Homeಕರ್ನಾಟಕಭೂ ಸುದಾರಣೆ ಕಾಯ್ದೆ ತಿದ್ದುಪಡಿಗೆ ಅಂಗೀಕಾರ ವಿರೋಧಿಸಿ ಪ್ರತಿಭಟನೆ: ಹೋರಾಟಗಾರರ ಬಂಧನ!

ಭೂ ಸುದಾರಣೆ ಕಾಯ್ದೆ ತಿದ್ದುಪಡಿಗೆ ಅಂಗೀಕಾರ ವಿರೋಧಿಸಿ ಪ್ರತಿಭಟನೆ: ಹೋರಾಟಗಾರರ ಬಂಧನ!

- Advertisement -
- Advertisement -

ರಾಜ್ಯಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಜಾರಿಗೆ ತರಲು ಮುಂದಾಗಿದ್ದ ವಿವಾದಾತ್ಮಕ ಕೃಷಿ ಕಾನೂನುಗಳು ಇಂದು ವಿಧಾನಪರಿಷತ್ತಿನಲ್ಲಿ ಬಹುಮತಪಡೆದು ಅಂಗೀಕಾರವಾಗಿದೆ. ಇದನ್ನು ವಿರೋಧಿಸಿ ರಸ್ತೆ ತಡೆದು ಪ್ರತಿಭಟನೆ ಮಾಡುತ್ತಿದ್ದ ಜನಶಕ್ತಿ ಸಂಘಟನೆಯ ಹೋರಾಟಗಾರರು ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಹೋರಾಟಗಾರರ ಬಂಧನದ ಚಿತ್ರಗಳನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್ ಬೆಂಕಿಕೆರೆ, “ಭೂ ಸುಧಾರಣಾ (ಸ್ವಾಧೀನ) ಕಾಯಿದೆಗೆ ತಿದ್ದುಪಡಿ ಅಂಗಿಕಾರ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದ ನಮ್ಮೆಲ್ಲರ ಬಂಧನವಾಗಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ತುಮಕೂರು ಜಿಲ್ಲೆಯ ವಿವಿದೆಡೆ ಭಾರತ್ ಬಂದ್: ಪ್ರಧಾನಿ ಪ್ರತಿಕೃತಿ ದಹನ

ರಾಜ್ಯ ಬಿಜೆಪಿ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ಮಸೂದೆಗೆ ಈ ಮೊದಲು ವಿರೋಧಿಸಿದ್ದ ಜೆಡಿಎಸ್ ಪಕ್ಷ ಇಂದು ಅಚ್ಚರಿಯ ರೀತಿಯಲ್ಲಿ ಬಿಜೆಪಿ ಪರವಾಗಿ ವಿಧಾನ ಪರಿಷತ್‌ನಲ್ಲಿ ಮಸೂದೆ ಪರ ಮತ ಹಾಕಿದೆ. ಇದರಿಂದ ಮಸೂದೆಯು ಕಾಯ್ದೆಯಾಗಿ ಅಂಗೀಕಾರಗೊಂಡಿದೆ.

ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ಮಸೂದೆಗೆ ಆಗಸ್ಟ್ ಅಂತ್ಯದಲ್ಲಿ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಬಹುಮತವಿದ್ದ ಬಿಜೆಪಿ ಅಂಗೀಕರಿಸಿತ್ತು. ಆದರೆ ಅದೇ ಸಮಯದಲ್ಲಿ ವಿಧಾನಪರಿಷತ್‌ನಲ್ಲಿ ಆ ಮಸೂದೆಗೆ ಅಂಗೀಕಾರ ಪಡೆಯಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ: ’ನನ್ನನ್ನು ಮತ್ತೊಮ್ಮೆ ಗೃಹಬಂಧನದಲ್ಲಿ ಇಡಲಾಗಿದೆ’: ಮೆಹಬೂಬಾ ಮುಫ್ತಿ

ಇಂದು ಕರ್ನಾಟಕ ಭೂ ಸುಧಾರಣೆ ಕಾಯ್ದೆ ಎರಡನೇ ತಿದ್ದುಪಡಿ ವಿಧೇಯಕವನ್ನು ಪರಿಷತ್ ನಲ್ಲಿ ಸಭಾಪತಿ ಮತಕ್ಕೆ ಹಾಕಿದರು. ಆಗ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಪರ ಜೆಡಿಎಸ್ ಸದಸ್ಯರು ಮತ ಚಲಾಯಿಸಿದ್ದಾರೆ. ಇದರಿಂದ ಹರ್ಷಗೊಂಡ ಬಿಜೆಪಿ ಸದಸ್ಯರು ಮೇಜು ಕಟ್ಟುವ ಮೂಲಕ ಸ್ವಾಗತಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ವಿಧೇಯಕದ ಪರವಾಗಿ 37 ಮತಗಳು ಹಾಗೂ ವಿಧೇಯಕದ ವಿರುದ್ದವಾಗಿ 21 ಮತಗಳು ಬಿದ್ದಿವೆ. ಹಾಗಾಗಿ ಕೊನೆಗೂ ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಅಂಗೀಕಾರವಾಗಿದೆ.

ಇದನ್ನೂ ಓದಿ: ಬಿಜೆಪಿ ಮಂಡಿಸಿದ ಭೂ ಸುಧಾರಣೆ ತಿದ್ದುಪಡಿ ಮಸೂದೆ ಪರ ಮತ ಹಾಕಿದ ಜೆಡಿಎಸ್: ಪರಿಷತ್‌ನಲ್ಲಿ…

ಈ ವಿಷಯ ತಿಳಿಯುತ್ತಿದ್ದಂತೆ ರೈತ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೆಡಿಎಸ್‌ ಪಕ್ಷವು ತನ್ನನ್ನು ಬಿಜೆಪಿಗೆ ಮಾರಿಕೊಂಡಿದೆ ಎಂದು ರೈತರು ಕಿಡಿಕಾರಿದ್ದಾರೆ. ಏಕಾಏಕಿ ಮೌರ್ಯ ಸರ್ಕಲ್ ನಲ್ಲಿ ಹೋರಾಟಗಾರರು ರಸ್ತೆತಡೆ ಆರಂಭಿಸಿ ಬಿಜೆಪಿ ಮತ್ತು ಜೆಡಿಎಸ್‌ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ರಸ್ತೆ ತಡೆ ಪ್ರತಿಭಟನೆ ಮುಂದುವರೆಯುತ್ತಿದ್ದು ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಭೂ ಸುಧಾರಣಾ ಕಾಯಿದೆಗೆ ಹೊಸ ತಿದ್ದುಪಡಿ ಪ್ರಕಾರ ಈಗ ಒಬ್ಬರು 450 ಎಕರೆಗೂ ಹೆಚ್ಚು ಕೃಷಿ ಭೂಮಿ ಹೊಂದಬಹುದು. ಇಂತಹ ಕರಾಳ ತಿದ್ದುಪಡಿ ತರಲು ಕಾರ್ಪೋರೇಟ್ ಗಳ ಜೊತೆ ಮಾರಿಕೊಂಡು ಶಾಮೀಲಾಗಿರುವ ಜೆಡಿಎಸ್, ಬಿಜೆಪಿಗೆ ಧಿಕ್ಕಾರ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಭಾರತ್ ಬಂದ್ ಯಶಸ್ವಿ: ದೇಶಾದ್ಯಂತದ ಹೋರಾಟದ ಚಿತ್ರಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪೆನ್‌ಡ್ರೈವ್‌ ಬಿಡುಗಡೆಯಲ್ಲಿ ಕುಮಾರಸ್ವಾಮಿ, ಬಿಜೆಪಿ ನಾಯಕರ ಕೈವಾಡ: ಡಿ.ಕೆ.ಸುರೇಶ್

0
ಪೆನ್ ಡ್ರೈವ್ ವಿಚಾರ ಎಲ್ಲರಿಗಿಂತ ಮೊದಲೇ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರಿಗೆ ತಿಳಿದಿತ್ತು. ಈ ಪ್ರಕರಣದಿಂದ ನುಣುಚಿಕೊಳ್ಳಲು ಕಾಂಗ್ರೆಸ್ ಹಾಗೂ ಶಿವಕುಮಾರ್ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ. ಪೆನ್‌ ಡ್ರೈವ್‌ ಬಿಡುಗಡೆಯಲ್ಲಿ ಮೈತ್ರಿ...