Homeಮುಖಪುಟಮಣಿಪುರದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಇಬ್ಬರ ಸಾವು, 25 ಮಂದಿಗೆ ಗಾಯ

ಮಣಿಪುರದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಇಬ್ಬರ ಸಾವು, 25 ಮಂದಿಗೆ ಗಾಯ

- Advertisement -
- Advertisement -

ಮಣಿಪುರದ ಕುಕಿ-ಜೋ ಬುಡಕಟ್ಟು ಪ್ರಾಬಲ್ಯದ ಚುರಚಂದ್‌ಪುರ ಜಿಲ್ಲೆಯ ‘ಗ್ರಾಮ ರಕ್ಷಣಾ ಸ್ವಯಂಸೇವಕರ’ ಬಂಕರ್‌ನಲ್ಲಿ ಸೆಲ್ಫಿ ತೆಗೆದುಕೊಂಡ ಹೆಡ್‌ಕಾನ್ಸ್‌ಟೇಬಲ್‌ನ ಅಮಾನತು ವಿರೋಧಿಸಿ ನೂರಾರು ಜನರು ಇಂದು ಭದ್ರತಾ ಪಡೆಗಳೊಂದಿಗೆ ನಡೆಸಿದ ಘರ್ಷಣೆಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಇದೆ ಎಂದು ಪೊಲೀಸರು ತಿಳಿಸಿದ್ದು, ಬೆಟ್ಟದ ಮೇಲಿರುವ ಗ್ರಾಮ ರಕ್ಷಣಾ ಸ್ವಯಂಸೇವಕರ ಬಂಕರ್‌ನಲ್ಲಿ ಸೆಲ್ಫಿ ತೆಗೆದುಕೊಂಡ ಹೆಡ್ ಕಾನ್ಸ್‌ಟೇಬಲ್ ಸಿಯಾಮ್ಲಾಲ್‌ಪಾಲ್ ಅವರನ್ನು ಮರುನೇಮಕಕ್ಕೆ ಒತ್ತಾಯಿಸಿ ಪ್ರತಿಭಟನಾಕಾರರು ಪೊಲೀಸ್ ಅಧೀಕ್ಷಕರ ಕಚೇರಿಯನ್ನು ಸುತ್ತುವರೆದಿರುವುದು ಕಂಡುಬಂದಿದೆ.

ಪ್ರತಿಭಟನಾಕಾರರು ಜಿಲ್ಲಾ ಪೊಲೀಸ್ ಮುಖ್ಯಸ್ಥರ ಕಚೇರಿಯ ಹೊರಗೆ ಬಸ್ ಮತ್ತು ಇತರ ಕಟ್ಟಡಗಳಿಗೆ ಬೆಂಕಿ ಹಚ್ಚಿದ್ದಾರೆ. ಕೋಪಗೊಂಡ ಗುಂಪು ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿವೆ. ಹಿಂಸಾಚಾರದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮೊಬೈಲ್ ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿದೆ.

ಚುರಚಂದ್‌ಪುರ ಜಿಲ್ಲಾ ಪೊಲೀಸ್‌ನ ಸಿಯಾಮ್ಲಾಲ್‌ಪಾಲ್ ವಿರುದ್ಧ ಇಲಾಖಾ ವಿಚಾರಣೆ ನಡೆಸಲಾಗುತ್ತಿದೆ, ಫೆಬ್ರವರಿ 14 ರಂದು ಅವರು ಶಸ್ತ್ರಸಜ್ಜಿತ ವ್ಯಕ್ತಿಗಳೊಂದಿಗೆ ವೀಡಿಯೊ ಮಾಡುತ್ತಿರುವ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ ಎಂದು ಚುರಚಂದಪುರ ಪೊಲೀಸ್ ಅಧೀಕ್ಷಕ ಶಿವಾನಂದ್ ಸುರ್ವೆ ಅಮಾನತು ಆದೇಶದಲ್ಲಿ ತಿಳಿಸಿದ್ದಾರೆ.

ಬಹುಸಂಖ್ಯಾತ ಕುಕಿ-ಜೋ ಬುಡಕಟ್ಟುಗಳು ಮತ್ತು ಕಣಿವೆಯ ಬಹುಸಂಖ್ಯಾತ ಮೈತೇಯಿ ನಡುವಿನ ಜನಾಂಗೀಯ ಉದ್ವಿಗ್ನತೆಯ ಮಧ್ಯೆ ಮಣಿಪುರವು ಪ್ರತಿಸ್ಪರ್ಧಿ ಸಶಸ್ತ್ರ ಗುಂಪುಗಳ ನಡುವೆ ಗುಂಡಿನ ಚಕಮಕಿಗಳನ್ನು ಎದುರಿಸುತ್ತಿದೆ. ಅವರು ತಮ್ಮನ್ನು ತಾವು “ಗ್ರಾಮ ರಕ್ಷಣಾ ಸ್ವಯಂಸೇವಕರು” ಎಂದು ಕರೆದುಕೊಳ್ಳುತ್ತಾರೆ.

ರಾಜ್ಯದ ರಾಜಧಾನಿ ಇಂಫಾಲ್‌ನಿಂದ 65 ಕಿಮೀ ದೂರದಲ್ಲಿರುವ ಚುರಾಚಂದ್‌ಪುರದಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ರಾಪಿಡ್ ಆಕ್ಷನ್ ಫೋರ್ಸ್ (ಆರ್‌ಎಎಫ್) ಅಶ್ರುವಾಯು ಶೆಲ್‌ಗಳನ್ನು ಹಾರಿಸಿದೆ ಎಂದು ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಘಟನೆಯಲ್ಲಿ ಹಲವಾರು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ.

‘ಅಂದಾಜು 300-400 ಸಂಖ್ಯೆಯ ಜನಸಮೂಹವು ಇಂದು ಚುರಚಂದಪುರ ಎಸ್‌ಪಿ (ಪೊಲೀಸ್ ವರಿಷ್ಠಾಧಿಕಾರಿ) ಕಚೇರಿಗೆ ನುಗ್ಗಲು ಪ್ರಯತ್ನಿಸಿತು. ಕಲ್ಲು ತೂರಾಟ, ಇತ್ಯಾದಿ ನಡೆಸಿದ್ದು, ಆರ್‌ಎಎಫ್‌ ಸೇರಿದಂತೆ ಎಸ್‌ಎಫ್‌ ಪಡೆಗಳು ಗುಂಪನ್ನು ನಿಯಂತ್ರಿಸಲು ಅಶ್ರುವಾಯು ಶೆಲ್‌ಗಳನ್ನು ಹಾರಿಸುವ ಮೂಲಕ ಸೂಕ್ತವಾಗಿ ಪ್ರತಿಕ್ರಿಯಿಸುತ್ತಿದ್ದಾರೆ; ಪರಿಸ್ಥಿತಿ ನಿಯಂತ್ರಣದಲ್ಲಿದೆ’ ಎಂದು ಮಣಿಪುರ ಪೊಲೀಸರು ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿದ್ದಾರೆ.

ಹೆಡ್‌ಕಾನ್ಸ್‌ಟೇಬಲ್‌ ಅವರನ್ನು ಅನ್ಯಾಯವಾಗಿ ಅಮಾನತುಗೊಳಿಸಲಾಗಿದ್ದು, ಅವರನ್ನು ಪುನಃ ಕೆಲಸಕ್ಕೆ ಸೇರಿಸಿಕೊಳ್ಳಬೇಕು ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕುಕಿ-ಜೋ ಬುಡಕಟ್ಟು ಜನಾಂಗದವರ ಪ್ರಾಬಲ್ಯವಿರುವ ಜಿಲ್ಲೆ ಚುರಾಚಂದ್‌ಪುರ, ಮೇ 2023 ರಲ್ಲಿ ಪ್ರಾರಂಭವಾದ ಜನಾಂಗೀಯ ಘರ್ಷಣೆಗಳಿಂದ ಹೆಚ್ಚು ಪ್ರಭಾವಿತವಾದ ಪ್ರದೇಶಗಳಲ್ಲಿ ಒಂದಾಗಿದೆ.

ಕುಕಿ-ಜೋ ಬುಡಕಟ್ಟು ಜನಾಂಗದವರು ತಮ್ಮ ಹಳ್ಳಿಗಳ ಮೇಲೆ ದಾಳಿ ಮಾಡುವಲ್ಲಿ ರಾಜ್ಯ ಪೋಲೀಸರ ಪಾಲ್ಗೊಳ್ಳುವಿಕೆಯನ್ನು ಪದೇ ಪದೇ ಆರೋಪಿಸಿದ್ದಾರೆ. ಆದರೆ, ಪೊಲೀಸರು ಈ ಆರೋಪಗಳನ್ನು ನಿರಾಕರಿಸಿದ್ದು, ಬದಲಿಗೆ ಕುಕಿ-ಜೊ ದಂಗೆಕೋರರು “ಗ್ರಾಮ ರಕ್ಷಣಾ ಸ್ವಯಂಸೇವಕರನ್ನು” ಉತ್ತೇಜಿಸುವಲ್ಲಿ ತೊಡಗಿಸಿಕೊಂಡಿದ್ದಾರೆ’ ಎಂದು ಆರೋಪ ಮಾಡಿದ್ದಾರೆ.

ಕುಕಿ-ಝೋ ನಾಗರಿಕ ಸಮಾಜದ ಗುಂಪು ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ಐಟಿಎಲ್‌ಎಫ್) ಗುರುವಾರ ತಡರಾತ್ರಿ ಹೇಳಿಕೆಯಲ್ಲಿ ಚುರಚಂದಪುರ ಪೊಲೀಸ್ ಮುಖ್ಯಸ್ಥರು “ಇಂದು ರಾತ್ರಿ ಜಿಲ್ಲೆಯಲ್ಲಿ ನಡೆದ ಘಟನೆಗೆ ಸಂಪೂರ್ಣ ಹೊಣೆಗಾರರಾಗಿದ್ದಾರೆ…” ಎಂದು ಕಿಡಿಕಾರಿದ್ದಾರೆ.

ಕಳೆದ ಕೆಲವು ತಿಂಗಳುಗಳಲ್ಲಿ ಮಣಿಪುರ ಪೊಲೀಸ್ ಸಿಬ್ಬಂದಿ ಸಶಸ್ತ್ರ ಗುಂಪುಗಳೊಂದಿಗೆ ಹೋರಾಡುತ್ತಿರುವುದನ್ನು ಮತ್ತು ಕುಕಿ-ಜೋ ಪ್ರದೇಶಗಳ ಮೇಲೆ ದಾಳಿ ನಡೆಸುತ್ತಿರುವುದನ್ನು ತೋರಿಸುವ ಐಟಿಎಲ್‌ಎಫ್‌ ಆಪಾದಿತ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಆದರೆ, ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಐಟಿಎಲ್‌ಎಫ್ ಹೇಳಿದೆ. ಸಿವಿಲ್ ಸೊಸೈಟಿ ಗುಂಪಿನ ಮಾಜಿ ನಾಯಕ ಮಣಿಪುರ ಪೊಲೀಸರಿಗೆ ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಕೊಲೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಪ್ರಕರಣ ದಾಖಲಿಸುವಂತೆ ಪತ್ರ ಬರೆದಿದ್ದಾರೆ.

ಹಿರಿಯ ಪೊಲೀಸ್ ಅಧೀಕ್ಷಕ (ಯುದ್ಧ) ಕರ್ನಲ್ ನೆಕ್ಟರ್ ಸಂಜೆನ್‌ಬಾಮ್ (ನಿವೃತ್ತ) ತನಗೆ ರಾತ್ರಿ ಕರೆ ಮಾಡಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ತೆಂಗ್‌ನೋಪಾಲ್ ಘಟಕದ ಕುಕಿ ವಿದ್ಯಾರ್ಥಿಗಳ ಸಂಘಟನೆಯ (ಕೆಎಸ್‌ಒ) ಮಾಜಿ ಮುಖ್ಯಸ್ಥ ಎಚ್ ಥಾಂಗ್ಟಿನ್ಲೆನ್ ಡೇನಿಯಲ್ ಮೇಟ್ ತಮ್ಮ ಪತ್ರದಲ್ಲಿ ಆರೋಪಿಸಿದ್ದಾರೆ.

‘ನನಗೆ ನೆಕ್ಟರ್ ಅವರ ಫೋನ್ ಸಂಖ್ಯೆಯಿಂದ ಕರೆ ಬಂದಿದೆ … ತಡರಾತ್ರಿಯಾದ ಕಾರಣ ನಾನು ಕರೆ ಸ್ವೀಕರಿಸಲಿಲ್ಲ. ನಂತರ ಕೆಲವು ನಿಮಿಷಗಳ ನಂತರ ನನಗೆ ಜೀವ ಬೆದರಿಕೆಯ ಸಂದೇಶ ಬಂದಿತು … ಅವರು ನನ್ನ ಬಗ್ಗೆ ಗೊತ್ತು ಎಂದು ಸಂದೇಶದಲ್ಲಿ ಹೇಳಿದ್ದಾರೆ. ಅವರು ನನ್ನನ್ನು ಕೊಲ್ಲಲು ಹೊರಟಿದ್ದಾರೆ’ ಎಂದು ಮೇಟ್ ಗುರುವಾರ ತೆಂಗನೌಪಾಲ್ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ; ‘ದೆಹಲಿ ಚಲೋ’ ಮೆರವಣಿಗೆ: ಹೃದಯಾಘಾತದಿಂದ ಪ್ರತಿಭಟನಾನಿರತ ರೈತ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...