Homeಮುಖಪುಟರೈಲ್ವೇ ನೇಮಕಾತಿ ಫಲಿತಾಂಶ ವಿರೋಧಿಸಿ ಶುಕ್ರವಾರ ‘ಬಿಹಾರ ಬಂದ್‌’ಗೆ ವಿದ್ಯಾರ್ಥಿ ಸಂಘಟನೆಗಳ ಕರೆ

ರೈಲ್ವೇ ನೇಮಕಾತಿ ಫಲಿತಾಂಶ ವಿರೋಧಿಸಿ ಶುಕ್ರವಾರ ‘ಬಿಹಾರ ಬಂದ್‌’ಗೆ ವಿದ್ಯಾರ್ಥಿ ಸಂಘಟನೆಗಳ ಕರೆ

- Advertisement -
- Advertisement -

ಭಾರತೀಯ ರೈಲ್ವೇ ನೇಮಕಾತಿ ಪರೀಕ್ಷೆಗಳ ಆಯ್ಕೆ ಪ್ರಕ್ರಿಯೆ ಕುರಿತು ಉದ್ಯೋಗ ಆಕಾಂಕ್ಷಿಗಳ ಪ್ರತಿಭಟನೆ ಮುಂದುವರೆದಿದೆ. ರೈಲ್ವೇ ನೇಮಕಾತಿ ಮಂಡಳಿಯ (ಆರ್‌ಆರ್‌ಬಿ) ಎನ್‌ಟಿಪಿಸಿ ಹಂತ 1 ಪರೀಕ್ಷೆಯ ಫಲಿತಾಂಶಗಳಲ್ಲಿನ ಅಕ್ರಮಗಳನ್ನು ಪ್ರತಿಭಟಿಸಿ ಆಲ್ ಇಂಡಿಯಾ ಸ್ಟೂಡೆಂಟ್ಸ್ ಯೂನಿಯನ್ (ಎಐಎಸ್‌ಎ) ಮತ್ತು ಇತರ ಯುವ ಸಂಘಟನೆಗಳು ಶುಕ್ರವಾರ ‘ಬಿಹಾರ ಬಂದ್’ಗೆ ಕರೆ ನೀಡಿವೆ. ವಿದ್ಯಾರ್ಥಿಗಳ ಕಳವಳಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಿರುವ ರೈಲ್ವೆ ಸಚಿವಾಲಯದ ಕ್ರಮವನ್ನು ವಿದ್ಯಾರ್ಥಿ ಸಂಘಟನೆಗಳು “ವಂಚನೆ” ಎಂದು ಕರೆದಿವೆ.

ಎರಡು ಹಂತಗಳಲ್ಲಿ ಪರೀಕ್ಷೆಗಳನ್ನು ನಡೆಸುವ ರೈಲ್ವೇ ಇಲಾಖೆ ನಿರ್ಧಾರದ ವಿರುದ್ಧ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. 2019 ರಲ್ಲಿ ಹೊರಡಿಸಲಾದ ರೈಲ್ವೆ ನೇಮಕಾತಿ ಮಂಡಳಿ ಅಧಿಸೂಚನೆಯಲ್ಲಿ ಒಂದೇ ಒಂದು ಪರೀಕ್ಷೆಯನ್ನು ಉಲ್ಲೇಖಿಸಲಾಗಿದೆ. ಅಧಿಕಾರಿಗಳು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಬಿಜೆಪಿ ಸರ್ಕಾರದ ನೀತಿಗಳ ವಿರುದ್ಧ ಹೋರಾಡುತ್ತಿರುವವರ ಜೊತೆಗಿದ್ದೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿದ್ದಾರೆ. ಆದರೆ ಹಿಂಸೆಯೇ ಪರಿಹಾರದ ಮಾರ್ಗವಲ್ಲ ಎಂದು ಸಹ ಒತ್ತಿ ಹೇಳಿದ್ದಾರೆ.

ನಿನ್ನೆ ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಉದ್ಯೋಗ ಆಕಾಂಕ್ಷಿಗಳು ಬುಧವಾರ ಬೃಹತ್ ಪ್ರತಿಭಟನೆಗಳನ್ನು ನಡೆಸಿದ ನಂತರ ರೈಲ್ವೆ ಸಚಿವಾಲಯವು ತಾಂತ್ರಿಕವಲ್ಲದ ಜನಪ್ರಿಯ ವರ್ಗಗಳು (ಎನ್‌ಟಿಪಿಸಿ) ಮತ್ತು ಹಂತ 1 ಪರೀಕ್ಷೆಗಳನ್ನು ಅಮಾನತುಗೊಳಿಸುವುದಾಗಿ ಘೋಷಿಸಿದ್ದು, ಬಿಹಾರದ ಗಯಾದಲ್ಲಿ ಪ್ರತಿಭಟನಾಕಾರರು ರೈಲಿನ ನಾಲ್ಕು ಬೋಗಿಗಳಿಗೆ ಬೆಂಕಿ ಹಚ್ಚಿದ್ದಾರೆ.

ಸಚಿವಾಲಯವು ರಚಿಸಿರುವ ಸಮಿತಿಯು ಉತ್ತರ ಪ್ರದೇಶದ ಚುನಾವಣೆಯವರೆಗೆ ವಿಷಯವನ್ನು ಮುಂದೂಡುವ “ಪಿತೂರಿ” ಎಂದು AISA ಮತ್ತು ಇತರ ಯುವ ಸಂಘಟನೆಗಳು ಪತ್ರಿಕಾಗೋಷ್ಟಿಯಲ್ಲಿ ಆರೋಪಿಸಿವೆ. “ಇದು ತೀವ್ರ ನಿರುದ್ಯೋಗವನ್ನು ಎದುರಿಸುತ್ತಿರುವ ವಿದ್ಯಾರ್ಥಿ ಯುವಜನರ ಬೃಹತ್ ಆಂದೋಲನವಾಗಿದೆ. ಆದರೆ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಅಭ್ಯರ್ಥಿಗಳು ಎತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ರೈಲ್ವೆ ಸಚಿವಾಲಯವು ಉನ್ನತ ಸಮಿತಿಯನ್ನು ಸ್ಥಾಪಿಸಿದ್ದು, ಮಾರ್ಚ್ 4 ರೊಳಗೆ ಸಮಿತಿಯು ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಮುಂದಿನ ತಿಂಗಳು ನಿಗದಿಯಾಗಿದ್ದ NTPC ಪರೀಕ್ಷೆಗಳನ್ನು ಮುಂದೂಡಿದ ಕೇಂದ್ರವು ಉದ್ಯೋಗ ಆಕಾಂಕ್ಷಿಗಳಿಗೆ ತಮ್ಮ ಕಳವಳಗಳನ್ನು ಸಲ್ಲಿಸಲು ಮೂರು ವಾರಗಳ ಕಾಲ (ಫೆಬ್ರವರಿ 16 ರವರೆಗೆ) ಕಾಲಾವಕಾಶ ನೀಡಿದೆ.

ಬುಧವಾರದ ಪ್ರತಿಭಟನೆಯ ಸಂದರ್ಭದಲ್ಲಿ, ಉದ್ಯೋಗ ಆಕಾಂಕ್ಷಿಗಳು ನವದೆಹಲಿ-ಕೋಲ್ಕತ್ತಾ ಮುಖ್ಯ ರೈಲು ಹಳಿಗಳನ್ನು ತಡೆದಿದ್ದು, ಆಂದೋಲನದ ಬಿಸಿಯು ಪೂರ್ವ ಉತ್ತರ ಪ್ರದೇಶದ ಗಡಿ ಪ್ರದೇಶಗಳಿಗೂ ಹರಡಿದೆ. ಗಯಾ, ಜೆಹಾನಾಬಾದ್, ಭಾಗಲ್ಪುರ್, ಸಸಾರಾಮ್, ಸಮಸ್ತಿಪುರ್ ಮತ್ತು ಛಾಪ್ರಾ ಜಿಲ್ಲೆಗಳಲ್ಲಿ ರೈಲ್ವೆ ಆಸ್ತಿಗಳಿಗೆ ಹಾನಿಮಾಡಿದ್ದು, ಪ್ರತಿಭಟನಾಕಾರರು ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಬಿಹಾರ ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ; ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ನೇಮಕಾತಿ ಪರೀಕ್ಷೆಗಳನ್ನು ರದ್ದುಗೊಳಿಸಿದ ರೈಲ್ವೇ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...