Homeಅಂತರಾಷ್ಟ್ರೀಯಶೇಖ್‌ ಹಸೀನಾ ಪಕ್ಷದ ಕಾರ್ಯಕರ್ತರನ್ನು ಬಂಧಿಸಿದ ಬಾಂಗ್ಲಾದೇಶ ಸರ್ಕಾರ

ಶೇಖ್‌ ಹಸೀನಾ ಪಕ್ಷದ ಕಾರ್ಯಕರ್ತರನ್ನು ಬಂಧಿಸಿದ ಬಾಂಗ್ಲಾದೇಶ ಸರ್ಕಾರ

- Advertisement -
- Advertisement -

ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರದ ವಿರುದ್ಧ ಢಾಕಾದಲ್ಲಿ ಯೋಜಿಸಲಾಗಿದ್ದ ಪ್ರತಿಭಟನೆಗೆ ಮುನ್ನ ಬಾಂಗ್ಲಾದೇಶ ಸೇನೆಯು ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ನೂರಾರು ಕಾರ್ಯಕರ್ತರು ಮತ್ತು ಬೆಂಬಲಿಗರನ್ನು ಬಂಧಿಸಿದೆ. ಭಾನುವಾರ ಮಧ್ಯಾಹ್ನ 3 ಗಂಟೆಗೆ ನಿಗದಿಯಾಗಿದ್ದ ಪ್ರತಿಭಟನೆಗೆ ಮುಂಚಿತವಾಗಿ ಢಾಕಾ ಕೋಟೆಯಾಗಿ ಮಾರ್ಪಟ್ಟಿದೆ ಎಂದು ವರದಿಗಳು ಹೇಳಿವೆ.

ಅವಾಮಿ ಲೀಗ್‌ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಲಾಗಿದ್ದು, ಬಾರ್ಡರ್ ಗಾರ್ಡ್ ಬಾಂಗ್ಲಾದೇಶ (ಬಿಜಿಬಿ)ದ 191 ಪ್ಲಟೂನ್‌ಗಳನ್ನು ನಗರ ಮತ್ತು ಇತರ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ ಎಂದು ವರದಿಯಾಗಿದೆ. ಶೇಖ್‌ ಹಸೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅವಾಮಿ ಲೀಗ್ ನಡೆಸಲು ಉದ್ದೇಶಿಸಿದ್ದ ಪ್ರಮುಖ ಶಕ್ತಿ ಪ್ರದರ್ಶನದಲ್ಲಿ, ಕಾರ್ಯಕರ್ತರು, ಬೆಂಬಲಿಗರು ಮತ್ತು ಭೂಗತ ನಾಯಕರು ಢಾಕಾದ ಗುಲಿಸ್ತಾನ್, ಝೀರೋ ಪಾಯಿಂಟ್ ಮತ್ತು ನೂರ್ ಹೊಸೈನ್ ಸ್ಕ್ವೇರ್ ಪ್ರದೇಶಗಳಲ್ಲಿ ಜಮಾಯಿಸುವ ನಿರೀಕ್ಷೆಯಿತ್ತು. ಈ ಪ್ರತಿಭಟನೆಯಲ್ಲಿ ತಮ್ಮ ನಾಯಕರ ವಿರುದ್ಧ ನಡೆಸುತ್ತಿರುವ ಸುಳ್ಳು ಪ್ರಚಾರದ ವಿರುದ್ಧ, ಪಕ್ಷದ ವಿದ್ಯಾರ್ಥಿ ವಿಭಾಗವಾದ ಛಾತ್ರ ಲೀಗ್ ಅನ್ನು ನಿಷೇಧಿಸುವುದರ ವಿರುದ್ಧ ಮತ್ತು ಅವಾಮಿ ಲೀಗ್ ಕಾರ್ಯಕರ್ತರ ಮೇಲೆ ನಡೆಸುತ್ತಿರುವ ಕಿರುಕುಳದ ವಿರುದ್ಧ ಪ್ರತಿಭಟಿಸುವ ಬಗ್ಗೆ ಪಕ್ಷವು ಯೋಜಿಸಿತ್ತು.

ಖಲೀದಾ ಜಿಯಾ ಅವರ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ), ಜಮಾತ್-ಎ-ಇಸ್ಲಾಮಿ ಮತ್ತು ಇತರ ಗುಂಪುಗಳ ಪ್ರತಿಭಟನೆಗಳ ನಂತರ ಈ ವರ್ಷದ ಆಗಸ್ಟ್ 5 ರಂದು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ್ದರು. ಇದರ ನಂತರ ದೇಶದ ನೇತೃತ್ವವನ್ನು ನೋಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಮುಹಮ್ಮದ್ ಯೂನಸ್ ಅವರು ವಹಿಸಿಕೊಂಡಿದ್ದಾರೆ. ಈ ವೇಳೆ ಶೇಖ್ ಹಸೀನಾ ಅವರ ಪಕ್ಷದ ಮೇಲೆ ಭಾರಿ ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಅವಾಮಿ ಲೀಗ್‌ನ ಯಾವುದೇ ಸಭೆ ಅಥವಾ ಪ್ರತಿಭಟನೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಬಿಎನ್‌ಪಿ ಮತ್ತು ಜಮಾತ್ ಘೋಷಿಸಿವೆ. ಅವಾಮಿ ಲೀಗ್‌ನ ಪ್ರಧಾನ ಕಛೇರಿಯಾದ ಗುಲಿಸ್ತಾನ್‌ನಂತಹ ಪ್ರದೇಶಗಳು ಮತ್ತು ಇತರ ಸಂಭಾವ್ಯ ಪ್ರತಿಭಟನಾ ಸ್ಥಳಗಳನ್ನು ಜಮಾತ್-ಎ-ಇಸ್ಲಾಮಿ ಮತ್ತು BNP ಕಾರ್ಯಕರ್ತರು ಅವಾಮಿ ಲೀಗ್ ಬೆಂಬಲಿಗರು ಸೇರುವುದನ್ನು ತಡೆಯಲು ಆಕ್ರಮಿಸಿಕೊಂಡಿದ್ದಾರೆ.

ಪ್ರತಿಭಟನೆಗೆ ಅನುಮತಿ ನಿರಾಕರಿಸಿರುವ ಮುಹಮ್ಮದ್ ಯೂನಸ್ ಆಡಳಿತವು ಅವಾಮಿ ಲೀಗ್ ಪಕ್ಷವನ್ನು “ಫ್ಯಾಸಿಸ್ಟ್ ಪಕ್ಷ” ಎಂದು ಉಲ್ಲೇಖಿಸಿದೆ. ಜೊತೆಗೆ ಯಾವುದೇ “ಹಿಂಸಾಚಾರವನ್ನು ಪ್ರಚೋದಿಸುವ ಪ್ರಯತ್ನಗಳನ್ನು” ಸಹಿಸುವುದಿಲ್ಲ ಎಂದು ಹೇಳಿದೆ.

“ಅವಾಮಿ ಲೀಗ್ ಪಕ್ಷವೂ ಪ್ರಸ್ತುತ ಫ್ಯಾಸಿಸ್ಟ್ ರೂಪದಲ್ಲಿ ಇರುವ ಪಕ್ಷವಾಗಿದೆ. ಈ ಫ್ಯಾಸಿಸ್ಟ್ ಪಕ್ಷಕ್ಕೆ ಬಾಂಗ್ಲಾದೇಶದಲ್ಲಿ ಪ್ರತಿಭಟನೆ ನಡೆಸಲು ಅವಕಾಶವಿಲ್ಲ. ಮಧ್ಯಂತರ ಸರ್ಕಾರವು ದೇಶದಲ್ಲಿ ಹಿಂಸಾಚಾರ ಅಥವಾ ಕಾನೂನು ಸುವ್ಯವಸ್ಥೆಯನ್ನು ಒಡೆಯುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ” ಎಂದು ಯೂನಸ್ ಅವರ ಪತ್ರಿಕಾ ಕಾರ್ಯದರ್ಶಿ ಶಫೀಕುಲ್ ಆಲಂ ಶನಿವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರ್ಯಾಲಿಗಳು, ಸಭೆಗಳು ಅಥವಾ ಮೆರವಣಿಗೆಗಳನ್ನು ನಡೆಸಲು ಪ್ರಯತ್ನಿಸುವ ಜನರು “ಕಾನೂನು ಜಾರಿಗೊಳಿಸುವ ಏಜೆನ್ಸಿಗಳ ಸಂಪೂರ್ಣವಾಗಿ ಎದುರಿಸುತ್ತಾರೆ” ಎಂದು ಆಲಂ ಹೇಳಿದ್ದಾರೆ. ಏತನ್ಮಧ್ಯೆ, ತಮ್ಮ ಪ್ರತಿಭಟನೆಯು ಬಾಂಗ್ಲಾದೇಶದ ಜನರ ಹಕ್ಕುಗಳಿಗಾಗಿ ಮತ್ತು ಮೂಲಭೂತವಾದಿ ಶಕ್ತಿಗಳ ಉದಯದ ವಿರುದ್ಧವಾಗಿದೆ ಎಂದು ಅವಾಮಿ ಲೀಗ್ ಹೇಳಿದೆ.

“ನಮ್ಮ ಪ್ರತಿಭಟನೆಯು ದೇಶದ ಜನರ ಹಕ್ಕುಗಳನ್ನು ಕಸಿದುಕೊಳ್ಳುವುದರ ವಿರುದ್ಧ; ಮೂಲಭೂತವಾದಿ ಶಕ್ತಿಗಳ ಉದಯದ ವಿರುದ್ಧ; ಸಾಮಾನ್ಯ ಜನರ ಜೀವನವನ್ನು ಅಡ್ಡಿಪಡಿಸುವ ಪಿತೂರಿಯ ವಿರುದ್ಧವಾಗಿದೆ. ಪ್ರಸ್ತುತ ಆಡಳಿತದ ದುರಾಡಳಿತದ ವಿರುದ್ಧದ ಪ್ರತಿಭಟನೆಯಲ್ಲಿ ಅವಾಮಿ ಲೀಗ್ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಸೇರಲು ನಾವು ನಿಮ್ಮನ್ನು ಒತ್ತಾಯಿಸುತ್ತೇವೆ” ಎಂದು ಪಕ್ಷವು ಹೇಳಿದೆ.

ಈ ನಡುವೆ ಹಲವಾರು ರಾಜಕೀಯ ಬಣಗಳು ಅವಾಮಿ ಲೀಗ್ ಅನ್ನು ನಿಷೇಧಿಸುವಂತೆ ಕರೆ ನೀಡಿವೆ. ಆದಾಗ್ಯೂ, ಈ ನಿರ್ಧಾರವು ರಾಜಕೀಯ ಪಕ್ಷಗಳ ಮೇಲೆ ಬಿಡಲಾಗಿದೆ ಎಂದು ಪ್ರಧಾನಿ ಯೂನಸ್ ಹೇಳಿದ್ದಾರೆ. ಮಧ್ಯಂತರ ಸರ್ಕಾರದ ಕೆಲವು ಮಂತ್ರಿಗಳು ಕೂಡಾ ಈ ನಿಷೇಧವನ್ನು ವಿರೋಧಿಸಿದ್ದು, ರಾಜಕೀಯ ಒಳಗೊಳ್ಳುವಿಕೆಯ ಮಹತ್ವವನ್ನು ಒತ್ತಿಹೇಳಿದ್ದಾರೆ. ದೇಶದ ಪ್ರಮುಖ ಪಕ್ಷವಾದ BNP ಕೂಡ ಯಾವುದೇ ರಾಜಕೀಯ ಪಕ್ಷದ ನಿಷೇಧವನ್ನು ವಿರೋಧಿಸಿದೆ.

ಇದನ್ನೂ ಓದಿ: ಮಹಾ ವಿಕಾಸ್ ಅಘಾಡಿ ಪ್ರಣಾಳಿಕೆ; ಮಹಿಳೆಯರಿಗೆ ₹3 ಸಾವಿರ, ಜಾತಿ ಗಣತಿ ಭರವಸೆ

ಮಹಾ ವಿಕಾಸ್ ಅಘಾಡಿ ಪ್ರಣಾಳಿಕೆ; ಮಹಿಳೆಯರಿಗೆ ₹3 ಸಾವಿರ, ಜಾತಿ ಗಣತಿ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...