Homeಕರ್ನಾಟಕಅಂಬೇಡ್ಕರ್ ಭಾವಚಿತ್ರ ದುರ್ಬಳಕೆ ತಡೆಗೆ ಚಳ್ಳಕೆರೆಯಲ್ಲಿ ತಾಲ್ಲೂಕು ಆಡಳಿತಕ್ಕೆ ಪತ್ರ

ಅಂಬೇಡ್ಕರ್ ಭಾವಚಿತ್ರ ದುರ್ಬಳಕೆ ತಡೆಗೆ ಚಳ್ಳಕೆರೆಯಲ್ಲಿ ತಾಲ್ಲೂಕು ಆಡಳಿತಕ್ಕೆ ಪತ್ರ

- Advertisement -
- Advertisement -

ಚಳ್ಳಕೆರೆಯಲ್ಲಿ ವಿಶ್ವ ಹಿಂದೂ ಪರಿಷತ್-ಬಜರಂಗದಳದ ವತಿಯಿಂದ ಆಚರಿಸಲಾಗುತ್ತಿರುವ ಹಿಂದೂ ಮಹಾಗಣಪತಿ ಮಹೋತ್ಸವ-2019ರ ಭಿತ್ತಿಪತ್ರ (Wall Poster) ಮತ್ತು ಜಾಹೀರಾತು ಫಲಕ (Flex) ಗಳಲ್ಲಿ ಮುದ್ರಿಸಲಾಗಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಕೋರಿ ದಲಿತ ಸಂಘಟನೆಗಳು ತಾಲ್ಲೂಕು ಆಡಳಿತಕ್ಕೆ ಪತ್ರ ಬರೆದಿರುವ ವಿಶಿಷ್ಟ ಘಟನೆ ಜರುಗಿದೆ.

ಏಕೆ ಅಂಬೇಡ್ಕರ್ ಭಾವಚಿತ್ರ ಬಳಸಬಾರದು ಎಂಬುದಕ್ಕೆ ಅವರು ಮುಖ್ಯ ಅಂಶಗಳನ್ನು ಹಾಗೂ ತಾತ್ವಿಕ ಕಾರಣಗಳನ್ನು ಮುಂದಿಟ್ಟು ಆಕ್ಷೇಪ, ವಿರೋಧಗಳನ್ನು ದಾಖಲಿಸಿದ್ದಾರೆ.

ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ತಮ್ಮನ್ನು ತಾವು ಹಿಂದೂ ಎಂದು ಗುರುತಿಸಿಕೊಳ್ಳಲು ಯಾವತ್ತಿಗೂ ಬಯಸಿದವರಲ್ಲ. ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಯೋಲಾದಲ್ಲಿ ಅಕ್ಟೋಬರ್ ೧೩, ೧೯೩೫ ರಂದು ನಡೆದ ದಲಿತ ಮಹಾಸಮ್ಮೇಳನದಲ್ಲಿ ಅವರು, ’ನಾನು ಹಿಂದೂ ಆಗಿ ಹುಟ್ಟಿದ್ದೇನೆ. ಅದು ನನ್ನ ಕೈಯಲ್ಲಿರಲಿಲ್ಲ. ಆದರೆ ಹಿಂದೂ ಆಗಿ ಸಾಯಲಾರೆ’ (ಸಮಗ್ರ ಬರೆಹಗಳು ಮತ್ತು ಭಾಷಣಗಳು ಸಂ.೧೮, ಪು.೩೩೩) ಎಂದು ಬಹಿರಂಗವಾಗಿ ಘೋಷಿಸಿಕೊಂಡರಲ್ಲದೆ ತಾವು ನುಡಿದಂತೆಯೇ ನಡೆದುಕೊಂಡರೂ ಕೂಡ.

ಅಕ್ಟೋಬರ್ ೧೪, ೧೯೫೬ ರಂದು ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿಯಲ್ಲಿ ತಮ್ಮ ಲಕ್ಷಾಂತರ ಅನುಯಾಯಿಗಳೊಂದಿಗೆ ಅಂಬೇಡ್ಕರ್ ಅವರು ಬೌದ್ಧ ಧಮ್ಮವನ್ನು ಸ್ವೀಕರಿಸಿದರು. ತಾವು ಹಿಂದೂ ಧರ್ಮವನ್ನು ತೊರೆದು ಬೌದ್ಧ ಧಮ್ಮವನ್ನು ಸ್ವೀಕರಿಸಿದ ದಿನದಂದು ಅವರು, ’ಈ ದಿನ ನನಗೆ ನರಕದಿಂದ ಬಿಡುಗಡೆಗೊಂಡ ಹಾಗೆ ಅನ್ನಿಸುತ್ತದೆ’ ಎಂದು ತಮ್ಮವರೊಂದಿಗೆ ಹೇಳಿಕೊಂಡರು. (ಸಮಗ್ರ ಬರೆಹಗಳು ಮತ್ತು ಭಾಷಣಗಳು, ಸಂ.೨೦, ಪು.೭೯೭)

ಇದೇ ಸಂದರ್ಭದಲ್ಲಿ ತಾವು ಬರೆದು ತಯಾರಿಸಿದ ಇಪ್ಪತ್ತೆರಡು ಪತ್ರಿಜ್ಞಾ ವಿಧಿಗಳನ್ನು ಅವರು ತಮ್ಮ ಅನುಯಾಯಿಗಳಿಗೆ ಬೋಧಿಸಿದರು. ಈ ಪ್ರತಿಜ್ಞಾ ವಿಧಿಗಳಲ್ಲಿ ’ನಾನು ಬ್ರಹ್ಮ, ವಿಷ್ಣು, ಶಿವ, ರಾಮ, ಕೃಷ್ಣ, ಗಣಪತಿ ಮೊದಲಾದ ಹಿಂದೂ ದೇವರುಗಳನ್ನು ನಂಬುವುದಿಲ್ಲ ಮತ್ತು ಪೂಜಿಸುವುದಿಲ್ಲ’ ಎನ್ನುವುದೂ ಸೇರಿದೆ. (ಸಮಗ್ರ ಬರೆಹಗಳು ಮತ್ತು ಭಾಷಣಗಳು, ಸಂ.೨೦, ಪು.೭೯೦)

ಅಂಬೇಡ್ಕರರು ಬೌದ್ಧ ಧಮ್ಮವನ್ನು ಸ್ವೀಕರಿಸಿದ ನಂತರ ಹಿಂದೂ ಧರ್ಮಕ್ಕೆ ಸಂಬಂಧಿಸಿದ ಯಾವುದೇ ಗುರುತು, ಲಾಂಛನ, ವಿಶೇಷಣ, ಉಪಾಧಿಗಳಿಗೆ ಅವರನ್ನು ತಳುಕುಹಾಕದೆ ಬೌದ್ಧ ಧಮ್ಮದೊಂದಿಗೆ ಅವರನ್ನು ಗುರುತಿಸಿಕೊಂಡು ಬರಲಾಗುತ್ತಿದೆ ಎಂದು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಇಂತಹ ಸೂಕ್ಷ್ಮ ವಿಚಾರಗಳನ್ನು ಗಮನಿಸುವ ಗೋಜಿಗೆ ಹೋಗದ ಚಳ್ಳಕೆರೆಯ ವಿಶ್ವ ಹಿಂದೂ ಪರಿಷತ್-ಬಜರಂಗ ದಳದವರು ಅಂಬೇಡ್ಕರ್ ಅವರ ಭಾವಚಿತ್ರವನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಂಡಿರುವುದು ಈ ಸಂಘಟನೆಯ ಅವಿವೇಕತನವನ್ನು ತೋರಿಸುತ್ತದೆ. ದಲಿತರ ಭಾವನೆಗಳನ್ನು ಗೌರವಿಸುವ ಔಚಿತ್ಯ ಪ್ರಜ್ಞೆಯಿಲ್ಲದ ಇಂತಹವರು ಅಂಬೇಡ್ಕರ್ ಅವರನ್ನು ಪ್ರಚಾರ ಸಾಮಗ್ರಿಯಂತೆ ಬಳಸಿಕೊಳ್ಳುತ್ತಿರುವುದು ಆಕ್ಷೇಪಣೀಯವೂ ಖಂಡನಾರ್ಹವೂ ಆಗಿದೆ ಎಂದು ಆರೋಪಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್-ಬಜರಂಗ ದಳದವರು ಪ್ರಕಟಿಸಿರುವ ಭಿತ್ತಿಪತ್ರ ಮತ್ತು ಜಾಹೀರಾತು ಫಲಕಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವಷ್ಟೇ ಅಲ್ಲದೆ ಎಂ.ಎಸ್. ಗೋಳ್ವಾಲ್ಕರ್, ಕೆ.ಬಿ. ಹೆಡ್ಗೇವಾರ್,  ವಿ.ಡಿ. ಸಾವರ್ಕರ್ ಇವರ ಭಾವಚಿತ್ರಗಳೂ ಸೇರಿರುತ್ತವೆ. ಇವರೆಲ್ಲ ತಮ್ಮನ್ನು ತಾವು ಹಿಂದೂಗಳೆಂದು ಕರೆದುಕೊಂಡವರು. ಎಂ.ಎಸ್. ಗೋಳ್ವಾಲ್ಕರ್ ಅವರಂತೂ, ’ಮುಸಲ್ಮಾನರು ಕ್ರೈಸ್ತರು ಪಾರ್ಸಿಗಳು ಭಾರತೀಯರಲ್ಲ. ಅವರು ಈ ದೇಶದಲ್ಲಿ ಇರುವುದಾದರೆ ಎರಡನೇ ದರ್ಜೆಯ ಪ್ರಜೆಗಳಂತೆ ಇರತಕ್ಕದ್ದೆಂದು’ ಪ್ರತಿಪಾದಿಸಿದವರು. ಇವರ ’ಬಂಚ್ ಆಫ್ ಥಾಟ್ಸ್’(Bunch of thoughts) ಕೃತಿಯ ಸಾರವೇ ಅನ್ಯಧರ್ಮ ದ್ವೇಷ. ಮುಸ್ಲಿಂ ಸಮುದಾಯದವರ ಮೇಲೆ ದ್ವೇಷದ ನಂಜನ್ನು ಕಾರುವುದೇ ಇವರ ತಾತ್ವಿಕತೆ ಎಂದು ಕಿಡಿ ಕಾರಿದ್ದಾರೆ.

ಆದ್ದರಿಂದ, ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಜೀವವಿರೋಧಿ ಮನುವಾದಿ ಸಿದ್ಧಾಂತಗಳ ಪ್ರಚಾರಕರ ಜೊತೆಯಲ್ಲಿಟ್ಟು ಪ್ರದರ್ಶಿಸುವುದನ್ನು ಮತ್ತು ಸ್ವತಃ ತಾವೇ ವಿರೋಧಿಸಿದ, ತಿರಸ್ಕರಿಸಿದ ಲಾಂಛನಗಳೊಂದಿಗೆ ಅವರನ್ನು ಬೆಸೆಯುವುದನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ.

ನಮ್ಮ ಆಕ್ಷೇಪ ಮತ್ತು ವಿರೋಧಗಳಿಗೆ ಪೂರಕವಾದ ದಾಖಲೆಗಳನ್ನು ಬಾಬಾಸಾಹೇಬ್ ಅವರ ಕೃತಿ ಸಂಪುಟಗಳಿಂದ ಆಯ್ದು ಈ ಪತ್ರದೊಂದಿಗೆ ಲಗತ್ತಿಸುತ್ತಿದ್ದೇವೆ. ಹಾಗಾಗಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆರವುಗೊಳಿಸಲು ತಾವು ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದೂ, ತಪ್ಪಿದಲ್ಲಿ ಸದರಿ ಸಂಘಟಕರ ವಿರುದ್ಧ ಪ್ರತಿಭಟನೆಯನ್ನು ಹಮ್ಮಿಕೊಳ್ಳುವುದು ನಮಗೆಲ್ಲ ಅನಿವಾರ್ಯವಾಗುತ್ತದೆ ಎಂದೂ ಈ ಮೂಲಕ ತಮ್ಮ ಗಮನಕ್ಕೆ ತರಬಯಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಕೋಮುವಾದಿಗಳ ಭಾವಚಿತ್ರಗಳ ಜೊತೆಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿತ್ರವನ್ನು ಹಾಕಿರುವುದು ಖಂಡನಾರ್ಹ.

  2. ಓವೈಸಿ & ಹಾಗೂ ಟಿಪ್ಪು ವಿನ ಜೊತೆ ಅಂಬೇಡ್ಕರ್ ರರ ಭಾವಚಿತ್ರ ಸೇರಿಸುತ್ತಾರಲ್ಲ ಅದಕ್ಕೆ ಏಕೆ ಯಾರು ಆಕ್ಷೇಪಣೆ ಮಾಡುವದಿಲ್ಲ?

  3. ಯಾಕೆಂದರೆ ಟಿಪ್ಪು ಮತ್ತು ಒವೈಸಿ ದಲಿತರ ದ್ವೇಷಿಗಳಲ್ಲ. ಈಗ ಕಪಟದಾಟ ನಡೆಯುವುದಿಲ್ಲ.

  4. ಹೌದು!ಆಂಬೇಡ್ಕರ್ ದೇಶದ ಸ್ಪಾತಂತ್ರಕ್ಕಾಗಾ
    ನೀಡಿದ ಕೋಡುಗೆ ದೋಡ್ಡ ಸೋನ್ನೆ.ದೇಶಭಕ್ತ
    ರ ಸಾಲಿನಲ್ಲಿ ಆಂಬೇಡ್ಕರ ಬೇಡವೆ ಬೇಡ.
    ಸೇರಿಸಿದರೆ ಅದು ದೇಶಭಕ್ತರ ಅವಮಾನ..!!

    • ಮೊದಲು ಅಂಬೇಡ್ಕರ್ ಬಗ್ಗೆ ಚೆನ್ನಾಗಿ ಓದಿಕೊಂಡು ಆಮೇಲೆ ಚರ್ಚೆ ಮಾಡಿ ಅದಕ್ಕಿಂತ ಮೊದಲೇ ಚರ್ಚೆ ಮಾಡುವುದು ಅವಿವೇಕಿತನ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...