Homeಅಂತರಾಷ್ಟ್ರೀಯಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ಈಗ ನಮ್ಮ ಮುಂದೆ ಇರುವುದು ಎರಡೇ ಆಯ್ಕೆ. ಒಂದು ಕೊರೋನಾ ಸೋಂಕಿನಿಂದ ಮರಣವನ್ನಪ್ಪುವುದು. ಇನ್ನೊಂದು ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಅಧ್ಯಕ್ಷ ಜೈರ್‌ ಬೊಲ್ಸನಾರೋ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು.

- Advertisement -
- Advertisement -

ಬ್ರೆಜಿಲ್‌ನ ಜನತೆ ತಮ್ಮ ದೇಶದ ಅಧ್ಯಕ್ಷ ಬೊಲ್ಸೆನಾರೋ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ಧ ಆಕ್ರೋಶಗೊಂಡಿದ್ದಾರೆ. ಕೋವಿಡ್‌ ಸಾಂಕ್ರಾಮಿಕದ ಕಾಲದಲ್ಲಿ ಸರ್ಕಾರದ ನಿರ್ಲಕ್ಷ ಮತ್ತು ವೈಫಲ್ಯಗಳು ಬ್ರೆಜಿಲ್‌ ಜನರನ್ನು ಸಿಡಿದೇಳುವಂತೆ ಮಾಡಿದೆ.

ಬ್ರೆಜಿಲ್‌ ದೇಶದ 16 ನಗರಳಲ್ಲಿ ಲಕ್ಷಾಂತರ ಜನರು ಬೀದಿಗಿಳಿದು ʼಬೊಲ್ಸೆನಾರೋ ಕೆಳಗಿಳಿಸಿʼ ʼಬೊಲ್ಸೆನಾರೋ ಪದಚ್ಯುತಗೊಳಿಸಿʼ ಎಂಬ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಸರ್ಕಾರದ ವಿರುದ್ಧ ಪ್ರತಿಭಟಿಸತೊಡಗಿದ್ದಾರೆ. ಕೋವಿಡ್ ನಿರ್ವಹಣೆಯಲ್ಲಿ ತಜ್ಞರ ಎಚ್ಚರಿಕೆಗಳನ್ನೆಲ್ಲ ಗಾಳಿಗೆ ತೂರಿ ನಿರ್ಲಕ್ಷ ವಹಿಸಿದ ಬೊಲ್ಸಾನಾರೋ ಈಗ ಜನಾಕ್ರೋಶಕ್ಕೆ ತುತ್ತಾಗಿದ್ದಾರೆ.

ಬೊಲ್ಸಾನಾರೋ ಅವರ ಜನಪ್ರಿಯತೆ ಕೊರೋನಾ ಸಾಂಕ್ರಾಮಿಕದ ಕಾಲದಲ್ಲಿ ತೀವ್ರವಾಗಿ ಕುಸಿತಕಂಡಿದೆ. ಇದುವರೆಗೆ ಬ್ರೆಜಿಲ್‌ ನಲ್ಲಿ 4,60,000 ಕ್ಕೂ ಹೆಚ್ಚು ಜನರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಬೊಲ್ಸೊನಾರೋ ಅವರ ಕೊರೋನಾ ಸೋಂಕಿನ ಬಗೆಗಿನ ತೀವ್ರ ನಿರ್ಲಕ್ಷ್ಯ, ಉಡಾಫೆಯ ಹೇಳಿಕೆ ಮತ್ತು ಕೊರೋನಾ ಲಸಿಕೆ ಬಗೆಗಿನ ಅಸಡ್ಡೆಗಳ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಇತರ ಅಂತರಾಷ್ಟ್ರೀಯ ಆರೋಗ್ಯ ಸಂಸ್ಥೆಗಳು ಇದುವರೆಗೆ ಕಟು ಶಬ್ಧಗಳಲ್ಲಿ ಎಚ್ಚರಿಸುತ್ತ ಬಂದಿವೆ. ಇದಾವುದನ್ನು ಲೆಕ್ಕಿಸದೇ ಬೊಲ್ಸೆನಾರೋ ತಮ್ಮ ಎಂದಿನ ಸುಳ್ಳು ಮತ್ತು ಉಡಾಫೆಯ ಹೇಳಿಕೆಗಳನ್ನು ಮುಂದುವರೆಸಿದ್ದರು. ಕಡ್ಡಾಯ ಮಾಸ್ಕ್‌ ಧರಿಸುವ ನಿಯಮಗಳನ್ನು ಬ್ರೆಜಿಲ್‌ ನಲ್ಲಿ ಬೊಲ್ಸೆನಾರೋ ಇತ್ತೀಚೆಗೆ ತೆಗೆದುಹಾಕಿದ್ದರು. ಬೊಲ್ಸೆನಾರೋ ಈ ನಡೆಯ ವಿರುದ್ಧ ಅಂತಾರಷ್ಟ್ರೀಯ ಸಮುದಾಯ ತೀವ್ರವಾದ ಆಕ್ಷೇಪಗಳನ್ನು ಹೊರಹಾಕಿತ್ತು. ಇದೀಗ ತಮ್ಮ ಅಧ್ಯಕ್ಷನ ನಡೆಯಿಂದ ಬೇಸತ್ತು ಬ್ರೆಜಿಲ್‌ ಜನತೆ ಬೀದಿಗಿಳಿದಿದ್ದಾರೆ.

ಈಗ ಬ್ರೆಜಿಲ್ ಜನತೆ ತಮ್ಮ ಮುಂದೆ ಇರುವುದು ಎರಡೇ ಆಯ್ಕೆ. ಒಂದು ಕೊರೋನಾ ಸೋಂಕಿನಿಂದ ಮರಣವನ್ನಪ್ಪುವುದು. ಇನ್ನೊಂದು ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಅಧ್ಯಕ್ಷ ಜೈರ್‌ ಬೊಲ್ಸನಾರೋ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು. ಇದರ ಹೊರತಾಗಿ ನಮಗೆ ಬೇರೆ ದಾರಿಯಿಲ್ಲ. ಇವರೆಡರಲ್ಲಿ ಉತ್ತಮವಾಗಿರುವುದನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಪ್ರತಿಭಟಸದೆ ಮನೆಯಲ್ಲಿದ್ದರೂ ಸೋಂಕಿನಿಂದ ಸಾಯುತ್ತೇವೆ. ಹಾಗಾಗಿ ಬೊಲ್ಸೆನಾರೋ ವಿರುದ್ಧ ಪ್ರತಿಭಟನೆಗೆ ಇಳಿದಿದ್ದೇವೆ ಎಂದು ಪ್ರತಿಭಟನಾನಿರತರು ಕಿಡಿಕಾರಿದ್ದಾರೆ.

ಬೊಲ್ಸೆನಾರೋ ವಿರುದ್ಧ ಬ್ರೆಜಿಲ್‌ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ನೇತೃತ್ವವನ್ನು ಅಲ್ಲಿನ ವಿರೋಧ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು , ಕಾರ್ಮಿಕ ಸಂಘಟನೆಗಳು ವಹಿಸಿಕೊಂಡಿವೆ. ಮೇ 29 ಶನಿವಾರ ಬ್ರೆಝಿಲ್‌ ರಾಜಧಾನಿ ಬ್ರೆಝೆಲಿಯಾ ಮತ್ತು ರಿಯೋ ಡಿ ಜನೈರೋ ದಲ್ಲಿ ನಡೆದ ಪ್ರತಿಭಟನೆಗಳು ಅತ್ಯಂತ ಶಾಂತವಾಗಿದ್ದವು. ಆದರೆ ದೇಶದ ಈಶಾನ್ಯ ಭಾಗದ ನಗರಗಳಾದ ರೆಸಿಫೆ ಮುಂತಾದ ಕಡೆ ಪ್ರತಿಭಟನೆಗಳು ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿವೆ. ಪ್ರತಿಭಟನೆಗಳನ್ನು ಹತ್ತಿಕ್ಕಲು ಮುಂದಾಗಿರುವ ಬೊಲ್ಸೆನಾರೋ ಸರ್ಕಾರ ಪ್ರತಿಭಟನಾಕಾರರ ಮೇಲೆ ಅಶ್ರವಾಯು ಮತ್ತು ಜಲ ಫಿರಂಗಿಗಳನ್ನು ಸಿಡಿಸಿದೆ.

ಬ್ರೆಝಿಲ್‌ ನ ಅತಿದೊಡ್ಡ ನಗರ ಸಾವೋ ಪೋಲೋ ದ ಬೀದಿಗಳು ಈಗ ಸಾವಿರಾರು ಪ್ರತಿಭಟನಾಕಾರರಿಂದ ತುಂಬಿಹೋಗಿದೆ. ಸಾವಿರಾರು ಮಾಸ್ಕ್‌ ಧರಿಸಿದ ಪ್ರತಿಭಟನಾಕಾರರು ಬೊಲ್ಸೆನಾರೋ ಅವರನ್ನು ಹಾವಿನಂತೆ ಚಿತ್ರಿಸಿದ ಫಲಕಗಳನ್ನು ಹಿಡಿದು ಘೋಷಣೆ ಕೂಗಿದ್ದಾರೆ. ಬೊಲ್ಸೆನಾರೋ ಅವರನ್ನು ಹಾವಿನಂತೆ ಚಿತ್ರಿಸಿದ ಬೃಹತ್‌ ಬಲೂನುಗಳನ್ನು ಪ್ರತಿಭಟನಾಕಾರರು ಆಗಸದಲ್ಲಿ ಹಾರಿ ಬಿಟ್ಟಿದ್ಧಾರೆ.

ಕೋವಿಡ್‌ ಕುರಿತಾಗಿ ಉಡಾಫೆಯ ಹೇಳಿಕೆ ನೀಡುತ್ತ ಸಾಂಕ್ರಾಮಿಕವನ್ನು ಗಂಭೀರವಾಗಿ ಪರಿಗಣಿಸದೆ ಲಕ್ಷಾಂತರ ಅಮೆರಿಕ್ಕನ್ನರ ಸಾವಿಗೆ ಕಾರಣರಾದ ಡೊನಾಲ್ಡ್‌ ಟ್ರಂಪ್‌ ಅವರನ್ನು ಅಮೆರಿಕಾದ ಜನರು ಅಧಿಕಾರದಿಂದ ಕೆಳಗಿಳಿಸಿದ್ದಾರೆ. ಟ್ರಂಪ್‌ ಅವರ ಆತ್ಮೀಯ ಸ್ನೇಹಿತರೆಂದು ಹೇಳಲಾಗುವ ಬೊಲ್ಸೆನಾರೋ ವಿರುದ್ಧವೂ ಬ್ರೆಝಿಲ್‌ ನಾಗರಿಕರಲ್ಲಿ ಈಗ ಆಕ್ರೋಶ ಭುಗಿಲೆದ್ದಿದೆ. ಟ್ರಂಪ್‌ ಮತ್ತು ಬೊಲ್ಸೆನಾರೋ ಇಬ್ಬರೂ ತೋವ್ರ ಬಲಪಂಥೀಯವಾದಿ ನಾಯಕರು ಎಂಬುದು ಇಲ್ಲಿ ಗಮನಿಸಬೇಕಾದ ಇನ್ನೊಂದು ಮುಖ್ಯ ವಿಚಾರ. ಇನ್ನು ಭಾರತದಲ್ಲಿಯೂ ಇದೇ ಪರಿಸ್ಥಿತಿ ಏರ್ಪಟ್ಟಿದ್ದು ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನೇ ದಿನೇ ಕುಸಿಯುತ್ತಾ ಸಾಗಿದೆ.


ಇದನ್ನೂ ಓದಿ: ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...