕೋಟಿ ರೂಪಾಯಿ ಲಾಭಾಂಶವನ್ನು ಸರ್ಕಾರದ ಬೊಕ್ಕಸಕ್ಕೆ ನೀಡಿದೆ. ಎಲ್‍ಐಸಿ ಲಾಭದಲ್ಲಿದ್ದು ಗ್ರಾಹಕರ ವಿಶ್ವಾಸ ಗಳಿಸಿದೆ. ಸಂಸ್ಥೆ ಇಷ್ಟು ಸುದೀರ್ಘ ವರ್ಷಗಳಲ್ಲಿ ಒಬ್ಬ ಪಾಲಿಸಿದಾರನಿಗೂ ಮೋಸ ಮಾಡಿಲ್ಲ. ಪಾಲಿಸಿದಾರರು ಸಂಸ್ಥೆಯ ಮೇಲೆ ಪಾಲಿಸಿದಾರರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡು ಬಂದಿದೆ ಎಂದರು.

ಖಾಸಗಿಯವರು ಎಲ್‍ಐಸಿಯಲ್ಲಿ ಹೂಡಿಕೆ ಮಾಡುವುದು ಲಾಭದ ಉದ್ದೇಶವಿಟ್ಟುಕೊಂಡು ಮಾತ್ರ. ಅವರಿಗೆ ಜನರ ನಂಬಿಕೆಗಳು ಮುಖ್ಯವಲ್ಲ. ಸಾರ್ವಜನಿಕ ಸಂಸ್ಥೆಗಳಲ್ಲಿ ಲಾಭ ಪಡೆಯುವುದೇ ಖಾಸಗಿಯವರ ಮುಖ್ಯ ಉದ್ದೇಶ. ಇಲ್ಲಿನ ಸಾವಿರಾರು ಕೋಟಿ ಹಣವನ್ನು ಕಂಪನಿಗಳಲ್ಲಿ ಹೂಡಿ ನಂತರ ನಷ್ಟವಾಯಿತೆಂದು ಜನರ ಹಣವನ್ನು ಲೂಟಿ ಮಾಡುತ್ತಾರೆ. ಆದ್ದರಿಂದ ಖಾಸಗೀಕರಣಗೊಳಿಸುವುದು ಬೇಡ. ಪಾಲಿಸಿದಾರರು ತಮ್ಮ ಹಣ ರಕ್ಷಣೆಗೆ ನಮ್ಮ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಜಿಲ್ಲೆಯ ಪಾವಗಡ, ಮಧುಗಿರಿ, ಶಿರಾ, ಕೊರಟಗೆರೆ, ಕುಣಿಗಲ್, ಗುಬ್ಬಿ, ತಿಪಟೂರು, ಚಿಕ್ಕನಾಯಕನಹಳ್ಳಿ ಸೇರಿದಂತೆ ಎಲ್ಲಾ ತಾಲೂಕು ಶಾಖೆಗಳ ಮುಂದೆ ಅಧಿಕಾರಿಗಳು, ಕ್ಷೇತ್ರ ಅಧಿಕಾರಿಗಳು,  ದ್ವಿತೀಯ, ತೃತೀಯ, ಡಿ ದರ್ಜೆ ನೌಕರರು ಇಂದು ಮಧ್ಯಾಹ್ನ 12.30ರಿಂದ 1.30ರವರೆಗೆ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರ ನಿಲುವನ್ನು ಖಂಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...