Homeಮುಖಪುಟಚುನಾವಣಾ ಆಯೋಗದ ಕಚೇರಿಗೆ ಪ್ರತಿಭಟನಾ ಮೆರವಣಿಗೆ: ರಾಹುಲ್ ಗಾಂಧಿ ಸೇರಿ ಪ್ರತಿಪಕ್ಷ ನಾಯಕರನ್ನು ವಶಕ್ಕೆ ಪಡೆದ...

ಚುನಾವಣಾ ಆಯೋಗದ ಕಚೇರಿಗೆ ಪ್ರತಿಭಟನಾ ಮೆರವಣಿಗೆ: ರಾಹುಲ್ ಗಾಂಧಿ ಸೇರಿ ಪ್ರತಿಪಕ್ಷ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸಿ ಮತ್ತು 2024ರ ಲೋಕಸಭೆ ಚುನಾವಣೆಯಲ್ಲಿ ‘ಮತಗಳ್ಳತನ’ ನಡೆದಿದೆ ಎಂದು ಆರೋಪಿಸಿ ಚುನಾವಣಾ ಆಯೋಗದ ಕೇಂದ್ರ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಹೊರಟಿದ್ದ ವಿರೋಧ ಪಕ್ಷದ ನಾಯಕರನ್ನು ದೆಹಲಿ ಪೊಲೀಸರು ಸೋಮವಾರ (ಆ.11) ವಶಕ್ಕೆ ಪಡೆದರು.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್, ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್, ಟಿಎಂಸಿ ಸಂಸದೆ ಸಾಗರಿಕ ಘೋಷ್ ಸೇರಿದಂತೆ ಪ್ರಮುಖರನ್ನು ಪೊಲೀಸರು ಅರ್ಧ ದಾರಿಯಲ್ಲಿ ವಶಕ್ಕೆ ಪಡೆದರು ಎಂದು ವರದಿಯಾಗಿದೆ.

ಈ ವೇಳೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಹತ್ತಿ ಮುಂದುವರಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು “ಆಡಳಿತ ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲು ಪೊಲೀಸರು ಬಳಸುತ್ತಿದೆ” ಎಂದು ಕಿಡಿಕಾರಿದರು.

“ವಿರೋಧ ಪಕ್ಷಗಳು ಸಂವಿಧಾನವನ್ನು ರಕ್ಷಿಸಲು ಹೋರಾಡುತ್ತಿವೆ. ನಮಗೆ ಶುದ್ಧ ಮತದಾರರ ಪಟ್ಟಿ ಬೇಕು” ಎಂದು ಪೊಲೀಸರು ವಶಕ್ಕೆ ಪಡೆದ ಸಂದರ್ಭದಲ್ಲಿ ರಾಹುಲ್ ಗಾಂಧಿ ಹೇಳಿದರು.

“ಅವರು ಹೆದರಿದ್ದಾರೆ. ಇದೊಂದು ಹೇಡಿ ಸರ್ಕಾರ” ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.

ಸಂಸತ್ ಭವನದ ಮಕರ ದ್ವಾರದಲ್ಲಿ ರಾಷ್ಟ್ರಗೀತೆಯೊಂದಿಗೆ ಮೆರವಣಿಗೆ ಪ್ರಾರಂಭಿಸಿದ್ದ ಪ್ರತಿಪಕ್ಷ ನಾಯಕರು, ‘ಎಸ್‌ಐಆರ್’ ಮತ್ತು ‘ವೋಟ್ ಚೋರಿ’ ಎಂಬ ಭಿತ್ತಿ ಪತ್ರಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಚುನಾವಣಾ ಆಯೋಗದ ಕೇಂದ್ರ ಕಚೇರಿಯತ್ತ ಸಾಗುತ್ತಿದ್ದರು. ಸಾರಿಗೆ ಭವನದ ಬಳಿ ಮೆರವಣಿಗೆಗೆ ತಡೆಯೊಡ್ಡಿದ ಪೊಲೀಸರು, ನಾಯಕರನ್ನು ವಶಕ್ಕೆ ಪಡೆದರು.

ಸಾರಿಗೆ ಭವನದ ಬಳಿ ಪೊಲೀಸರು ದೊಡ್ಡ ಮಟ್ಟದಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದರು. ಮೆರವಣಿಗೆಗೆ ಅನುಮತಿ ಪಡೆದಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

“ದೆಹಲಿಯ ಬೀದಿಗಳಲ್ಲಿ ನಡೆಯಲು ಸಂಸದರಿಗೆ ಅನುಮತಿಯ ಅಗತ್ಯವಿಲ್ಲ” ಎಂದು ಸಮಾಜವಾದಿ ಪಕ್ಷದ ಸಂಸದ ರಾಮಗೋಪಾಲ್ ಯಾದವ್ ಹೇಳಿದರು. ಪೊಲೀಸ್ ನಿರ್ಬಂಧದ ಅಗತ್ಯವನ್ನು ಅವರು ಪ್ರಶ್ನಿಸಿದರು.

ಆರ್‌ಜೆಡಿಯ ಮನೋಜ್ ಝಾ ಎಸ್‌ಐಆರ್ ಒಂದು ‘ವಂಚನೆ’ ಎಂದು ಕರೆದಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಚುನಾವಣಾ ಆಯೋಗ ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.

ಸಮಾಜವಾದಿ ಪಕ್ಷದ ಡಿಂಪಲ್ ಯಾದವ್ ಅವರು ಉತ್ತರ ಪ್ರದೇಶದ ಉಪಚುನಾವಣೆಯಲ್ಲೂ ಮತಗಟ್ಟೆ ವಶಪಡಿಸಿಕೊಳ್ಳುವಿಕೆ ಮತ್ತು ಮತ ಕಳ್ಳತನ ನಡೆದಿದೆ ಆರೋಪಿಸಿದರು. ಈ ಬಗ್ಗೆ ಏಕೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿದರು.

ರಾಹುಲ್ ಗಾಂಧಿಯವರ ಆರೋಪಗಳನ್ನು ಬೆಂಬಲಿಸಿದ ಕಾಂಗ್ರೆಸ್ ಸಂಸದ ಶಶಿ ತರೂರ್, “ಚುನಾವಣಾ ಆಯೋಗವು ರಾಷ್ಟ್ರದ ಬಗ್ಗೆ ಮಾತ್ರವಲ್ಲ, ಸ್ವಯಂ ಒಂದು ಜವಾಬ್ದಾರಿಯನ್ನು ಹೊಂದಿದೆ. ನಮ್ಮ ಪ್ರಜಾಪ್ರಭುತ್ವವು ನಕಲಿ ಮತದಾನ ಮಾಡಲಾಗುತ್ತಿದೆಯೇ ಎಂಬ ಅನುಮಾನಗಳಿಂದ ಅಪಾಯಕ್ಕೆ ಸಿಲುಕಬಾರದು. ಏಕೆಂದರೆ ಅದು ತುಂಬಾ ಅಮೂಲ್ಯವಾಗಿದೆ. ಹಾಗಾಗಿ, ಚುನಾವಣಾ ಆಯೋಗ ವಿಶ್ವಾಸಾರ್ಹ ಉತ್ತರ ಒದಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್‌, ಸಮಾಜವಾದಿ, ಎನ್‌ಸಿಪಿ (ಎಸ್‌ಪಿ), ಶಿವಸೇನೆ (ಯುಬಿಟಿ), ಟಿಎಂಸಿ, ಆರ್‌ಜೆಡಿ, ಡಿಎಂಕೆ ಸೇರಿದಂತೆ ಇಂಡಿಯಾ ಒಕ್ಕೂಟದ ಎಲ್ಲಾ ಪಕ್ಷದ ಸಂಸದರು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ ಆರೋಪ: ರಾಹುಲ್ ಗಾಂಧಿಯಿಂದ ದಾಖಲೆ ಕೇಳಿದ ರಾಜ್ಯ ಚುನಾವಣಾಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...