Homeಅಂತರಾಷ್ಟ್ರೀಯಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ಈಗ ನಮ್ಮ ಮುಂದೆ ಇರುವುದು ಎರಡೇ ಆಯ್ಕೆ. ಒಂದು ಕೊರೋನಾ ಸೋಂಕಿನಿಂದ ಮರಣವನ್ನಪ್ಪುವುದು. ಇನ್ನೊಂದು ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಅಧ್ಯಕ್ಷ ಜೈರ್‌ ಬೊಲ್ಸನಾರೋ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು.

- Advertisement -
- Advertisement -

ಬ್ರೆಜಿಲ್‌ನ ಜನತೆ ತಮ್ಮ ದೇಶದ ಅಧ್ಯಕ್ಷ ಬೊಲ್ಸೆನಾರೋ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ಧ ಆಕ್ರೋಶಗೊಂಡಿದ್ದಾರೆ. ಕೋವಿಡ್‌ ಸಾಂಕ್ರಾಮಿಕದ ಕಾಲದಲ್ಲಿ ಸರ್ಕಾರದ ನಿರ್ಲಕ್ಷ ಮತ್ತು ವೈಫಲ್ಯಗಳು ಬ್ರೆಜಿಲ್‌ ಜನರನ್ನು ಸಿಡಿದೇಳುವಂತೆ ಮಾಡಿದೆ.

ಬ್ರೆಜಿಲ್‌ ದೇಶದ 16 ನಗರಳಲ್ಲಿ ಲಕ್ಷಾಂತರ ಜನರು ಬೀದಿಗಿಳಿದು ʼಬೊಲ್ಸೆನಾರೋ ಕೆಳಗಿಳಿಸಿʼ ʼಬೊಲ್ಸೆನಾರೋ ಪದಚ್ಯುತಗೊಳಿಸಿʼ ಎಂಬ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಸರ್ಕಾರದ ವಿರುದ್ಧ ಪ್ರತಿಭಟಿಸತೊಡಗಿದ್ದಾರೆ. ಕೋವಿಡ್ ನಿರ್ವಹಣೆಯಲ್ಲಿ ತಜ್ಞರ ಎಚ್ಚರಿಕೆಗಳನ್ನೆಲ್ಲ ಗಾಳಿಗೆ ತೂರಿ ನಿರ್ಲಕ್ಷ ವಹಿಸಿದ ಬೊಲ್ಸಾನಾರೋ ಈಗ ಜನಾಕ್ರೋಶಕ್ಕೆ ತುತ್ತಾಗಿದ್ದಾರೆ.

ಬೊಲ್ಸಾನಾರೋ ಅವರ ಜನಪ್ರಿಯತೆ ಕೊರೋನಾ ಸಾಂಕ್ರಾಮಿಕದ ಕಾಲದಲ್ಲಿ ತೀವ್ರವಾಗಿ ಕುಸಿತಕಂಡಿದೆ. ಇದುವರೆಗೆ ಬ್ರೆಜಿಲ್‌ ನಲ್ಲಿ 4,60,000 ಕ್ಕೂ ಹೆಚ್ಚು ಜನರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಬೊಲ್ಸೊನಾರೋ ಅವರ ಕೊರೋನಾ ಸೋಂಕಿನ ಬಗೆಗಿನ ತೀವ್ರ ನಿರ್ಲಕ್ಷ್ಯ, ಉಡಾಫೆಯ ಹೇಳಿಕೆ ಮತ್ತು ಕೊರೋನಾ ಲಸಿಕೆ ಬಗೆಗಿನ ಅಸಡ್ಡೆಗಳ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಇತರ ಅಂತರಾಷ್ಟ್ರೀಯ ಆರೋಗ್ಯ ಸಂಸ್ಥೆಗಳು ಇದುವರೆಗೆ ಕಟು ಶಬ್ಧಗಳಲ್ಲಿ ಎಚ್ಚರಿಸುತ್ತ ಬಂದಿವೆ. ಇದಾವುದನ್ನು ಲೆಕ್ಕಿಸದೇ ಬೊಲ್ಸೆನಾರೋ ತಮ್ಮ ಎಂದಿನ ಸುಳ್ಳು ಮತ್ತು ಉಡಾಫೆಯ ಹೇಳಿಕೆಗಳನ್ನು ಮುಂದುವರೆಸಿದ್ದರು. ಕಡ್ಡಾಯ ಮಾಸ್ಕ್‌ ಧರಿಸುವ ನಿಯಮಗಳನ್ನು ಬ್ರೆಜಿಲ್‌ ನಲ್ಲಿ ಬೊಲ್ಸೆನಾರೋ ಇತ್ತೀಚೆಗೆ ತೆಗೆದುಹಾಕಿದ್ದರು. ಬೊಲ್ಸೆನಾರೋ ಈ ನಡೆಯ ವಿರುದ್ಧ ಅಂತಾರಷ್ಟ್ರೀಯ ಸಮುದಾಯ ತೀವ್ರವಾದ ಆಕ್ಷೇಪಗಳನ್ನು ಹೊರಹಾಕಿತ್ತು. ಇದೀಗ ತಮ್ಮ ಅಧ್ಯಕ್ಷನ ನಡೆಯಿಂದ ಬೇಸತ್ತು ಬ್ರೆಜಿಲ್‌ ಜನತೆ ಬೀದಿಗಿಳಿದಿದ್ದಾರೆ.

ಈಗ ಬ್ರೆಜಿಲ್ ಜನತೆ ತಮ್ಮ ಮುಂದೆ ಇರುವುದು ಎರಡೇ ಆಯ್ಕೆ. ಒಂದು ಕೊರೋನಾ ಸೋಂಕಿನಿಂದ ಮರಣವನ್ನಪ್ಪುವುದು. ಇನ್ನೊಂದು ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಅಧ್ಯಕ್ಷ ಜೈರ್‌ ಬೊಲ್ಸನಾರೋ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು. ಇದರ ಹೊರತಾಗಿ ನಮಗೆ ಬೇರೆ ದಾರಿಯಿಲ್ಲ. ಇವರೆಡರಲ್ಲಿ ಉತ್ತಮವಾಗಿರುವುದನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಪ್ರತಿಭಟಸದೆ ಮನೆಯಲ್ಲಿದ್ದರೂ ಸೋಂಕಿನಿಂದ ಸಾಯುತ್ತೇವೆ. ಹಾಗಾಗಿ ಬೊಲ್ಸೆನಾರೋ ವಿರುದ್ಧ ಪ್ರತಿಭಟನೆಗೆ ಇಳಿದಿದ್ದೇವೆ ಎಂದು ಪ್ರತಿಭಟನಾನಿರತರು ಕಿಡಿಕಾರಿದ್ದಾರೆ.

ಬೊಲ್ಸೆನಾರೋ ವಿರುದ್ಧ ಬ್ರೆಜಿಲ್‌ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ನೇತೃತ್ವವನ್ನು ಅಲ್ಲಿನ ವಿರೋಧ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು , ಕಾರ್ಮಿಕ ಸಂಘಟನೆಗಳು ವಹಿಸಿಕೊಂಡಿವೆ. ಮೇ 29 ಶನಿವಾರ ಬ್ರೆಝಿಲ್‌ ರಾಜಧಾನಿ ಬ್ರೆಝೆಲಿಯಾ ಮತ್ತು ರಿಯೋ ಡಿ ಜನೈರೋ ದಲ್ಲಿ ನಡೆದ ಪ್ರತಿಭಟನೆಗಳು ಅತ್ಯಂತ ಶಾಂತವಾಗಿದ್ದವು. ಆದರೆ ದೇಶದ ಈಶಾನ್ಯ ಭಾಗದ ನಗರಗಳಾದ ರೆಸಿಫೆ ಮುಂತಾದ ಕಡೆ ಪ್ರತಿಭಟನೆಗಳು ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿವೆ. ಪ್ರತಿಭಟನೆಗಳನ್ನು ಹತ್ತಿಕ್ಕಲು ಮುಂದಾಗಿರುವ ಬೊಲ್ಸೆನಾರೋ ಸರ್ಕಾರ ಪ್ರತಿಭಟನಾಕಾರರ ಮೇಲೆ ಅಶ್ರವಾಯು ಮತ್ತು ಜಲ ಫಿರಂಗಿಗಳನ್ನು ಸಿಡಿಸಿದೆ.

ಬ್ರೆಝಿಲ್‌ ನ ಅತಿದೊಡ್ಡ ನಗರ ಸಾವೋ ಪೋಲೋ ದ ಬೀದಿಗಳು ಈಗ ಸಾವಿರಾರು ಪ್ರತಿಭಟನಾಕಾರರಿಂದ ತುಂಬಿಹೋಗಿದೆ. ಸಾವಿರಾರು ಮಾಸ್ಕ್‌ ಧರಿಸಿದ ಪ್ರತಿಭಟನಾಕಾರರು ಬೊಲ್ಸೆನಾರೋ ಅವರನ್ನು ಹಾವಿನಂತೆ ಚಿತ್ರಿಸಿದ ಫಲಕಗಳನ್ನು ಹಿಡಿದು ಘೋಷಣೆ ಕೂಗಿದ್ದಾರೆ. ಬೊಲ್ಸೆನಾರೋ ಅವರನ್ನು ಹಾವಿನಂತೆ ಚಿತ್ರಿಸಿದ ಬೃಹತ್‌ ಬಲೂನುಗಳನ್ನು ಪ್ರತಿಭಟನಾಕಾರರು ಆಗಸದಲ್ಲಿ ಹಾರಿ ಬಿಟ್ಟಿದ್ಧಾರೆ.

ಕೋವಿಡ್‌ ಕುರಿತಾಗಿ ಉಡಾಫೆಯ ಹೇಳಿಕೆ ನೀಡುತ್ತ ಸಾಂಕ್ರಾಮಿಕವನ್ನು ಗಂಭೀರವಾಗಿ ಪರಿಗಣಿಸದೆ ಲಕ್ಷಾಂತರ ಅಮೆರಿಕ್ಕನ್ನರ ಸಾವಿಗೆ ಕಾರಣರಾದ ಡೊನಾಲ್ಡ್‌ ಟ್ರಂಪ್‌ ಅವರನ್ನು ಅಮೆರಿಕಾದ ಜನರು ಅಧಿಕಾರದಿಂದ ಕೆಳಗಿಳಿಸಿದ್ದಾರೆ. ಟ್ರಂಪ್‌ ಅವರ ಆತ್ಮೀಯ ಸ್ನೇಹಿತರೆಂದು ಹೇಳಲಾಗುವ ಬೊಲ್ಸೆನಾರೋ ವಿರುದ್ಧವೂ ಬ್ರೆಝಿಲ್‌ ನಾಗರಿಕರಲ್ಲಿ ಈಗ ಆಕ್ರೋಶ ಭುಗಿಲೆದ್ದಿದೆ. ಟ್ರಂಪ್‌ ಮತ್ತು ಬೊಲ್ಸೆನಾರೋ ಇಬ್ಬರೂ ತೋವ್ರ ಬಲಪಂಥೀಯವಾದಿ ನಾಯಕರು ಎಂಬುದು ಇಲ್ಲಿ ಗಮನಿಸಬೇಕಾದ ಇನ್ನೊಂದು ಮುಖ್ಯ ವಿಚಾರ. ಇನ್ನು ಭಾರತದಲ್ಲಿಯೂ ಇದೇ ಪರಿಸ್ಥಿತಿ ಏರ್ಪಟ್ಟಿದ್ದು ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನೇ ದಿನೇ ಕುಸಿಯುತ್ತಾ ಸಾಗಿದೆ.


ಇದನ್ನೂ ಓದಿ: ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...