Homeಅಂತರಾಷ್ಟ್ರೀಯಇಸ್ರೇಲಿ ಸಂಸತ್ತಿನಲ್ಲಿ ಟ್ರಂಪ್ ಭಾಷಣಕ್ಕೆ ಅಡ್ಡಿಪಡಿಸಿದ ಪ್ರತಿಭಟನಾಕಾರರು

ಇಸ್ರೇಲಿ ಸಂಸತ್ತಿನಲ್ಲಿ ಟ್ರಂಪ್ ಭಾಷಣಕ್ಕೆ ಅಡ್ಡಿಪಡಿಸಿದ ಪ್ರತಿಭಟನಾಕಾರರು

- Advertisement -
- Advertisement -

ಇಸ್ರೇಲಿ ಸಂಸತ್ತಿನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾಷಣಕ್ಕೆ ಪ್ರತಿಭಟನಾಕಾರರು ಅಡ್ಡಿಪಡಿಸಿದರು. ಕೂಡಲೇ ನೆಸ್ಸೆಟ್ ಸದಸ್ಯರನ್ನು ಹೊರಹಾಕಲಾಯಿತು. ಜಂಟಿ ಹಡಾಶ್-ತಾಲ್ ಪಕ್ಷದ ಸದಸ್ಯರಾದ ಓಫರ್ ಕಾಸಿಫ್ ಮತ್ತು ಅಯ್ಮೆನ್ ಒಡೆಹ್ ಅವರನ್ನು ಹೊರಗೆ ಕರೆದೊಯ್ಯಲಾಯಿತು. ಅವರಲ್ಲಿ ಒಬ್ಬರು ಜನಾಂಗೀಯ ಹತ್ಯೆ ಎಂದು ಬರೆದಿರುವ ಸಣ್ಣ ಫಲಕವನ್ನು ಹಿಡಿದಿದ್ದರು.

ಭದ್ರತಾ ಸಿಬ್ಬಂದಿ ವೇಗವಾಗಿ ಒಳಗೆ ಬಂದು ಅವರನ್ನು ಹೊರಗೆ ಕರೆದೊಯ್ದರು. ಟ್ರಂಪ್ ವೇದಿಕೆಯಲ್ಲಿ ನಿಂತು ನಡೆಯುತ್ತಿರುವುದನ್ನು ವೀಕ್ಷಿಸಿದರು. ಅವರನ್ನು ಹೊರಹಾಕುತ್ತಿದ್ದಂತೆ ನೆಸ್ಸೆಟ್‌ನ ಇತರ ಸದಸ್ಯರು “ಟ್ರಂಪ್! ಟ್ರಂಪ್! ಟ್ರಂಪ್!” ಎಂದು ಘೋಷಣೆ ಕೂಗಿದರು.

ಪ್ರತಿಭಟನಾಕಾರರನ್ನು ಎಷ್ಟು ಬೇಗನೆ ಹೊರಗೆ ಕಳಿಸಲಾಯಿತು ಎಂಬುದರ ಕುರಿತು ಮಾತನಾಡಿದ ಟ್ರಂಪ್, “ಅದು ತುಂಬಾ ಪರಿಣಾಮಕಾರಿಯಾಗಿತ್ತು” ಎಂದರು.

“ಪ್ಲೀನಮ್‌ನಲ್ಲಿನ ಬೂಟಾಟಿಕೆ ಅಸಹನೀಯವಾಗಿದೆ, ಸಂಘಟಿತ ಗುಂಪಿನ ಮೂಲಕ ನೆತನ್ಯಾಹು ಅವರನ್ನು ಹೊಗಳುವ ಮೂಲಕ ಕಿರೀಟಧಾರಣೆ ಮಾಡುವುದು, ಗಾಜಾದಲ್ಲಿ ನಡೆದ ಮಾನವೀಯತೆಯ ವಿರುದ್ಧದ ಅಪರಾಧಗಳಿಂದ ಅಥವಾ ಲಕ್ಷಾಂತರ ಪ್ಯಾಲೆಸ್ಥೀನಿಯನ್ ಬಲಿಪಶುಗಳು, ಸಾವಿರಾರು ಇಸ್ರೇಲಿ ಬಲಿಪಶುಗಳ ರಕ್ತದ ಜವಾಬ್ದಾರಿಯಿಂದ ಅವರನ್ನು ಮತ್ತು ಅವರ ಸರ್ಕಾರವನ್ನು ಮುಕ್ತಗೊಳಿಸುವುದಿಲ್ಲ” ಎಂದು ಪ್ರತಿಭಟನಾನಿರತ ಸದಸ್ಯರು ಆಕ್ರೋಶ ಹೊರಹಾಕಿದರು.

“ಆಕ್ರಮಣವನ್ನು ಕೊನೆಗೊಳಿಸುವುದು ಮತ್ತು ಇಸ್ರೇಲ್ ಜೊತೆಗೆ ಪ್ಯಾಲೆಸ್ತೀನ್ ರಾಜ್ಯವನ್ನು ಗುರುತಿಸುವುದು ಮಾತ್ರ ಎಲ್ಲರಿಗೂ ನ್ಯಾಯ, ಶಾಂತಿ ಮತ್ತು ಭದ್ರತೆಯನ್ನು ತರುತ್ತದೆ. ಇದು ನನ್ನ ಸ್ನೇಹಿತೆ ಐಮೆನ್ ಒಡೆಹ್ ಅವರೊಂದಿಗೆ ನಾನು ಎತ್ತಿದ ಚಿಹ್ನೆ. ನಾವು ತೊಂದರೆ ನೀಡಲು ಬಂದಿಲ್ಲ, ನ್ಯಾಯವನ್ನು ಬೇಡಲು ಬಂದಿದ್ದೇವೆ” ಎಂದು ಟ್ರಂಪ್ ಹೇಳಿದರು.

ಇಸ್ರೇಲ್‌-ಹಮಾಸ್‌ನಿಂದ ಬಂಧಿತರು, ಒತ್ತೆಯಾಳುಗಳ ಹಸ್ತಾಂತರ: ಇಸ್ರೇಲ್‌ ಸಂಸತ್‌ನಲ್ಲಿ ಟ್ರಂಪ್ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...