Homeಕರ್ನಾಟಕಇಡಿ-ಸಿಬಿಐ ಕಿರುಕುಳ ಖಂಡಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ

ಇಡಿ-ಸಿಬಿಐ ಕಿರುಕುಳ ಖಂಡಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಸಚಿವರಿಗೆ ಕೇಂದ್ರೀಯ ತನಿಖಾ ಸಂಸ್ಥೆಗಳು ಕಿರುಕುಳ ನೀಡುತ್ತಿವೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕರು, ಸಂಪುಟ ಸಚಿವರು ಸೋಮವಾರ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು.

ಜಾರಿ ನಿರ್ದೇಶನಾಲಯ ಮತ್ತು ಕೇಂದ್ರ ತನಿಖಾ ದಳದಂತಹ ಕೇಂದ್ರೀಯ ಸಂಸ್ಥೆಗಳು ತಮ್ಮ ಹೇಳಿಕೆಗಳಲ್ಲಿ ಸಿದ್ದರಾಮಯ್ಯ ಅವರ ಹೆಸರನ್ನು ಹೇಳುವಂತೆ ಸರ್ಕಾರಿ ಅಧಿಕಾರಿಗಳನ್ನು ಒತ್ತಾಯಿಸುತ್ತಿವೆ ಎಂದು ಪಕ್ಷ ಆರೋಪಿಸಿದೆ. ವಾಲ್ಮೀಕಿ ಹಗರಣದ ತನಿಖೆ ವೇಳೆ ಮುಖ್ಯಮಂತ್ರಿ ಹೆಸರನ್ನು ಹೇಳುವಂತೆ ಇಡಿ ಅಧಿಕಾರಿಗಳು ಒತ್ತಾಯಿಸಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ದೂರು ದಾಖಲಿಸಿದ ನಂತರ ಪಕ್ಷವು ಪ್ರತಿಭಟನೆ ನಡೆಸಿತು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, “ಸಿಎಂ ಮತ್ತು ಸಚಿವರ ಹೆಸರು ಹೇಳುವಂತೆ ಅಧಿಕಾರಿಯೊಬ್ಬರಿಗೆ ಇಡಿ ಬಲವಂತ ಮಾಡಿರುವುದು ದುರದೃಷ್ಟಕರ. ಪ್ರಕರಣದ ಬಗ್ಗೆ ಎಸ್‌ಐಟಿ ರಚನೆ ಮಾಡಲಾಗಿದ್ದು, ಕ್ರಮ ಕೈಗೊಳ್ಳುತ್ತೇವೆ ಮತ್ತು ಸಚಿವರು ಶಾಮೀಲಾದರೆ ನಾವು ಅವರನ್ನು ಬಿಡುವುದಿಲ್ಲ. ಇದರ ವಿರುದ್ಧ ಪ್ರತಿಭಟಿಸುವುದು ನಮ್ಮ ಬದ್ಧ ಕರ್ತವ್ಯವಾಗಿದೆ. ಏಕೆಂದರೆ, ಇಡಿ ಅಧಿಕಾರಿಗಳು ಯಾರನ್ನೂ ಹೆಸರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ದೇಶವು ತಿಳಿದಿರಬೇಕು. ಕಾನೂನು ತನ್ನ ಮಾರ್ಗವನ್ನು ತೆಗೆದುಕೊಳ್ಳುತ್ತದೆ. ಶಿವಕುಮಾರ್ ಕೂಡ ಕೇಂದ್ರದ ಕೆಂಗಣ್ಣಿಗೆ ಗುರಿಯಾಗುತ್ತಿದ್ದಾರೆ ಮತ್ತು ಸಿಬಿಐ ಕಿರುಕುಳ ನೀಡುತ್ತಿದೆ” ಎಂದು ಆರೋಪಿಸಿದರು.

ಕೇಂದ್ರೀಯ ಸಂಸ್ಥೆಗಳು ಸಿಎಂ ಮತ್ತು ಉಪ ಮುಖ್ಯಮಂತ್ರಿ ವಿರುದ್ಧ ಸ್ಕ್ರಿಪ್ಟೆಡ್ ತನಿಖೆ ನಡೆಸುತ್ತಿವೆ ಎಂದು ಐಟಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಕರ್ನಾಟಕದಲ್ಲಿ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರದ ಮೇಲೆ ಬಿಜೆಪಿ ಸರ್ಜಿಕಲ್ ಸ್ಟ್ರೈಕ್ ಮಾಡುತ್ತಿದೆ. ಇಡಿ ಅಧಿಕಾರಿಗಳು ರಾಜ್ಯ ಸರ್ಕಾರದ ಅಧಿಕಾರಿಗಳು ತಾವು ಭಾಗಿಯಾಗದ ಹಗರಣಗಳಲ್ಲಿ ಸಿಎಂ ಮತ್ತು ಉಪ ಮುಖ್ಯಮಂತ್ರಿ ಹೆಸರಿಸುವಂತೆ ಒತ್ತಡ ಹೇರುತ್ತಿದ್ದಾರೆ. ನಾವು ಅಧಿಕಾರಿಗಳ ಕಾರ್ಯವೈಖರಿ ಅಥವಾ ತನಿಖೆಯನ್ನು ಪ್ರಶ್ನಿಸುತ್ತಿಲ್ಲ. ಆದರೆ, ನೀವು ಅವರ ಹೆಸರಿಸಲು ಸರ್ಕಾರಿ ಅಧಿಕಾರಿಗಳ ಮೇಲೆ ಒತ್ತಡ ಹೇರಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಸಿಎಂ ಬಂಧಿಸಲು ಕೇಂದ್ರದಿಂದ ಪ್ರಯತ್ನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಂಧಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಆರೋಪ ಮಾಡಿದ್ದಾರೆ.

ಈ ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೈನ್ ಅವರನ್ನು ರಾಜಕೀಯ ದ್ವೇಷದ ಕಾರಣಕ್ಕೆ ಬಂಧಿಸಿದ ಹಾಗೆ ಸಿದ್ದರಾಮಯ್ಯ ಅವರನ್ನೂ ಸಹ ಬಂಧಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದ್ದು, ಇದಕ್ಕಾಗಿ ತನ್ನ ಇ.ಡಿ ಸಂಸ್ಥೆಯನ್ನು ಬಳಸಿಕೊಳ್ಳುವಂತಹ ಅಸಂವಿಧಾನಿಕ ಕೆಲಸವನ್ನು ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

“ಕರ್ನಾಟಕದಲ್ಲಿ ಪ್ರಣಾಳಿಕೆಗಳನ್ನು ನೀಡಿ, ಅದಕ್ಕೆ ತಕ್ಕದಾಗಿ ನುಡಿದಂತೆ ನಡೆಯುವ ಯಾವುದಾದರೂ ಸರ್ಕಾರ ಇದ್ದರೆ ಅದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. ವೈಯಕ್ತಿಕ ಹಿತಾಸಕ್ತಿಗಳೇ ವಿಜೃಂಭಿಸುತ್ತಾ, ಸರ್ಕಾರ ಎಂದರೆ ಯಾರೋ ಕೆಲವರಿಗೆ ಇರುವ ಅನುಕೂಲದ ವ್ಯವಸ್ಥೆ ಎಂಬಂತಾಗಿರುವ ಕಾಲದಲ್ಲಿ; ಸರ್ಕಾರ ಎಂದರೆ ಜನರಿಗಾಗಿ ಇರುವ ವ್ಯವಸ್ಥೆ ಎಂದು ಕೆಲಸ ಮಾಡುತ್ತಿರುವ ಸಿದ್ದರಾಮಯ್ಯ ಅವರ ವಿರುದ್ಧ ಇಡಿ ಮೂಲಕ ಸಂಚು ಮಾಡುತ್ತಿರುವ ಕೇಂದ್ರ ಸರ್ಕಾರದ್ದು ಹೇಡಿಗಳ ನಡೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಇಂತಹ ಕುತಂತ್ರಗಳಿಂದ ಕೇಂದ್ರ ಸರ್ಕಾರವು ರಾಜ್ಯ ಜನರ ವಿರೋಧ ಎದುರಿಸುತ್ತದೆಯೇ ವಿನಃ, ಅದರಿಂದ ಸಿದ್ದರಾಮಯ್ಯ ಅವರನ್ನು ಕಟ್ಟಿಹಾಕಲು ಸಾಧ್ಯವಿಲ್ಲ. ಅಷ್ಟಕ್ಕೂ ದೊಡ್ಡ ಜನಬೆಂಬಲದ ಸಹಕಾರದಿಂದ ಮುಖ್ಯಮಂತ್ರಿಯಾಗಿ ಜನಪರವಾಗಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಅಂತಹ ಜನಪ್ರಿಯ ಮುಖ್ಯಮಂತ್ರಿಯನ್ನು ಇಡಿ ದುರ್ಬಳಕೆ ಸಂಚಿನಿಂದ ಬಂಧಿಸುವ ಹುನ್ನಾರವನ್ನು ಸಹಿಸಲಾದೀತೇ” ಎಂದು ಅವರು ಪ್ರಶ್ನಿಸಿದ್ದಾರೆ.

“ಜನವಿರೋಧಿಗಳಾದ ಈ ಭ್ರಷ್ಟ ಬಿಜೆಪಿಯವರಿಗೇ ಇಷ್ಟೊಂದು ಧೈರ್ಯ, ಭಂಡತನ ಇರಬೇಕಾದರೆ, ಜನಪರವಾಗಿ ಚಿಂತಿಸಿ ಅವರ ಬದುಕಿಗೆ ನೇರವಾಗಿ ಸಹಾಯ ಮಾಡುವ ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡುತ್ತಿರುವ ನಮಗೆ ಇನ್ನೆಷ್ಟು ಧೈರ್ಯ ವಿಶ್ವಾಸ ಇರಬೇಡ, ಅಲ್ಲವೇ” ಎಂದಿದ್ದಾರೆ.

ಇದನ್ನೂ ಓದಿ; ಡಿಸಿಎಂ ಸ್ವಕ್ಷೇತ್ರದಲ್ಲಿ ದಲಿತ ಯುವಕನ ಕೈ ಕತ್ತರಿಸಿದ ಬಲಾಢ್ಯ ಜಾತಿ ಗುಂಪು; ಗಡಿಪಾರಾಗಿದ್ದ ರೌಡಿಶೀಟರ್‌ನಿಂದ ದುಷ್ಕೃತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...