Homeಮುಖಪುಟರೈಲ್ವೇ ನೇಮಕಾತಿ ಫಲಿತಾಂಶ ವಿರೋಧಿಸಿ ಶುಕ್ರವಾರ ‘ಬಿಹಾರ ಬಂದ್‌’ಗೆ ವಿದ್ಯಾರ್ಥಿ ಸಂಘಟನೆಗಳ ಕರೆ

ರೈಲ್ವೇ ನೇಮಕಾತಿ ಫಲಿತಾಂಶ ವಿರೋಧಿಸಿ ಶುಕ್ರವಾರ ‘ಬಿಹಾರ ಬಂದ್‌’ಗೆ ವಿದ್ಯಾರ್ಥಿ ಸಂಘಟನೆಗಳ ಕರೆ

- Advertisement -
- Advertisement -

ಭಾರತೀಯ ರೈಲ್ವೇ ನೇಮಕಾತಿ ಪರೀಕ್ಷೆಗಳ ಆಯ್ಕೆ ಪ್ರಕ್ರಿಯೆ ಕುರಿತು ಉದ್ಯೋಗ ಆಕಾಂಕ್ಷಿಗಳ ಪ್ರತಿಭಟನೆ ಮುಂದುವರೆದಿದೆ. ರೈಲ್ವೇ ನೇಮಕಾತಿ ಮಂಡಳಿಯ (ಆರ್‌ಆರ್‌ಬಿ) ಎನ್‌ಟಿಪಿಸಿ ಹಂತ 1 ಪರೀಕ್ಷೆಯ ಫಲಿತಾಂಶಗಳಲ್ಲಿನ ಅಕ್ರಮಗಳನ್ನು ಪ್ರತಿಭಟಿಸಿ ಆಲ್ ಇಂಡಿಯಾ ಸ್ಟೂಡೆಂಟ್ಸ್ ಯೂನಿಯನ್ (ಎಐಎಸ್‌ಎ) ಮತ್ತು ಇತರ ಯುವ ಸಂಘಟನೆಗಳು ಶುಕ್ರವಾರ ‘ಬಿಹಾರ ಬಂದ್’ಗೆ ಕರೆ ನೀಡಿವೆ. ವಿದ್ಯಾರ್ಥಿಗಳ ಕಳವಳಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಿರುವ ರೈಲ್ವೆ ಸಚಿವಾಲಯದ ಕ್ರಮವನ್ನು ವಿದ್ಯಾರ್ಥಿ ಸಂಘಟನೆಗಳು “ವಂಚನೆ” ಎಂದು ಕರೆದಿವೆ.

ಎರಡು ಹಂತಗಳಲ್ಲಿ ಪರೀಕ್ಷೆಗಳನ್ನು ನಡೆಸುವ ರೈಲ್ವೇ ಇಲಾಖೆ ನಿರ್ಧಾರದ ವಿರುದ್ಧ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. 2019 ರಲ್ಲಿ ಹೊರಡಿಸಲಾದ ರೈಲ್ವೆ ನೇಮಕಾತಿ ಮಂಡಳಿ ಅಧಿಸೂಚನೆಯಲ್ಲಿ ಒಂದೇ ಒಂದು ಪರೀಕ್ಷೆಯನ್ನು ಉಲ್ಲೇಖಿಸಲಾಗಿದೆ. ಅಧಿಕಾರಿಗಳು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಬಿಜೆಪಿ ಸರ್ಕಾರದ ನೀತಿಗಳ ವಿರುದ್ಧ ಹೋರಾಡುತ್ತಿರುವವರ ಜೊತೆಗಿದ್ದೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿದ್ದಾರೆ. ಆದರೆ ಹಿಂಸೆಯೇ ಪರಿಹಾರದ ಮಾರ್ಗವಲ್ಲ ಎಂದು ಸಹ ಒತ್ತಿ ಹೇಳಿದ್ದಾರೆ.

ನಿನ್ನೆ ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಉದ್ಯೋಗ ಆಕಾಂಕ್ಷಿಗಳು ಬುಧವಾರ ಬೃಹತ್ ಪ್ರತಿಭಟನೆಗಳನ್ನು ನಡೆಸಿದ ನಂತರ ರೈಲ್ವೆ ಸಚಿವಾಲಯವು ತಾಂತ್ರಿಕವಲ್ಲದ ಜನಪ್ರಿಯ ವರ್ಗಗಳು (ಎನ್‌ಟಿಪಿಸಿ) ಮತ್ತು ಹಂತ 1 ಪರೀಕ್ಷೆಗಳನ್ನು ಅಮಾನತುಗೊಳಿಸುವುದಾಗಿ ಘೋಷಿಸಿದ್ದು, ಬಿಹಾರದ ಗಯಾದಲ್ಲಿ ಪ್ರತಿಭಟನಾಕಾರರು ರೈಲಿನ ನಾಲ್ಕು ಬೋಗಿಗಳಿಗೆ ಬೆಂಕಿ ಹಚ್ಚಿದ್ದಾರೆ.

ಸಚಿವಾಲಯವು ರಚಿಸಿರುವ ಸಮಿತಿಯು ಉತ್ತರ ಪ್ರದೇಶದ ಚುನಾವಣೆಯವರೆಗೆ ವಿಷಯವನ್ನು ಮುಂದೂಡುವ “ಪಿತೂರಿ” ಎಂದು AISA ಮತ್ತು ಇತರ ಯುವ ಸಂಘಟನೆಗಳು ಪತ್ರಿಕಾಗೋಷ್ಟಿಯಲ್ಲಿ ಆರೋಪಿಸಿವೆ. “ಇದು ತೀವ್ರ ನಿರುದ್ಯೋಗವನ್ನು ಎದುರಿಸುತ್ತಿರುವ ವಿದ್ಯಾರ್ಥಿ ಯುವಜನರ ಬೃಹತ್ ಆಂದೋಲನವಾಗಿದೆ. ಆದರೆ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಅಭ್ಯರ್ಥಿಗಳು ಎತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ರೈಲ್ವೆ ಸಚಿವಾಲಯವು ಉನ್ನತ ಸಮಿತಿಯನ್ನು ಸ್ಥಾಪಿಸಿದ್ದು, ಮಾರ್ಚ್ 4 ರೊಳಗೆ ಸಮಿತಿಯು ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಮುಂದಿನ ತಿಂಗಳು ನಿಗದಿಯಾಗಿದ್ದ NTPC ಪರೀಕ್ಷೆಗಳನ್ನು ಮುಂದೂಡಿದ ಕೇಂದ್ರವು ಉದ್ಯೋಗ ಆಕಾಂಕ್ಷಿಗಳಿಗೆ ತಮ್ಮ ಕಳವಳಗಳನ್ನು ಸಲ್ಲಿಸಲು ಮೂರು ವಾರಗಳ ಕಾಲ (ಫೆಬ್ರವರಿ 16 ರವರೆಗೆ) ಕಾಲಾವಕಾಶ ನೀಡಿದೆ.

ಬುಧವಾರದ ಪ್ರತಿಭಟನೆಯ ಸಂದರ್ಭದಲ್ಲಿ, ಉದ್ಯೋಗ ಆಕಾಂಕ್ಷಿಗಳು ನವದೆಹಲಿ-ಕೋಲ್ಕತ್ತಾ ಮುಖ್ಯ ರೈಲು ಹಳಿಗಳನ್ನು ತಡೆದಿದ್ದು, ಆಂದೋಲನದ ಬಿಸಿಯು ಪೂರ್ವ ಉತ್ತರ ಪ್ರದೇಶದ ಗಡಿ ಪ್ರದೇಶಗಳಿಗೂ ಹರಡಿದೆ. ಗಯಾ, ಜೆಹಾನಾಬಾದ್, ಭಾಗಲ್ಪುರ್, ಸಸಾರಾಮ್, ಸಮಸ್ತಿಪುರ್ ಮತ್ತು ಛಾಪ್ರಾ ಜಿಲ್ಲೆಗಳಲ್ಲಿ ರೈಲ್ವೆ ಆಸ್ತಿಗಳಿಗೆ ಹಾನಿಮಾಡಿದ್ದು, ಪ್ರತಿಭಟನಾಕಾರರು ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಬಿಹಾರ ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ; ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ನೇಮಕಾತಿ ಪರೀಕ್ಷೆಗಳನ್ನು ರದ್ದುಗೊಳಿಸಿದ ರೈಲ್ವೇ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...