Homeಮುಖಪುಟರೈಲ್ವೇ ನೇಮಕಾತಿ ಫಲಿತಾಂಶ ವಿರೋಧಿಸಿ ಶುಕ್ರವಾರ ‘ಬಿಹಾರ ಬಂದ್‌’ಗೆ ವಿದ್ಯಾರ್ಥಿ ಸಂಘಟನೆಗಳ ಕರೆ

ರೈಲ್ವೇ ನೇಮಕಾತಿ ಫಲಿತಾಂಶ ವಿರೋಧಿಸಿ ಶುಕ್ರವಾರ ‘ಬಿಹಾರ ಬಂದ್‌’ಗೆ ವಿದ್ಯಾರ್ಥಿ ಸಂಘಟನೆಗಳ ಕರೆ

- Advertisement -
- Advertisement -

ಭಾರತೀಯ ರೈಲ್ವೇ ನೇಮಕಾತಿ ಪರೀಕ್ಷೆಗಳ ಆಯ್ಕೆ ಪ್ರಕ್ರಿಯೆ ಕುರಿತು ಉದ್ಯೋಗ ಆಕಾಂಕ್ಷಿಗಳ ಪ್ರತಿಭಟನೆ ಮುಂದುವರೆದಿದೆ. ರೈಲ್ವೇ ನೇಮಕಾತಿ ಮಂಡಳಿಯ (ಆರ್‌ಆರ್‌ಬಿ) ಎನ್‌ಟಿಪಿಸಿ ಹಂತ 1 ಪರೀಕ್ಷೆಯ ಫಲಿತಾಂಶಗಳಲ್ಲಿನ ಅಕ್ರಮಗಳನ್ನು ಪ್ರತಿಭಟಿಸಿ ಆಲ್ ಇಂಡಿಯಾ ಸ್ಟೂಡೆಂಟ್ಸ್ ಯೂನಿಯನ್ (ಎಐಎಸ್‌ಎ) ಮತ್ತು ಇತರ ಯುವ ಸಂಘಟನೆಗಳು ಶುಕ್ರವಾರ ‘ಬಿಹಾರ ಬಂದ್’ಗೆ ಕರೆ ನೀಡಿವೆ. ವಿದ್ಯಾರ್ಥಿಗಳ ಕಳವಳಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಿರುವ ರೈಲ್ವೆ ಸಚಿವಾಲಯದ ಕ್ರಮವನ್ನು ವಿದ್ಯಾರ್ಥಿ ಸಂಘಟನೆಗಳು “ವಂಚನೆ” ಎಂದು ಕರೆದಿವೆ.

ಎರಡು ಹಂತಗಳಲ್ಲಿ ಪರೀಕ್ಷೆಗಳನ್ನು ನಡೆಸುವ ರೈಲ್ವೇ ಇಲಾಖೆ ನಿರ್ಧಾರದ ವಿರುದ್ಧ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. 2019 ರಲ್ಲಿ ಹೊರಡಿಸಲಾದ ರೈಲ್ವೆ ನೇಮಕಾತಿ ಮಂಡಳಿ ಅಧಿಸೂಚನೆಯಲ್ಲಿ ಒಂದೇ ಒಂದು ಪರೀಕ್ಷೆಯನ್ನು ಉಲ್ಲೇಖಿಸಲಾಗಿದೆ. ಅಧಿಕಾರಿಗಳು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಬಿಜೆಪಿ ಸರ್ಕಾರದ ನೀತಿಗಳ ವಿರುದ್ಧ ಹೋರಾಡುತ್ತಿರುವವರ ಜೊತೆಗಿದ್ದೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿದ್ದಾರೆ. ಆದರೆ ಹಿಂಸೆಯೇ ಪರಿಹಾರದ ಮಾರ್ಗವಲ್ಲ ಎಂದು ಸಹ ಒತ್ತಿ ಹೇಳಿದ್ದಾರೆ.

ನಿನ್ನೆ ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಉದ್ಯೋಗ ಆಕಾಂಕ್ಷಿಗಳು ಬುಧವಾರ ಬೃಹತ್ ಪ್ರತಿಭಟನೆಗಳನ್ನು ನಡೆಸಿದ ನಂತರ ರೈಲ್ವೆ ಸಚಿವಾಲಯವು ತಾಂತ್ರಿಕವಲ್ಲದ ಜನಪ್ರಿಯ ವರ್ಗಗಳು (ಎನ್‌ಟಿಪಿಸಿ) ಮತ್ತು ಹಂತ 1 ಪರೀಕ್ಷೆಗಳನ್ನು ಅಮಾನತುಗೊಳಿಸುವುದಾಗಿ ಘೋಷಿಸಿದ್ದು, ಬಿಹಾರದ ಗಯಾದಲ್ಲಿ ಪ್ರತಿಭಟನಾಕಾರರು ರೈಲಿನ ನಾಲ್ಕು ಬೋಗಿಗಳಿಗೆ ಬೆಂಕಿ ಹಚ್ಚಿದ್ದಾರೆ.

ಸಚಿವಾಲಯವು ರಚಿಸಿರುವ ಸಮಿತಿಯು ಉತ್ತರ ಪ್ರದೇಶದ ಚುನಾವಣೆಯವರೆಗೆ ವಿಷಯವನ್ನು ಮುಂದೂಡುವ “ಪಿತೂರಿ” ಎಂದು AISA ಮತ್ತು ಇತರ ಯುವ ಸಂಘಟನೆಗಳು ಪತ್ರಿಕಾಗೋಷ್ಟಿಯಲ್ಲಿ ಆರೋಪಿಸಿವೆ. “ಇದು ತೀವ್ರ ನಿರುದ್ಯೋಗವನ್ನು ಎದುರಿಸುತ್ತಿರುವ ವಿದ್ಯಾರ್ಥಿ ಯುವಜನರ ಬೃಹತ್ ಆಂದೋಲನವಾಗಿದೆ. ಆದರೆ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಅಭ್ಯರ್ಥಿಗಳು ಎತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ರೈಲ್ವೆ ಸಚಿವಾಲಯವು ಉನ್ನತ ಸಮಿತಿಯನ್ನು ಸ್ಥಾಪಿಸಿದ್ದು, ಮಾರ್ಚ್ 4 ರೊಳಗೆ ಸಮಿತಿಯು ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಮುಂದಿನ ತಿಂಗಳು ನಿಗದಿಯಾಗಿದ್ದ NTPC ಪರೀಕ್ಷೆಗಳನ್ನು ಮುಂದೂಡಿದ ಕೇಂದ್ರವು ಉದ್ಯೋಗ ಆಕಾಂಕ್ಷಿಗಳಿಗೆ ತಮ್ಮ ಕಳವಳಗಳನ್ನು ಸಲ್ಲಿಸಲು ಮೂರು ವಾರಗಳ ಕಾಲ (ಫೆಬ್ರವರಿ 16 ರವರೆಗೆ) ಕಾಲಾವಕಾಶ ನೀಡಿದೆ.

ಬುಧವಾರದ ಪ್ರತಿಭಟನೆಯ ಸಂದರ್ಭದಲ್ಲಿ, ಉದ್ಯೋಗ ಆಕಾಂಕ್ಷಿಗಳು ನವದೆಹಲಿ-ಕೋಲ್ಕತ್ತಾ ಮುಖ್ಯ ರೈಲು ಹಳಿಗಳನ್ನು ತಡೆದಿದ್ದು, ಆಂದೋಲನದ ಬಿಸಿಯು ಪೂರ್ವ ಉತ್ತರ ಪ್ರದೇಶದ ಗಡಿ ಪ್ರದೇಶಗಳಿಗೂ ಹರಡಿದೆ. ಗಯಾ, ಜೆಹಾನಾಬಾದ್, ಭಾಗಲ್ಪುರ್, ಸಸಾರಾಮ್, ಸಮಸ್ತಿಪುರ್ ಮತ್ತು ಛಾಪ್ರಾ ಜಿಲ್ಲೆಗಳಲ್ಲಿ ರೈಲ್ವೆ ಆಸ್ತಿಗಳಿಗೆ ಹಾನಿಮಾಡಿದ್ದು, ಪ್ರತಿಭಟನಾಕಾರರು ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಬಿಹಾರ ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ; ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ನೇಮಕಾತಿ ಪರೀಕ್ಷೆಗಳನ್ನು ರದ್ದುಗೊಳಿಸಿದ ರೈಲ್ವೇ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...