Homeಅಂತರಾಷ್ಟ್ರೀಯಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ಈಗ ನಮ್ಮ ಮುಂದೆ ಇರುವುದು ಎರಡೇ ಆಯ್ಕೆ. ಒಂದು ಕೊರೋನಾ ಸೋಂಕಿನಿಂದ ಮರಣವನ್ನಪ್ಪುವುದು. ಇನ್ನೊಂದು ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಅಧ್ಯಕ್ಷ ಜೈರ್‌ ಬೊಲ್ಸನಾರೋ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು.

- Advertisement -
- Advertisement -

ಬ್ರೆಜಿಲ್‌ನ ಜನತೆ ತಮ್ಮ ದೇಶದ ಅಧ್ಯಕ್ಷ ಬೊಲ್ಸೆನಾರೋ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ಧ ಆಕ್ರೋಶಗೊಂಡಿದ್ದಾರೆ. ಕೋವಿಡ್‌ ಸಾಂಕ್ರಾಮಿಕದ ಕಾಲದಲ್ಲಿ ಸರ್ಕಾರದ ನಿರ್ಲಕ್ಷ ಮತ್ತು ವೈಫಲ್ಯಗಳು ಬ್ರೆಜಿಲ್‌ ಜನರನ್ನು ಸಿಡಿದೇಳುವಂತೆ ಮಾಡಿದೆ.

ಬ್ರೆಜಿಲ್‌ ದೇಶದ 16 ನಗರಳಲ್ಲಿ ಲಕ್ಷಾಂತರ ಜನರು ಬೀದಿಗಿಳಿದು ʼಬೊಲ್ಸೆನಾರೋ ಕೆಳಗಿಳಿಸಿʼ ʼಬೊಲ್ಸೆನಾರೋ ಪದಚ್ಯುತಗೊಳಿಸಿʼ ಎಂಬ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಸರ್ಕಾರದ ವಿರುದ್ಧ ಪ್ರತಿಭಟಿಸತೊಡಗಿದ್ದಾರೆ. ಕೋವಿಡ್ ನಿರ್ವಹಣೆಯಲ್ಲಿ ತಜ್ಞರ ಎಚ್ಚರಿಕೆಗಳನ್ನೆಲ್ಲ ಗಾಳಿಗೆ ತೂರಿ ನಿರ್ಲಕ್ಷ ವಹಿಸಿದ ಬೊಲ್ಸಾನಾರೋ ಈಗ ಜನಾಕ್ರೋಶಕ್ಕೆ ತುತ್ತಾಗಿದ್ದಾರೆ.

ಬೊಲ್ಸಾನಾರೋ ಅವರ ಜನಪ್ರಿಯತೆ ಕೊರೋನಾ ಸಾಂಕ್ರಾಮಿಕದ ಕಾಲದಲ್ಲಿ ತೀವ್ರವಾಗಿ ಕುಸಿತಕಂಡಿದೆ. ಇದುವರೆಗೆ ಬ್ರೆಜಿಲ್‌ ನಲ್ಲಿ 4,60,000 ಕ್ಕೂ ಹೆಚ್ಚು ಜನರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಬೊಲ್ಸೊನಾರೋ ಅವರ ಕೊರೋನಾ ಸೋಂಕಿನ ಬಗೆಗಿನ ತೀವ್ರ ನಿರ್ಲಕ್ಷ್ಯ, ಉಡಾಫೆಯ ಹೇಳಿಕೆ ಮತ್ತು ಕೊರೋನಾ ಲಸಿಕೆ ಬಗೆಗಿನ ಅಸಡ್ಡೆಗಳ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಇತರ ಅಂತರಾಷ್ಟ್ರೀಯ ಆರೋಗ್ಯ ಸಂಸ್ಥೆಗಳು ಇದುವರೆಗೆ ಕಟು ಶಬ್ಧಗಳಲ್ಲಿ ಎಚ್ಚರಿಸುತ್ತ ಬಂದಿವೆ. ಇದಾವುದನ್ನು ಲೆಕ್ಕಿಸದೇ ಬೊಲ್ಸೆನಾರೋ ತಮ್ಮ ಎಂದಿನ ಸುಳ್ಳು ಮತ್ತು ಉಡಾಫೆಯ ಹೇಳಿಕೆಗಳನ್ನು ಮುಂದುವರೆಸಿದ್ದರು. ಕಡ್ಡಾಯ ಮಾಸ್ಕ್‌ ಧರಿಸುವ ನಿಯಮಗಳನ್ನು ಬ್ರೆಜಿಲ್‌ ನಲ್ಲಿ ಬೊಲ್ಸೆನಾರೋ ಇತ್ತೀಚೆಗೆ ತೆಗೆದುಹಾಕಿದ್ದರು. ಬೊಲ್ಸೆನಾರೋ ಈ ನಡೆಯ ವಿರುದ್ಧ ಅಂತಾರಷ್ಟ್ರೀಯ ಸಮುದಾಯ ತೀವ್ರವಾದ ಆಕ್ಷೇಪಗಳನ್ನು ಹೊರಹಾಕಿತ್ತು. ಇದೀಗ ತಮ್ಮ ಅಧ್ಯಕ್ಷನ ನಡೆಯಿಂದ ಬೇಸತ್ತು ಬ್ರೆಜಿಲ್‌ ಜನತೆ ಬೀದಿಗಿಳಿದಿದ್ದಾರೆ.

ಈಗ ಬ್ರೆಜಿಲ್ ಜನತೆ ತಮ್ಮ ಮುಂದೆ ಇರುವುದು ಎರಡೇ ಆಯ್ಕೆ. ಒಂದು ಕೊರೋನಾ ಸೋಂಕಿನಿಂದ ಮರಣವನ್ನಪ್ಪುವುದು. ಇನ್ನೊಂದು ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಅಧ್ಯಕ್ಷ ಜೈರ್‌ ಬೊಲ್ಸನಾರೋ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು. ಇದರ ಹೊರತಾಗಿ ನಮಗೆ ಬೇರೆ ದಾರಿಯಿಲ್ಲ. ಇವರೆಡರಲ್ಲಿ ಉತ್ತಮವಾಗಿರುವುದನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಪ್ರತಿಭಟಸದೆ ಮನೆಯಲ್ಲಿದ್ದರೂ ಸೋಂಕಿನಿಂದ ಸಾಯುತ್ತೇವೆ. ಹಾಗಾಗಿ ಬೊಲ್ಸೆನಾರೋ ವಿರುದ್ಧ ಪ್ರತಿಭಟನೆಗೆ ಇಳಿದಿದ್ದೇವೆ ಎಂದು ಪ್ರತಿಭಟನಾನಿರತರು ಕಿಡಿಕಾರಿದ್ದಾರೆ.

ಬೊಲ್ಸೆನಾರೋ ವಿರುದ್ಧ ಬ್ರೆಜಿಲ್‌ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ನೇತೃತ್ವವನ್ನು ಅಲ್ಲಿನ ವಿರೋಧ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು , ಕಾರ್ಮಿಕ ಸಂಘಟನೆಗಳು ವಹಿಸಿಕೊಂಡಿವೆ. ಮೇ 29 ಶನಿವಾರ ಬ್ರೆಝಿಲ್‌ ರಾಜಧಾನಿ ಬ್ರೆಝೆಲಿಯಾ ಮತ್ತು ರಿಯೋ ಡಿ ಜನೈರೋ ದಲ್ಲಿ ನಡೆದ ಪ್ರತಿಭಟನೆಗಳು ಅತ್ಯಂತ ಶಾಂತವಾಗಿದ್ದವು. ಆದರೆ ದೇಶದ ಈಶಾನ್ಯ ಭಾಗದ ನಗರಗಳಾದ ರೆಸಿಫೆ ಮುಂತಾದ ಕಡೆ ಪ್ರತಿಭಟನೆಗಳು ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿವೆ. ಪ್ರತಿಭಟನೆಗಳನ್ನು ಹತ್ತಿಕ್ಕಲು ಮುಂದಾಗಿರುವ ಬೊಲ್ಸೆನಾರೋ ಸರ್ಕಾರ ಪ್ರತಿಭಟನಾಕಾರರ ಮೇಲೆ ಅಶ್ರವಾಯು ಮತ್ತು ಜಲ ಫಿರಂಗಿಗಳನ್ನು ಸಿಡಿಸಿದೆ.

ಬ್ರೆಝಿಲ್‌ ನ ಅತಿದೊಡ್ಡ ನಗರ ಸಾವೋ ಪೋಲೋ ದ ಬೀದಿಗಳು ಈಗ ಸಾವಿರಾರು ಪ್ರತಿಭಟನಾಕಾರರಿಂದ ತುಂಬಿಹೋಗಿದೆ. ಸಾವಿರಾರು ಮಾಸ್ಕ್‌ ಧರಿಸಿದ ಪ್ರತಿಭಟನಾಕಾರರು ಬೊಲ್ಸೆನಾರೋ ಅವರನ್ನು ಹಾವಿನಂತೆ ಚಿತ್ರಿಸಿದ ಫಲಕಗಳನ್ನು ಹಿಡಿದು ಘೋಷಣೆ ಕೂಗಿದ್ದಾರೆ. ಬೊಲ್ಸೆನಾರೋ ಅವರನ್ನು ಹಾವಿನಂತೆ ಚಿತ್ರಿಸಿದ ಬೃಹತ್‌ ಬಲೂನುಗಳನ್ನು ಪ್ರತಿಭಟನಾಕಾರರು ಆಗಸದಲ್ಲಿ ಹಾರಿ ಬಿಟ್ಟಿದ್ಧಾರೆ.

ಕೋವಿಡ್‌ ಕುರಿತಾಗಿ ಉಡಾಫೆಯ ಹೇಳಿಕೆ ನೀಡುತ್ತ ಸಾಂಕ್ರಾಮಿಕವನ್ನು ಗಂಭೀರವಾಗಿ ಪರಿಗಣಿಸದೆ ಲಕ್ಷಾಂತರ ಅಮೆರಿಕ್ಕನ್ನರ ಸಾವಿಗೆ ಕಾರಣರಾದ ಡೊನಾಲ್ಡ್‌ ಟ್ರಂಪ್‌ ಅವರನ್ನು ಅಮೆರಿಕಾದ ಜನರು ಅಧಿಕಾರದಿಂದ ಕೆಳಗಿಳಿಸಿದ್ದಾರೆ. ಟ್ರಂಪ್‌ ಅವರ ಆತ್ಮೀಯ ಸ್ನೇಹಿತರೆಂದು ಹೇಳಲಾಗುವ ಬೊಲ್ಸೆನಾರೋ ವಿರುದ್ಧವೂ ಬ್ರೆಝಿಲ್‌ ನಾಗರಿಕರಲ್ಲಿ ಈಗ ಆಕ್ರೋಶ ಭುಗಿಲೆದ್ದಿದೆ. ಟ್ರಂಪ್‌ ಮತ್ತು ಬೊಲ್ಸೆನಾರೋ ಇಬ್ಬರೂ ತೋವ್ರ ಬಲಪಂಥೀಯವಾದಿ ನಾಯಕರು ಎಂಬುದು ಇಲ್ಲಿ ಗಮನಿಸಬೇಕಾದ ಇನ್ನೊಂದು ಮುಖ್ಯ ವಿಚಾರ. ಇನ್ನು ಭಾರತದಲ್ಲಿಯೂ ಇದೇ ಪರಿಸ್ಥಿತಿ ಏರ್ಪಟ್ಟಿದ್ದು ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನೇ ದಿನೇ ಕುಸಿಯುತ್ತಾ ಸಾಗಿದೆ.


ಇದನ್ನೂ ಓದಿ: ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...