Homeಅಂತರಾಷ್ಟ್ರೀಯಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ಈಗ ನಮ್ಮ ಮುಂದೆ ಇರುವುದು ಎರಡೇ ಆಯ್ಕೆ. ಒಂದು ಕೊರೋನಾ ಸೋಂಕಿನಿಂದ ಮರಣವನ್ನಪ್ಪುವುದು. ಇನ್ನೊಂದು ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಅಧ್ಯಕ್ಷ ಜೈರ್‌ ಬೊಲ್ಸನಾರೋ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು.

- Advertisement -
- Advertisement -

ಬ್ರೆಜಿಲ್‌ನ ಜನತೆ ತಮ್ಮ ದೇಶದ ಅಧ್ಯಕ್ಷ ಬೊಲ್ಸೆನಾರೋ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ಧ ಆಕ್ರೋಶಗೊಂಡಿದ್ದಾರೆ. ಕೋವಿಡ್‌ ಸಾಂಕ್ರಾಮಿಕದ ಕಾಲದಲ್ಲಿ ಸರ್ಕಾರದ ನಿರ್ಲಕ್ಷ ಮತ್ತು ವೈಫಲ್ಯಗಳು ಬ್ರೆಜಿಲ್‌ ಜನರನ್ನು ಸಿಡಿದೇಳುವಂತೆ ಮಾಡಿದೆ.

ಬ್ರೆಜಿಲ್‌ ದೇಶದ 16 ನಗರಳಲ್ಲಿ ಲಕ್ಷಾಂತರ ಜನರು ಬೀದಿಗಿಳಿದು ʼಬೊಲ್ಸೆನಾರೋ ಕೆಳಗಿಳಿಸಿʼ ʼಬೊಲ್ಸೆನಾರೋ ಪದಚ್ಯುತಗೊಳಿಸಿʼ ಎಂಬ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಸರ್ಕಾರದ ವಿರುದ್ಧ ಪ್ರತಿಭಟಿಸತೊಡಗಿದ್ದಾರೆ. ಕೋವಿಡ್ ನಿರ್ವಹಣೆಯಲ್ಲಿ ತಜ್ಞರ ಎಚ್ಚರಿಕೆಗಳನ್ನೆಲ್ಲ ಗಾಳಿಗೆ ತೂರಿ ನಿರ್ಲಕ್ಷ ವಹಿಸಿದ ಬೊಲ್ಸಾನಾರೋ ಈಗ ಜನಾಕ್ರೋಶಕ್ಕೆ ತುತ್ತಾಗಿದ್ದಾರೆ.

ಬೊಲ್ಸಾನಾರೋ ಅವರ ಜನಪ್ರಿಯತೆ ಕೊರೋನಾ ಸಾಂಕ್ರಾಮಿಕದ ಕಾಲದಲ್ಲಿ ತೀವ್ರವಾಗಿ ಕುಸಿತಕಂಡಿದೆ. ಇದುವರೆಗೆ ಬ್ರೆಜಿಲ್‌ ನಲ್ಲಿ 4,60,000 ಕ್ಕೂ ಹೆಚ್ಚು ಜನರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಬೊಲ್ಸೊನಾರೋ ಅವರ ಕೊರೋನಾ ಸೋಂಕಿನ ಬಗೆಗಿನ ತೀವ್ರ ನಿರ್ಲಕ್ಷ್ಯ, ಉಡಾಫೆಯ ಹೇಳಿಕೆ ಮತ್ತು ಕೊರೋನಾ ಲಸಿಕೆ ಬಗೆಗಿನ ಅಸಡ್ಡೆಗಳ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಇತರ ಅಂತರಾಷ್ಟ್ರೀಯ ಆರೋಗ್ಯ ಸಂಸ್ಥೆಗಳು ಇದುವರೆಗೆ ಕಟು ಶಬ್ಧಗಳಲ್ಲಿ ಎಚ್ಚರಿಸುತ್ತ ಬಂದಿವೆ. ಇದಾವುದನ್ನು ಲೆಕ್ಕಿಸದೇ ಬೊಲ್ಸೆನಾರೋ ತಮ್ಮ ಎಂದಿನ ಸುಳ್ಳು ಮತ್ತು ಉಡಾಫೆಯ ಹೇಳಿಕೆಗಳನ್ನು ಮುಂದುವರೆಸಿದ್ದರು. ಕಡ್ಡಾಯ ಮಾಸ್ಕ್‌ ಧರಿಸುವ ನಿಯಮಗಳನ್ನು ಬ್ರೆಜಿಲ್‌ ನಲ್ಲಿ ಬೊಲ್ಸೆನಾರೋ ಇತ್ತೀಚೆಗೆ ತೆಗೆದುಹಾಕಿದ್ದರು. ಬೊಲ್ಸೆನಾರೋ ಈ ನಡೆಯ ವಿರುದ್ಧ ಅಂತಾರಷ್ಟ್ರೀಯ ಸಮುದಾಯ ತೀವ್ರವಾದ ಆಕ್ಷೇಪಗಳನ್ನು ಹೊರಹಾಕಿತ್ತು. ಇದೀಗ ತಮ್ಮ ಅಧ್ಯಕ್ಷನ ನಡೆಯಿಂದ ಬೇಸತ್ತು ಬ್ರೆಜಿಲ್‌ ಜನತೆ ಬೀದಿಗಿಳಿದಿದ್ದಾರೆ.

ಈಗ ಬ್ರೆಜಿಲ್ ಜನತೆ ತಮ್ಮ ಮುಂದೆ ಇರುವುದು ಎರಡೇ ಆಯ್ಕೆ. ಒಂದು ಕೊರೋನಾ ಸೋಂಕಿನಿಂದ ಮರಣವನ್ನಪ್ಪುವುದು. ಇನ್ನೊಂದು ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಅಧ್ಯಕ್ಷ ಜೈರ್‌ ಬೊಲ್ಸನಾರೋ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು. ಇದರ ಹೊರತಾಗಿ ನಮಗೆ ಬೇರೆ ದಾರಿಯಿಲ್ಲ. ಇವರೆಡರಲ್ಲಿ ಉತ್ತಮವಾಗಿರುವುದನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಪ್ರತಿಭಟಸದೆ ಮನೆಯಲ್ಲಿದ್ದರೂ ಸೋಂಕಿನಿಂದ ಸಾಯುತ್ತೇವೆ. ಹಾಗಾಗಿ ಬೊಲ್ಸೆನಾರೋ ವಿರುದ್ಧ ಪ್ರತಿಭಟನೆಗೆ ಇಳಿದಿದ್ದೇವೆ ಎಂದು ಪ್ರತಿಭಟನಾನಿರತರು ಕಿಡಿಕಾರಿದ್ದಾರೆ.

ಬೊಲ್ಸೆನಾರೋ ವಿರುದ್ಧ ಬ್ರೆಜಿಲ್‌ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ನೇತೃತ್ವವನ್ನು ಅಲ್ಲಿನ ವಿರೋಧ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು , ಕಾರ್ಮಿಕ ಸಂಘಟನೆಗಳು ವಹಿಸಿಕೊಂಡಿವೆ. ಮೇ 29 ಶನಿವಾರ ಬ್ರೆಝಿಲ್‌ ರಾಜಧಾನಿ ಬ್ರೆಝೆಲಿಯಾ ಮತ್ತು ರಿಯೋ ಡಿ ಜನೈರೋ ದಲ್ಲಿ ನಡೆದ ಪ್ರತಿಭಟನೆಗಳು ಅತ್ಯಂತ ಶಾಂತವಾಗಿದ್ದವು. ಆದರೆ ದೇಶದ ಈಶಾನ್ಯ ಭಾಗದ ನಗರಗಳಾದ ರೆಸಿಫೆ ಮುಂತಾದ ಕಡೆ ಪ್ರತಿಭಟನೆಗಳು ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿವೆ. ಪ್ರತಿಭಟನೆಗಳನ್ನು ಹತ್ತಿಕ್ಕಲು ಮುಂದಾಗಿರುವ ಬೊಲ್ಸೆನಾರೋ ಸರ್ಕಾರ ಪ್ರತಿಭಟನಾಕಾರರ ಮೇಲೆ ಅಶ್ರವಾಯು ಮತ್ತು ಜಲ ಫಿರಂಗಿಗಳನ್ನು ಸಿಡಿಸಿದೆ.

ಬ್ರೆಝಿಲ್‌ ನ ಅತಿದೊಡ್ಡ ನಗರ ಸಾವೋ ಪೋಲೋ ದ ಬೀದಿಗಳು ಈಗ ಸಾವಿರಾರು ಪ್ರತಿಭಟನಾಕಾರರಿಂದ ತುಂಬಿಹೋಗಿದೆ. ಸಾವಿರಾರು ಮಾಸ್ಕ್‌ ಧರಿಸಿದ ಪ್ರತಿಭಟನಾಕಾರರು ಬೊಲ್ಸೆನಾರೋ ಅವರನ್ನು ಹಾವಿನಂತೆ ಚಿತ್ರಿಸಿದ ಫಲಕಗಳನ್ನು ಹಿಡಿದು ಘೋಷಣೆ ಕೂಗಿದ್ದಾರೆ. ಬೊಲ್ಸೆನಾರೋ ಅವರನ್ನು ಹಾವಿನಂತೆ ಚಿತ್ರಿಸಿದ ಬೃಹತ್‌ ಬಲೂನುಗಳನ್ನು ಪ್ರತಿಭಟನಾಕಾರರು ಆಗಸದಲ್ಲಿ ಹಾರಿ ಬಿಟ್ಟಿದ್ಧಾರೆ.

ಕೋವಿಡ್‌ ಕುರಿತಾಗಿ ಉಡಾಫೆಯ ಹೇಳಿಕೆ ನೀಡುತ್ತ ಸಾಂಕ್ರಾಮಿಕವನ್ನು ಗಂಭೀರವಾಗಿ ಪರಿಗಣಿಸದೆ ಲಕ್ಷಾಂತರ ಅಮೆರಿಕ್ಕನ್ನರ ಸಾವಿಗೆ ಕಾರಣರಾದ ಡೊನಾಲ್ಡ್‌ ಟ್ರಂಪ್‌ ಅವರನ್ನು ಅಮೆರಿಕಾದ ಜನರು ಅಧಿಕಾರದಿಂದ ಕೆಳಗಿಳಿಸಿದ್ದಾರೆ. ಟ್ರಂಪ್‌ ಅವರ ಆತ್ಮೀಯ ಸ್ನೇಹಿತರೆಂದು ಹೇಳಲಾಗುವ ಬೊಲ್ಸೆನಾರೋ ವಿರುದ್ಧವೂ ಬ್ರೆಝಿಲ್‌ ನಾಗರಿಕರಲ್ಲಿ ಈಗ ಆಕ್ರೋಶ ಭುಗಿಲೆದ್ದಿದೆ. ಟ್ರಂಪ್‌ ಮತ್ತು ಬೊಲ್ಸೆನಾರೋ ಇಬ್ಬರೂ ತೋವ್ರ ಬಲಪಂಥೀಯವಾದಿ ನಾಯಕರು ಎಂಬುದು ಇಲ್ಲಿ ಗಮನಿಸಬೇಕಾದ ಇನ್ನೊಂದು ಮುಖ್ಯ ವಿಚಾರ. ಇನ್ನು ಭಾರತದಲ್ಲಿಯೂ ಇದೇ ಪರಿಸ್ಥಿತಿ ಏರ್ಪಟ್ಟಿದ್ದು ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನೇ ದಿನೇ ಕುಸಿಯುತ್ತಾ ಸಾಗಿದೆ.


ಇದನ್ನೂ ಓದಿ: ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...