Homeಮುಖಪುಟಚುನಾವಣಾ ಆಯೋಗದ ಕಚೇರಿಗೆ ಪ್ರತಿಭಟನಾ ಮೆರವಣಿಗೆ: ರಾಹುಲ್ ಗಾಂಧಿ ಸೇರಿ ಪ್ರತಿಪಕ್ಷ ನಾಯಕರನ್ನು ವಶಕ್ಕೆ ಪಡೆದ...

ಚುನಾವಣಾ ಆಯೋಗದ ಕಚೇರಿಗೆ ಪ್ರತಿಭಟನಾ ಮೆರವಣಿಗೆ: ರಾಹುಲ್ ಗಾಂಧಿ ಸೇರಿ ಪ್ರತಿಪಕ್ಷ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸಿ ಮತ್ತು 2024ರ ಲೋಕಸಭೆ ಚುನಾವಣೆಯಲ್ಲಿ ‘ಮತಗಳ್ಳತನ’ ನಡೆದಿದೆ ಎಂದು ಆರೋಪಿಸಿ ಚುನಾವಣಾ ಆಯೋಗದ ಕೇಂದ್ರ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಹೊರಟಿದ್ದ ವಿರೋಧ ಪಕ್ಷದ ನಾಯಕರನ್ನು ದೆಹಲಿ ಪೊಲೀಸರು ಸೋಮವಾರ (ಆ.11) ವಶಕ್ಕೆ ಪಡೆದರು.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್, ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್, ಟಿಎಂಸಿ ಸಂಸದೆ ಸಾಗರಿಕ ಘೋಷ್ ಸೇರಿದಂತೆ ಪ್ರಮುಖರನ್ನು ಪೊಲೀಸರು ಅರ್ಧ ದಾರಿಯಲ್ಲಿ ವಶಕ್ಕೆ ಪಡೆದರು ಎಂದು ವರದಿಯಾಗಿದೆ.

ಈ ವೇಳೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಹತ್ತಿ ಮುಂದುವರಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು “ಆಡಳಿತ ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲು ಪೊಲೀಸರು ಬಳಸುತ್ತಿದೆ” ಎಂದು ಕಿಡಿಕಾರಿದರು.

“ವಿರೋಧ ಪಕ್ಷಗಳು ಸಂವಿಧಾನವನ್ನು ರಕ್ಷಿಸಲು ಹೋರಾಡುತ್ತಿವೆ. ನಮಗೆ ಶುದ್ಧ ಮತದಾರರ ಪಟ್ಟಿ ಬೇಕು” ಎಂದು ಪೊಲೀಸರು ವಶಕ್ಕೆ ಪಡೆದ ಸಂದರ್ಭದಲ್ಲಿ ರಾಹುಲ್ ಗಾಂಧಿ ಹೇಳಿದರು.

“ಅವರು ಹೆದರಿದ್ದಾರೆ. ಇದೊಂದು ಹೇಡಿ ಸರ್ಕಾರ” ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.

ಸಂಸತ್ ಭವನದ ಮಕರ ದ್ವಾರದಲ್ಲಿ ರಾಷ್ಟ್ರಗೀತೆಯೊಂದಿಗೆ ಮೆರವಣಿಗೆ ಪ್ರಾರಂಭಿಸಿದ್ದ ಪ್ರತಿಪಕ್ಷ ನಾಯಕರು, ‘ಎಸ್‌ಐಆರ್’ ಮತ್ತು ‘ವೋಟ್ ಚೋರಿ’ ಎಂಬ ಭಿತ್ತಿ ಪತ್ರಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಚುನಾವಣಾ ಆಯೋಗದ ಕೇಂದ್ರ ಕಚೇರಿಯತ್ತ ಸಾಗುತ್ತಿದ್ದರು. ಸಾರಿಗೆ ಭವನದ ಬಳಿ ಮೆರವಣಿಗೆಗೆ ತಡೆಯೊಡ್ಡಿದ ಪೊಲೀಸರು, ನಾಯಕರನ್ನು ವಶಕ್ಕೆ ಪಡೆದರು.

ಸಾರಿಗೆ ಭವನದ ಬಳಿ ಪೊಲೀಸರು ದೊಡ್ಡ ಮಟ್ಟದಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದರು. ಮೆರವಣಿಗೆಗೆ ಅನುಮತಿ ಪಡೆದಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

“ದೆಹಲಿಯ ಬೀದಿಗಳಲ್ಲಿ ನಡೆಯಲು ಸಂಸದರಿಗೆ ಅನುಮತಿಯ ಅಗತ್ಯವಿಲ್ಲ” ಎಂದು ಸಮಾಜವಾದಿ ಪಕ್ಷದ ಸಂಸದ ರಾಮಗೋಪಾಲ್ ಯಾದವ್ ಹೇಳಿದರು. ಪೊಲೀಸ್ ನಿರ್ಬಂಧದ ಅಗತ್ಯವನ್ನು ಅವರು ಪ್ರಶ್ನಿಸಿದರು.

ಆರ್‌ಜೆಡಿಯ ಮನೋಜ್ ಝಾ ಎಸ್‌ಐಆರ್ ಒಂದು ‘ವಂಚನೆ’ ಎಂದು ಕರೆದಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಚುನಾವಣಾ ಆಯೋಗ ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.

ಸಮಾಜವಾದಿ ಪಕ್ಷದ ಡಿಂಪಲ್ ಯಾದವ್ ಅವರು ಉತ್ತರ ಪ್ರದೇಶದ ಉಪಚುನಾವಣೆಯಲ್ಲೂ ಮತಗಟ್ಟೆ ವಶಪಡಿಸಿಕೊಳ್ಳುವಿಕೆ ಮತ್ತು ಮತ ಕಳ್ಳತನ ನಡೆದಿದೆ ಆರೋಪಿಸಿದರು. ಈ ಬಗ್ಗೆ ಏಕೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿದರು.

ರಾಹುಲ್ ಗಾಂಧಿಯವರ ಆರೋಪಗಳನ್ನು ಬೆಂಬಲಿಸಿದ ಕಾಂಗ್ರೆಸ್ ಸಂಸದ ಶಶಿ ತರೂರ್, “ಚುನಾವಣಾ ಆಯೋಗವು ರಾಷ್ಟ್ರದ ಬಗ್ಗೆ ಮಾತ್ರವಲ್ಲ, ಸ್ವಯಂ ಒಂದು ಜವಾಬ್ದಾರಿಯನ್ನು ಹೊಂದಿದೆ. ನಮ್ಮ ಪ್ರಜಾಪ್ರಭುತ್ವವು ನಕಲಿ ಮತದಾನ ಮಾಡಲಾಗುತ್ತಿದೆಯೇ ಎಂಬ ಅನುಮಾನಗಳಿಂದ ಅಪಾಯಕ್ಕೆ ಸಿಲುಕಬಾರದು. ಏಕೆಂದರೆ ಅದು ತುಂಬಾ ಅಮೂಲ್ಯವಾಗಿದೆ. ಹಾಗಾಗಿ, ಚುನಾವಣಾ ಆಯೋಗ ವಿಶ್ವಾಸಾರ್ಹ ಉತ್ತರ ಒದಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್‌, ಸಮಾಜವಾದಿ, ಎನ್‌ಸಿಪಿ (ಎಸ್‌ಪಿ), ಶಿವಸೇನೆ (ಯುಬಿಟಿ), ಟಿಎಂಸಿ, ಆರ್‌ಜೆಡಿ, ಡಿಎಂಕೆ ಸೇರಿದಂತೆ ಇಂಡಿಯಾ ಒಕ್ಕೂಟದ ಎಲ್ಲಾ ಪಕ್ಷದ ಸಂಸದರು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ ಆರೋಪ: ರಾಹುಲ್ ಗಾಂಧಿಯಿಂದ ದಾಖಲೆ ಕೇಳಿದ ರಾಜ್ಯ ಚುನಾವಣಾಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...