Homeಮುಖಪುಟಎಲ್ಐಸಿ ಖಾಸಗೀಕರಣ ಪ್ರಸ್ತಾಪ : ಕೇಂದ್ರದ ವಿರುದ್ಧ ಅಧಿಕಾರಿಗಳು, ನೌಕರರ ಪ್ರತಿಭಟನೆ

ಎಲ್ಐಸಿ ಖಾಸಗೀಕರಣ ಪ್ರಸ್ತಾಪ : ಕೇಂದ್ರದ ವಿರುದ್ಧ ಅಧಿಕಾರಿಗಳು, ನೌಕರರ ಪ್ರತಿಭಟನೆ

- Advertisement -
- Advertisement -

ಭಾರತೀಯ ಜೀವವಿಮಾ ನಿಗಮದ ಶೇರು ಮಾರಾಟಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ ಅಖಿಲ ಭಾರತ ಜೀವವಿಮಾ ನೌಕರರ ಸಂಘ, ಅಭಿವೃದ್ಧಿ ಅಧಿಕಾರಿಗಳ ಸಂಘ ಮತ್ತು ಅಧಿಕಾರಿಗಳ ಸಂಘಟನೆಗಳು ನೇತೃತ್ವದಲ್ಲಿ ತುಮಕೂರಿನ ಜಿಲ್ಲೆಯಾದ್ಯಂತ ಎಲ್ಲಾ ಶಾಖೆಗಳ ಮುಂದೆ ನೌಕರರು ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಅಖಿಲ ಭಾರತ ಜೀವ ವಿಮಾ ನೌಕರರ ಸಂಘದ ಜಿಲ್ಲಾಧ್ಯಕ್ಷ ನಂಜುಡಸ್ವಾಮಿ ಮಾತನಾಡಿ “ಬಜೆಟ್‍ನಲ್ಲಿ ಎಲ್‍ಐಸಿ ಶೇರು ವಿಕ್ರಯಕ್ಕೆ ತೀರ್ಮಾನಿಸಿರುವುದು ಆಘಾತಕಾರಿ ಬೆಳವಣಿಗೆ. ಸದ್ಯಕ್ಕೆ ಗ್ರಾಹಕರ ಹಣಕ್ಕೆ ಭಯವಿಲ್ಲ. ಆದರೆ ಭಾರತೀಯ ಜೀವ ವಿಮಾ ನಿಗಮ ಖಾಸಗೀಕರಣಗೊಳಿಸಿದರೆ ಸಾರ್ವಜನಿಕರ ಹಣಕ್ಕೆ ಭದ್ರತೆ ಇರುವುದಿಲ್ಲ ಎಂದು ಹೇಳಿದರು.

ಭಾರತೀಯ ಜೀವ ವಿಮಾನ ನಿಗಮ ಇದುವರೆಗೂ ಸಾವಿರಾರು ಕೋಟಿ ರೂಪಾಯಿ ಲಾಭವನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತ ಬಂದಿದೆ. 2017ರಲ್ಲಿ, 2206 ಕೋಟಿ, 2018ರಲ್ಲಿ 2430 ಕೋಟಿ, 2019ರಲ್ಲಿ 2611 ಕೋಟಿ ರೂಪಾಯಿ ಲಾಭಾಂಶವನ್ನು ಸರ್ಕಾರದ ಬೊಕ್ಕಸಕ್ಕೆ ನೀಡಿದೆ. ಎಲ್‍ಐಸಿ ಲಾಭದಲ್ಲಿದ್ದು ಗ್ರಾಹಕರ ವಿಶ್ವಾಸ ಗಳಿಸಿದೆ. ಸಂಸ್ಥೆ ಇಷ್ಟು ಸುದೀರ್ಘ ವರ್ಷಗಳಲ್ಲಿ ಒಬ್ಬ ಪಾಲಿಸಿದಾರನಿಗೂ ಮೋಸ ಮಾಡಿಲ್ಲ. ಪಾಲಿಸಿದಾರರು ಸಂಸ್ಥೆಯ ಮೇಲೆ ಪಾಲಿಸಿದಾರರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡು ಬಂದಿದೆ ಎಂದರು.

ಖಾಸಗಿಯವರು ಎಲ್‍ಐಸಿಯಲ್ಲಿ ಹೂಡಿಕೆ ಮಾಡುವುದು ಲಾಭದ ಉದ್ದೇಶವಿಟ್ಟುಕೊಂಡು ಮಾತ್ರ. ಅವರಿಗೆ ಜನರ ನಂಬಿಕೆಗಳು ಮುಖ್ಯವಲ್ಲ. ಸಾರ್ವಜನಿಕ ಸಂಸ್ಥೆಗಳಲ್ಲಿ ಲಾಭ ಪಡೆಯುವುದೇ ಖಾಸಗಿಯವರ ಮುಖ್ಯ ಉದ್ದೇಶ. ಇಲ್ಲಿನ ಸಾವಿರಾರು ಕೋಟಿ ಹಣವನ್ನು ಕಂಪನಿಗಳಲ್ಲಿ ಹೂಡಿ ನಂತರ ನಷ್ಟವಾಯಿತೆಂದು ಜನರ ಹಣವನ್ನು ಲೂಟಿ ಮಾಡುತ್ತಾರೆ. ಆದ್ದರಿಂದ ಖಾಸಗೀಕರಣಗೊಳಿಸುವುದು ಬೇಡ. ಪಾಲಿಸಿದಾರರು ತಮ್ಮ ಹಣ ರಕ್ಷಣೆಗೆ ನಮ್ಮ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಜಿಲ್ಲೆಯ ಪಾವಗಡ, ಮಧುಗಿರಿ, ಶಿರಾ, ಕೊರಟಗೆರೆ, ಕುಣಿಗಲ್, ಗುಬ್ಬಿ, ತಿಪಟೂರು, ಚಿಕ್ಕನಾಯಕನಹಳ್ಳಿ ಸೇರಿದಂತೆ ಎಲ್ಲಾ ತಾಲೂಕು ಶಾಖೆಗಳ ಮುಂದೆ ಅಧಿಕಾರಿಗಳು, ಕ್ಷೇತ್ರ ಅಧಿಕಾರಿಗಳು,  ದ್ವಿತೀಯ, ತೃತೀಯ, ಡಿ ದರ್ಜೆ ನೌಕರರು ಇಂದು ಮಧ್ಯಾಹ್ನ 12.30ರಿಂದ 1.30ರವರೆಗೆ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರ ನಿಲುವನ್ನು ಖಂಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...