Homeಮುಖಪುಟಜೂ.15ರ ವರೆಗೆ ಪ್ರತಿಭಟನೆ ಸ್ಥಗಿತ: ಕ್ರೀಡಾ ಸಚಿವರ ಭೇಟಿ ಬಳಿಕ ಕುಸ್ತಿಪಟುಗಳ ಹೇಳಿಕೆ

ಜೂ.15ರ ವರೆಗೆ ಪ್ರತಿಭಟನೆ ಸ್ಥಗಿತ: ಕ್ರೀಡಾ ಸಚಿವರ ಭೇಟಿ ಬಳಿಕ ಕುಸ್ತಿಪಟುಗಳ ಹೇಳಿಕೆ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳ ಕುರಿತು ಕ್ಷಿಪ್ರ ತನಿಖೆ ನಡೆಸುವುದಾಗಿ ಕ್ರೀಡಾ ಸಚಿವರು ಭರವಸೆ ನೀಡಿದ ನಂತರ ಭಾರತದ ಅಗ್ರ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಸಧ್ಯಕ್ಕೆ ಸ್ಥಗಿತಗೊಳಿಸಿದ್ದಾರೆ.

ಆರೋಪಿತ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳು ಏಪ್ರಿಲ್ ನಿಂದ ದೆಹಲಿಯಲ್ಲಿ ಮೊಕ್ಕಾಂ ಹೂಡಿದ್ದಾರೆ. ಅವರ ಪ್ರತಿಭಟನೆಗೆ ರೈತ ಸಂಘಟನೆಗಳು ಹಾಗೂ ಹಲವು ರಾಜಕೀಯ ನಾಯಕರು ಬೆಂಬಲ ಸೂಚಿಸಿದ್ದಾರೆ.

ಬುಧವಾರ, ಪ್ರತಿಭಟನಾ ನಿರತ ಕುಸ್ತಿಪಟುಗಳು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿಯಾಗಿ ಸುಮಾರು ಆರು ಗಂಟೆಗಳ ಕಾಲ ಮಾತುಕತೆ ನಡೆಸಿದರು. ಜೂನ್ 15ರೊಳಗೆ ಸಿಂಗ್ ವಿರುದ್ಧ ಪೊಲೀಸರು ತನಿಖೆಯನ್ನು ಪೂರ್ಣಗೊಳಿಸುತ್ತಾರೆ ಎಂದು ಠಾಕೂರ್ ಹೇಳಿದರು.

”ಅಲ್ಲಿಯವರೆಗೆ ಯಾವುದೇ ಪ್ರದರ್ಶನಗಳನ್ನು ನಡೆಸುವುದಿಲ್ಲ ಎಂದು ಕುಸ್ತಿಪಟುಗಳು ಭರವಸೆ ನೀಡಿದ್ದಾರೆ” ಎಂದು ಅನುರಾಗ್ ಠಾಕೂರ್ ಹೇಳಿದರು.

”ಜೂನ್ 30ರೊಳಗೆ ಡಬ್ಲ್ಯುಎಫ್‌ಐ ಕಾರ್ಯಕಾರಿ ಸಮಿತಿಗೆ ಚುನಾವಣೆ ನಡೆಸುವುದಾಗಿ ಸರ್ಕಾರ ಭರವಸೆ ನೀಡಿದೆ ಮತ್ತು ಹೊಸ ಪ್ಯಾನೆಲ್‌ನಲ್ಲಿ ಸಿಂಗ್ ಅಥವಾ ಅವರ ಯಾವುದೇ ನಿಕಟ ಸಹವರ್ತಿಗಳು ಪಾತ್ರವನ್ನು ಹೊಂದಿರುವುದಿಲ್ಲ” ಎಂದು ಹೇಳಿದರು.

ಕುಸ್ತಿಪಟುಗಳು ಮೊದಲು ಜನವರಿಯಲ್ಲಿ ಪ್ರತಿಭಟನೆಯನ್ನು ಪ್ರಾರಂಭಿಸಿದರು. ಆಗ ಬ್ರಿಜ್‌ಭೂಷಣ್ ಸಿಂಗ್‌ ಅವರನ್ನು ಆಡಳಿತಾತ್ಮಕ ಅಧಿಕಾರದಿಂದ ಕೆಲವು ವಾರಗಳವರೆಗೆ ಭಾರತದ ಕ್ರೀಡಾ ಸಚಿವಾಲಯವು ದೂರ ಇಟ್ಟಿತು. ಸರ್ಕಾರವು ಅವರ ದೂರುಗಳನ್ನು ತನಿಖೆ ಮಾಡುವುದಾಗಿ ಭರವಸೆ ನೀಡಿದ ನಂತರ ಅದೇ ತಿಂಗಳು ಪ್ರತಿಭಟನೆಯನ್ನು ಹಿಂತೆಗೆದುಕೊಂಡಿತು.

ಇದನ್ನೂ ಓದಿ: ಕುಸ್ತಿಪಟುಗಳ ಪ್ರತಿಭಟನೆ: ಜೂ. 15ರೊಳಗೆ ತನಿಖೆ ಪೂರ್ಣಗೊಳಿಸುವ ಭರವಸೆ ನೀಡಿದ ಕೇಂದ್ರ; ಪ್ರತಿಭಟನೆ ಇನ್ನೂ ಮುಗಿದಿಲ್ಲ ಎಂದ ಸಾಕ್ಷಿ ಮಲಿಕ್

ಸರ್ಕಾರದ ಭರವಸೆ ನಂಬಿ ಕುಸ್ತಿಪಟುಗಳು ಪ್ರತಿಭಟನೆಯಿಂದ ಹಿಂದೆ ಸರಿದರು. ಆದರೆ, ಸರ್ಕಾರ ಬ್ರಿಜ್‌ಭೂಷಣ್ ವಿರುದ್ಧ ಯಾವುದೇ ಕ್ರಮ ತಗೆದುಕೊಳ್ಳಲಿಲ್ಲ. ಹಾಗಾಗಿ ಕುಸ್ತಿಪಟುಗಳು ಏಪ್ರಿಲ್‌ನಲ್ಲಿ ಬ್ರಿಜ್‌ಭೂಷಣ್ ಬಂಧನಕ್ಕೆ ಆಗ್ರಹಿಸಿ ಪುನಃ ಪ್ರತಿಭಟನೆಯನ್ನು ಆರಂಭಿಸಿದರು.

ಆಡಳಿತಾರೂಢ ಬಿಜೆಪಿಯ ಪ್ರಭಾವಿ ಸಂಸದರಾಗಿರುವ ಸಿಂಗ್ ಅವರು ಆರೋಪಗಳನ್ನು ನಿರಾಕರಿಸಿದ್ದಾರೆ ಮತ್ತು ಕುಸ್ತಿಪಟುಗಳ ಪ್ರತಿಭಟನೆಯು “ರಾಜಕೀಯ ಪ್ರೇರಿತ” ಎಂದು ಆರೋಪಿಸಿದ್ದಾರೆ.

ಕಳೆದ ತಿಂಗಳು, ಕುಸ್ತಿಪಟುಗಳು ಸೇರಿದಂತೆ ಅವರನ್ನು ಬೆಂಬಲಿಸುವವರು ಹೊಸ ಸಂಸತ್ ಕಟ್ಟಡದತ್ತ ಮೆರವಣಿಗೆ ಮಾಡಲು ಪ್ರಯತ್ನಿಸಿದಾಗ ಅವರನ್ನು ಬಂಧಿಸಲಾಯಿತು. ಅವರ ವಿರುದ್ಧ ಪೊಲೀಸರು ಗಲಭೆ ಸೇರಿದಂತೆ ಪ್ರಕರಣಗಳನ್ನು ದಾಖಲಿಸಿದ್ದಾರೆ. ಅಷ್ಟೇ ಅಲ್ಲದೇ ಅವರ ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸಿದ್ದಾರೆ.

ದೇಶಕ್ಕೆ ಪದಕ ತಂದುಕೊಟ್ಟ ಕ್ರೀಡಾಪಟುಗಳನ್ನು ರಸ್ತಯೆ ಮಧ್ಯೆ ಎಳೆದಾಡಿದ್ದು, ಬಸ್‌ಗಳಲ್ಲಿ ಎಳೆದುಕೊಂಡು ಹೋಗುವ ದೃಶ್ಯಗಳು ಸಾಕಷ್ಟು ವೈರಲ್ ಆಗಿದ್ದವು. ಅನೇಕ ಕ್ರೀಡಾಪಟುಗಳು ಮತ್ತು ವಿರೋಧ ಪಕ್ಷದ ರಾಜಕಾರಣಿಗಳು ಸರ್ಕಾರವನ್ನು ಟೀಕಿಸಿದ್ದರು.

ಮೇ 30 ರಂದು, ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಗೆ ಎಸೆಯುವುದಾಗಿ ಎಚ್ಚರಿಕೆ ನೀಡಿದರು. ಆಬಂಳಿಕ ರೈತ ಮುಖಂಡರು ಕುಸ್ತರಿಪಟುಗಳನ್ನು ತಡೆದು ಸರ್ಕಾರಕ್ಕೆ ಐದು ದಿನಗಳ ಗಡುವು ನೀಡಿದರು.  ಪ್ರತಿಭಟನಾಕಾರರ ನಿಯೋಗವು ಕಳೆದ ಶನಿವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿತು.

ಕಿರುಕುಳದ ಬಗ್ಗೆ ಮೋದಿಗೆ ಹೇಳಿದ್ದೆ ಎಂದು ಭಾರತೀಯ ಕುಸ್ತಿಪಟು ಹೇಳುತ್ತಾರೆ. ‘#MeToo’ ಪ್ರತಿಭಟನೆಗಾಗಿ ಭಾರತದ ಕುಸ್ತಿಪಟುಗಳು ಒಲಿಂಪಿಕ್ ಕನಸನ್ನು ಪಣಕ್ಕಿಟ್ಟಿದ್ದಾರೆ.

ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಮತ್ತು ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ (ಯುಡಬ್ಲ್ಯೂಡಬ್ಲ್ಯು) – ಕ್ರೀಡೆಯ ಅಂತರರಾಷ್ಟ್ರೀಯ ಆಡಳಿತ ಮಂಡಳಿ – ಕುಸ್ತಿಪಟುಗಳನ್ನು ನಡೆಸಿಕೊಂಡ ರೀತಿಯನ್ನು ಖಂಡಿಸಿ ಹೇಳಿಕೆಗಳನ್ನು ನೀಡಿತು. ಅವರು ಸಿಂಗ್ ವಿರುದ್ಧದ ತನಿಖೆ ನಡೆಸದಿರುವುದಕ್ಕೆ ಟೀಕಿಸಿದರು.

ಇಲ್ಲಿಯವರೆಗೆ, ಪೊಲೀಸರು ಸಿಂಗ್ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ, ಇದರಲ್ಲಿ ಒಂದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೊ) ಅಡಿಯಲ್ಲಿ ದಾಖಲಾಗಿದೆ. ಪೊಲೀಸರು ಬ್ರಿಜ್‌ಭೂಷಣ್ ಸಿಂಗ್‌ ಅವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ ಆದರೆ ಇನ್ನೂ ಬಂಧಿಸಿಲ್ಲ.

ಬುಧವಾರ, ಠಾಕೂರ್ ಅವರನ್ನು ಭೇಟಿ ಮಾಡಿದ ನಿಯೋಗದ ಭಾಗವಾಗಿದ್ದ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪೂನಿಯಾ, ಮುಂದಿನ ವಾರದೊಳಗೆ ಸಿಂಗ್ ವಿರುದ್ಧ ಪೊಲೀಸ್ ತನಿಖೆಯನ್ನು ಪೂರ್ಣಗೊಳಿಸುವುದಾಗಿ ಸರ್ಕಾರ ಅವರಿಗೆ ಭರವಸೆ ನೀಡಿದೆ ಎಂದು ಹೇಳಿದರು.

“ಆದರೆ ಜೂನ್ 15 ರೊಳಗೆ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ, ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ” ಎಂದು ಬಜರಂಗ್ ಪೂನಿಯಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...