Homeಅಂತರಾಷ್ಟ್ರೀಯಶೇಖ್‌ ಹಸೀನಾ ಪಕ್ಷದ ಕಾರ್ಯಕರ್ತರನ್ನು ಬಂಧಿಸಿದ ಬಾಂಗ್ಲಾದೇಶ ಸರ್ಕಾರ

ಶೇಖ್‌ ಹಸೀನಾ ಪಕ್ಷದ ಕಾರ್ಯಕರ್ತರನ್ನು ಬಂಧಿಸಿದ ಬಾಂಗ್ಲಾದೇಶ ಸರ್ಕಾರ

- Advertisement -
- Advertisement -

ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರದ ವಿರುದ್ಧ ಢಾಕಾದಲ್ಲಿ ಯೋಜಿಸಲಾಗಿದ್ದ ಪ್ರತಿಭಟನೆಗೆ ಮುನ್ನ ಬಾಂಗ್ಲಾದೇಶ ಸೇನೆಯು ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ನೂರಾರು ಕಾರ್ಯಕರ್ತರು ಮತ್ತು ಬೆಂಬಲಿಗರನ್ನು ಬಂಧಿಸಿದೆ. ಭಾನುವಾರ ಮಧ್ಯಾಹ್ನ 3 ಗಂಟೆಗೆ ನಿಗದಿಯಾಗಿದ್ದ ಪ್ರತಿಭಟನೆಗೆ ಮುಂಚಿತವಾಗಿ ಢಾಕಾ ಕೋಟೆಯಾಗಿ ಮಾರ್ಪಟ್ಟಿದೆ ಎಂದು ವರದಿಗಳು ಹೇಳಿವೆ.

ಅವಾಮಿ ಲೀಗ್‌ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಲಾಗಿದ್ದು, ಬಾರ್ಡರ್ ಗಾರ್ಡ್ ಬಾಂಗ್ಲಾದೇಶ (ಬಿಜಿಬಿ)ದ 191 ಪ್ಲಟೂನ್‌ಗಳನ್ನು ನಗರ ಮತ್ತು ಇತರ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ ಎಂದು ವರದಿಯಾಗಿದೆ. ಶೇಖ್‌ ಹಸೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅವಾಮಿ ಲೀಗ್ ನಡೆಸಲು ಉದ್ದೇಶಿಸಿದ್ದ ಪ್ರಮುಖ ಶಕ್ತಿ ಪ್ರದರ್ಶನದಲ್ಲಿ, ಕಾರ್ಯಕರ್ತರು, ಬೆಂಬಲಿಗರು ಮತ್ತು ಭೂಗತ ನಾಯಕರು ಢಾಕಾದ ಗುಲಿಸ್ತಾನ್, ಝೀರೋ ಪಾಯಿಂಟ್ ಮತ್ತು ನೂರ್ ಹೊಸೈನ್ ಸ್ಕ್ವೇರ್ ಪ್ರದೇಶಗಳಲ್ಲಿ ಜಮಾಯಿಸುವ ನಿರೀಕ್ಷೆಯಿತ್ತು. ಈ ಪ್ರತಿಭಟನೆಯಲ್ಲಿ ತಮ್ಮ ನಾಯಕರ ವಿರುದ್ಧ ನಡೆಸುತ್ತಿರುವ ಸುಳ್ಳು ಪ್ರಚಾರದ ವಿರುದ್ಧ, ಪಕ್ಷದ ವಿದ್ಯಾರ್ಥಿ ವಿಭಾಗವಾದ ಛಾತ್ರ ಲೀಗ್ ಅನ್ನು ನಿಷೇಧಿಸುವುದರ ವಿರುದ್ಧ ಮತ್ತು ಅವಾಮಿ ಲೀಗ್ ಕಾರ್ಯಕರ್ತರ ಮೇಲೆ ನಡೆಸುತ್ತಿರುವ ಕಿರುಕುಳದ ವಿರುದ್ಧ ಪ್ರತಿಭಟಿಸುವ ಬಗ್ಗೆ ಪಕ್ಷವು ಯೋಜಿಸಿತ್ತು.

ಖಲೀದಾ ಜಿಯಾ ಅವರ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ), ಜಮಾತ್-ಎ-ಇಸ್ಲಾಮಿ ಮತ್ತು ಇತರ ಗುಂಪುಗಳ ಪ್ರತಿಭಟನೆಗಳ ನಂತರ ಈ ವರ್ಷದ ಆಗಸ್ಟ್ 5 ರಂದು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ್ದರು. ಇದರ ನಂತರ ದೇಶದ ನೇತೃತ್ವವನ್ನು ನೋಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಮುಹಮ್ಮದ್ ಯೂನಸ್ ಅವರು ವಹಿಸಿಕೊಂಡಿದ್ದಾರೆ. ಈ ವೇಳೆ ಶೇಖ್ ಹಸೀನಾ ಅವರ ಪಕ್ಷದ ಮೇಲೆ ಭಾರಿ ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಅವಾಮಿ ಲೀಗ್‌ನ ಯಾವುದೇ ಸಭೆ ಅಥವಾ ಪ್ರತಿಭಟನೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಬಿಎನ್‌ಪಿ ಮತ್ತು ಜಮಾತ್ ಘೋಷಿಸಿವೆ. ಅವಾಮಿ ಲೀಗ್‌ನ ಪ್ರಧಾನ ಕಛೇರಿಯಾದ ಗುಲಿಸ್ತಾನ್‌ನಂತಹ ಪ್ರದೇಶಗಳು ಮತ್ತು ಇತರ ಸಂಭಾವ್ಯ ಪ್ರತಿಭಟನಾ ಸ್ಥಳಗಳನ್ನು ಜಮಾತ್-ಎ-ಇಸ್ಲಾಮಿ ಮತ್ತು BNP ಕಾರ್ಯಕರ್ತರು ಅವಾಮಿ ಲೀಗ್ ಬೆಂಬಲಿಗರು ಸೇರುವುದನ್ನು ತಡೆಯಲು ಆಕ್ರಮಿಸಿಕೊಂಡಿದ್ದಾರೆ.

ಪ್ರತಿಭಟನೆಗೆ ಅನುಮತಿ ನಿರಾಕರಿಸಿರುವ ಮುಹಮ್ಮದ್ ಯೂನಸ್ ಆಡಳಿತವು ಅವಾಮಿ ಲೀಗ್ ಪಕ್ಷವನ್ನು “ಫ್ಯಾಸಿಸ್ಟ್ ಪಕ್ಷ” ಎಂದು ಉಲ್ಲೇಖಿಸಿದೆ. ಜೊತೆಗೆ ಯಾವುದೇ “ಹಿಂಸಾಚಾರವನ್ನು ಪ್ರಚೋದಿಸುವ ಪ್ರಯತ್ನಗಳನ್ನು” ಸಹಿಸುವುದಿಲ್ಲ ಎಂದು ಹೇಳಿದೆ.

“ಅವಾಮಿ ಲೀಗ್ ಪಕ್ಷವೂ ಪ್ರಸ್ತುತ ಫ್ಯಾಸಿಸ್ಟ್ ರೂಪದಲ್ಲಿ ಇರುವ ಪಕ್ಷವಾಗಿದೆ. ಈ ಫ್ಯಾಸಿಸ್ಟ್ ಪಕ್ಷಕ್ಕೆ ಬಾಂಗ್ಲಾದೇಶದಲ್ಲಿ ಪ್ರತಿಭಟನೆ ನಡೆಸಲು ಅವಕಾಶವಿಲ್ಲ. ಮಧ್ಯಂತರ ಸರ್ಕಾರವು ದೇಶದಲ್ಲಿ ಹಿಂಸಾಚಾರ ಅಥವಾ ಕಾನೂನು ಸುವ್ಯವಸ್ಥೆಯನ್ನು ಒಡೆಯುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ” ಎಂದು ಯೂನಸ್ ಅವರ ಪತ್ರಿಕಾ ಕಾರ್ಯದರ್ಶಿ ಶಫೀಕುಲ್ ಆಲಂ ಶನಿವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರ್ಯಾಲಿಗಳು, ಸಭೆಗಳು ಅಥವಾ ಮೆರವಣಿಗೆಗಳನ್ನು ನಡೆಸಲು ಪ್ರಯತ್ನಿಸುವ ಜನರು “ಕಾನೂನು ಜಾರಿಗೊಳಿಸುವ ಏಜೆನ್ಸಿಗಳ ಸಂಪೂರ್ಣವಾಗಿ ಎದುರಿಸುತ್ತಾರೆ” ಎಂದು ಆಲಂ ಹೇಳಿದ್ದಾರೆ. ಏತನ್ಮಧ್ಯೆ, ತಮ್ಮ ಪ್ರತಿಭಟನೆಯು ಬಾಂಗ್ಲಾದೇಶದ ಜನರ ಹಕ್ಕುಗಳಿಗಾಗಿ ಮತ್ತು ಮೂಲಭೂತವಾದಿ ಶಕ್ತಿಗಳ ಉದಯದ ವಿರುದ್ಧವಾಗಿದೆ ಎಂದು ಅವಾಮಿ ಲೀಗ್ ಹೇಳಿದೆ.

“ನಮ್ಮ ಪ್ರತಿಭಟನೆಯು ದೇಶದ ಜನರ ಹಕ್ಕುಗಳನ್ನು ಕಸಿದುಕೊಳ್ಳುವುದರ ವಿರುದ್ಧ; ಮೂಲಭೂತವಾದಿ ಶಕ್ತಿಗಳ ಉದಯದ ವಿರುದ್ಧ; ಸಾಮಾನ್ಯ ಜನರ ಜೀವನವನ್ನು ಅಡ್ಡಿಪಡಿಸುವ ಪಿತೂರಿಯ ವಿರುದ್ಧವಾಗಿದೆ. ಪ್ರಸ್ತುತ ಆಡಳಿತದ ದುರಾಡಳಿತದ ವಿರುದ್ಧದ ಪ್ರತಿಭಟನೆಯಲ್ಲಿ ಅವಾಮಿ ಲೀಗ್ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಸೇರಲು ನಾವು ನಿಮ್ಮನ್ನು ಒತ್ತಾಯಿಸುತ್ತೇವೆ” ಎಂದು ಪಕ್ಷವು ಹೇಳಿದೆ.

ಈ ನಡುವೆ ಹಲವಾರು ರಾಜಕೀಯ ಬಣಗಳು ಅವಾಮಿ ಲೀಗ್ ಅನ್ನು ನಿಷೇಧಿಸುವಂತೆ ಕರೆ ನೀಡಿವೆ. ಆದಾಗ್ಯೂ, ಈ ನಿರ್ಧಾರವು ರಾಜಕೀಯ ಪಕ್ಷಗಳ ಮೇಲೆ ಬಿಡಲಾಗಿದೆ ಎಂದು ಪ್ರಧಾನಿ ಯೂನಸ್ ಹೇಳಿದ್ದಾರೆ. ಮಧ್ಯಂತರ ಸರ್ಕಾರದ ಕೆಲವು ಮಂತ್ರಿಗಳು ಕೂಡಾ ಈ ನಿಷೇಧವನ್ನು ವಿರೋಧಿಸಿದ್ದು, ರಾಜಕೀಯ ಒಳಗೊಳ್ಳುವಿಕೆಯ ಮಹತ್ವವನ್ನು ಒತ್ತಿಹೇಳಿದ್ದಾರೆ. ದೇಶದ ಪ್ರಮುಖ ಪಕ್ಷವಾದ BNP ಕೂಡ ಯಾವುದೇ ರಾಜಕೀಯ ಪಕ್ಷದ ನಿಷೇಧವನ್ನು ವಿರೋಧಿಸಿದೆ.

ಇದನ್ನೂ ಓದಿ: ಮಹಾ ವಿಕಾಸ್ ಅಘಾಡಿ ಪ್ರಣಾಳಿಕೆ; ಮಹಿಳೆಯರಿಗೆ ₹3 ಸಾವಿರ, ಜಾತಿ ಗಣತಿ ಭರವಸೆ

ಮಹಾ ವಿಕಾಸ್ ಅಘಾಡಿ ಪ್ರಣಾಳಿಕೆ; ಮಹಿಳೆಯರಿಗೆ ₹3 ಸಾವಿರ, ಜಾತಿ ಗಣತಿ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...