Homeಕರ್ನಾಟಕಅಂಬೇಡ್ಕರ್ ಭಾವಚಿತ್ರ ದುರ್ಬಳಕೆ ತಡೆಗೆ ಚಳ್ಳಕೆರೆಯಲ್ಲಿ ತಾಲ್ಲೂಕು ಆಡಳಿತಕ್ಕೆ ಪತ್ರ

ಅಂಬೇಡ್ಕರ್ ಭಾವಚಿತ್ರ ದುರ್ಬಳಕೆ ತಡೆಗೆ ಚಳ್ಳಕೆರೆಯಲ್ಲಿ ತಾಲ್ಲೂಕು ಆಡಳಿತಕ್ಕೆ ಪತ್ರ

- Advertisement -
- Advertisement -

ಚಳ್ಳಕೆರೆಯಲ್ಲಿ ವಿಶ್ವ ಹಿಂದೂ ಪರಿಷತ್-ಬಜರಂಗದಳದ ವತಿಯಿಂದ ಆಚರಿಸಲಾಗುತ್ತಿರುವ ಹಿಂದೂ ಮಹಾಗಣಪತಿ ಮಹೋತ್ಸವ-2019ರ ಭಿತ್ತಿಪತ್ರ (Wall Poster) ಮತ್ತು ಜಾಹೀರಾತು ಫಲಕ (Flex) ಗಳಲ್ಲಿ ಮುದ್ರಿಸಲಾಗಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಕೋರಿ ದಲಿತ ಸಂಘಟನೆಗಳು ತಾಲ್ಲೂಕು ಆಡಳಿತಕ್ಕೆ ಪತ್ರ ಬರೆದಿರುವ ವಿಶಿಷ್ಟ ಘಟನೆ ಜರುಗಿದೆ.

ಏಕೆ ಅಂಬೇಡ್ಕರ್ ಭಾವಚಿತ್ರ ಬಳಸಬಾರದು ಎಂಬುದಕ್ಕೆ ಅವರು ಮುಖ್ಯ ಅಂಶಗಳನ್ನು ಹಾಗೂ ತಾತ್ವಿಕ ಕಾರಣಗಳನ್ನು ಮುಂದಿಟ್ಟು ಆಕ್ಷೇಪ, ವಿರೋಧಗಳನ್ನು ದಾಖಲಿಸಿದ್ದಾರೆ.

ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ತಮ್ಮನ್ನು ತಾವು ಹಿಂದೂ ಎಂದು ಗುರುತಿಸಿಕೊಳ್ಳಲು ಯಾವತ್ತಿಗೂ ಬಯಸಿದವರಲ್ಲ. ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಯೋಲಾದಲ್ಲಿ ಅಕ್ಟೋಬರ್ ೧೩, ೧೯೩೫ ರಂದು ನಡೆದ ದಲಿತ ಮಹಾಸಮ್ಮೇಳನದಲ್ಲಿ ಅವರು, ’ನಾನು ಹಿಂದೂ ಆಗಿ ಹುಟ್ಟಿದ್ದೇನೆ. ಅದು ನನ್ನ ಕೈಯಲ್ಲಿರಲಿಲ್ಲ. ಆದರೆ ಹಿಂದೂ ಆಗಿ ಸಾಯಲಾರೆ’ (ಸಮಗ್ರ ಬರೆಹಗಳು ಮತ್ತು ಭಾಷಣಗಳು ಸಂ.೧೮, ಪು.೩೩೩) ಎಂದು ಬಹಿರಂಗವಾಗಿ ಘೋಷಿಸಿಕೊಂಡರಲ್ಲದೆ ತಾವು ನುಡಿದಂತೆಯೇ ನಡೆದುಕೊಂಡರೂ ಕೂಡ.

ಅಕ್ಟೋಬರ್ ೧೪, ೧೯೫೬ ರಂದು ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿಯಲ್ಲಿ ತಮ್ಮ ಲಕ್ಷಾಂತರ ಅನುಯಾಯಿಗಳೊಂದಿಗೆ ಅಂಬೇಡ್ಕರ್ ಅವರು ಬೌದ್ಧ ಧಮ್ಮವನ್ನು ಸ್ವೀಕರಿಸಿದರು. ತಾವು ಹಿಂದೂ ಧರ್ಮವನ್ನು ತೊರೆದು ಬೌದ್ಧ ಧಮ್ಮವನ್ನು ಸ್ವೀಕರಿಸಿದ ದಿನದಂದು ಅವರು, ’ಈ ದಿನ ನನಗೆ ನರಕದಿಂದ ಬಿಡುಗಡೆಗೊಂಡ ಹಾಗೆ ಅನ್ನಿಸುತ್ತದೆ’ ಎಂದು ತಮ್ಮವರೊಂದಿಗೆ ಹೇಳಿಕೊಂಡರು. (ಸಮಗ್ರ ಬರೆಹಗಳು ಮತ್ತು ಭಾಷಣಗಳು, ಸಂ.೨೦, ಪು.೭೯೭)

ಇದೇ ಸಂದರ್ಭದಲ್ಲಿ ತಾವು ಬರೆದು ತಯಾರಿಸಿದ ಇಪ್ಪತ್ತೆರಡು ಪತ್ರಿಜ್ಞಾ ವಿಧಿಗಳನ್ನು ಅವರು ತಮ್ಮ ಅನುಯಾಯಿಗಳಿಗೆ ಬೋಧಿಸಿದರು. ಈ ಪ್ರತಿಜ್ಞಾ ವಿಧಿಗಳಲ್ಲಿ ’ನಾನು ಬ್ರಹ್ಮ, ವಿಷ್ಣು, ಶಿವ, ರಾಮ, ಕೃಷ್ಣ, ಗಣಪತಿ ಮೊದಲಾದ ಹಿಂದೂ ದೇವರುಗಳನ್ನು ನಂಬುವುದಿಲ್ಲ ಮತ್ತು ಪೂಜಿಸುವುದಿಲ್ಲ’ ಎನ್ನುವುದೂ ಸೇರಿದೆ. (ಸಮಗ್ರ ಬರೆಹಗಳು ಮತ್ತು ಭಾಷಣಗಳು, ಸಂ.೨೦, ಪು.೭೯೦)

ಅಂಬೇಡ್ಕರರು ಬೌದ್ಧ ಧಮ್ಮವನ್ನು ಸ್ವೀಕರಿಸಿದ ನಂತರ ಹಿಂದೂ ಧರ್ಮಕ್ಕೆ ಸಂಬಂಧಿಸಿದ ಯಾವುದೇ ಗುರುತು, ಲಾಂಛನ, ವಿಶೇಷಣ, ಉಪಾಧಿಗಳಿಗೆ ಅವರನ್ನು ತಳುಕುಹಾಕದೆ ಬೌದ್ಧ ಧಮ್ಮದೊಂದಿಗೆ ಅವರನ್ನು ಗುರುತಿಸಿಕೊಂಡು ಬರಲಾಗುತ್ತಿದೆ ಎಂದು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಇಂತಹ ಸೂಕ್ಷ್ಮ ವಿಚಾರಗಳನ್ನು ಗಮನಿಸುವ ಗೋಜಿಗೆ ಹೋಗದ ಚಳ್ಳಕೆರೆಯ ವಿಶ್ವ ಹಿಂದೂ ಪರಿಷತ್-ಬಜರಂಗ ದಳದವರು ಅಂಬೇಡ್ಕರ್ ಅವರ ಭಾವಚಿತ್ರವನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಂಡಿರುವುದು ಈ ಸಂಘಟನೆಯ ಅವಿವೇಕತನವನ್ನು ತೋರಿಸುತ್ತದೆ. ದಲಿತರ ಭಾವನೆಗಳನ್ನು ಗೌರವಿಸುವ ಔಚಿತ್ಯ ಪ್ರಜ್ಞೆಯಿಲ್ಲದ ಇಂತಹವರು ಅಂಬೇಡ್ಕರ್ ಅವರನ್ನು ಪ್ರಚಾರ ಸಾಮಗ್ರಿಯಂತೆ ಬಳಸಿಕೊಳ್ಳುತ್ತಿರುವುದು ಆಕ್ಷೇಪಣೀಯವೂ ಖಂಡನಾರ್ಹವೂ ಆಗಿದೆ ಎಂದು ಆರೋಪಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್-ಬಜರಂಗ ದಳದವರು ಪ್ರಕಟಿಸಿರುವ ಭಿತ್ತಿಪತ್ರ ಮತ್ತು ಜಾಹೀರಾತು ಫಲಕಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವಷ್ಟೇ ಅಲ್ಲದೆ ಎಂ.ಎಸ್. ಗೋಳ್ವಾಲ್ಕರ್, ಕೆ.ಬಿ. ಹೆಡ್ಗೇವಾರ್,  ವಿ.ಡಿ. ಸಾವರ್ಕರ್ ಇವರ ಭಾವಚಿತ್ರಗಳೂ ಸೇರಿರುತ್ತವೆ. ಇವರೆಲ್ಲ ತಮ್ಮನ್ನು ತಾವು ಹಿಂದೂಗಳೆಂದು ಕರೆದುಕೊಂಡವರು. ಎಂ.ಎಸ್. ಗೋಳ್ವಾಲ್ಕರ್ ಅವರಂತೂ, ’ಮುಸಲ್ಮಾನರು ಕ್ರೈಸ್ತರು ಪಾರ್ಸಿಗಳು ಭಾರತೀಯರಲ್ಲ. ಅವರು ಈ ದೇಶದಲ್ಲಿ ಇರುವುದಾದರೆ ಎರಡನೇ ದರ್ಜೆಯ ಪ್ರಜೆಗಳಂತೆ ಇರತಕ್ಕದ್ದೆಂದು’ ಪ್ರತಿಪಾದಿಸಿದವರು. ಇವರ ’ಬಂಚ್ ಆಫ್ ಥಾಟ್ಸ್’(Bunch of thoughts) ಕೃತಿಯ ಸಾರವೇ ಅನ್ಯಧರ್ಮ ದ್ವೇಷ. ಮುಸ್ಲಿಂ ಸಮುದಾಯದವರ ಮೇಲೆ ದ್ವೇಷದ ನಂಜನ್ನು ಕಾರುವುದೇ ಇವರ ತಾತ್ವಿಕತೆ ಎಂದು ಕಿಡಿ ಕಾರಿದ್ದಾರೆ.

ಆದ್ದರಿಂದ, ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಜೀವವಿರೋಧಿ ಮನುವಾದಿ ಸಿದ್ಧಾಂತಗಳ ಪ್ರಚಾರಕರ ಜೊತೆಯಲ್ಲಿಟ್ಟು ಪ್ರದರ್ಶಿಸುವುದನ್ನು ಮತ್ತು ಸ್ವತಃ ತಾವೇ ವಿರೋಧಿಸಿದ, ತಿರಸ್ಕರಿಸಿದ ಲಾಂಛನಗಳೊಂದಿಗೆ ಅವರನ್ನು ಬೆಸೆಯುವುದನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ.

ನಮ್ಮ ಆಕ್ಷೇಪ ಮತ್ತು ವಿರೋಧಗಳಿಗೆ ಪೂರಕವಾದ ದಾಖಲೆಗಳನ್ನು ಬಾಬಾಸಾಹೇಬ್ ಅವರ ಕೃತಿ ಸಂಪುಟಗಳಿಂದ ಆಯ್ದು ಈ ಪತ್ರದೊಂದಿಗೆ ಲಗತ್ತಿಸುತ್ತಿದ್ದೇವೆ. ಹಾಗಾಗಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆರವುಗೊಳಿಸಲು ತಾವು ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದೂ, ತಪ್ಪಿದಲ್ಲಿ ಸದರಿ ಸಂಘಟಕರ ವಿರುದ್ಧ ಪ್ರತಿಭಟನೆಯನ್ನು ಹಮ್ಮಿಕೊಳ್ಳುವುದು ನಮಗೆಲ್ಲ ಅನಿವಾರ್ಯವಾಗುತ್ತದೆ ಎಂದೂ ಈ ಮೂಲಕ ತಮ್ಮ ಗಮನಕ್ಕೆ ತರಬಯಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಕೋಮುವಾದಿಗಳ ಭಾವಚಿತ್ರಗಳ ಜೊತೆಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿತ್ರವನ್ನು ಹಾಕಿರುವುದು ಖಂಡನಾರ್ಹ.

  2. ಓವೈಸಿ & ಹಾಗೂ ಟಿಪ್ಪು ವಿನ ಜೊತೆ ಅಂಬೇಡ್ಕರ್ ರರ ಭಾವಚಿತ್ರ ಸೇರಿಸುತ್ತಾರಲ್ಲ ಅದಕ್ಕೆ ಏಕೆ ಯಾರು ಆಕ್ಷೇಪಣೆ ಮಾಡುವದಿಲ್ಲ?

  3. ಯಾಕೆಂದರೆ ಟಿಪ್ಪು ಮತ್ತು ಒವೈಸಿ ದಲಿತರ ದ್ವೇಷಿಗಳಲ್ಲ. ಈಗ ಕಪಟದಾಟ ನಡೆಯುವುದಿಲ್ಲ.

  4. ಹೌದು!ಆಂಬೇಡ್ಕರ್ ದೇಶದ ಸ್ಪಾತಂತ್ರಕ್ಕಾಗಾ
    ನೀಡಿದ ಕೋಡುಗೆ ದೋಡ್ಡ ಸೋನ್ನೆ.ದೇಶಭಕ್ತ
    ರ ಸಾಲಿನಲ್ಲಿ ಆಂಬೇಡ್ಕರ ಬೇಡವೆ ಬೇಡ.
    ಸೇರಿಸಿದರೆ ಅದು ದೇಶಭಕ್ತರ ಅವಮಾನ..!!

    • ಮೊದಲು ಅಂಬೇಡ್ಕರ್ ಬಗ್ಗೆ ಚೆನ್ನಾಗಿ ಓದಿಕೊಂಡು ಆಮೇಲೆ ಚರ್ಚೆ ಮಾಡಿ ಅದಕ್ಕಿಂತ ಮೊದಲೇ ಚರ್ಚೆ ಮಾಡುವುದು ಅವಿವೇಕಿತನ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...