Homeಮುಖಪುಟ26 ಬಂದೇ ಬಿಟ್ಟಿತು: ದೆಹಲಿ ಗಡಿಯಲ್ಲಿ ಕಿಕ್ಕಿರಿಯುತ್ತಿರುವ ಪ್ರತಿಭಟನಾಕಾರರು

26 ಬಂದೇ ಬಿಟ್ಟಿತು: ದೆಹಲಿ ಗಡಿಯಲ್ಲಿ ಕಿಕ್ಕಿರಿಯುತ್ತಿರುವ ಪ್ರತಿಭಟನಾಕಾರರು

- Advertisement -
- Advertisement -

ದೆಹಲಿಯಲ್ಲಿ ಮತ್ತು ಅದರ ಗಡಿಗಳಲ್ಲಿ ಬ್ಯಾರಿಕೇಡ್‌ಗಳನ್ನು ಭರ್ಜರಿಯಾಗಿ ಹಾಕಲಾಗುತ್ತಿರುವ ಈ ಸಂದರ್ಭದಲ್ಲೇ ದೆಹಲಿಯ ಗಡಿಗಳಲ್ಲಿ ರೈತ ಪ್ರತಿಭಟನಾಕಾರರ ಸಂಖ್ಯೆ ಹೆಚ್ಚುತ್ತಲೇ ಇದೆ. ಡಿವೈಡರ್ ಮೇಲೆ ಕುಳಿತ ರೈತಾಪಿಯೊಬ್ಬರ ಜೊತೆ ನಡೆದ ಮಾತುಕತೆಯ ಮೂಲಕ ಒಂದು ಅರ್ಥಪೂರ್ಣ ಪ್ರತ್ಯಕ್ಷ ವರದಿಯನ್ನು ಇಲ್ಲಿ ಕಟ್ಟಿ ಕೊಡಲಾಗಿದೆ.

ಘಾಜಿಪುರ ಗಡಿಯಲ್ಲಿ ಶನಿವಾರ ಒಂದು ಪ್ರತಿಭಟನೆಯ ಬಲೂನನ್ನು ಹಾರಿಸಲಾಯಿತು. ಆಕಾಶದತ್ತ ಹಾರಿದ ಈ ಬಲೂನನ್ನು ಪೂರ್ವ ಮತ್ತು ಪಶ್ಚಿಮದ ಕಡೆಯಿಂದ ಹಲವು ಕಿಲೋಮೀಟರ್‌ಗಳ ದೂರದಿಂದ ನೋಡಬಹುದಿತ್ತು. ಪಶ್ಚಿಮಕ್ಕೆ ದೇಶದ ರಾಜಧಾನಿ ದೆಹಲಿಯಿದೆ, ಪೂರ್ವದಲ್ಲಿ ಉತ್ತರ ಪ್ರದೇಶ ರಾಜ್ಯವಿದೆ.
ಬಲೂನ್ ಹಾರಿಸುವ ಈ ಸಂದರ್ಭದಲ್ಲಿ ರೈತ ಮತ್ತು ಕೃಷಿ ಕಾರ್ಮಿಕ ರಾಮ್ ಚರಣ್ ತ್ರಿಪಾಠಿಯವರು, ದಕ್ಷಿಣ ಏಷ್ಯಾದಲ್ಲೇ ದೊಡ್ಡದಾದ ಎಕ್ಸ್‌ಪ್ರೆಸ್‌ವೇನ ವಿಭಜಕದ (ಡಿವೈಡರ್) ಮೇಲೆ ಕುಳಿತಿದ್ದರು. ಅವರು ಶನಿವಾರ ಸಂಜೆ ದಿ ಟೆಲಿಗ್ರಾಫ್ ಆನ್‌ಲೈನ್ ಜೊತೆ ಮಾತಿಗೆ ಸಿಕ್ಕು, ನವೆಂಬರ್ 2, 2020 ರಂದು ತಮ್ಮ ಮಗನನ್ನು ಕಳೆದುಕೊಂಡ ವಿಷಯ ತಿಳಿಸಿದರು.

ರಾಮ್ ಚರಣ್ ತ್ರಿಪಾಠಿ ಅವರಿಗೆ 78 ವರ್ಷ. ಹವಾಮಾನ ವೈಪರೀತ್ಯಕ್ಕೆ ನಲುಗಿದ ಮುಖ, ಕೆಂಪು ಪೇಟ, ಚುರುಕಾದ ಬೂದು ಮೀಸೆಯ ಅಜ್ಜ ಹೇಳಿದರು: ನನಗೆ ಮೂವರು ಗಂಡು ಮಕ್ಕಳಿದ್ದರು. ಈಗ ನನಗೆ ಇಬ್ಬರು ಮಾತ್ರ ಉಳಿದರು. ನವೆಂಬರ್ 2 ರಂದು ಒಬ್ಬ ಮಗ ಸುಕೇಶ್ ನಿಧನರಾದರು. ನವೆಂಬರ್ 28 ರಿಂದ ನಾನು ಇಲ್ಲಿದ್ದೇನೆ. ನನ್ನಲ್ಲಿ ಒಂದೂವರೆ ಎಕರೆ ಭೂಮಿ ಇದೆ, ಅದನ್ನು ಮೂವರ ನಡುವೆ ಹಂಚಬೇಕಿತ್ತು……’
ಬೆಳಕು ಚೆಲ್ಲುವ ಒಂದು ಟ್ರಾಕ್ಟರ್ ಮತ್ತು ಧ್ವನಿವರ್ಧಕಗಳ ಮೂಲಕ ಪಂಜಾಬಿ ರ್‍ಯಾಪ್ ಹರಿದು ಬಂದ ಕಾರಣಕ್ಕೆ ಸಂಭಾಷಣೆಗೆ ಅಡಚಣೆಯಾಗಿತು. ಯುಪಿ ಕಡೆಯಿಂದ ಬಂದ ಈ ಟ್ರ್ಯಾಕ್ಟರ್ ಫ್ಲೈ ಓವರ್ ಏರುತ್ತಿತ್ತು. ಗಾಜಿಪುರದ ಪ್ರತಿಭಟನಾ ಸ್ಥಳದ ಮೂಲಕ ಟ್ರ್ಯಾಕ್ಟರ್ ಹಾದುಹೋಗಿತು. ಗಾಜಿಪುರ ಪ್ರತಿಭಟನಾ ಸ್ಥಳದಲ್ಲಿ, ರೈತರು ನೇತಾಜಿಯನ್ನು ಅವರ 125 ನೇ ಜನ್ಮ ದಿನಾಚರಣೆಯಂದು ನೆನಪಿಸಿಕೊಂಡರು.

ಇದನ್ನೂ ಓದಿ: ಬಲವಂತವಾಗಿ ರೈತ ಜಾಥಾ ತಡೆದ ಪೊಲೀಸರು: ರೈತ ಮುಖಂಡರ ಆಕ್ಷೇಪ

ನಾನು ಟ್ರಾಕ್ಟರ್ ಖರೀದಿಸಲು ಸಾಧ್ಯವಿಲ್ಲ. ಆದ್ದರಿಂದ, ನಾನು ಮೊದಲ ಬಾರಿಗೆ ಇಲ್ಲಿ ನಡಕೊಂಡೇ ಬಂದಿದ್ದೇನೆ ಎಂದು ರಾಮ್ ಚರಣ್ ಹೇಳುತ್ತಾರೆ. ನಾನು ಮೊದಲ ಬಾರಿಗೆ ಇಲ್ಲಿಗೆ ಬಂದಾಗಿನಿಂದ ಎರಡು ಬಾರಿ ಮನೆಗೆ ಮರಳಿದ್ದೇನೆ. ’ಖೇತಿ ಭಿ ತೋ ಕರ್ನಿ ಹೈನಾ?’ ಎನ್ನುವ ಅವರಿಗೆ ಈ ವಯಸ್ಸಿನಲ್ಲೂ ಕೃಷಿ ಮಾಡುವುದು ಹೆಮ್ಮೆಯ ವಿಷಯ.

ಬೆಳಗುತ್ತಿರುವ ದೀಪಗಳು ಮತ್ತು ಸ್ಟಿರಿಯೊಫೋನಿಕ್ ಸಂಗೀತವನ್ನು ಹೊಂದಿರುವ ಟ್ರ್ಯಾಕ್ಟರ್ ರಾಮ್ ಚರಣ್ ಬಳಿ ಇಲ್ಲ. ರಾಮ್ ಚರಣ್ ತನ್ನ ಜಮೀನಿನಿಂದ 20 ಕ್ವಿಂಟಾಲ್ ಗೋಧಿಯನ್ನು ಕೊಯ್ಲು ಮಾಡುತ್ತಾರೆ. ಕಳೆದ ವರ್ಷ, ಸರ್ಕಾರ ನಿಗದಿಪಡಿಸಿದ ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಪ್ರತಿ ಕ್ವಿಂಟಲ್‌ಗೆ 1,868 ರೂ. ಅವರು ಉಳುಮೆಗೆ ಟ್ರ್ಯಾಕ್ಟರ್ ಅನ್ನು ಬಾಡಿಗೆಗೆ ಪಡೆಯಬೇಕು, ನೀರಾವರಿ ಮಾಡಲು ನೆರೆಯವರಿಂದ ಪಂಪ್ ಅನ್ನು ಬಾಡಿಗೆಗೆ ತೆಗೆದುಕೊಳ್ಳಬೇಕು. ಅವರ ಭೂಮಿ ಒಟ್ಟು 10 ಬಿಘಾ ಅಷ್ಟೇ. ಅದಕ್ಕೆ ಪಂಪ್ ಬಾಡಿಗೆಗೆಂದೇ 1,500 ರೂ. ಖರ್ಚು ಮಾಡಬೇಕು. ಒಂದು ಹಂಗಾಮಿನಲ್ಲಿ ಕನಿಷ್ಟ ನಾಲ್ಕು ಬಾರಿ ಇದನ್ನು ಮಾಡಬೇಕು. ಕಳೆದ ಕೆಲವು ವಾರಗಳಲ್ಲಿ ಮಳೆ ಬಂದಿದ್ದು ಅವರಿಗೆ ಒಂದು ವರವಾಗಿತ್ತು. ಅದು ರಾಮ್‌ಚರಣ್‌ಗೆ ಒಂದಿಷ್ಟು ಉಳಿತಾಯ ಮಾಡಿತು.

ಇದಲ್ಲದೆ, ಗೊಬ್ಬರ ಮತ್ತು ಕೀಟನಾಶಕಗಳಿಗೂ ಅವರು ಪಾವತಿಸಬೇಕಾಗುತ್ತದೆ. ಸದ್ಯ ಯುಪಿ-ದೆಹಲಿ ಗಡಿಯಲ್ಲಿರುವ ಈ ಹಿರಿಯ ರೈತ 20 ಕ್ವಿಂಟಾಲ್ ಧಾನ್ಯವನ್ನು (ಗೋಧಿ) ಕೊಯ್ಯಲು ಸುಮಾರು 31,000 ರೂ. ಖರ್ಚು ಮಾಡಿದರು. ಆದರೆ ಸರ್ಕಾರವು ಕ್ವಿಂಟಲ್‌ಗೆ 1,868 ರೂ. ಎಂಎಸ್‌ಪಿ ಖಾತ್ರಿಯನ್ನು ನೀಡಲೇ ಇಲ್ಲ, ಅದನ್ನು 125 ರೂ. ಕಡಿಮೆ ಮಾಡಿದ ಕಾರಣಕ್ಕೆ ರಾಮ್‌ಚರಣ್ ಅವರಿಗೆ ಸಿಕ್ಕಿದ್ದು ಕೇವಲ 35,000 ರೂ!

ಇದನ್ನೂ ಓದಿ: ಕೃಷಿ ಕಾಯ್ದೆ ಹಿಂತೆಗೆದುಕೊಳ್ಳಲು ಹೇಳಿ: ಮೋದಿ ತಾಯಿಗೆ ಪತ್ರ ಬರೆದ ಪಂಜಾಬ್ ರೈತ!

“ನನ್ನ ಜೀವನದಲ್ಲಿ, ನಾನು ಎಂದಿಗೂ ಸಾಲದಿಂದ ಮುಕ್ತನಾಗಿಲ್ಲ” ಎಂದು ಅವರು ಹೇಳುತ್ತಾರೆ.
ಬ್ರಾಹ್ಮಣರು ಸಹ ಹಸಿವಿನ ನೋವನ್ನು ಅನುಭವಿಸುತ್ತಾರೆ. ರಾಮ್ ಚರಣ್ ತ್ರಿಪಾಠಿ ಬ್ರಾಹ್ಮಣ, ಹಿಂದೂ ಜಾತಿ ಶ್ರೇಣಿಯಲ್ಲಿನ ಗಣ್ಯ ಗುಂಪಿನವರು. ಅಮ್ರೋಹಾ ಜಿಲ್ಲೆಯ ಗೋಸಾಯಿ ಬ್ಲಾಕ್‌ನಲ್ಲಿರುವ ಅವರ ಗ್ರಾಮ ಶೈಲೇಂದ್ರನಗರವು ಸಮೃದ್ಧ ಜಾಟ್ ಮತ್ತು ಬಡ ರೈತರ ಮಿಶ್ರಣವಾಗಿದೆ. ವರ್ಷದ ಉಳಿದ ಭಾಗವನ್ನು ಸರಿದೂಗಿಸಲು, ರಾಮ್‌ಚರಣ್ ದೊಡ್ಡ ರೈತರ ಜಮೀನುಗಳಲ್ಲಿ ಕೆಲಸ ಮಾಡುತ್ತಾರೆ ದಿನಕ್ಕೆ 300 ರೂ. ವೇತನ ಪಡೆಯುತ್ತಾರೆ.

“ಪೂರ್ವ ಯುಪಿ ಮತ್ತು ಬಿಹಾರದ ಜನರು ಇಲ್ಲಿಗೆ (ಪ್ರತಿಭಟನಾ ಸ್ಥಳಕ್ಕೆ) ದೊಡ್ಡ ಪ್ರಮಾಣದಲ್ಲಿ ಬರುತ್ತಿಲ್ಲ. ರೈಲು ಸಂಪರ್ಕ ಈಗ ಕಡಿಮೆಯಾಗಿದೆ, ಅದಕ್ಕೂ ಮುಖ್ಯವಾಗಿ ಕಾರ್ಮಿಕರಿಗೆ ದಿನಕ್ಕೆ ಕೇವಲ 100 ರೂ. ವಿರಳವಾಗಿ ಸಿಗುತ್ತಿದೆ ಎಂಬುದು ಇದಕ್ಕೆ ಕಾರಣ ಎಂದು ರಾಮ್ ಚರಣ್ ವಿವರಿಸುತ್ತಾರೆ.

ಅವರು ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇನ ವಿಭಜಕದ ಮೇಲೆ ಕುಳಿತಿದ್ದರು. ತಮ್ಮ ಬಲಕ್ಕೆ ಕೈ ಮಾಡಿ ತೋರಿಸಿದ ಅವರು, ವಹಾಂ ಜಾಯಿಯೆ, ಎಂದು ದೆಹಲಿಯತ್ತ ಕೈ ಮಾಡಿದರು. ದೇಖಿಯೆ ದಿಲ್ಲಿ ಸರ್ಕಾರ್ (ಕೇಂದ್ರ ಸರ್ಕಾರ)ಕ್ಯಾ ಕರ್ ರಹಿ ಹೈಂ (ಹೋಗಿ ದೆಹಲಿಯ ಸರ್ಕಾರ ಏನು ಮಾಡುತ್ತಿದೆ ಎಂದು ನೋಡಿ) ಎಂದು ರಾಮಚರಣ್ ಹೇಳಿದರು.

ಇದನ್ನೂ ಓದಿ: ಗೆದ್ದ ಅನ್ನದಾತನ ಹಠ: ಟ್ರಾಕ್ಟರ್‌ ರ್‍ಯಾಲಿಗೆ ದೆಹಲಿ ಪೊಲೀಸರ ಅನುಮತಿ

ದೆಹಲಿಯಲ್ಲಿ ಕುಳಿತ ಭಾರತ ಸರ್ಕಾರ ಮಾಡುತ್ತಿರುವುದೇನು?

ಜನವರಿ 23 ರ ಸಂಜೆ ನೇತಾಜಿ ಸುಭಾಷ್‌ಚಂದ್ರರನ್ನು ರೈತರು ಸ್ಮರಿಸುತ್ತಿದ್ದರು. ಉತ್ತರಪ್ರದೇಶವನ್ನು ರಾಷ್ಟ್ರ ರಾಜಧಾನಿಯೊಂದಿಗೆ ಸಂಪರ್ಕಿಸುವ ಫ್ಲೈ ಓವರ್‌ನಲ್ಲಿ ದೆಹಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕುತ್ತಿದ್ದರು. ದೆಹಲಿ ಪೊಲೀಸರು ಇದನ್ನು ಕೇಂದ್ರ ಗೃಹ ಸಚಿವಾಲಯದ ಆದೇಶದ ಮೇರೆಗೆ ಮಾಡುತ್ತಿದ್ದಾರೆ, ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇದನ್ನು ಮಾಡುತ್ತಿಲ್ಲ.

ಇಲ್ಲಿರುವ ಬ್ಯಾರಿಕೇಡ್ 1,400 ಪೇಸ್ ಅಗಲವಿದೆ. ಇದು ಪೂರ್ವದಿಂದ ಪಶ್ಚಿಮಕ್ಕೆ ಕಾಂಕ್ರೀಟ್ ಬ್ಲಾಕ್‌ಗಳಿಂದ ನಿರ್ಮಾಣ ಆಗಿದ್ದು, ದೆಹಲಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಈ “ಕಲ್ಲಿನ ಕಂಬಗಳ” ಫೋಟೊಗಳನ್ನು ತೆಗೆಯಲು ವರದಿಗಾರನಿಗೆ ಬಿಡಲಿಲ್ಲ. ಅವು ವಾಸ್ತವವಾಗಿ ಕಾಂಕ್ರೀಟ್ ಬ್ಲಾಕ್‌ಗಳೇ ಆಗಿವೆ. ಎಕ್ಸ್‌ಪ್ರೆಸ್‌ವೇ ಲೇನ್‌ಗಳನ್ನು ಸರ್ವಿಸ್ ರೋಡ್‌ಗಳಿಂದ ಬೇರ್ಪಡಿಸುವುದು ಅವರ ಉದ್ದೇಶ. ಪ್ರತಿಯೊಂದು ಕಾಂಕ್ರೀಟ್ ಬ್ಲಾಕ್ ನಾಲ್ಕು ಅಡಿ ಎತ್ತರ ಮತ್ತು ಐದು ಅಡಿ ಉದ್ದವಿದೆ.. ಅವುಗಳನ್ನು ರಸ್ತೆಗೆ ಅಡ್ಡಲಾಗಿ ಇಡಲಾಗುತ್ತಿದೆ.

ಇದನ್ನೂ ಓದಿ: ಗಡಿಯಲ್ಲಿ ಮೃತಪಟ್ಟರೆ ದೇಶಪ್ರೇಮಿ, ಹಕ್ಕುಗಳನ್ನು ಕೇಳಿದರೆ ಖಾಲಿಸ್ಥಾನಿ!

ದೇಶದ ರಾಜಧಾನಿ ತನ್ನ ರಕ್ಷಣೆ ಮಾಡಿಕೊಳ್ಳುತ್ತಿದೆ!

ಫ್ಲೈ ಓವರ್ ಅಡಿಯಲ್ಲಿ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಮುಂತಾದವರಿದ್ದಾರೆ. ಭಾರತದ ಗಣರಾಜ್ಯೋತ್ಸವದ ಜನವರಿ 26 ರಂದು ಕಿಸಾನ್ ಟ್ರ್ಯಾಕ್ಟರ್ ರ್‍ಯಾಲಿಯನ್ನು ಹತ್ತಿಕ್ಕುವ ಎಲ್ಲ ಪ್ರಯತ್ನಗಳನ್ನೂ ಕೇಂದ್ರ ಸರ್ಕಾರ ಮಾಡುತ್ತಿದೆ.

ಡೀಸೆಲ್ ಬೆಲೆ ಗಗನಕ್ಕೇರುತ್ತಿದೆ ಎಂದು ಬಿಕೆಯುನ ಪ್ರತ್ಯೇಕ ಬಣವನ್ನು ಮುನ್ನಡೆಸುವ ವಕೀಲ ಭಾನು ಪ್ರತಾಪ್ ಸಿಂಗ್ ಹೇಳುತ್ತಾರೆ. ’ಆತ ಸೂಟ್-ಬೂಟ್ ಮತ್ತು ಟೈ ಧರಿಸುತ್ತಾನೆ. ಕ್ಯಾಮೆರಾಗಳು ಮತ್ತು ಮೈಕ್ರೊಫೋನ್‌ಗಳ ಎದುರು ಮಿಂಚಲು ಆದ್ಯತೆ ನೀಡುತ್ತಾನೆ’ ಎಂದು ಅವರು ದೇಶದ ’ಗಣ್ಯ’ ವ್ಯಕ್ತಿಯನ್ನು ಟೀಕಿಸಿದರು.

ಫ್ಲೈಓವರ್ ಅಡಿಯಲ್ಲಿ, ಸರ್ವಿಸ್ ರಸ್ತೆಗಳಲ್ಲಿ ಪಕೋಡಗಳನ್ನು ತಯಾರಿಸಲಾಗುತ್ತಿದೆ. ’ಮೋದಿಜಿ, ಇಸಿ ಕೊ ಜಿಡಿಪಿ ಗ್ರೋಥ್ ಮಾಂತೆ ಹೈ’ (ಮೋದಿ ಇದನ್ನು ಆರ್ಥಿಕ ಬೆಳವಣಿಗೆ ಅಂದುಕೊಳ್ಳುತ್ತಾರೆ) ಎಂಬ ಭಿತ್ತಿಪತ್ರವೂ ಇಲ್ಲಿದೆ.  ಕಳೆದ ವಾರ ಮತ್ತು ಈಗಿನ ನಡುವಿನ ಅವಧಿಯಲ್ಲಿ, ಯುಪಿ-ದೆಹಲಿ ಗಡಿಯಲ್ಲಿರುವ ಗಾಜಿಪುರದಲ್ಲಿ ಪ್ರತಿಭಟನಾ ಶಿಬಿರದ ಗಾತ್ರವು ದ್ವಿಗುಣಗೊಂಡಿದೆ. ಅಂಗಡಿಯೊಂದರ ಮುಂಭಾಗದಲ್ಲಿ ಹಳದಿ ಟೆಂಟ್‌ನ ಅಂಚಿನಲ್ಲಿ ಮಹಿಳೆಯರು ಕ್ಯೂನಲ್ಲಿ ನಿಂತಿದ್ದಾರೆ, ಅಲ್ಲಿ 2 ರೂ. ದಾನ ಮಾಡಿ ಎಲ್ಲವನ್ನೂ ಪಡೆಯಿರಿ ಎಂಬ ಪೋಸ್ಟರ್ ಇದೆ, ಅದು ಸಾಧ್ಯವಾಗದವರು ತಮಗೆ ಬೇಕಾದುದನ್ನು ಉಚಿತವಾಗಿ ತೆಗೆದುಕೊಳ್ಳಬಹುದು ಎಂದೂ ಹೇಳಲಾಗಿದೆ.

ಮೂಲ: ಸುಜನ್ ದತ್ತಾ (ದಿ ಟೆಲಿಗ್ರಾಫ್ ಆನ್‌ಲೈನ್)
ಅನುವಾದ: ಮಲ್ಲನಗೌಡರ್‌ ಪಿ.ಕೆ.

ಇದನ್ನೂ ಓದಿ: ಪೊಲೀಸರು ರೈತರ ಟ್ರ್ಯಾಕ್ಟರ್‌ಗಳನ್ನು ತಡೆದರೆ ರಾಜ್ಯಾದ್ಯಂತ ರಸ್ತೆ ಬಂದ್: ಬಡಗಲಪುರ ನಾಗೇಂದ್ರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...