Homeಮುಖಪುಟಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

- Advertisement -
- Advertisement -

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದಿವೆ.

indianexpress.com ವರದಿಯ ಪ್ರಕಾರ, ಬಾಲಕಿಯ ದೇಹವನ್ನು ಕೆರೆಗೆ ಎಸೆಯುವ ಮುನ್ನ, ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ ಬೆನ್ನಲ್ಲೇ, ಈ ಅಪರಾಧದಲ್ಲಿ ಭಾಗಿಯಾಗಿದ್ದಾನೆ ಎಂದು ಶಂಕಿಸಲಾದ ಸ್ಥಳೀಯ ವ್ಯಕ್ತಿಯೊಬ್ಬನನ್ನು ಕೆರಳಿದ ಸಾರ್ವಜನಿಕರ ಗುಂಪು ಹೊಡೆದು ಕೊಂದಿದೆ (ಗುಂಪು ಹತ್ಯೆ ಮಾಡಿದೆ).

ಈ ಘಟನೆ ಕೋಲ್ಕತ್ತಾದಿಂದ ಸುಮಾರು 30 ಕಿಲೋಮೀಟರ್ ದೂರದಲ್ಲಿರುವ ಬಾರುಯಿಪುರದ ಗ್ರಾಮವೊಂದರಲ್ಲಿ ನಡೆದಿದೆ. ಆಕ್ರೋಶಗೊಂಡ ಸ್ಥಳೀಯರು ಆರಂಭದಲ್ಲಿ ಬಾಲಕಿಯ ಶವವನ್ನು ಪೊಲೀಸರಿಗೆ ಒಪ್ಪಿಸಲು ನಿರಾಕರಿಸಿದ್ದಲ್ಲದೆ, ಪ್ರಮುಖ ರಸ್ತೆಗಳನ್ನು ಬಂದ್ ಮಾಡಿದ್ದರು. ಪ್ರತಿಭಟನಾಕಾರರ ಗುಂಪು ಹಲವಾರು ವಾಹನಗಳಿಗೂ ಬೆಂಕಿ ಹಚ್ಚಿತ್ತು. ಈ ಬೆಳವಣಿಗೆಯಿಂದ ಸೀಲ್ದಾ-ನಾಮ್ಖಾನಾ ಮಾರ್ಗದ ರೈಲು ಸೇವೆಗಳು ಸುಮಾರು ಒಂದು ಗಂಟೆಯ ಕಾಲ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದವು. ಸ್ಥಳೀಯರು ಬಾಲಕಿಯ ಶವದೊಂದಿಗೆ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ ಕಾರಣ ಸುಮಾರು ಐದು ಗಂಟೆಗಳ ಕಾಲ ರಸ್ತೆ ಸಂಚಾರವೂ ಸ್ಥಗಿತಗೊಂಡಿತ್ತು. ಈ ಗಲಾಟೆಯಲ್ಲಿ ಗಾಯಗೊಂಡ ಒಬ್ಬ ಪೊಲೀಸ್ ಪೇದೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ಹೇಳಿದೆ.

ಕೇಂದ್ರ ಪಡೆಗಳು ಸೇರಿದಂತೆ ಭಾರಿ ಪ್ರಮಾಣದ ಭದ್ರತಾ ಸಿಬ್ಬಂದಿಯನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದೆ. ಪ್ರಮುಖ ಶಂಕಿತರೊಂದಿಗೆ ಕಾಣಿಸಿಕೊಂಡಿದ್ದನೆಂಬ ಕಾರಣಕ್ಕೆ ಕೆರಳಿದ ಸಾರ್ವಜನಿಕರ ಗುಂಪು 26 ವರ್ಷದ ಯುವಕನನ್ನು ಹೊಡೆದು ಕೊಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದಾಗ್ಯೂ, ಪೊಲೀಸರು ಆ ವ್ಯಕ್ತಿಯ ಗುರುತನ್ನು ಬಹಿರಂಗಪಡಿಸಿಲ್ಲ. ಉನ್ನತ ಅಧಿಕಾರಿಗಳು ಮಧ್ಯಪ್ರವೇಶಿಸಿದ ನಂತರ ರಸ್ತೆ ತಡೆಯನ್ನು ತೆರವುಗೊಳಿಸಲಾಗಿದೆ. ಸರ್ಕಾರದ ಗಮನಕ್ಕೆ ಈ ದುರಂತ ಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮೆಗಾಫೋನ್ ಬಳಸಿ ಪ್ರತಿಭಟನಾನಿರತ ಸಾರ್ವಜನಿಕರನ್ನು ಸಮಾಧಾನಪಡಿಸಿದ್ದಾರೆ ಎಂದು ವರದಿ ವಿವರಿಸಿದೆ.

“ಸ್ವಲ್ಪ ಹೊತ್ತಿಗೆ ಮುಂಚೆ ಮುಖ್ಯಮಂತ್ರಿ (ಸುವೇಂದು ಅಧಿಕಾರಿ) ನಮ್ಮೊಂದಿಗೆ ನೇರವಾಗಿ ಫೋನ್‌ನಲ್ಲಿ ಮಾತನಾಡಿದ್ದಾರೆ. ಈ ಅಪರಾಧದಲ್ಲಿ ಭಾಗಿಯಾಗಿರುವ ಯಾವುದೇ ವ್ಯಕ್ತಿಯನ್ನು ಬಿಡುವುದಿಲ್ಲ ಎಂದು ಅವರು ನಮಗೆ ಭರವಸೆ ನೀಡಿದ್ದಾರೆ… ತನಿಖೆಯ ಸಮಯದಲ್ಲಿ ಸರ್ಕಾರ ಮತ್ತು ಪೊಲೀಸರೊಂದಿಗೆ ಸಹಕರಿಸಬೇಕಾಗಿ ನಾವು ಪ್ರತಿಯೊಬ್ಬರಲ್ಲೂ ವಿನಂತಿಸುತ್ತೇವೆ. ನಾವು ಪ್ರತಿಯೊಂದು ಹಂತದಲ್ಲೂ ನಿಮ್ಮೊಂದಿಗೆ ಇರುತ್ತೇವೆ” ಎಂದು ಪ್ರೆಸಿಡೆನ್ಸಿ ರೇಂಜ್ ಇನ್ಸ್‌ಪೆಕ್ಟರ್-ಜನರಲ್ (ಐಜಿ) ಕಂಕರ್ ಪ್ರಸಾದ್ ಬರುಯಿ ಪ್ರತಿಭಟನಾನಿರತ ಜನರಿಗೆ ಸಮಾಧಾನ ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಐಜಿ ಬರುಯಿ ಅವರು ಸ್ಥಳೀಯರಿಗೆ, “ನಿಮ್ಮ ಎಲ್ಲಾ ಬೇಡಿಕೆಗಳೊಂದಿಗೆ ಭವಾನಿ ಭವನದಲ್ಲಿರುವ ನಮ್ಮ ಕಚೇರಿಗೆ ಬನ್ನಿ. ನಾವು ಅವುಗಳನ್ನು ಆಲಿಸುತ್ತೇವೆ” ಎಂದು ಹೇಳಿದ್ದಾರೆ. ನಂತರ ಸ್ಥಳೀಯರು ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲು ಪೊಲೀಸರಿಗೆ ಅನುಮತಿ ನೀಡಿದ್ದು, ಶವವನ್ನು ಬಾರುಯಿಪುರ ಉಪ-ವಿಭಾಗೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ಬಾಲಕಿ ಕುಟುಂಬದ ಜೊತೆ ಮಾತನಾಡಿದ ಸಿಎಂ

ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಬಾಲಕಿಯ ತಂದೆಯೊಂದಿಗೆ ಮಾತನಾಡಿ, ಮಂಗಳವಾರ ಅವರನ್ನು ಭೇಟಿಯಾಗುವುದಾಗಿ ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.

ಬಾಲಕಿಯ ಸಾವಿಗೆ ಸಂಬಂಧಿಸಿದಂತೆ ಪೊಲೀಸರು ಪ್ರಭಾಷ್ ಮೊಂಡಲ್ ಎಂದು ಗುರುತಿಸಲಾದ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪೊಲೀಸರು ಅಪರಾಧಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದು, ಯಾವುದೇ ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಐಜಿ ತಿಳಿಸಿದ್ದಾರೆ. ಬಾಲಕಿಯ ಕೊಲೆ, ಶಂಕಿತ ಆರೋಪಿಯ ಗುಂಪು ಹತ್ಯೆ ಹಾಗೂ ಪೊಲೀಸರ ಮೇಲಿನ ಹಲ್ಲೆ ಮತ್ತು ಸಾರ್ವಜನಿಕ ಆಸ್ತಿ ಧ್ವಂಸಕ್ಕೆ ಸಂಬಂಧಿಸಿದಂತೆ ಪೊಲೀಸರು ಎರಡು ಎಫ್‌ಐಆರ್ ದಾಖಲಿಸಿದ್ದಾರೆ. ಬಾಲಕಿಯ ಕೊಲೆಗೆ ಸಂಬಂಧಿಸಿದ ಎಫ್‌ಐಆರ್‌ನಲ್ಲಿ ಪೋಕ್ಸೋ ಅಡಿಯಲ್ಲಿ ಅತ್ಯಾಚಾರದ ಆರೋಪಗಳನ್ನು ಸೇರಿಸಲಾಗಿಲ್ಲ.  ಘಟನೆಯ ತನಿಖೆಗಾಗಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಆರು ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.

“ಈ ಅಪರಾಧ ಹೇಗೆ ನಡೆಯಿತು ಎಂಬುದನ್ನು ಎಸ್‌ಐಟಿ ತನಿಖೆ ಮಾಡಲಿದೆ, ಇದರಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನು ಗುರುತಿಸಲಿದೆ ಮತ್ತು ಘಟನೆಗಳ ಅನುಕ್ರಮದಲ್ಲಿನ ಯಾವುದೇ ಲೋಪದೋಷಗಳನ್ನು ಪರಿಶೀಲಿಸಲಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಬಾಲಕಿಯು ಶನಿವಾರ ಸಂಜೆ 4.30 ಕ್ಕೆ ಸ್ನೇಹಿತನ ಮನೆಗೆ ಭೇಟಿ ನೀಡಲು ಮನೆಯಿಂದ ಹೊರಟಿದ್ದಳು. ಅವಳು ಮನೆಗೆ ಹಿಂತಿರುಗದಿದ್ದಾಗ ಆಕೆಯ ಕುಟುಂಬ ಸದಸ್ಯರು ಹುಡುಕಾಟ ಆರಂಭಿಸಿದ್ದರು. ಅವರು ಇಡೀ ರಾತ್ರಿ ಬಾಲಕಿಗಾಗಿ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಮರುದಿನ ಬೆಳಿಗ್ಗೆ ಗ್ರಾಮದ ಕೆರೆಯಲ್ಲಿ ಬಾಲಕಿಯ ಶವ ಕಂಡು ಬಂದಿದೆ.

ಈ ನಡುವೆ ರಾಜ್ಯ ಸರ್ಕಾರ ಬಾರುಯಿಪುರಕ್ಕೆ ಭೇಟಿ ನೀಡದಂತೆ ತಡೆಯಲು ತಮ್ಮ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಕಾಳೀಘಾಟ್ ನಿವಾಸದ ಹೊರಗೆ ಭದ್ರತಾ ಪಡೆಗಳನ್ನು ನಿಯೋಜಿಸಿದೆ ಎಂದು ವಿರೋಧ ಪಕ್ಷ ಟಿಎಂಸಿ ಆರೋಪಿಸಿದೆ. ಈ ಮೂಲಕ ಘಟನೆಯು ರಾಜಕೀಯ ತಿರುವು ಪಡೆದುಕೊಂಡಿದೆ.

ಟಿಎಂಸಿ ತನ್ನ ಎಕ್ಸ್ ಪೋಸ್ಟ್‌ನಲ್ಲಿ “ನಮ್ಮ ಅಧ್ಯಕ್ಷರಾದ ಮಮತಾ ಬ್ಯಾನರ್ಜಿ ಅವರು ಬಾರುಯಿಪುರಕ್ಕೆ ಭೇಟಿ ನೀಡಲು ಬಯಸಿದ್ದರು. ಇದನ್ನು ತಿಳಿದ ತಕ್ಷಣ, ಅವರು ಮನೆಯಿಂದ ಹೊರಹೋಗದಂತೆ ತಡೆಯಲು ಅವರ ಮನೆಯ ಹೊರಗೆ ಭಾರಿ ಪ್ರಮಾಣದ ಪೊಲೀಸ್ ಸಿಬ್ಬಂದಿ ಮತ್ತು ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ಅವರನ್ನು ತಡೆಯುವ ಈ ಪ್ರಯತ್ನಗಳ ಹೊರಾಗಿಯೂ, ನಮ್ಮ ಬೇಡಿಕೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ: #JusticeForBaruipur, ದೀದಿ ಅವರು ಸಂತ್ರಸ್ತೆಯ ಕುಟುಂಬದೊಂದಿಗೆ ದೃಢವಾಗಿ ನಿಂತಿದ್ದಾರೆ ಮತ್ತು ಅವರಿಗೆ ನ್ಯಾಯ ಸಿಗುವಂತೆ ಮಾಡಲು ಬದ್ಧರಾಗಿದ್ದಾರೆ” ಎಂದು ಬರೆದುಕೊಂಡಿದೆ.

ಇದಕ್ಕೂ ಮುನ್ನ, ಟಿಎಂಸಿ ಶಾಸಕ ಕುನಾಲ್ ಘೋಷ್ ಅವರು ಬಾರುಯಿಪುರ ಘಟನೆಯನ್ನು “ಅತ್ಯಂತ ಭೀಕರ” ಎಂದು ಕರೆದಿದ್ದರು. “ಒಬ್ಬಳು ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಈ ಪ್ರದೇಶವು ಪ್ರಕ್ಷುಬ್ಧಗೊಂಡಿದೆ. ಕೋಪದಲ್ಲಿ ಜನರು ಕಾನೂನನ್ನು ಕೈಗೆತ್ತಿಕೊಳ್ಳುವ ಅಪಾಯಕಾರಿ ಪ್ರವೃತ್ತಿ ಕಾಣಿಸುತ್ತಿದೆ. ಆರೋಪಿಗಳಲ್ಲಿ ಒಬ್ಬಾತ ತಪ್ಪಿಸಿಕೊಂಡಿದ್ದಾನೆ ಎಂಬ ಆರೋಪಗಳೂ ಕೇಳಿಬರುತ್ತಿವೆ. ಆತ ತಪ್ಪಿಸಿಕೊಂಡನೇ ಅಥವಾ ಆತನಿಗೆ ತಪ್ಪಿಸಿಕೊಳ್ಳಲು ಬಿಡಲಾಯಿತೇ?” ಎಂದು ಕುನಾಲ್ ಘೋಷ್ ತಮ್ಮ ಫೇಸ್‌ಬುಕ್ ಪುಟದಲ್ಲಿ ಪೋಸ್ಟ್ ಮಾಡಿದ್ದರು. ಜೊತೆಗೆ “ಭಯ್ ಇನ್, ಭೋರ್ಶಾ ಔಟ್ (ಭಯ ಒಳಗೆ ಬಂದಿದೆ, ಭರವಸೆ ಹೊರಹೋಗಿದೆ)” ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...