Homeಕರ್ನಾಟಕಅಂಬೇಡ್ಕರ್ ಭಾವಚಿತ್ರ ದುರ್ಬಳಕೆ ತಡೆಗೆ ಚಳ್ಳಕೆರೆಯಲ್ಲಿ ತಾಲ್ಲೂಕು ಆಡಳಿತಕ್ಕೆ ಪತ್ರ

ಅಂಬೇಡ್ಕರ್ ಭಾವಚಿತ್ರ ದುರ್ಬಳಕೆ ತಡೆಗೆ ಚಳ್ಳಕೆರೆಯಲ್ಲಿ ತಾಲ್ಲೂಕು ಆಡಳಿತಕ್ಕೆ ಪತ್ರ

- Advertisement -
- Advertisement -

ಚಳ್ಳಕೆರೆಯಲ್ಲಿ ವಿಶ್ವ ಹಿಂದೂ ಪರಿಷತ್-ಬಜರಂಗದಳದ ವತಿಯಿಂದ ಆಚರಿಸಲಾಗುತ್ತಿರುವ ಹಿಂದೂ ಮಹಾಗಣಪತಿ ಮಹೋತ್ಸವ-2019ರ ಭಿತ್ತಿಪತ್ರ (Wall Poster) ಮತ್ತು ಜಾಹೀರಾತು ಫಲಕ (Flex) ಗಳಲ್ಲಿ ಮುದ್ರಿಸಲಾಗಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಕೋರಿ ದಲಿತ ಸಂಘಟನೆಗಳು ತಾಲ್ಲೂಕು ಆಡಳಿತಕ್ಕೆ ಪತ್ರ ಬರೆದಿರುವ ವಿಶಿಷ್ಟ ಘಟನೆ ಜರುಗಿದೆ.

ಏಕೆ ಅಂಬೇಡ್ಕರ್ ಭಾವಚಿತ್ರ ಬಳಸಬಾರದು ಎಂಬುದಕ್ಕೆ ಅವರು ಮುಖ್ಯ ಅಂಶಗಳನ್ನು ಹಾಗೂ ತಾತ್ವಿಕ ಕಾರಣಗಳನ್ನು ಮುಂದಿಟ್ಟು ಆಕ್ಷೇಪ, ವಿರೋಧಗಳನ್ನು ದಾಖಲಿಸಿದ್ದಾರೆ.

ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ತಮ್ಮನ್ನು ತಾವು ಹಿಂದೂ ಎಂದು ಗುರುತಿಸಿಕೊಳ್ಳಲು ಯಾವತ್ತಿಗೂ ಬಯಸಿದವರಲ್ಲ. ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಯೋಲಾದಲ್ಲಿ ಅಕ್ಟೋಬರ್ ೧೩, ೧೯೩೫ ರಂದು ನಡೆದ ದಲಿತ ಮಹಾಸಮ್ಮೇಳನದಲ್ಲಿ ಅವರು, ’ನಾನು ಹಿಂದೂ ಆಗಿ ಹುಟ್ಟಿದ್ದೇನೆ. ಅದು ನನ್ನ ಕೈಯಲ್ಲಿರಲಿಲ್ಲ. ಆದರೆ ಹಿಂದೂ ಆಗಿ ಸಾಯಲಾರೆ’ (ಸಮಗ್ರ ಬರೆಹಗಳು ಮತ್ತು ಭಾಷಣಗಳು ಸಂ.೧೮, ಪು.೩೩೩) ಎಂದು ಬಹಿರಂಗವಾಗಿ ಘೋಷಿಸಿಕೊಂಡರಲ್ಲದೆ ತಾವು ನುಡಿದಂತೆಯೇ ನಡೆದುಕೊಂಡರೂ ಕೂಡ.

ಅಕ್ಟೋಬರ್ ೧೪, ೧೯೫೬ ರಂದು ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿಯಲ್ಲಿ ತಮ್ಮ ಲಕ್ಷಾಂತರ ಅನುಯಾಯಿಗಳೊಂದಿಗೆ ಅಂಬೇಡ್ಕರ್ ಅವರು ಬೌದ್ಧ ಧಮ್ಮವನ್ನು ಸ್ವೀಕರಿಸಿದರು. ತಾವು ಹಿಂದೂ ಧರ್ಮವನ್ನು ತೊರೆದು ಬೌದ್ಧ ಧಮ್ಮವನ್ನು ಸ್ವೀಕರಿಸಿದ ದಿನದಂದು ಅವರು, ’ಈ ದಿನ ನನಗೆ ನರಕದಿಂದ ಬಿಡುಗಡೆಗೊಂಡ ಹಾಗೆ ಅನ್ನಿಸುತ್ತದೆ’ ಎಂದು ತಮ್ಮವರೊಂದಿಗೆ ಹೇಳಿಕೊಂಡರು. (ಸಮಗ್ರ ಬರೆಹಗಳು ಮತ್ತು ಭಾಷಣಗಳು, ಸಂ.೨೦, ಪು.೭೯೭)

ಇದೇ ಸಂದರ್ಭದಲ್ಲಿ ತಾವು ಬರೆದು ತಯಾರಿಸಿದ ಇಪ್ಪತ್ತೆರಡು ಪತ್ರಿಜ್ಞಾ ವಿಧಿಗಳನ್ನು ಅವರು ತಮ್ಮ ಅನುಯಾಯಿಗಳಿಗೆ ಬೋಧಿಸಿದರು. ಈ ಪ್ರತಿಜ್ಞಾ ವಿಧಿಗಳಲ್ಲಿ ’ನಾನು ಬ್ರಹ್ಮ, ವಿಷ್ಣು, ಶಿವ, ರಾಮ, ಕೃಷ್ಣ, ಗಣಪತಿ ಮೊದಲಾದ ಹಿಂದೂ ದೇವರುಗಳನ್ನು ನಂಬುವುದಿಲ್ಲ ಮತ್ತು ಪೂಜಿಸುವುದಿಲ್ಲ’ ಎನ್ನುವುದೂ ಸೇರಿದೆ. (ಸಮಗ್ರ ಬರೆಹಗಳು ಮತ್ತು ಭಾಷಣಗಳು, ಸಂ.೨೦, ಪು.೭೯೦)

ಅಂಬೇಡ್ಕರರು ಬೌದ್ಧ ಧಮ್ಮವನ್ನು ಸ್ವೀಕರಿಸಿದ ನಂತರ ಹಿಂದೂ ಧರ್ಮಕ್ಕೆ ಸಂಬಂಧಿಸಿದ ಯಾವುದೇ ಗುರುತು, ಲಾಂಛನ, ವಿಶೇಷಣ, ಉಪಾಧಿಗಳಿಗೆ ಅವರನ್ನು ತಳುಕುಹಾಕದೆ ಬೌದ್ಧ ಧಮ್ಮದೊಂದಿಗೆ ಅವರನ್ನು ಗುರುತಿಸಿಕೊಂಡು ಬರಲಾಗುತ್ತಿದೆ ಎಂದು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಇಂತಹ ಸೂಕ್ಷ್ಮ ವಿಚಾರಗಳನ್ನು ಗಮನಿಸುವ ಗೋಜಿಗೆ ಹೋಗದ ಚಳ್ಳಕೆರೆಯ ವಿಶ್ವ ಹಿಂದೂ ಪರಿಷತ್-ಬಜರಂಗ ದಳದವರು ಅಂಬೇಡ್ಕರ್ ಅವರ ಭಾವಚಿತ್ರವನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಂಡಿರುವುದು ಈ ಸಂಘಟನೆಯ ಅವಿವೇಕತನವನ್ನು ತೋರಿಸುತ್ತದೆ. ದಲಿತರ ಭಾವನೆಗಳನ್ನು ಗೌರವಿಸುವ ಔಚಿತ್ಯ ಪ್ರಜ್ಞೆಯಿಲ್ಲದ ಇಂತಹವರು ಅಂಬೇಡ್ಕರ್ ಅವರನ್ನು ಪ್ರಚಾರ ಸಾಮಗ್ರಿಯಂತೆ ಬಳಸಿಕೊಳ್ಳುತ್ತಿರುವುದು ಆಕ್ಷೇಪಣೀಯವೂ ಖಂಡನಾರ್ಹವೂ ಆಗಿದೆ ಎಂದು ಆರೋಪಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್-ಬಜರಂಗ ದಳದವರು ಪ್ರಕಟಿಸಿರುವ ಭಿತ್ತಿಪತ್ರ ಮತ್ತು ಜಾಹೀರಾತು ಫಲಕಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವಷ್ಟೇ ಅಲ್ಲದೆ ಎಂ.ಎಸ್. ಗೋಳ್ವಾಲ್ಕರ್, ಕೆ.ಬಿ. ಹೆಡ್ಗೇವಾರ್,  ವಿ.ಡಿ. ಸಾವರ್ಕರ್ ಇವರ ಭಾವಚಿತ್ರಗಳೂ ಸೇರಿರುತ್ತವೆ. ಇವರೆಲ್ಲ ತಮ್ಮನ್ನು ತಾವು ಹಿಂದೂಗಳೆಂದು ಕರೆದುಕೊಂಡವರು. ಎಂ.ಎಸ್. ಗೋಳ್ವಾಲ್ಕರ್ ಅವರಂತೂ, ’ಮುಸಲ್ಮಾನರು ಕ್ರೈಸ್ತರು ಪಾರ್ಸಿಗಳು ಭಾರತೀಯರಲ್ಲ. ಅವರು ಈ ದೇಶದಲ್ಲಿ ಇರುವುದಾದರೆ ಎರಡನೇ ದರ್ಜೆಯ ಪ್ರಜೆಗಳಂತೆ ಇರತಕ್ಕದ್ದೆಂದು’ ಪ್ರತಿಪಾದಿಸಿದವರು. ಇವರ ’ಬಂಚ್ ಆಫ್ ಥಾಟ್ಸ್’(Bunch of thoughts) ಕೃತಿಯ ಸಾರವೇ ಅನ್ಯಧರ್ಮ ದ್ವೇಷ. ಮುಸ್ಲಿಂ ಸಮುದಾಯದವರ ಮೇಲೆ ದ್ವೇಷದ ನಂಜನ್ನು ಕಾರುವುದೇ ಇವರ ತಾತ್ವಿಕತೆ ಎಂದು ಕಿಡಿ ಕಾರಿದ್ದಾರೆ.

ಆದ್ದರಿಂದ, ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಜೀವವಿರೋಧಿ ಮನುವಾದಿ ಸಿದ್ಧಾಂತಗಳ ಪ್ರಚಾರಕರ ಜೊತೆಯಲ್ಲಿಟ್ಟು ಪ್ರದರ್ಶಿಸುವುದನ್ನು ಮತ್ತು ಸ್ವತಃ ತಾವೇ ವಿರೋಧಿಸಿದ, ತಿರಸ್ಕರಿಸಿದ ಲಾಂಛನಗಳೊಂದಿಗೆ ಅವರನ್ನು ಬೆಸೆಯುವುದನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ.

ನಮ್ಮ ಆಕ್ಷೇಪ ಮತ್ತು ವಿರೋಧಗಳಿಗೆ ಪೂರಕವಾದ ದಾಖಲೆಗಳನ್ನು ಬಾಬಾಸಾಹೇಬ್ ಅವರ ಕೃತಿ ಸಂಪುಟಗಳಿಂದ ಆಯ್ದು ಈ ಪತ್ರದೊಂದಿಗೆ ಲಗತ್ತಿಸುತ್ತಿದ್ದೇವೆ. ಹಾಗಾಗಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆರವುಗೊಳಿಸಲು ತಾವು ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದೂ, ತಪ್ಪಿದಲ್ಲಿ ಸದರಿ ಸಂಘಟಕರ ವಿರುದ್ಧ ಪ್ರತಿಭಟನೆಯನ್ನು ಹಮ್ಮಿಕೊಳ್ಳುವುದು ನಮಗೆಲ್ಲ ಅನಿವಾರ್ಯವಾಗುತ್ತದೆ ಎಂದೂ ಈ ಮೂಲಕ ತಮ್ಮ ಗಮನಕ್ಕೆ ತರಬಯಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಕೋಮುವಾದಿಗಳ ಭಾವಚಿತ್ರಗಳ ಜೊತೆಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿತ್ರವನ್ನು ಹಾಕಿರುವುದು ಖಂಡನಾರ್ಹ.

  2. ಓವೈಸಿ & ಹಾಗೂ ಟಿಪ್ಪು ವಿನ ಜೊತೆ ಅಂಬೇಡ್ಕರ್ ರರ ಭಾವಚಿತ್ರ ಸೇರಿಸುತ್ತಾರಲ್ಲ ಅದಕ್ಕೆ ಏಕೆ ಯಾರು ಆಕ್ಷೇಪಣೆ ಮಾಡುವದಿಲ್ಲ?

  3. ಯಾಕೆಂದರೆ ಟಿಪ್ಪು ಮತ್ತು ಒವೈಸಿ ದಲಿತರ ದ್ವೇಷಿಗಳಲ್ಲ. ಈಗ ಕಪಟದಾಟ ನಡೆಯುವುದಿಲ್ಲ.

  4. ಹೌದು!ಆಂಬೇಡ್ಕರ್ ದೇಶದ ಸ್ಪಾತಂತ್ರಕ್ಕಾಗಾ
    ನೀಡಿದ ಕೋಡುಗೆ ದೋಡ್ಡ ಸೋನ್ನೆ.ದೇಶಭಕ್ತ
    ರ ಸಾಲಿನಲ್ಲಿ ಆಂಬೇಡ್ಕರ ಬೇಡವೆ ಬೇಡ.
    ಸೇರಿಸಿದರೆ ಅದು ದೇಶಭಕ್ತರ ಅವಮಾನ..!!

    • ಮೊದಲು ಅಂಬೇಡ್ಕರ್ ಬಗ್ಗೆ ಚೆನ್ನಾಗಿ ಓದಿಕೊಂಡು ಆಮೇಲೆ ಚರ್ಚೆ ಮಾಡಿ ಅದಕ್ಕಿಂತ ಮೊದಲೇ ಚರ್ಚೆ ಮಾಡುವುದು ಅವಿವೇಕಿತನ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...