Homeಮುಖಪುಟಜೂ.15ರ ವರೆಗೆ ಪ್ರತಿಭಟನೆ ಸ್ಥಗಿತ: ಕ್ರೀಡಾ ಸಚಿವರ ಭೇಟಿ ಬಳಿಕ ಕುಸ್ತಿಪಟುಗಳ ಹೇಳಿಕೆ

ಜೂ.15ರ ವರೆಗೆ ಪ್ರತಿಭಟನೆ ಸ್ಥಗಿತ: ಕ್ರೀಡಾ ಸಚಿವರ ಭೇಟಿ ಬಳಿಕ ಕುಸ್ತಿಪಟುಗಳ ಹೇಳಿಕೆ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳ ಕುರಿತು ಕ್ಷಿಪ್ರ ತನಿಖೆ ನಡೆಸುವುದಾಗಿ ಕ್ರೀಡಾ ಸಚಿವರು ಭರವಸೆ ನೀಡಿದ ನಂತರ ಭಾರತದ ಅಗ್ರ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಸಧ್ಯಕ್ಕೆ ಸ್ಥಗಿತಗೊಳಿಸಿದ್ದಾರೆ.

ಆರೋಪಿತ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳು ಏಪ್ರಿಲ್ ನಿಂದ ದೆಹಲಿಯಲ್ಲಿ ಮೊಕ್ಕಾಂ ಹೂಡಿದ್ದಾರೆ. ಅವರ ಪ್ರತಿಭಟನೆಗೆ ರೈತ ಸಂಘಟನೆಗಳು ಹಾಗೂ ಹಲವು ರಾಜಕೀಯ ನಾಯಕರು ಬೆಂಬಲ ಸೂಚಿಸಿದ್ದಾರೆ.

ಬುಧವಾರ, ಪ್ರತಿಭಟನಾ ನಿರತ ಕುಸ್ತಿಪಟುಗಳು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿಯಾಗಿ ಸುಮಾರು ಆರು ಗಂಟೆಗಳ ಕಾಲ ಮಾತುಕತೆ ನಡೆಸಿದರು. ಜೂನ್ 15ರೊಳಗೆ ಸಿಂಗ್ ವಿರುದ್ಧ ಪೊಲೀಸರು ತನಿಖೆಯನ್ನು ಪೂರ್ಣಗೊಳಿಸುತ್ತಾರೆ ಎಂದು ಠಾಕೂರ್ ಹೇಳಿದರು.

”ಅಲ್ಲಿಯವರೆಗೆ ಯಾವುದೇ ಪ್ರದರ್ಶನಗಳನ್ನು ನಡೆಸುವುದಿಲ್ಲ ಎಂದು ಕುಸ್ತಿಪಟುಗಳು ಭರವಸೆ ನೀಡಿದ್ದಾರೆ” ಎಂದು ಅನುರಾಗ್ ಠಾಕೂರ್ ಹೇಳಿದರು.

”ಜೂನ್ 30ರೊಳಗೆ ಡಬ್ಲ್ಯುಎಫ್‌ಐ ಕಾರ್ಯಕಾರಿ ಸಮಿತಿಗೆ ಚುನಾವಣೆ ನಡೆಸುವುದಾಗಿ ಸರ್ಕಾರ ಭರವಸೆ ನೀಡಿದೆ ಮತ್ತು ಹೊಸ ಪ್ಯಾನೆಲ್‌ನಲ್ಲಿ ಸಿಂಗ್ ಅಥವಾ ಅವರ ಯಾವುದೇ ನಿಕಟ ಸಹವರ್ತಿಗಳು ಪಾತ್ರವನ್ನು ಹೊಂದಿರುವುದಿಲ್ಲ” ಎಂದು ಹೇಳಿದರು.

ಕುಸ್ತಿಪಟುಗಳು ಮೊದಲು ಜನವರಿಯಲ್ಲಿ ಪ್ರತಿಭಟನೆಯನ್ನು ಪ್ರಾರಂಭಿಸಿದರು. ಆಗ ಬ್ರಿಜ್‌ಭೂಷಣ್ ಸಿಂಗ್‌ ಅವರನ್ನು ಆಡಳಿತಾತ್ಮಕ ಅಧಿಕಾರದಿಂದ ಕೆಲವು ವಾರಗಳವರೆಗೆ ಭಾರತದ ಕ್ರೀಡಾ ಸಚಿವಾಲಯವು ದೂರ ಇಟ್ಟಿತು. ಸರ್ಕಾರವು ಅವರ ದೂರುಗಳನ್ನು ತನಿಖೆ ಮಾಡುವುದಾಗಿ ಭರವಸೆ ನೀಡಿದ ನಂತರ ಅದೇ ತಿಂಗಳು ಪ್ರತಿಭಟನೆಯನ್ನು ಹಿಂತೆಗೆದುಕೊಂಡಿತು.

ಇದನ್ನೂ ಓದಿ: ಕುಸ್ತಿಪಟುಗಳ ಪ್ರತಿಭಟನೆ: ಜೂ. 15ರೊಳಗೆ ತನಿಖೆ ಪೂರ್ಣಗೊಳಿಸುವ ಭರವಸೆ ನೀಡಿದ ಕೇಂದ್ರ; ಪ್ರತಿಭಟನೆ ಇನ್ನೂ ಮುಗಿದಿಲ್ಲ ಎಂದ ಸಾಕ್ಷಿ ಮಲಿಕ್

ಸರ್ಕಾರದ ಭರವಸೆ ನಂಬಿ ಕುಸ್ತಿಪಟುಗಳು ಪ್ರತಿಭಟನೆಯಿಂದ ಹಿಂದೆ ಸರಿದರು. ಆದರೆ, ಸರ್ಕಾರ ಬ್ರಿಜ್‌ಭೂಷಣ್ ವಿರುದ್ಧ ಯಾವುದೇ ಕ್ರಮ ತಗೆದುಕೊಳ್ಳಲಿಲ್ಲ. ಹಾಗಾಗಿ ಕುಸ್ತಿಪಟುಗಳು ಏಪ್ರಿಲ್‌ನಲ್ಲಿ ಬ್ರಿಜ್‌ಭೂಷಣ್ ಬಂಧನಕ್ಕೆ ಆಗ್ರಹಿಸಿ ಪುನಃ ಪ್ರತಿಭಟನೆಯನ್ನು ಆರಂಭಿಸಿದರು.

ಆಡಳಿತಾರೂಢ ಬಿಜೆಪಿಯ ಪ್ರಭಾವಿ ಸಂಸದರಾಗಿರುವ ಸಿಂಗ್ ಅವರು ಆರೋಪಗಳನ್ನು ನಿರಾಕರಿಸಿದ್ದಾರೆ ಮತ್ತು ಕುಸ್ತಿಪಟುಗಳ ಪ್ರತಿಭಟನೆಯು “ರಾಜಕೀಯ ಪ್ರೇರಿತ” ಎಂದು ಆರೋಪಿಸಿದ್ದಾರೆ.

ಕಳೆದ ತಿಂಗಳು, ಕುಸ್ತಿಪಟುಗಳು ಸೇರಿದಂತೆ ಅವರನ್ನು ಬೆಂಬಲಿಸುವವರು ಹೊಸ ಸಂಸತ್ ಕಟ್ಟಡದತ್ತ ಮೆರವಣಿಗೆ ಮಾಡಲು ಪ್ರಯತ್ನಿಸಿದಾಗ ಅವರನ್ನು ಬಂಧಿಸಲಾಯಿತು. ಅವರ ವಿರುದ್ಧ ಪೊಲೀಸರು ಗಲಭೆ ಸೇರಿದಂತೆ ಪ್ರಕರಣಗಳನ್ನು ದಾಖಲಿಸಿದ್ದಾರೆ. ಅಷ್ಟೇ ಅಲ್ಲದೇ ಅವರ ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸಿದ್ದಾರೆ.

ದೇಶಕ್ಕೆ ಪದಕ ತಂದುಕೊಟ್ಟ ಕ್ರೀಡಾಪಟುಗಳನ್ನು ರಸ್ತಯೆ ಮಧ್ಯೆ ಎಳೆದಾಡಿದ್ದು, ಬಸ್‌ಗಳಲ್ಲಿ ಎಳೆದುಕೊಂಡು ಹೋಗುವ ದೃಶ್ಯಗಳು ಸಾಕಷ್ಟು ವೈರಲ್ ಆಗಿದ್ದವು. ಅನೇಕ ಕ್ರೀಡಾಪಟುಗಳು ಮತ್ತು ವಿರೋಧ ಪಕ್ಷದ ರಾಜಕಾರಣಿಗಳು ಸರ್ಕಾರವನ್ನು ಟೀಕಿಸಿದ್ದರು.

ಮೇ 30 ರಂದು, ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಗೆ ಎಸೆಯುವುದಾಗಿ ಎಚ್ಚರಿಕೆ ನೀಡಿದರು. ಆಬಂಳಿಕ ರೈತ ಮುಖಂಡರು ಕುಸ್ತರಿಪಟುಗಳನ್ನು ತಡೆದು ಸರ್ಕಾರಕ್ಕೆ ಐದು ದಿನಗಳ ಗಡುವು ನೀಡಿದರು.  ಪ್ರತಿಭಟನಾಕಾರರ ನಿಯೋಗವು ಕಳೆದ ಶನಿವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿತು.

ಕಿರುಕುಳದ ಬಗ್ಗೆ ಮೋದಿಗೆ ಹೇಳಿದ್ದೆ ಎಂದು ಭಾರತೀಯ ಕುಸ್ತಿಪಟು ಹೇಳುತ್ತಾರೆ. ‘#MeToo’ ಪ್ರತಿಭಟನೆಗಾಗಿ ಭಾರತದ ಕುಸ್ತಿಪಟುಗಳು ಒಲಿಂಪಿಕ್ ಕನಸನ್ನು ಪಣಕ್ಕಿಟ್ಟಿದ್ದಾರೆ.

ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಮತ್ತು ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ (ಯುಡಬ್ಲ್ಯೂಡಬ್ಲ್ಯು) – ಕ್ರೀಡೆಯ ಅಂತರರಾಷ್ಟ್ರೀಯ ಆಡಳಿತ ಮಂಡಳಿ – ಕುಸ್ತಿಪಟುಗಳನ್ನು ನಡೆಸಿಕೊಂಡ ರೀತಿಯನ್ನು ಖಂಡಿಸಿ ಹೇಳಿಕೆಗಳನ್ನು ನೀಡಿತು. ಅವರು ಸಿಂಗ್ ವಿರುದ್ಧದ ತನಿಖೆ ನಡೆಸದಿರುವುದಕ್ಕೆ ಟೀಕಿಸಿದರು.

ಇಲ್ಲಿಯವರೆಗೆ, ಪೊಲೀಸರು ಸಿಂಗ್ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ, ಇದರಲ್ಲಿ ಒಂದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೊ) ಅಡಿಯಲ್ಲಿ ದಾಖಲಾಗಿದೆ. ಪೊಲೀಸರು ಬ್ರಿಜ್‌ಭೂಷಣ್ ಸಿಂಗ್‌ ಅವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ ಆದರೆ ಇನ್ನೂ ಬಂಧಿಸಿಲ್ಲ.

ಬುಧವಾರ, ಠಾಕೂರ್ ಅವರನ್ನು ಭೇಟಿ ಮಾಡಿದ ನಿಯೋಗದ ಭಾಗವಾಗಿದ್ದ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪೂನಿಯಾ, ಮುಂದಿನ ವಾರದೊಳಗೆ ಸಿಂಗ್ ವಿರುದ್ಧ ಪೊಲೀಸ್ ತನಿಖೆಯನ್ನು ಪೂರ್ಣಗೊಳಿಸುವುದಾಗಿ ಸರ್ಕಾರ ಅವರಿಗೆ ಭರವಸೆ ನೀಡಿದೆ ಎಂದು ಹೇಳಿದರು.

“ಆದರೆ ಜೂನ್ 15 ರೊಳಗೆ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ, ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ” ಎಂದು ಬಜರಂಗ್ ಪೂನಿಯಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...