Homeಮುಖಪುಟಚುನಾವಣಾ ಆಯೋಗದ ಕಚೇರಿಗೆ ಪ್ರತಿಭಟನಾ ಮೆರವಣಿಗೆ: ರಾಹುಲ್ ಗಾಂಧಿ ಸೇರಿ ಪ್ರತಿಪಕ್ಷ ನಾಯಕರನ್ನು ವಶಕ್ಕೆ ಪಡೆದ...

ಚುನಾವಣಾ ಆಯೋಗದ ಕಚೇರಿಗೆ ಪ್ರತಿಭಟನಾ ಮೆರವಣಿಗೆ: ರಾಹುಲ್ ಗಾಂಧಿ ಸೇರಿ ಪ್ರತಿಪಕ್ಷ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸಿ ಮತ್ತು 2024ರ ಲೋಕಸಭೆ ಚುನಾವಣೆಯಲ್ಲಿ ‘ಮತಗಳ್ಳತನ’ ನಡೆದಿದೆ ಎಂದು ಆರೋಪಿಸಿ ಚುನಾವಣಾ ಆಯೋಗದ ಕೇಂದ್ರ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಹೊರಟಿದ್ದ ವಿರೋಧ ಪಕ್ಷದ ನಾಯಕರನ್ನು ದೆಹಲಿ ಪೊಲೀಸರು ಸೋಮವಾರ (ಆ.11) ವಶಕ್ಕೆ ಪಡೆದರು.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್, ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್, ಟಿಎಂಸಿ ಸಂಸದೆ ಸಾಗರಿಕ ಘೋಷ್ ಸೇರಿದಂತೆ ಪ್ರಮುಖರನ್ನು ಪೊಲೀಸರು ಅರ್ಧ ದಾರಿಯಲ್ಲಿ ವಶಕ್ಕೆ ಪಡೆದರು ಎಂದು ವರದಿಯಾಗಿದೆ.

ಈ ವೇಳೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಹತ್ತಿ ಮುಂದುವರಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು “ಆಡಳಿತ ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲು ಪೊಲೀಸರು ಬಳಸುತ್ತಿದೆ” ಎಂದು ಕಿಡಿಕಾರಿದರು.

“ವಿರೋಧ ಪಕ್ಷಗಳು ಸಂವಿಧಾನವನ್ನು ರಕ್ಷಿಸಲು ಹೋರಾಡುತ್ತಿವೆ. ನಮಗೆ ಶುದ್ಧ ಮತದಾರರ ಪಟ್ಟಿ ಬೇಕು” ಎಂದು ಪೊಲೀಸರು ವಶಕ್ಕೆ ಪಡೆದ ಸಂದರ್ಭದಲ್ಲಿ ರಾಹುಲ್ ಗಾಂಧಿ ಹೇಳಿದರು.

“ಅವರು ಹೆದರಿದ್ದಾರೆ. ಇದೊಂದು ಹೇಡಿ ಸರ್ಕಾರ” ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.

ಸಂಸತ್ ಭವನದ ಮಕರ ದ್ವಾರದಲ್ಲಿ ರಾಷ್ಟ್ರಗೀತೆಯೊಂದಿಗೆ ಮೆರವಣಿಗೆ ಪ್ರಾರಂಭಿಸಿದ್ದ ಪ್ರತಿಪಕ್ಷ ನಾಯಕರು, ‘ಎಸ್‌ಐಆರ್’ ಮತ್ತು ‘ವೋಟ್ ಚೋರಿ’ ಎಂಬ ಭಿತ್ತಿ ಪತ್ರಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಚುನಾವಣಾ ಆಯೋಗದ ಕೇಂದ್ರ ಕಚೇರಿಯತ್ತ ಸಾಗುತ್ತಿದ್ದರು. ಸಾರಿಗೆ ಭವನದ ಬಳಿ ಮೆರವಣಿಗೆಗೆ ತಡೆಯೊಡ್ಡಿದ ಪೊಲೀಸರು, ನಾಯಕರನ್ನು ವಶಕ್ಕೆ ಪಡೆದರು.

ಸಾರಿಗೆ ಭವನದ ಬಳಿ ಪೊಲೀಸರು ದೊಡ್ಡ ಮಟ್ಟದಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದರು. ಮೆರವಣಿಗೆಗೆ ಅನುಮತಿ ಪಡೆದಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

“ದೆಹಲಿಯ ಬೀದಿಗಳಲ್ಲಿ ನಡೆಯಲು ಸಂಸದರಿಗೆ ಅನುಮತಿಯ ಅಗತ್ಯವಿಲ್ಲ” ಎಂದು ಸಮಾಜವಾದಿ ಪಕ್ಷದ ಸಂಸದ ರಾಮಗೋಪಾಲ್ ಯಾದವ್ ಹೇಳಿದರು. ಪೊಲೀಸ್ ನಿರ್ಬಂಧದ ಅಗತ್ಯವನ್ನು ಅವರು ಪ್ರಶ್ನಿಸಿದರು.

ಆರ್‌ಜೆಡಿಯ ಮನೋಜ್ ಝಾ ಎಸ್‌ಐಆರ್ ಒಂದು ‘ವಂಚನೆ’ ಎಂದು ಕರೆದಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಚುನಾವಣಾ ಆಯೋಗ ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.

ಸಮಾಜವಾದಿ ಪಕ್ಷದ ಡಿಂಪಲ್ ಯಾದವ್ ಅವರು ಉತ್ತರ ಪ್ರದೇಶದ ಉಪಚುನಾವಣೆಯಲ್ಲೂ ಮತಗಟ್ಟೆ ವಶಪಡಿಸಿಕೊಳ್ಳುವಿಕೆ ಮತ್ತು ಮತ ಕಳ್ಳತನ ನಡೆದಿದೆ ಆರೋಪಿಸಿದರು. ಈ ಬಗ್ಗೆ ಏಕೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿದರು.

ರಾಹುಲ್ ಗಾಂಧಿಯವರ ಆರೋಪಗಳನ್ನು ಬೆಂಬಲಿಸಿದ ಕಾಂಗ್ರೆಸ್ ಸಂಸದ ಶಶಿ ತರೂರ್, “ಚುನಾವಣಾ ಆಯೋಗವು ರಾಷ್ಟ್ರದ ಬಗ್ಗೆ ಮಾತ್ರವಲ್ಲ, ಸ್ವಯಂ ಒಂದು ಜವಾಬ್ದಾರಿಯನ್ನು ಹೊಂದಿದೆ. ನಮ್ಮ ಪ್ರಜಾಪ್ರಭುತ್ವವು ನಕಲಿ ಮತದಾನ ಮಾಡಲಾಗುತ್ತಿದೆಯೇ ಎಂಬ ಅನುಮಾನಗಳಿಂದ ಅಪಾಯಕ್ಕೆ ಸಿಲುಕಬಾರದು. ಏಕೆಂದರೆ ಅದು ತುಂಬಾ ಅಮೂಲ್ಯವಾಗಿದೆ. ಹಾಗಾಗಿ, ಚುನಾವಣಾ ಆಯೋಗ ವಿಶ್ವಾಸಾರ್ಹ ಉತ್ತರ ಒದಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್‌, ಸಮಾಜವಾದಿ, ಎನ್‌ಸಿಪಿ (ಎಸ್‌ಪಿ), ಶಿವಸೇನೆ (ಯುಬಿಟಿ), ಟಿಎಂಸಿ, ಆರ್‌ಜೆಡಿ, ಡಿಎಂಕೆ ಸೇರಿದಂತೆ ಇಂಡಿಯಾ ಒಕ್ಕೂಟದ ಎಲ್ಲಾ ಪಕ್ಷದ ಸಂಸದರು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ ಆರೋಪ: ರಾಹುಲ್ ಗಾಂಧಿಯಿಂದ ದಾಖಲೆ ಕೇಳಿದ ರಾಜ್ಯ ಚುನಾವಣಾಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...