Homeಕರ್ನಾಟಕಅಂಬೇಡ್ಕರ್ ಭಾವಚಿತ್ರ ದುರ್ಬಳಕೆ ತಡೆಗೆ ಚಳ್ಳಕೆರೆಯಲ್ಲಿ ತಾಲ್ಲೂಕು ಆಡಳಿತಕ್ಕೆ ಪತ್ರ

ಅಂಬೇಡ್ಕರ್ ಭಾವಚಿತ್ರ ದುರ್ಬಳಕೆ ತಡೆಗೆ ಚಳ್ಳಕೆರೆಯಲ್ಲಿ ತಾಲ್ಲೂಕು ಆಡಳಿತಕ್ಕೆ ಪತ್ರ

- Advertisement -
- Advertisement -

ಚಳ್ಳಕೆರೆಯಲ್ಲಿ ವಿಶ್ವ ಹಿಂದೂ ಪರಿಷತ್-ಬಜರಂಗದಳದ ವತಿಯಿಂದ ಆಚರಿಸಲಾಗುತ್ತಿರುವ ಹಿಂದೂ ಮಹಾಗಣಪತಿ ಮಹೋತ್ಸವ-2019ರ ಭಿತ್ತಿಪತ್ರ (Wall Poster) ಮತ್ತು ಜಾಹೀರಾತು ಫಲಕ (Flex) ಗಳಲ್ಲಿ ಮುದ್ರಿಸಲಾಗಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಕೋರಿ ದಲಿತ ಸಂಘಟನೆಗಳು ತಾಲ್ಲೂಕು ಆಡಳಿತಕ್ಕೆ ಪತ್ರ ಬರೆದಿರುವ ವಿಶಿಷ್ಟ ಘಟನೆ ಜರುಗಿದೆ.

ಏಕೆ ಅಂಬೇಡ್ಕರ್ ಭಾವಚಿತ್ರ ಬಳಸಬಾರದು ಎಂಬುದಕ್ಕೆ ಅವರು ಮುಖ್ಯ ಅಂಶಗಳನ್ನು ಹಾಗೂ ತಾತ್ವಿಕ ಕಾರಣಗಳನ್ನು ಮುಂದಿಟ್ಟು ಆಕ್ಷೇಪ, ವಿರೋಧಗಳನ್ನು ದಾಖಲಿಸಿದ್ದಾರೆ.

ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ತಮ್ಮನ್ನು ತಾವು ಹಿಂದೂ ಎಂದು ಗುರುತಿಸಿಕೊಳ್ಳಲು ಯಾವತ್ತಿಗೂ ಬಯಸಿದವರಲ್ಲ. ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಯೋಲಾದಲ್ಲಿ ಅಕ್ಟೋಬರ್ ೧೩, ೧೯೩೫ ರಂದು ನಡೆದ ದಲಿತ ಮಹಾಸಮ್ಮೇಳನದಲ್ಲಿ ಅವರು, ’ನಾನು ಹಿಂದೂ ಆಗಿ ಹುಟ್ಟಿದ್ದೇನೆ. ಅದು ನನ್ನ ಕೈಯಲ್ಲಿರಲಿಲ್ಲ. ಆದರೆ ಹಿಂದೂ ಆಗಿ ಸಾಯಲಾರೆ’ (ಸಮಗ್ರ ಬರೆಹಗಳು ಮತ್ತು ಭಾಷಣಗಳು ಸಂ.೧೮, ಪು.೩೩೩) ಎಂದು ಬಹಿರಂಗವಾಗಿ ಘೋಷಿಸಿಕೊಂಡರಲ್ಲದೆ ತಾವು ನುಡಿದಂತೆಯೇ ನಡೆದುಕೊಂಡರೂ ಕೂಡ.

ಅಕ್ಟೋಬರ್ ೧೪, ೧೯೫೬ ರಂದು ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿಯಲ್ಲಿ ತಮ್ಮ ಲಕ್ಷಾಂತರ ಅನುಯಾಯಿಗಳೊಂದಿಗೆ ಅಂಬೇಡ್ಕರ್ ಅವರು ಬೌದ್ಧ ಧಮ್ಮವನ್ನು ಸ್ವೀಕರಿಸಿದರು. ತಾವು ಹಿಂದೂ ಧರ್ಮವನ್ನು ತೊರೆದು ಬೌದ್ಧ ಧಮ್ಮವನ್ನು ಸ್ವೀಕರಿಸಿದ ದಿನದಂದು ಅವರು, ’ಈ ದಿನ ನನಗೆ ನರಕದಿಂದ ಬಿಡುಗಡೆಗೊಂಡ ಹಾಗೆ ಅನ್ನಿಸುತ್ತದೆ’ ಎಂದು ತಮ್ಮವರೊಂದಿಗೆ ಹೇಳಿಕೊಂಡರು. (ಸಮಗ್ರ ಬರೆಹಗಳು ಮತ್ತು ಭಾಷಣಗಳು, ಸಂ.೨೦, ಪು.೭೯೭)

ಇದೇ ಸಂದರ್ಭದಲ್ಲಿ ತಾವು ಬರೆದು ತಯಾರಿಸಿದ ಇಪ್ಪತ್ತೆರಡು ಪತ್ರಿಜ್ಞಾ ವಿಧಿಗಳನ್ನು ಅವರು ತಮ್ಮ ಅನುಯಾಯಿಗಳಿಗೆ ಬೋಧಿಸಿದರು. ಈ ಪ್ರತಿಜ್ಞಾ ವಿಧಿಗಳಲ್ಲಿ ’ನಾನು ಬ್ರಹ್ಮ, ವಿಷ್ಣು, ಶಿವ, ರಾಮ, ಕೃಷ್ಣ, ಗಣಪತಿ ಮೊದಲಾದ ಹಿಂದೂ ದೇವರುಗಳನ್ನು ನಂಬುವುದಿಲ್ಲ ಮತ್ತು ಪೂಜಿಸುವುದಿಲ್ಲ’ ಎನ್ನುವುದೂ ಸೇರಿದೆ. (ಸಮಗ್ರ ಬರೆಹಗಳು ಮತ್ತು ಭಾಷಣಗಳು, ಸಂ.೨೦, ಪು.೭೯೦)

ಅಂಬೇಡ್ಕರರು ಬೌದ್ಧ ಧಮ್ಮವನ್ನು ಸ್ವೀಕರಿಸಿದ ನಂತರ ಹಿಂದೂ ಧರ್ಮಕ್ಕೆ ಸಂಬಂಧಿಸಿದ ಯಾವುದೇ ಗುರುತು, ಲಾಂಛನ, ವಿಶೇಷಣ, ಉಪಾಧಿಗಳಿಗೆ ಅವರನ್ನು ತಳುಕುಹಾಕದೆ ಬೌದ್ಧ ಧಮ್ಮದೊಂದಿಗೆ ಅವರನ್ನು ಗುರುತಿಸಿಕೊಂಡು ಬರಲಾಗುತ್ತಿದೆ ಎಂದು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಇಂತಹ ಸೂಕ್ಷ್ಮ ವಿಚಾರಗಳನ್ನು ಗಮನಿಸುವ ಗೋಜಿಗೆ ಹೋಗದ ಚಳ್ಳಕೆರೆಯ ವಿಶ್ವ ಹಿಂದೂ ಪರಿಷತ್-ಬಜರಂಗ ದಳದವರು ಅಂಬೇಡ್ಕರ್ ಅವರ ಭಾವಚಿತ್ರವನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಂಡಿರುವುದು ಈ ಸಂಘಟನೆಯ ಅವಿವೇಕತನವನ್ನು ತೋರಿಸುತ್ತದೆ. ದಲಿತರ ಭಾವನೆಗಳನ್ನು ಗೌರವಿಸುವ ಔಚಿತ್ಯ ಪ್ರಜ್ಞೆಯಿಲ್ಲದ ಇಂತಹವರು ಅಂಬೇಡ್ಕರ್ ಅವರನ್ನು ಪ್ರಚಾರ ಸಾಮಗ್ರಿಯಂತೆ ಬಳಸಿಕೊಳ್ಳುತ್ತಿರುವುದು ಆಕ್ಷೇಪಣೀಯವೂ ಖಂಡನಾರ್ಹವೂ ಆಗಿದೆ ಎಂದು ಆರೋಪಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್-ಬಜರಂಗ ದಳದವರು ಪ್ರಕಟಿಸಿರುವ ಭಿತ್ತಿಪತ್ರ ಮತ್ತು ಜಾಹೀರಾತು ಫಲಕಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವಷ್ಟೇ ಅಲ್ಲದೆ ಎಂ.ಎಸ್. ಗೋಳ್ವಾಲ್ಕರ್, ಕೆ.ಬಿ. ಹೆಡ್ಗೇವಾರ್,  ವಿ.ಡಿ. ಸಾವರ್ಕರ್ ಇವರ ಭಾವಚಿತ್ರಗಳೂ ಸೇರಿರುತ್ತವೆ. ಇವರೆಲ್ಲ ತಮ್ಮನ್ನು ತಾವು ಹಿಂದೂಗಳೆಂದು ಕರೆದುಕೊಂಡವರು. ಎಂ.ಎಸ್. ಗೋಳ್ವಾಲ್ಕರ್ ಅವರಂತೂ, ’ಮುಸಲ್ಮಾನರು ಕ್ರೈಸ್ತರು ಪಾರ್ಸಿಗಳು ಭಾರತೀಯರಲ್ಲ. ಅವರು ಈ ದೇಶದಲ್ಲಿ ಇರುವುದಾದರೆ ಎರಡನೇ ದರ್ಜೆಯ ಪ್ರಜೆಗಳಂತೆ ಇರತಕ್ಕದ್ದೆಂದು’ ಪ್ರತಿಪಾದಿಸಿದವರು. ಇವರ ’ಬಂಚ್ ಆಫ್ ಥಾಟ್ಸ್’(Bunch of thoughts) ಕೃತಿಯ ಸಾರವೇ ಅನ್ಯಧರ್ಮ ದ್ವೇಷ. ಮುಸ್ಲಿಂ ಸಮುದಾಯದವರ ಮೇಲೆ ದ್ವೇಷದ ನಂಜನ್ನು ಕಾರುವುದೇ ಇವರ ತಾತ್ವಿಕತೆ ಎಂದು ಕಿಡಿ ಕಾರಿದ್ದಾರೆ.

ಆದ್ದರಿಂದ, ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಜೀವವಿರೋಧಿ ಮನುವಾದಿ ಸಿದ್ಧಾಂತಗಳ ಪ್ರಚಾರಕರ ಜೊತೆಯಲ್ಲಿಟ್ಟು ಪ್ರದರ್ಶಿಸುವುದನ್ನು ಮತ್ತು ಸ್ವತಃ ತಾವೇ ವಿರೋಧಿಸಿದ, ತಿರಸ್ಕರಿಸಿದ ಲಾಂಛನಗಳೊಂದಿಗೆ ಅವರನ್ನು ಬೆಸೆಯುವುದನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ.

ನಮ್ಮ ಆಕ್ಷೇಪ ಮತ್ತು ವಿರೋಧಗಳಿಗೆ ಪೂರಕವಾದ ದಾಖಲೆಗಳನ್ನು ಬಾಬಾಸಾಹೇಬ್ ಅವರ ಕೃತಿ ಸಂಪುಟಗಳಿಂದ ಆಯ್ದು ಈ ಪತ್ರದೊಂದಿಗೆ ಲಗತ್ತಿಸುತ್ತಿದ್ದೇವೆ. ಹಾಗಾಗಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆರವುಗೊಳಿಸಲು ತಾವು ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದೂ, ತಪ್ಪಿದಲ್ಲಿ ಸದರಿ ಸಂಘಟಕರ ವಿರುದ್ಧ ಪ್ರತಿಭಟನೆಯನ್ನು ಹಮ್ಮಿಕೊಳ್ಳುವುದು ನಮಗೆಲ್ಲ ಅನಿವಾರ್ಯವಾಗುತ್ತದೆ ಎಂದೂ ಈ ಮೂಲಕ ತಮ್ಮ ಗಮನಕ್ಕೆ ತರಬಯಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಕೋಮುವಾದಿಗಳ ಭಾವಚಿತ್ರಗಳ ಜೊತೆಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿತ್ರವನ್ನು ಹಾಕಿರುವುದು ಖಂಡನಾರ್ಹ.

  2. ಓವೈಸಿ & ಹಾಗೂ ಟಿಪ್ಪು ವಿನ ಜೊತೆ ಅಂಬೇಡ್ಕರ್ ರರ ಭಾವಚಿತ್ರ ಸೇರಿಸುತ್ತಾರಲ್ಲ ಅದಕ್ಕೆ ಏಕೆ ಯಾರು ಆಕ್ಷೇಪಣೆ ಮಾಡುವದಿಲ್ಲ?

  3. ಯಾಕೆಂದರೆ ಟಿಪ್ಪು ಮತ್ತು ಒವೈಸಿ ದಲಿತರ ದ್ವೇಷಿಗಳಲ್ಲ. ಈಗ ಕಪಟದಾಟ ನಡೆಯುವುದಿಲ್ಲ.

  4. ಹೌದು!ಆಂಬೇಡ್ಕರ್ ದೇಶದ ಸ್ಪಾತಂತ್ರಕ್ಕಾಗಾ
    ನೀಡಿದ ಕೋಡುಗೆ ದೋಡ್ಡ ಸೋನ್ನೆ.ದೇಶಭಕ್ತ
    ರ ಸಾಲಿನಲ್ಲಿ ಆಂಬೇಡ್ಕರ ಬೇಡವೆ ಬೇಡ.
    ಸೇರಿಸಿದರೆ ಅದು ದೇಶಭಕ್ತರ ಅವಮಾನ..!!

    • ಮೊದಲು ಅಂಬೇಡ್ಕರ್ ಬಗ್ಗೆ ಚೆನ್ನಾಗಿ ಓದಿಕೊಂಡು ಆಮೇಲೆ ಚರ್ಚೆ ಮಾಡಿ ಅದಕ್ಕಿಂತ ಮೊದಲೇ ಚರ್ಚೆ ಮಾಡುವುದು ಅವಿವೇಕಿತನ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...