Homeಮುಖಪುಟರೈಲ್ವೇ ನೇಮಕಾತಿ ಫಲಿತಾಂಶ ವಿರೋಧಿಸಿ ಶುಕ್ರವಾರ ‘ಬಿಹಾರ ಬಂದ್‌’ಗೆ ವಿದ್ಯಾರ್ಥಿ ಸಂಘಟನೆಗಳ ಕರೆ

ರೈಲ್ವೇ ನೇಮಕಾತಿ ಫಲಿತಾಂಶ ವಿರೋಧಿಸಿ ಶುಕ್ರವಾರ ‘ಬಿಹಾರ ಬಂದ್‌’ಗೆ ವಿದ್ಯಾರ್ಥಿ ಸಂಘಟನೆಗಳ ಕರೆ

- Advertisement -
- Advertisement -

ಭಾರತೀಯ ರೈಲ್ವೇ ನೇಮಕಾತಿ ಪರೀಕ್ಷೆಗಳ ಆಯ್ಕೆ ಪ್ರಕ್ರಿಯೆ ಕುರಿತು ಉದ್ಯೋಗ ಆಕಾಂಕ್ಷಿಗಳ ಪ್ರತಿಭಟನೆ ಮುಂದುವರೆದಿದೆ. ರೈಲ್ವೇ ನೇಮಕಾತಿ ಮಂಡಳಿಯ (ಆರ್‌ಆರ್‌ಬಿ) ಎನ್‌ಟಿಪಿಸಿ ಹಂತ 1 ಪರೀಕ್ಷೆಯ ಫಲಿತಾಂಶಗಳಲ್ಲಿನ ಅಕ್ರಮಗಳನ್ನು ಪ್ರತಿಭಟಿಸಿ ಆಲ್ ಇಂಡಿಯಾ ಸ್ಟೂಡೆಂಟ್ಸ್ ಯೂನಿಯನ್ (ಎಐಎಸ್‌ಎ) ಮತ್ತು ಇತರ ಯುವ ಸಂಘಟನೆಗಳು ಶುಕ್ರವಾರ ‘ಬಿಹಾರ ಬಂದ್’ಗೆ ಕರೆ ನೀಡಿವೆ. ವಿದ್ಯಾರ್ಥಿಗಳ ಕಳವಳಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಿರುವ ರೈಲ್ವೆ ಸಚಿವಾಲಯದ ಕ್ರಮವನ್ನು ವಿದ್ಯಾರ್ಥಿ ಸಂಘಟನೆಗಳು “ವಂಚನೆ” ಎಂದು ಕರೆದಿವೆ.

ಎರಡು ಹಂತಗಳಲ್ಲಿ ಪರೀಕ್ಷೆಗಳನ್ನು ನಡೆಸುವ ರೈಲ್ವೇ ಇಲಾಖೆ ನಿರ್ಧಾರದ ವಿರುದ್ಧ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. 2019 ರಲ್ಲಿ ಹೊರಡಿಸಲಾದ ರೈಲ್ವೆ ನೇಮಕಾತಿ ಮಂಡಳಿ ಅಧಿಸೂಚನೆಯಲ್ಲಿ ಒಂದೇ ಒಂದು ಪರೀಕ್ಷೆಯನ್ನು ಉಲ್ಲೇಖಿಸಲಾಗಿದೆ. ಅಧಿಕಾರಿಗಳು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಬಿಜೆಪಿ ಸರ್ಕಾರದ ನೀತಿಗಳ ವಿರುದ್ಧ ಹೋರಾಡುತ್ತಿರುವವರ ಜೊತೆಗಿದ್ದೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿದ್ದಾರೆ. ಆದರೆ ಹಿಂಸೆಯೇ ಪರಿಹಾರದ ಮಾರ್ಗವಲ್ಲ ಎಂದು ಸಹ ಒತ್ತಿ ಹೇಳಿದ್ದಾರೆ.

ನಿನ್ನೆ ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಉದ್ಯೋಗ ಆಕಾಂಕ್ಷಿಗಳು ಬುಧವಾರ ಬೃಹತ್ ಪ್ರತಿಭಟನೆಗಳನ್ನು ನಡೆಸಿದ ನಂತರ ರೈಲ್ವೆ ಸಚಿವಾಲಯವು ತಾಂತ್ರಿಕವಲ್ಲದ ಜನಪ್ರಿಯ ವರ್ಗಗಳು (ಎನ್‌ಟಿಪಿಸಿ) ಮತ್ತು ಹಂತ 1 ಪರೀಕ್ಷೆಗಳನ್ನು ಅಮಾನತುಗೊಳಿಸುವುದಾಗಿ ಘೋಷಿಸಿದ್ದು, ಬಿಹಾರದ ಗಯಾದಲ್ಲಿ ಪ್ರತಿಭಟನಾಕಾರರು ರೈಲಿನ ನಾಲ್ಕು ಬೋಗಿಗಳಿಗೆ ಬೆಂಕಿ ಹಚ್ಚಿದ್ದಾರೆ.

ಸಚಿವಾಲಯವು ರಚಿಸಿರುವ ಸಮಿತಿಯು ಉತ್ತರ ಪ್ರದೇಶದ ಚುನಾವಣೆಯವರೆಗೆ ವಿಷಯವನ್ನು ಮುಂದೂಡುವ “ಪಿತೂರಿ” ಎಂದು AISA ಮತ್ತು ಇತರ ಯುವ ಸಂಘಟನೆಗಳು ಪತ್ರಿಕಾಗೋಷ್ಟಿಯಲ್ಲಿ ಆರೋಪಿಸಿವೆ. “ಇದು ತೀವ್ರ ನಿರುದ್ಯೋಗವನ್ನು ಎದುರಿಸುತ್ತಿರುವ ವಿದ್ಯಾರ್ಥಿ ಯುವಜನರ ಬೃಹತ್ ಆಂದೋಲನವಾಗಿದೆ. ಆದರೆ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಅಭ್ಯರ್ಥಿಗಳು ಎತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ರೈಲ್ವೆ ಸಚಿವಾಲಯವು ಉನ್ನತ ಸಮಿತಿಯನ್ನು ಸ್ಥಾಪಿಸಿದ್ದು, ಮಾರ್ಚ್ 4 ರೊಳಗೆ ಸಮಿತಿಯು ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಮುಂದಿನ ತಿಂಗಳು ನಿಗದಿಯಾಗಿದ್ದ NTPC ಪರೀಕ್ಷೆಗಳನ್ನು ಮುಂದೂಡಿದ ಕೇಂದ್ರವು ಉದ್ಯೋಗ ಆಕಾಂಕ್ಷಿಗಳಿಗೆ ತಮ್ಮ ಕಳವಳಗಳನ್ನು ಸಲ್ಲಿಸಲು ಮೂರು ವಾರಗಳ ಕಾಲ (ಫೆಬ್ರವರಿ 16 ರವರೆಗೆ) ಕಾಲಾವಕಾಶ ನೀಡಿದೆ.

ಬುಧವಾರದ ಪ್ರತಿಭಟನೆಯ ಸಂದರ್ಭದಲ್ಲಿ, ಉದ್ಯೋಗ ಆಕಾಂಕ್ಷಿಗಳು ನವದೆಹಲಿ-ಕೋಲ್ಕತ್ತಾ ಮುಖ್ಯ ರೈಲು ಹಳಿಗಳನ್ನು ತಡೆದಿದ್ದು, ಆಂದೋಲನದ ಬಿಸಿಯು ಪೂರ್ವ ಉತ್ತರ ಪ್ರದೇಶದ ಗಡಿ ಪ್ರದೇಶಗಳಿಗೂ ಹರಡಿದೆ. ಗಯಾ, ಜೆಹಾನಾಬಾದ್, ಭಾಗಲ್ಪುರ್, ಸಸಾರಾಮ್, ಸಮಸ್ತಿಪುರ್ ಮತ್ತು ಛಾಪ್ರಾ ಜಿಲ್ಲೆಗಳಲ್ಲಿ ರೈಲ್ವೆ ಆಸ್ತಿಗಳಿಗೆ ಹಾನಿಮಾಡಿದ್ದು, ಪ್ರತಿಭಟನಾಕಾರರು ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಬಿಹಾರ ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ; ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ನೇಮಕಾತಿ ಪರೀಕ್ಷೆಗಳನ್ನು ರದ್ದುಗೊಳಿಸಿದ ರೈಲ್ವೇ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...