Homeಮುಖಪುಟರೈಲ್ವೇ ನೇಮಕಾತಿ ಫಲಿತಾಂಶ ವಿರೋಧಿಸಿ ಶುಕ್ರವಾರ ‘ಬಿಹಾರ ಬಂದ್‌’ಗೆ ವಿದ್ಯಾರ್ಥಿ ಸಂಘಟನೆಗಳ ಕರೆ

ರೈಲ್ವೇ ನೇಮಕಾತಿ ಫಲಿತಾಂಶ ವಿರೋಧಿಸಿ ಶುಕ್ರವಾರ ‘ಬಿಹಾರ ಬಂದ್‌’ಗೆ ವಿದ್ಯಾರ್ಥಿ ಸಂಘಟನೆಗಳ ಕರೆ

- Advertisement -
- Advertisement -

ಭಾರತೀಯ ರೈಲ್ವೇ ನೇಮಕಾತಿ ಪರೀಕ್ಷೆಗಳ ಆಯ್ಕೆ ಪ್ರಕ್ರಿಯೆ ಕುರಿತು ಉದ್ಯೋಗ ಆಕಾಂಕ್ಷಿಗಳ ಪ್ರತಿಭಟನೆ ಮುಂದುವರೆದಿದೆ. ರೈಲ್ವೇ ನೇಮಕಾತಿ ಮಂಡಳಿಯ (ಆರ್‌ಆರ್‌ಬಿ) ಎನ್‌ಟಿಪಿಸಿ ಹಂತ 1 ಪರೀಕ್ಷೆಯ ಫಲಿತಾಂಶಗಳಲ್ಲಿನ ಅಕ್ರಮಗಳನ್ನು ಪ್ರತಿಭಟಿಸಿ ಆಲ್ ಇಂಡಿಯಾ ಸ್ಟೂಡೆಂಟ್ಸ್ ಯೂನಿಯನ್ (ಎಐಎಸ್‌ಎ) ಮತ್ತು ಇತರ ಯುವ ಸಂಘಟನೆಗಳು ಶುಕ್ರವಾರ ‘ಬಿಹಾರ ಬಂದ್’ಗೆ ಕರೆ ನೀಡಿವೆ. ವಿದ್ಯಾರ್ಥಿಗಳ ಕಳವಳಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಿರುವ ರೈಲ್ವೆ ಸಚಿವಾಲಯದ ಕ್ರಮವನ್ನು ವಿದ್ಯಾರ್ಥಿ ಸಂಘಟನೆಗಳು “ವಂಚನೆ” ಎಂದು ಕರೆದಿವೆ.

ಎರಡು ಹಂತಗಳಲ್ಲಿ ಪರೀಕ್ಷೆಗಳನ್ನು ನಡೆಸುವ ರೈಲ್ವೇ ಇಲಾಖೆ ನಿರ್ಧಾರದ ವಿರುದ್ಧ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. 2019 ರಲ್ಲಿ ಹೊರಡಿಸಲಾದ ರೈಲ್ವೆ ನೇಮಕಾತಿ ಮಂಡಳಿ ಅಧಿಸೂಚನೆಯಲ್ಲಿ ಒಂದೇ ಒಂದು ಪರೀಕ್ಷೆಯನ್ನು ಉಲ್ಲೇಖಿಸಲಾಗಿದೆ. ಅಧಿಕಾರಿಗಳು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಬಿಜೆಪಿ ಸರ್ಕಾರದ ನೀತಿಗಳ ವಿರುದ್ಧ ಹೋರಾಡುತ್ತಿರುವವರ ಜೊತೆಗಿದ್ದೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿದ್ದಾರೆ. ಆದರೆ ಹಿಂಸೆಯೇ ಪರಿಹಾರದ ಮಾರ್ಗವಲ್ಲ ಎಂದು ಸಹ ಒತ್ತಿ ಹೇಳಿದ್ದಾರೆ.

ನಿನ್ನೆ ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಉದ್ಯೋಗ ಆಕಾಂಕ್ಷಿಗಳು ಬುಧವಾರ ಬೃಹತ್ ಪ್ರತಿಭಟನೆಗಳನ್ನು ನಡೆಸಿದ ನಂತರ ರೈಲ್ವೆ ಸಚಿವಾಲಯವು ತಾಂತ್ರಿಕವಲ್ಲದ ಜನಪ್ರಿಯ ವರ್ಗಗಳು (ಎನ್‌ಟಿಪಿಸಿ) ಮತ್ತು ಹಂತ 1 ಪರೀಕ್ಷೆಗಳನ್ನು ಅಮಾನತುಗೊಳಿಸುವುದಾಗಿ ಘೋಷಿಸಿದ್ದು, ಬಿಹಾರದ ಗಯಾದಲ್ಲಿ ಪ್ರತಿಭಟನಾಕಾರರು ರೈಲಿನ ನಾಲ್ಕು ಬೋಗಿಗಳಿಗೆ ಬೆಂಕಿ ಹಚ್ಚಿದ್ದಾರೆ.

ಸಚಿವಾಲಯವು ರಚಿಸಿರುವ ಸಮಿತಿಯು ಉತ್ತರ ಪ್ರದೇಶದ ಚುನಾವಣೆಯವರೆಗೆ ವಿಷಯವನ್ನು ಮುಂದೂಡುವ “ಪಿತೂರಿ” ಎಂದು AISA ಮತ್ತು ಇತರ ಯುವ ಸಂಘಟನೆಗಳು ಪತ್ರಿಕಾಗೋಷ್ಟಿಯಲ್ಲಿ ಆರೋಪಿಸಿವೆ. “ಇದು ತೀವ್ರ ನಿರುದ್ಯೋಗವನ್ನು ಎದುರಿಸುತ್ತಿರುವ ವಿದ್ಯಾರ್ಥಿ ಯುವಜನರ ಬೃಹತ್ ಆಂದೋಲನವಾಗಿದೆ. ಆದರೆ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಅಭ್ಯರ್ಥಿಗಳು ಎತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ರೈಲ್ವೆ ಸಚಿವಾಲಯವು ಉನ್ನತ ಸಮಿತಿಯನ್ನು ಸ್ಥಾಪಿಸಿದ್ದು, ಮಾರ್ಚ್ 4 ರೊಳಗೆ ಸಮಿತಿಯು ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಮುಂದಿನ ತಿಂಗಳು ನಿಗದಿಯಾಗಿದ್ದ NTPC ಪರೀಕ್ಷೆಗಳನ್ನು ಮುಂದೂಡಿದ ಕೇಂದ್ರವು ಉದ್ಯೋಗ ಆಕಾಂಕ್ಷಿಗಳಿಗೆ ತಮ್ಮ ಕಳವಳಗಳನ್ನು ಸಲ್ಲಿಸಲು ಮೂರು ವಾರಗಳ ಕಾಲ (ಫೆಬ್ರವರಿ 16 ರವರೆಗೆ) ಕಾಲಾವಕಾಶ ನೀಡಿದೆ.

ಬುಧವಾರದ ಪ್ರತಿಭಟನೆಯ ಸಂದರ್ಭದಲ್ಲಿ, ಉದ್ಯೋಗ ಆಕಾಂಕ್ಷಿಗಳು ನವದೆಹಲಿ-ಕೋಲ್ಕತ್ತಾ ಮುಖ್ಯ ರೈಲು ಹಳಿಗಳನ್ನು ತಡೆದಿದ್ದು, ಆಂದೋಲನದ ಬಿಸಿಯು ಪೂರ್ವ ಉತ್ತರ ಪ್ರದೇಶದ ಗಡಿ ಪ್ರದೇಶಗಳಿಗೂ ಹರಡಿದೆ. ಗಯಾ, ಜೆಹಾನಾಬಾದ್, ಭಾಗಲ್ಪುರ್, ಸಸಾರಾಮ್, ಸಮಸ್ತಿಪುರ್ ಮತ್ತು ಛಾಪ್ರಾ ಜಿಲ್ಲೆಗಳಲ್ಲಿ ರೈಲ್ವೆ ಆಸ್ತಿಗಳಿಗೆ ಹಾನಿಮಾಡಿದ್ದು, ಪ್ರತಿಭಟನಾಕಾರರು ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಬಿಹಾರ ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ; ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ನೇಮಕಾತಿ ಪರೀಕ್ಷೆಗಳನ್ನು ರದ್ದುಗೊಳಿಸಿದ ರೈಲ್ವೇ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...