Homeಅಂತರಾಷ್ಟ್ರೀಯಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ಈಗ ನಮ್ಮ ಮುಂದೆ ಇರುವುದು ಎರಡೇ ಆಯ್ಕೆ. ಒಂದು ಕೊರೋನಾ ಸೋಂಕಿನಿಂದ ಮರಣವನ್ನಪ್ಪುವುದು. ಇನ್ನೊಂದು ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಅಧ್ಯಕ್ಷ ಜೈರ್‌ ಬೊಲ್ಸನಾರೋ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು.

- Advertisement -
- Advertisement -

ಬ್ರೆಜಿಲ್‌ನ ಜನತೆ ತಮ್ಮ ದೇಶದ ಅಧ್ಯಕ್ಷ ಬೊಲ್ಸೆನಾರೋ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ಧ ಆಕ್ರೋಶಗೊಂಡಿದ್ದಾರೆ. ಕೋವಿಡ್‌ ಸಾಂಕ್ರಾಮಿಕದ ಕಾಲದಲ್ಲಿ ಸರ್ಕಾರದ ನಿರ್ಲಕ್ಷ ಮತ್ತು ವೈಫಲ್ಯಗಳು ಬ್ರೆಜಿಲ್‌ ಜನರನ್ನು ಸಿಡಿದೇಳುವಂತೆ ಮಾಡಿದೆ.

ಬ್ರೆಜಿಲ್‌ ದೇಶದ 16 ನಗರಳಲ್ಲಿ ಲಕ್ಷಾಂತರ ಜನರು ಬೀದಿಗಿಳಿದು ʼಬೊಲ್ಸೆನಾರೋ ಕೆಳಗಿಳಿಸಿʼ ʼಬೊಲ್ಸೆನಾರೋ ಪದಚ್ಯುತಗೊಳಿಸಿʼ ಎಂಬ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಸರ್ಕಾರದ ವಿರುದ್ಧ ಪ್ರತಿಭಟಿಸತೊಡಗಿದ್ದಾರೆ. ಕೋವಿಡ್ ನಿರ್ವಹಣೆಯಲ್ಲಿ ತಜ್ಞರ ಎಚ್ಚರಿಕೆಗಳನ್ನೆಲ್ಲ ಗಾಳಿಗೆ ತೂರಿ ನಿರ್ಲಕ್ಷ ವಹಿಸಿದ ಬೊಲ್ಸಾನಾರೋ ಈಗ ಜನಾಕ್ರೋಶಕ್ಕೆ ತುತ್ತಾಗಿದ್ದಾರೆ.

ಬೊಲ್ಸಾನಾರೋ ಅವರ ಜನಪ್ರಿಯತೆ ಕೊರೋನಾ ಸಾಂಕ್ರಾಮಿಕದ ಕಾಲದಲ್ಲಿ ತೀವ್ರವಾಗಿ ಕುಸಿತಕಂಡಿದೆ. ಇದುವರೆಗೆ ಬ್ರೆಜಿಲ್‌ ನಲ್ಲಿ 4,60,000 ಕ್ಕೂ ಹೆಚ್ಚು ಜನರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಬೊಲ್ಸೊನಾರೋ ಅವರ ಕೊರೋನಾ ಸೋಂಕಿನ ಬಗೆಗಿನ ತೀವ್ರ ನಿರ್ಲಕ್ಷ್ಯ, ಉಡಾಫೆಯ ಹೇಳಿಕೆ ಮತ್ತು ಕೊರೋನಾ ಲಸಿಕೆ ಬಗೆಗಿನ ಅಸಡ್ಡೆಗಳ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಇತರ ಅಂತರಾಷ್ಟ್ರೀಯ ಆರೋಗ್ಯ ಸಂಸ್ಥೆಗಳು ಇದುವರೆಗೆ ಕಟು ಶಬ್ಧಗಳಲ್ಲಿ ಎಚ್ಚರಿಸುತ್ತ ಬಂದಿವೆ. ಇದಾವುದನ್ನು ಲೆಕ್ಕಿಸದೇ ಬೊಲ್ಸೆನಾರೋ ತಮ್ಮ ಎಂದಿನ ಸುಳ್ಳು ಮತ್ತು ಉಡಾಫೆಯ ಹೇಳಿಕೆಗಳನ್ನು ಮುಂದುವರೆಸಿದ್ದರು. ಕಡ್ಡಾಯ ಮಾಸ್ಕ್‌ ಧರಿಸುವ ನಿಯಮಗಳನ್ನು ಬ್ರೆಜಿಲ್‌ ನಲ್ಲಿ ಬೊಲ್ಸೆನಾರೋ ಇತ್ತೀಚೆಗೆ ತೆಗೆದುಹಾಕಿದ್ದರು. ಬೊಲ್ಸೆನಾರೋ ಈ ನಡೆಯ ವಿರುದ್ಧ ಅಂತಾರಷ್ಟ್ರೀಯ ಸಮುದಾಯ ತೀವ್ರವಾದ ಆಕ್ಷೇಪಗಳನ್ನು ಹೊರಹಾಕಿತ್ತು. ಇದೀಗ ತಮ್ಮ ಅಧ್ಯಕ್ಷನ ನಡೆಯಿಂದ ಬೇಸತ್ತು ಬ್ರೆಜಿಲ್‌ ಜನತೆ ಬೀದಿಗಿಳಿದಿದ್ದಾರೆ.

ಈಗ ಬ್ರೆಜಿಲ್ ಜನತೆ ತಮ್ಮ ಮುಂದೆ ಇರುವುದು ಎರಡೇ ಆಯ್ಕೆ. ಒಂದು ಕೊರೋನಾ ಸೋಂಕಿನಿಂದ ಮರಣವನ್ನಪ್ಪುವುದು. ಇನ್ನೊಂದು ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಅಧ್ಯಕ್ಷ ಜೈರ್‌ ಬೊಲ್ಸನಾರೋ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು. ಇದರ ಹೊರತಾಗಿ ನಮಗೆ ಬೇರೆ ದಾರಿಯಿಲ್ಲ. ಇವರೆಡರಲ್ಲಿ ಉತ್ತಮವಾಗಿರುವುದನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಪ್ರತಿಭಟಸದೆ ಮನೆಯಲ್ಲಿದ್ದರೂ ಸೋಂಕಿನಿಂದ ಸಾಯುತ್ತೇವೆ. ಹಾಗಾಗಿ ಬೊಲ್ಸೆನಾರೋ ವಿರುದ್ಧ ಪ್ರತಿಭಟನೆಗೆ ಇಳಿದಿದ್ದೇವೆ ಎಂದು ಪ್ರತಿಭಟನಾನಿರತರು ಕಿಡಿಕಾರಿದ್ದಾರೆ.

ಬೊಲ್ಸೆನಾರೋ ವಿರುದ್ಧ ಬ್ರೆಜಿಲ್‌ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ನೇತೃತ್ವವನ್ನು ಅಲ್ಲಿನ ವಿರೋಧ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು , ಕಾರ್ಮಿಕ ಸಂಘಟನೆಗಳು ವಹಿಸಿಕೊಂಡಿವೆ. ಮೇ 29 ಶನಿವಾರ ಬ್ರೆಝಿಲ್‌ ರಾಜಧಾನಿ ಬ್ರೆಝೆಲಿಯಾ ಮತ್ತು ರಿಯೋ ಡಿ ಜನೈರೋ ದಲ್ಲಿ ನಡೆದ ಪ್ರತಿಭಟನೆಗಳು ಅತ್ಯಂತ ಶಾಂತವಾಗಿದ್ದವು. ಆದರೆ ದೇಶದ ಈಶಾನ್ಯ ಭಾಗದ ನಗರಗಳಾದ ರೆಸಿಫೆ ಮುಂತಾದ ಕಡೆ ಪ್ರತಿಭಟನೆಗಳು ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿವೆ. ಪ್ರತಿಭಟನೆಗಳನ್ನು ಹತ್ತಿಕ್ಕಲು ಮುಂದಾಗಿರುವ ಬೊಲ್ಸೆನಾರೋ ಸರ್ಕಾರ ಪ್ರತಿಭಟನಾಕಾರರ ಮೇಲೆ ಅಶ್ರವಾಯು ಮತ್ತು ಜಲ ಫಿರಂಗಿಗಳನ್ನು ಸಿಡಿಸಿದೆ.

ಬ್ರೆಝಿಲ್‌ ನ ಅತಿದೊಡ್ಡ ನಗರ ಸಾವೋ ಪೋಲೋ ದ ಬೀದಿಗಳು ಈಗ ಸಾವಿರಾರು ಪ್ರತಿಭಟನಾಕಾರರಿಂದ ತುಂಬಿಹೋಗಿದೆ. ಸಾವಿರಾರು ಮಾಸ್ಕ್‌ ಧರಿಸಿದ ಪ್ರತಿಭಟನಾಕಾರರು ಬೊಲ್ಸೆನಾರೋ ಅವರನ್ನು ಹಾವಿನಂತೆ ಚಿತ್ರಿಸಿದ ಫಲಕಗಳನ್ನು ಹಿಡಿದು ಘೋಷಣೆ ಕೂಗಿದ್ದಾರೆ. ಬೊಲ್ಸೆನಾರೋ ಅವರನ್ನು ಹಾವಿನಂತೆ ಚಿತ್ರಿಸಿದ ಬೃಹತ್‌ ಬಲೂನುಗಳನ್ನು ಪ್ರತಿಭಟನಾಕಾರರು ಆಗಸದಲ್ಲಿ ಹಾರಿ ಬಿಟ್ಟಿದ್ಧಾರೆ.

ಕೋವಿಡ್‌ ಕುರಿತಾಗಿ ಉಡಾಫೆಯ ಹೇಳಿಕೆ ನೀಡುತ್ತ ಸಾಂಕ್ರಾಮಿಕವನ್ನು ಗಂಭೀರವಾಗಿ ಪರಿಗಣಿಸದೆ ಲಕ್ಷಾಂತರ ಅಮೆರಿಕ್ಕನ್ನರ ಸಾವಿಗೆ ಕಾರಣರಾದ ಡೊನಾಲ್ಡ್‌ ಟ್ರಂಪ್‌ ಅವರನ್ನು ಅಮೆರಿಕಾದ ಜನರು ಅಧಿಕಾರದಿಂದ ಕೆಳಗಿಳಿಸಿದ್ದಾರೆ. ಟ್ರಂಪ್‌ ಅವರ ಆತ್ಮೀಯ ಸ್ನೇಹಿತರೆಂದು ಹೇಳಲಾಗುವ ಬೊಲ್ಸೆನಾರೋ ವಿರುದ್ಧವೂ ಬ್ರೆಝಿಲ್‌ ನಾಗರಿಕರಲ್ಲಿ ಈಗ ಆಕ್ರೋಶ ಭುಗಿಲೆದ್ದಿದೆ. ಟ್ರಂಪ್‌ ಮತ್ತು ಬೊಲ್ಸೆನಾರೋ ಇಬ್ಬರೂ ತೋವ್ರ ಬಲಪಂಥೀಯವಾದಿ ನಾಯಕರು ಎಂಬುದು ಇಲ್ಲಿ ಗಮನಿಸಬೇಕಾದ ಇನ್ನೊಂದು ಮುಖ್ಯ ವಿಚಾರ. ಇನ್ನು ಭಾರತದಲ್ಲಿಯೂ ಇದೇ ಪರಿಸ್ಥಿತಿ ಏರ್ಪಟ್ಟಿದ್ದು ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನೇ ದಿನೇ ಕುಸಿಯುತ್ತಾ ಸಾಗಿದೆ.


ಇದನ್ನೂ ಓದಿ: ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...