Homeಮುಖಪುಟಮಣಿಪುರದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಇಬ್ಬರ ಸಾವು, 25 ಮಂದಿಗೆ ಗಾಯ

ಮಣಿಪುರದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಇಬ್ಬರ ಸಾವು, 25 ಮಂದಿಗೆ ಗಾಯ

- Advertisement -
- Advertisement -

ಮಣಿಪುರದ ಕುಕಿ-ಜೋ ಬುಡಕಟ್ಟು ಪ್ರಾಬಲ್ಯದ ಚುರಚಂದ್‌ಪುರ ಜಿಲ್ಲೆಯ ‘ಗ್ರಾಮ ರಕ್ಷಣಾ ಸ್ವಯಂಸೇವಕರ’ ಬಂಕರ್‌ನಲ್ಲಿ ಸೆಲ್ಫಿ ತೆಗೆದುಕೊಂಡ ಹೆಡ್‌ಕಾನ್ಸ್‌ಟೇಬಲ್‌ನ ಅಮಾನತು ವಿರೋಧಿಸಿ ನೂರಾರು ಜನರು ಇಂದು ಭದ್ರತಾ ಪಡೆಗಳೊಂದಿಗೆ ನಡೆಸಿದ ಘರ್ಷಣೆಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಇದೆ ಎಂದು ಪೊಲೀಸರು ತಿಳಿಸಿದ್ದು, ಬೆಟ್ಟದ ಮೇಲಿರುವ ಗ್ರಾಮ ರಕ್ಷಣಾ ಸ್ವಯಂಸೇವಕರ ಬಂಕರ್‌ನಲ್ಲಿ ಸೆಲ್ಫಿ ತೆಗೆದುಕೊಂಡ ಹೆಡ್ ಕಾನ್ಸ್‌ಟೇಬಲ್ ಸಿಯಾಮ್ಲಾಲ್‌ಪಾಲ್ ಅವರನ್ನು ಮರುನೇಮಕಕ್ಕೆ ಒತ್ತಾಯಿಸಿ ಪ್ರತಿಭಟನಾಕಾರರು ಪೊಲೀಸ್ ಅಧೀಕ್ಷಕರ ಕಚೇರಿಯನ್ನು ಸುತ್ತುವರೆದಿರುವುದು ಕಂಡುಬಂದಿದೆ.

ಪ್ರತಿಭಟನಾಕಾರರು ಜಿಲ್ಲಾ ಪೊಲೀಸ್ ಮುಖ್ಯಸ್ಥರ ಕಚೇರಿಯ ಹೊರಗೆ ಬಸ್ ಮತ್ತು ಇತರ ಕಟ್ಟಡಗಳಿಗೆ ಬೆಂಕಿ ಹಚ್ಚಿದ್ದಾರೆ. ಕೋಪಗೊಂಡ ಗುಂಪು ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿವೆ. ಹಿಂಸಾಚಾರದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮೊಬೈಲ್ ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿದೆ.

ಚುರಚಂದ್‌ಪುರ ಜಿಲ್ಲಾ ಪೊಲೀಸ್‌ನ ಸಿಯಾಮ್ಲಾಲ್‌ಪಾಲ್ ವಿರುದ್ಧ ಇಲಾಖಾ ವಿಚಾರಣೆ ನಡೆಸಲಾಗುತ್ತಿದೆ, ಫೆಬ್ರವರಿ 14 ರಂದು ಅವರು ಶಸ್ತ್ರಸಜ್ಜಿತ ವ್ಯಕ್ತಿಗಳೊಂದಿಗೆ ವೀಡಿಯೊ ಮಾಡುತ್ತಿರುವ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ ಎಂದು ಚುರಚಂದಪುರ ಪೊಲೀಸ್ ಅಧೀಕ್ಷಕ ಶಿವಾನಂದ್ ಸುರ್ವೆ ಅಮಾನತು ಆದೇಶದಲ್ಲಿ ತಿಳಿಸಿದ್ದಾರೆ.

ಬಹುಸಂಖ್ಯಾತ ಕುಕಿ-ಜೋ ಬುಡಕಟ್ಟುಗಳು ಮತ್ತು ಕಣಿವೆಯ ಬಹುಸಂಖ್ಯಾತ ಮೈತೇಯಿ ನಡುವಿನ ಜನಾಂಗೀಯ ಉದ್ವಿಗ್ನತೆಯ ಮಧ್ಯೆ ಮಣಿಪುರವು ಪ್ರತಿಸ್ಪರ್ಧಿ ಸಶಸ್ತ್ರ ಗುಂಪುಗಳ ನಡುವೆ ಗುಂಡಿನ ಚಕಮಕಿಗಳನ್ನು ಎದುರಿಸುತ್ತಿದೆ. ಅವರು ತಮ್ಮನ್ನು ತಾವು “ಗ್ರಾಮ ರಕ್ಷಣಾ ಸ್ವಯಂಸೇವಕರು” ಎಂದು ಕರೆದುಕೊಳ್ಳುತ್ತಾರೆ.

ರಾಜ್ಯದ ರಾಜಧಾನಿ ಇಂಫಾಲ್‌ನಿಂದ 65 ಕಿಮೀ ದೂರದಲ್ಲಿರುವ ಚುರಾಚಂದ್‌ಪುರದಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ರಾಪಿಡ್ ಆಕ್ಷನ್ ಫೋರ್ಸ್ (ಆರ್‌ಎಎಫ್) ಅಶ್ರುವಾಯು ಶೆಲ್‌ಗಳನ್ನು ಹಾರಿಸಿದೆ ಎಂದು ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಘಟನೆಯಲ್ಲಿ ಹಲವಾರು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ.

‘ಅಂದಾಜು 300-400 ಸಂಖ್ಯೆಯ ಜನಸಮೂಹವು ಇಂದು ಚುರಚಂದಪುರ ಎಸ್‌ಪಿ (ಪೊಲೀಸ್ ವರಿಷ್ಠಾಧಿಕಾರಿ) ಕಚೇರಿಗೆ ನುಗ್ಗಲು ಪ್ರಯತ್ನಿಸಿತು. ಕಲ್ಲು ತೂರಾಟ, ಇತ್ಯಾದಿ ನಡೆಸಿದ್ದು, ಆರ್‌ಎಎಫ್‌ ಸೇರಿದಂತೆ ಎಸ್‌ಎಫ್‌ ಪಡೆಗಳು ಗುಂಪನ್ನು ನಿಯಂತ್ರಿಸಲು ಅಶ್ರುವಾಯು ಶೆಲ್‌ಗಳನ್ನು ಹಾರಿಸುವ ಮೂಲಕ ಸೂಕ್ತವಾಗಿ ಪ್ರತಿಕ್ರಿಯಿಸುತ್ತಿದ್ದಾರೆ; ಪರಿಸ್ಥಿತಿ ನಿಯಂತ್ರಣದಲ್ಲಿದೆ’ ಎಂದು ಮಣಿಪುರ ಪೊಲೀಸರು ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿದ್ದಾರೆ.

ಹೆಡ್‌ಕಾನ್ಸ್‌ಟೇಬಲ್‌ ಅವರನ್ನು ಅನ್ಯಾಯವಾಗಿ ಅಮಾನತುಗೊಳಿಸಲಾಗಿದ್ದು, ಅವರನ್ನು ಪುನಃ ಕೆಲಸಕ್ಕೆ ಸೇರಿಸಿಕೊಳ್ಳಬೇಕು ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕುಕಿ-ಜೋ ಬುಡಕಟ್ಟು ಜನಾಂಗದವರ ಪ್ರಾಬಲ್ಯವಿರುವ ಜಿಲ್ಲೆ ಚುರಾಚಂದ್‌ಪುರ, ಮೇ 2023 ರಲ್ಲಿ ಪ್ರಾರಂಭವಾದ ಜನಾಂಗೀಯ ಘರ್ಷಣೆಗಳಿಂದ ಹೆಚ್ಚು ಪ್ರಭಾವಿತವಾದ ಪ್ರದೇಶಗಳಲ್ಲಿ ಒಂದಾಗಿದೆ.

ಕುಕಿ-ಜೋ ಬುಡಕಟ್ಟು ಜನಾಂಗದವರು ತಮ್ಮ ಹಳ್ಳಿಗಳ ಮೇಲೆ ದಾಳಿ ಮಾಡುವಲ್ಲಿ ರಾಜ್ಯ ಪೋಲೀಸರ ಪಾಲ್ಗೊಳ್ಳುವಿಕೆಯನ್ನು ಪದೇ ಪದೇ ಆರೋಪಿಸಿದ್ದಾರೆ. ಆದರೆ, ಪೊಲೀಸರು ಈ ಆರೋಪಗಳನ್ನು ನಿರಾಕರಿಸಿದ್ದು, ಬದಲಿಗೆ ಕುಕಿ-ಜೊ ದಂಗೆಕೋರರು “ಗ್ರಾಮ ರಕ್ಷಣಾ ಸ್ವಯಂಸೇವಕರನ್ನು” ಉತ್ತೇಜಿಸುವಲ್ಲಿ ತೊಡಗಿಸಿಕೊಂಡಿದ್ದಾರೆ’ ಎಂದು ಆರೋಪ ಮಾಡಿದ್ದಾರೆ.

ಕುಕಿ-ಝೋ ನಾಗರಿಕ ಸಮಾಜದ ಗುಂಪು ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ಐಟಿಎಲ್‌ಎಫ್) ಗುರುವಾರ ತಡರಾತ್ರಿ ಹೇಳಿಕೆಯಲ್ಲಿ ಚುರಚಂದಪುರ ಪೊಲೀಸ್ ಮುಖ್ಯಸ್ಥರು “ಇಂದು ರಾತ್ರಿ ಜಿಲ್ಲೆಯಲ್ಲಿ ನಡೆದ ಘಟನೆಗೆ ಸಂಪೂರ್ಣ ಹೊಣೆಗಾರರಾಗಿದ್ದಾರೆ…” ಎಂದು ಕಿಡಿಕಾರಿದ್ದಾರೆ.

ಕಳೆದ ಕೆಲವು ತಿಂಗಳುಗಳಲ್ಲಿ ಮಣಿಪುರ ಪೊಲೀಸ್ ಸಿಬ್ಬಂದಿ ಸಶಸ್ತ್ರ ಗುಂಪುಗಳೊಂದಿಗೆ ಹೋರಾಡುತ್ತಿರುವುದನ್ನು ಮತ್ತು ಕುಕಿ-ಜೋ ಪ್ರದೇಶಗಳ ಮೇಲೆ ದಾಳಿ ನಡೆಸುತ್ತಿರುವುದನ್ನು ತೋರಿಸುವ ಐಟಿಎಲ್‌ಎಫ್‌ ಆಪಾದಿತ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಆದರೆ, ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಐಟಿಎಲ್‌ಎಫ್ ಹೇಳಿದೆ. ಸಿವಿಲ್ ಸೊಸೈಟಿ ಗುಂಪಿನ ಮಾಜಿ ನಾಯಕ ಮಣಿಪುರ ಪೊಲೀಸರಿಗೆ ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಕೊಲೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಪ್ರಕರಣ ದಾಖಲಿಸುವಂತೆ ಪತ್ರ ಬರೆದಿದ್ದಾರೆ.

ಹಿರಿಯ ಪೊಲೀಸ್ ಅಧೀಕ್ಷಕ (ಯುದ್ಧ) ಕರ್ನಲ್ ನೆಕ್ಟರ್ ಸಂಜೆನ್‌ಬಾಮ್ (ನಿವೃತ್ತ) ತನಗೆ ರಾತ್ರಿ ಕರೆ ಮಾಡಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ತೆಂಗ್‌ನೋಪಾಲ್ ಘಟಕದ ಕುಕಿ ವಿದ್ಯಾರ್ಥಿಗಳ ಸಂಘಟನೆಯ (ಕೆಎಸ್‌ಒ) ಮಾಜಿ ಮುಖ್ಯಸ್ಥ ಎಚ್ ಥಾಂಗ್ಟಿನ್ಲೆನ್ ಡೇನಿಯಲ್ ಮೇಟ್ ತಮ್ಮ ಪತ್ರದಲ್ಲಿ ಆರೋಪಿಸಿದ್ದಾರೆ.

‘ನನಗೆ ನೆಕ್ಟರ್ ಅವರ ಫೋನ್ ಸಂಖ್ಯೆಯಿಂದ ಕರೆ ಬಂದಿದೆ … ತಡರಾತ್ರಿಯಾದ ಕಾರಣ ನಾನು ಕರೆ ಸ್ವೀಕರಿಸಲಿಲ್ಲ. ನಂತರ ಕೆಲವು ನಿಮಿಷಗಳ ನಂತರ ನನಗೆ ಜೀವ ಬೆದರಿಕೆಯ ಸಂದೇಶ ಬಂದಿತು … ಅವರು ನನ್ನ ಬಗ್ಗೆ ಗೊತ್ತು ಎಂದು ಸಂದೇಶದಲ್ಲಿ ಹೇಳಿದ್ದಾರೆ. ಅವರು ನನ್ನನ್ನು ಕೊಲ್ಲಲು ಹೊರಟಿದ್ದಾರೆ’ ಎಂದು ಮೇಟ್ ಗುರುವಾರ ತೆಂಗನೌಪಾಲ್ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ; ‘ದೆಹಲಿ ಚಲೋ’ ಮೆರವಣಿಗೆ: ಹೃದಯಾಘಾತದಿಂದ ಪ್ರತಿಭಟನಾನಿರತ ರೈತ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...