Homeಮುಖಪುಟಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

- Advertisement -
- Advertisement -

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದಿವೆ.

indianexpress.com ವರದಿಯ ಪ್ರಕಾರ, ಬಾಲಕಿಯ ದೇಹವನ್ನು ಕೆರೆಗೆ ಎಸೆಯುವ ಮುನ್ನ, ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ ಬೆನ್ನಲ್ಲೇ, ಈ ಅಪರಾಧದಲ್ಲಿ ಭಾಗಿಯಾಗಿದ್ದಾನೆ ಎಂದು ಶಂಕಿಸಲಾದ ಸ್ಥಳೀಯ ವ್ಯಕ್ತಿಯೊಬ್ಬನನ್ನು ಕೆರಳಿದ ಸಾರ್ವಜನಿಕರ ಗುಂಪು ಹೊಡೆದು ಕೊಂದಿದೆ (ಗುಂಪು ಹತ್ಯೆ ಮಾಡಿದೆ).

ಈ ಘಟನೆ ಕೋಲ್ಕತ್ತಾದಿಂದ ಸುಮಾರು 30 ಕಿಲೋಮೀಟರ್ ದೂರದಲ್ಲಿರುವ ಬಾರುಯಿಪುರದ ಗ್ರಾಮವೊಂದರಲ್ಲಿ ನಡೆದಿದೆ. ಆಕ್ರೋಶಗೊಂಡ ಸ್ಥಳೀಯರು ಆರಂಭದಲ್ಲಿ ಬಾಲಕಿಯ ಶವವನ್ನು ಪೊಲೀಸರಿಗೆ ಒಪ್ಪಿಸಲು ನಿರಾಕರಿಸಿದ್ದಲ್ಲದೆ, ಪ್ರಮುಖ ರಸ್ತೆಗಳನ್ನು ಬಂದ್ ಮಾಡಿದ್ದರು. ಪ್ರತಿಭಟನಾಕಾರರ ಗುಂಪು ಹಲವಾರು ವಾಹನಗಳಿಗೂ ಬೆಂಕಿ ಹಚ್ಚಿತ್ತು. ಈ ಬೆಳವಣಿಗೆಯಿಂದ ಸೀಲ್ದಾ-ನಾಮ್ಖಾನಾ ಮಾರ್ಗದ ರೈಲು ಸೇವೆಗಳು ಸುಮಾರು ಒಂದು ಗಂಟೆಯ ಕಾಲ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದವು. ಸ್ಥಳೀಯರು ಬಾಲಕಿಯ ಶವದೊಂದಿಗೆ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ ಕಾರಣ ಸುಮಾರು ಐದು ಗಂಟೆಗಳ ಕಾಲ ರಸ್ತೆ ಸಂಚಾರವೂ ಸ್ಥಗಿತಗೊಂಡಿತ್ತು. ಈ ಗಲಾಟೆಯಲ್ಲಿ ಗಾಯಗೊಂಡ ಒಬ್ಬ ಪೊಲೀಸ್ ಪೇದೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ಹೇಳಿದೆ.

ಕೇಂದ್ರ ಪಡೆಗಳು ಸೇರಿದಂತೆ ಭಾರಿ ಪ್ರಮಾಣದ ಭದ್ರತಾ ಸಿಬ್ಬಂದಿಯನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದೆ. ಪ್ರಮುಖ ಶಂಕಿತರೊಂದಿಗೆ ಕಾಣಿಸಿಕೊಂಡಿದ್ದನೆಂಬ ಕಾರಣಕ್ಕೆ ಕೆರಳಿದ ಸಾರ್ವಜನಿಕರ ಗುಂಪು 26 ವರ್ಷದ ಯುವಕನನ್ನು ಹೊಡೆದು ಕೊಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದಾಗ್ಯೂ, ಪೊಲೀಸರು ಆ ವ್ಯಕ್ತಿಯ ಗುರುತನ್ನು ಬಹಿರಂಗಪಡಿಸಿಲ್ಲ. ಉನ್ನತ ಅಧಿಕಾರಿಗಳು ಮಧ್ಯಪ್ರವೇಶಿಸಿದ ನಂತರ ರಸ್ತೆ ತಡೆಯನ್ನು ತೆರವುಗೊಳಿಸಲಾಗಿದೆ. ಸರ್ಕಾರದ ಗಮನಕ್ಕೆ ಈ ದುರಂತ ಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮೆಗಾಫೋನ್ ಬಳಸಿ ಪ್ರತಿಭಟನಾನಿರತ ಸಾರ್ವಜನಿಕರನ್ನು ಸಮಾಧಾನಪಡಿಸಿದ್ದಾರೆ ಎಂದು ವರದಿ ವಿವರಿಸಿದೆ.

“ಸ್ವಲ್ಪ ಹೊತ್ತಿಗೆ ಮುಂಚೆ ಮುಖ್ಯಮಂತ್ರಿ (ಸುವೇಂದು ಅಧಿಕಾರಿ) ನಮ್ಮೊಂದಿಗೆ ನೇರವಾಗಿ ಫೋನ್‌ನಲ್ಲಿ ಮಾತನಾಡಿದ್ದಾರೆ. ಈ ಅಪರಾಧದಲ್ಲಿ ಭಾಗಿಯಾಗಿರುವ ಯಾವುದೇ ವ್ಯಕ್ತಿಯನ್ನು ಬಿಡುವುದಿಲ್ಲ ಎಂದು ಅವರು ನಮಗೆ ಭರವಸೆ ನೀಡಿದ್ದಾರೆ… ತನಿಖೆಯ ಸಮಯದಲ್ಲಿ ಸರ್ಕಾರ ಮತ್ತು ಪೊಲೀಸರೊಂದಿಗೆ ಸಹಕರಿಸಬೇಕಾಗಿ ನಾವು ಪ್ರತಿಯೊಬ್ಬರಲ್ಲೂ ವಿನಂತಿಸುತ್ತೇವೆ. ನಾವು ಪ್ರತಿಯೊಂದು ಹಂತದಲ್ಲೂ ನಿಮ್ಮೊಂದಿಗೆ ಇರುತ್ತೇವೆ” ಎಂದು ಪ್ರೆಸಿಡೆನ್ಸಿ ರೇಂಜ್ ಇನ್ಸ್‌ಪೆಕ್ಟರ್-ಜನರಲ್ (ಐಜಿ) ಕಂಕರ್ ಪ್ರಸಾದ್ ಬರುಯಿ ಪ್ರತಿಭಟನಾನಿರತ ಜನರಿಗೆ ಸಮಾಧಾನ ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಐಜಿ ಬರುಯಿ ಅವರು ಸ್ಥಳೀಯರಿಗೆ, “ನಿಮ್ಮ ಎಲ್ಲಾ ಬೇಡಿಕೆಗಳೊಂದಿಗೆ ಭವಾನಿ ಭವನದಲ್ಲಿರುವ ನಮ್ಮ ಕಚೇರಿಗೆ ಬನ್ನಿ. ನಾವು ಅವುಗಳನ್ನು ಆಲಿಸುತ್ತೇವೆ” ಎಂದು ಹೇಳಿದ್ದಾರೆ. ನಂತರ ಸ್ಥಳೀಯರು ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲು ಪೊಲೀಸರಿಗೆ ಅನುಮತಿ ನೀಡಿದ್ದು, ಶವವನ್ನು ಬಾರುಯಿಪುರ ಉಪ-ವಿಭಾಗೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ಬಾಲಕಿ ಕುಟುಂಬದ ಜೊತೆ ಮಾತನಾಡಿದ ಸಿಎಂ

ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಬಾಲಕಿಯ ತಂದೆಯೊಂದಿಗೆ ಮಾತನಾಡಿ, ಮಂಗಳವಾರ ಅವರನ್ನು ಭೇಟಿಯಾಗುವುದಾಗಿ ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.

ಬಾಲಕಿಯ ಸಾವಿಗೆ ಸಂಬಂಧಿಸಿದಂತೆ ಪೊಲೀಸರು ಪ್ರಭಾಷ್ ಮೊಂಡಲ್ ಎಂದು ಗುರುತಿಸಲಾದ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪೊಲೀಸರು ಅಪರಾಧಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದು, ಯಾವುದೇ ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಐಜಿ ತಿಳಿಸಿದ್ದಾರೆ. ಬಾಲಕಿಯ ಕೊಲೆ, ಶಂಕಿತ ಆರೋಪಿಯ ಗುಂಪು ಹತ್ಯೆ ಹಾಗೂ ಪೊಲೀಸರ ಮೇಲಿನ ಹಲ್ಲೆ ಮತ್ತು ಸಾರ್ವಜನಿಕ ಆಸ್ತಿ ಧ್ವಂಸಕ್ಕೆ ಸಂಬಂಧಿಸಿದಂತೆ ಪೊಲೀಸರು ಎರಡು ಎಫ್‌ಐಆರ್ ದಾಖಲಿಸಿದ್ದಾರೆ. ಬಾಲಕಿಯ ಕೊಲೆಗೆ ಸಂಬಂಧಿಸಿದ ಎಫ್‌ಐಆರ್‌ನಲ್ಲಿ ಪೋಕ್ಸೋ ಅಡಿಯಲ್ಲಿ ಅತ್ಯಾಚಾರದ ಆರೋಪಗಳನ್ನು ಸೇರಿಸಲಾಗಿಲ್ಲ.  ಘಟನೆಯ ತನಿಖೆಗಾಗಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಆರು ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.

“ಈ ಅಪರಾಧ ಹೇಗೆ ನಡೆಯಿತು ಎಂಬುದನ್ನು ಎಸ್‌ಐಟಿ ತನಿಖೆ ಮಾಡಲಿದೆ, ಇದರಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನು ಗುರುತಿಸಲಿದೆ ಮತ್ತು ಘಟನೆಗಳ ಅನುಕ್ರಮದಲ್ಲಿನ ಯಾವುದೇ ಲೋಪದೋಷಗಳನ್ನು ಪರಿಶೀಲಿಸಲಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಬಾಲಕಿಯು ಶನಿವಾರ ಸಂಜೆ 4.30 ಕ್ಕೆ ಸ್ನೇಹಿತನ ಮನೆಗೆ ಭೇಟಿ ನೀಡಲು ಮನೆಯಿಂದ ಹೊರಟಿದ್ದಳು. ಅವಳು ಮನೆಗೆ ಹಿಂತಿರುಗದಿದ್ದಾಗ ಆಕೆಯ ಕುಟುಂಬ ಸದಸ್ಯರು ಹುಡುಕಾಟ ಆರಂಭಿಸಿದ್ದರು. ಅವರು ಇಡೀ ರಾತ್ರಿ ಬಾಲಕಿಗಾಗಿ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಮರುದಿನ ಬೆಳಿಗ್ಗೆ ಗ್ರಾಮದ ಕೆರೆಯಲ್ಲಿ ಬಾಲಕಿಯ ಶವ ಕಂಡು ಬಂದಿದೆ.

ಈ ನಡುವೆ ರಾಜ್ಯ ಸರ್ಕಾರ ಬಾರುಯಿಪುರಕ್ಕೆ ಭೇಟಿ ನೀಡದಂತೆ ತಡೆಯಲು ತಮ್ಮ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಕಾಳೀಘಾಟ್ ನಿವಾಸದ ಹೊರಗೆ ಭದ್ರತಾ ಪಡೆಗಳನ್ನು ನಿಯೋಜಿಸಿದೆ ಎಂದು ವಿರೋಧ ಪಕ್ಷ ಟಿಎಂಸಿ ಆರೋಪಿಸಿದೆ. ಈ ಮೂಲಕ ಘಟನೆಯು ರಾಜಕೀಯ ತಿರುವು ಪಡೆದುಕೊಂಡಿದೆ.

ಟಿಎಂಸಿ ತನ್ನ ಎಕ್ಸ್ ಪೋಸ್ಟ್‌ನಲ್ಲಿ “ನಮ್ಮ ಅಧ್ಯಕ್ಷರಾದ ಮಮತಾ ಬ್ಯಾನರ್ಜಿ ಅವರು ಬಾರುಯಿಪುರಕ್ಕೆ ಭೇಟಿ ನೀಡಲು ಬಯಸಿದ್ದರು. ಇದನ್ನು ತಿಳಿದ ತಕ್ಷಣ, ಅವರು ಮನೆಯಿಂದ ಹೊರಹೋಗದಂತೆ ತಡೆಯಲು ಅವರ ಮನೆಯ ಹೊರಗೆ ಭಾರಿ ಪ್ರಮಾಣದ ಪೊಲೀಸ್ ಸಿಬ್ಬಂದಿ ಮತ್ತು ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ಅವರನ್ನು ತಡೆಯುವ ಈ ಪ್ರಯತ್ನಗಳ ಹೊರಾಗಿಯೂ, ನಮ್ಮ ಬೇಡಿಕೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ: #JusticeForBaruipur, ದೀದಿ ಅವರು ಸಂತ್ರಸ್ತೆಯ ಕುಟುಂಬದೊಂದಿಗೆ ದೃಢವಾಗಿ ನಿಂತಿದ್ದಾರೆ ಮತ್ತು ಅವರಿಗೆ ನ್ಯಾಯ ಸಿಗುವಂತೆ ಮಾಡಲು ಬದ್ಧರಾಗಿದ್ದಾರೆ” ಎಂದು ಬರೆದುಕೊಂಡಿದೆ.

ಇದಕ್ಕೂ ಮುನ್ನ, ಟಿಎಂಸಿ ಶಾಸಕ ಕುನಾಲ್ ಘೋಷ್ ಅವರು ಬಾರುಯಿಪುರ ಘಟನೆಯನ್ನು “ಅತ್ಯಂತ ಭೀಕರ” ಎಂದು ಕರೆದಿದ್ದರು. “ಒಬ್ಬಳು ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಈ ಪ್ರದೇಶವು ಪ್ರಕ್ಷುಬ್ಧಗೊಂಡಿದೆ. ಕೋಪದಲ್ಲಿ ಜನರು ಕಾನೂನನ್ನು ಕೈಗೆತ್ತಿಕೊಳ್ಳುವ ಅಪಾಯಕಾರಿ ಪ್ರವೃತ್ತಿ ಕಾಣಿಸುತ್ತಿದೆ. ಆರೋಪಿಗಳಲ್ಲಿ ಒಬ್ಬಾತ ತಪ್ಪಿಸಿಕೊಂಡಿದ್ದಾನೆ ಎಂಬ ಆರೋಪಗಳೂ ಕೇಳಿಬರುತ್ತಿವೆ. ಆತ ತಪ್ಪಿಸಿಕೊಂಡನೇ ಅಥವಾ ಆತನಿಗೆ ತಪ್ಪಿಸಿಕೊಳ್ಳಲು ಬಿಡಲಾಯಿತೇ?” ಎಂದು ಕುನಾಲ್ ಘೋಷ್ ತಮ್ಮ ಫೇಸ್‌ಬುಕ್ ಪುಟದಲ್ಲಿ ಪೋಸ್ಟ್ ಮಾಡಿದ್ದರು. ಜೊತೆಗೆ “ಭಯ್ ಇನ್, ಭೋರ್ಶಾ ಔಟ್ (ಭಯ ಒಳಗೆ ಬಂದಿದೆ, ಭರವಸೆ ಹೊರಹೋಗಿದೆ)” ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...