Homeಅಂತರಾಷ್ಟ್ರೀಯಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ಈಗ ನಮ್ಮ ಮುಂದೆ ಇರುವುದು ಎರಡೇ ಆಯ್ಕೆ. ಒಂದು ಕೊರೋನಾ ಸೋಂಕಿನಿಂದ ಮರಣವನ್ನಪ್ಪುವುದು. ಇನ್ನೊಂದು ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಅಧ್ಯಕ್ಷ ಜೈರ್‌ ಬೊಲ್ಸನಾರೋ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು.

- Advertisement -
- Advertisement -

ಬ್ರೆಜಿಲ್‌ನ ಜನತೆ ತಮ್ಮ ದೇಶದ ಅಧ್ಯಕ್ಷ ಬೊಲ್ಸೆನಾರೋ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ಧ ಆಕ್ರೋಶಗೊಂಡಿದ್ದಾರೆ. ಕೋವಿಡ್‌ ಸಾಂಕ್ರಾಮಿಕದ ಕಾಲದಲ್ಲಿ ಸರ್ಕಾರದ ನಿರ್ಲಕ್ಷ ಮತ್ತು ವೈಫಲ್ಯಗಳು ಬ್ರೆಜಿಲ್‌ ಜನರನ್ನು ಸಿಡಿದೇಳುವಂತೆ ಮಾಡಿದೆ.

ಬ್ರೆಜಿಲ್‌ ದೇಶದ 16 ನಗರಳಲ್ಲಿ ಲಕ್ಷಾಂತರ ಜನರು ಬೀದಿಗಿಳಿದು ʼಬೊಲ್ಸೆನಾರೋ ಕೆಳಗಿಳಿಸಿʼ ʼಬೊಲ್ಸೆನಾರೋ ಪದಚ್ಯುತಗೊಳಿಸಿʼ ಎಂಬ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಸರ್ಕಾರದ ವಿರುದ್ಧ ಪ್ರತಿಭಟಿಸತೊಡಗಿದ್ದಾರೆ. ಕೋವಿಡ್ ನಿರ್ವಹಣೆಯಲ್ಲಿ ತಜ್ಞರ ಎಚ್ಚರಿಕೆಗಳನ್ನೆಲ್ಲ ಗಾಳಿಗೆ ತೂರಿ ನಿರ್ಲಕ್ಷ ವಹಿಸಿದ ಬೊಲ್ಸಾನಾರೋ ಈಗ ಜನಾಕ್ರೋಶಕ್ಕೆ ತುತ್ತಾಗಿದ್ದಾರೆ.

ಬೊಲ್ಸಾನಾರೋ ಅವರ ಜನಪ್ರಿಯತೆ ಕೊರೋನಾ ಸಾಂಕ್ರಾಮಿಕದ ಕಾಲದಲ್ಲಿ ತೀವ್ರವಾಗಿ ಕುಸಿತಕಂಡಿದೆ. ಇದುವರೆಗೆ ಬ್ರೆಜಿಲ್‌ ನಲ್ಲಿ 4,60,000 ಕ್ಕೂ ಹೆಚ್ಚು ಜನರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಬೊಲ್ಸೊನಾರೋ ಅವರ ಕೊರೋನಾ ಸೋಂಕಿನ ಬಗೆಗಿನ ತೀವ್ರ ನಿರ್ಲಕ್ಷ್ಯ, ಉಡಾಫೆಯ ಹೇಳಿಕೆ ಮತ್ತು ಕೊರೋನಾ ಲಸಿಕೆ ಬಗೆಗಿನ ಅಸಡ್ಡೆಗಳ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಇತರ ಅಂತರಾಷ್ಟ್ರೀಯ ಆರೋಗ್ಯ ಸಂಸ್ಥೆಗಳು ಇದುವರೆಗೆ ಕಟು ಶಬ್ಧಗಳಲ್ಲಿ ಎಚ್ಚರಿಸುತ್ತ ಬಂದಿವೆ. ಇದಾವುದನ್ನು ಲೆಕ್ಕಿಸದೇ ಬೊಲ್ಸೆನಾರೋ ತಮ್ಮ ಎಂದಿನ ಸುಳ್ಳು ಮತ್ತು ಉಡಾಫೆಯ ಹೇಳಿಕೆಗಳನ್ನು ಮುಂದುವರೆಸಿದ್ದರು. ಕಡ್ಡಾಯ ಮಾಸ್ಕ್‌ ಧರಿಸುವ ನಿಯಮಗಳನ್ನು ಬ್ರೆಜಿಲ್‌ ನಲ್ಲಿ ಬೊಲ್ಸೆನಾರೋ ಇತ್ತೀಚೆಗೆ ತೆಗೆದುಹಾಕಿದ್ದರು. ಬೊಲ್ಸೆನಾರೋ ಈ ನಡೆಯ ವಿರುದ್ಧ ಅಂತಾರಷ್ಟ್ರೀಯ ಸಮುದಾಯ ತೀವ್ರವಾದ ಆಕ್ಷೇಪಗಳನ್ನು ಹೊರಹಾಕಿತ್ತು. ಇದೀಗ ತಮ್ಮ ಅಧ್ಯಕ್ಷನ ನಡೆಯಿಂದ ಬೇಸತ್ತು ಬ್ರೆಜಿಲ್‌ ಜನತೆ ಬೀದಿಗಿಳಿದಿದ್ದಾರೆ.

ಈಗ ಬ್ರೆಜಿಲ್ ಜನತೆ ತಮ್ಮ ಮುಂದೆ ಇರುವುದು ಎರಡೇ ಆಯ್ಕೆ. ಒಂದು ಕೊರೋನಾ ಸೋಂಕಿನಿಂದ ಮರಣವನ್ನಪ್ಪುವುದು. ಇನ್ನೊಂದು ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಅಧ್ಯಕ್ಷ ಜೈರ್‌ ಬೊಲ್ಸನಾರೋ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು. ಇದರ ಹೊರತಾಗಿ ನಮಗೆ ಬೇರೆ ದಾರಿಯಿಲ್ಲ. ಇವರೆಡರಲ್ಲಿ ಉತ್ತಮವಾಗಿರುವುದನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಪ್ರತಿಭಟಸದೆ ಮನೆಯಲ್ಲಿದ್ದರೂ ಸೋಂಕಿನಿಂದ ಸಾಯುತ್ತೇವೆ. ಹಾಗಾಗಿ ಬೊಲ್ಸೆನಾರೋ ವಿರುದ್ಧ ಪ್ರತಿಭಟನೆಗೆ ಇಳಿದಿದ್ದೇವೆ ಎಂದು ಪ್ರತಿಭಟನಾನಿರತರು ಕಿಡಿಕಾರಿದ್ದಾರೆ.

ಬೊಲ್ಸೆನಾರೋ ವಿರುದ್ಧ ಬ್ರೆಜಿಲ್‌ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ನೇತೃತ್ವವನ್ನು ಅಲ್ಲಿನ ವಿರೋಧ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು , ಕಾರ್ಮಿಕ ಸಂಘಟನೆಗಳು ವಹಿಸಿಕೊಂಡಿವೆ. ಮೇ 29 ಶನಿವಾರ ಬ್ರೆಝಿಲ್‌ ರಾಜಧಾನಿ ಬ್ರೆಝೆಲಿಯಾ ಮತ್ತು ರಿಯೋ ಡಿ ಜನೈರೋ ದಲ್ಲಿ ನಡೆದ ಪ್ರತಿಭಟನೆಗಳು ಅತ್ಯಂತ ಶಾಂತವಾಗಿದ್ದವು. ಆದರೆ ದೇಶದ ಈಶಾನ್ಯ ಭಾಗದ ನಗರಗಳಾದ ರೆಸಿಫೆ ಮುಂತಾದ ಕಡೆ ಪ್ರತಿಭಟನೆಗಳು ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿವೆ. ಪ್ರತಿಭಟನೆಗಳನ್ನು ಹತ್ತಿಕ್ಕಲು ಮುಂದಾಗಿರುವ ಬೊಲ್ಸೆನಾರೋ ಸರ್ಕಾರ ಪ್ರತಿಭಟನಾಕಾರರ ಮೇಲೆ ಅಶ್ರವಾಯು ಮತ್ತು ಜಲ ಫಿರಂಗಿಗಳನ್ನು ಸಿಡಿಸಿದೆ.

ಬ್ರೆಝಿಲ್‌ ನ ಅತಿದೊಡ್ಡ ನಗರ ಸಾವೋ ಪೋಲೋ ದ ಬೀದಿಗಳು ಈಗ ಸಾವಿರಾರು ಪ್ರತಿಭಟನಾಕಾರರಿಂದ ತುಂಬಿಹೋಗಿದೆ. ಸಾವಿರಾರು ಮಾಸ್ಕ್‌ ಧರಿಸಿದ ಪ್ರತಿಭಟನಾಕಾರರು ಬೊಲ್ಸೆನಾರೋ ಅವರನ್ನು ಹಾವಿನಂತೆ ಚಿತ್ರಿಸಿದ ಫಲಕಗಳನ್ನು ಹಿಡಿದು ಘೋಷಣೆ ಕೂಗಿದ್ದಾರೆ. ಬೊಲ್ಸೆನಾರೋ ಅವರನ್ನು ಹಾವಿನಂತೆ ಚಿತ್ರಿಸಿದ ಬೃಹತ್‌ ಬಲೂನುಗಳನ್ನು ಪ್ರತಿಭಟನಾಕಾರರು ಆಗಸದಲ್ಲಿ ಹಾರಿ ಬಿಟ್ಟಿದ್ಧಾರೆ.

ಕೋವಿಡ್‌ ಕುರಿತಾಗಿ ಉಡಾಫೆಯ ಹೇಳಿಕೆ ನೀಡುತ್ತ ಸಾಂಕ್ರಾಮಿಕವನ್ನು ಗಂಭೀರವಾಗಿ ಪರಿಗಣಿಸದೆ ಲಕ್ಷಾಂತರ ಅಮೆರಿಕ್ಕನ್ನರ ಸಾವಿಗೆ ಕಾರಣರಾದ ಡೊನಾಲ್ಡ್‌ ಟ್ರಂಪ್‌ ಅವರನ್ನು ಅಮೆರಿಕಾದ ಜನರು ಅಧಿಕಾರದಿಂದ ಕೆಳಗಿಳಿಸಿದ್ದಾರೆ. ಟ್ರಂಪ್‌ ಅವರ ಆತ್ಮೀಯ ಸ್ನೇಹಿತರೆಂದು ಹೇಳಲಾಗುವ ಬೊಲ್ಸೆನಾರೋ ವಿರುದ್ಧವೂ ಬ್ರೆಝಿಲ್‌ ನಾಗರಿಕರಲ್ಲಿ ಈಗ ಆಕ್ರೋಶ ಭುಗಿಲೆದ್ದಿದೆ. ಟ್ರಂಪ್‌ ಮತ್ತು ಬೊಲ್ಸೆನಾರೋ ಇಬ್ಬರೂ ತೋವ್ರ ಬಲಪಂಥೀಯವಾದಿ ನಾಯಕರು ಎಂಬುದು ಇಲ್ಲಿ ಗಮನಿಸಬೇಕಾದ ಇನ್ನೊಂದು ಮುಖ್ಯ ವಿಚಾರ. ಇನ್ನು ಭಾರತದಲ್ಲಿಯೂ ಇದೇ ಪರಿಸ್ಥಿತಿ ಏರ್ಪಟ್ಟಿದ್ದು ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನೇ ದಿನೇ ಕುಸಿಯುತ್ತಾ ಸಾಗಿದೆ.


ಇದನ್ನೂ ಓದಿ: ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...