HomeUncategorizedಕೇಂದ್ರ ಸಚಿವರನ್ನು ಪಕ್ಷದ ಕಚೇರಿಯಲ್ಲಿ ಕೂಡಿ ಹಾಕಿದ ಬಿಜೆಪಿ ಕಾರ್ಯಕರ್ತರು

ಕೇಂದ್ರ ಸಚಿವರನ್ನು ಪಕ್ಷದ ಕಚೇರಿಯಲ್ಲಿ ಕೂಡಿ ಹಾಕಿದ ಬಿಜೆಪಿ ಕಾರ್ಯಕರ್ತರು

- Advertisement -
- Advertisement -

ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಸುಭಾಸ್ ಸರ್ಕಾರ್ ಅವರನ್ನು ಪಶ್ಚಿಮ ಬಂಗಾಳದ ಬಂಕುರಾದಲ್ಲಿನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಕೂಡಿ ಹಾಕಿರುವ ಘಟನೆ ನಡೆದಿದ್ದು,  ಸಚಿವರು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ.

ಬಂಕುರಾ ಕ್ಷೇತ್ರದ ಸಂಸದರಾಗಿರುವ ಸರ್ಕಾರ್ ಅವರು ಬಿಜೆಪಿ ಕಚೇರಿಯಲ್ಲಿಇರುವಾಗ ಘೋಷಣೆ ಕೂಗುತ್ತಾ ಬಂದ ಬಿಜೆಪಿ ಕಾರ್ಯಕರ್ತರ ಗುಂಪು  ಜಿಲ್ಲಾ ಕಚೇರಿಗೆ ನುಗ್ಗಿ ಕಚೇರಿಗೆ ಬೀಗ ಹಾಕಿದ್ದಾರೆ. ಸರ್ಕಾರ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಪ್ರಾಮುಖ್ಯತೆ ನೀಡುತ್ತಿಲ್ಲ ಮತ್ತು ತನಗೆ ಆಪ್ತರಾಗಿರುವವರನ್ನು ಜಿಲ್ಲಾ ಸಮಿತಿಯ ಸದಸ್ಯರನ್ನಾಗಿ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರಲ್ಲಿ ಒಬ್ಬರಾದ ಮೋಹಿತ್ ಶರ್ಮಾ ಆರೋಪಿಸಿದ್ದಾರೆ.

ಬಂಕುರಾದ ಅವರ ಸ್ವಕ್ಷೇತ್ರದಲ್ಲಿ ಈ ಘಟನೆ ನಡೆದಿದ್ದು, ಕ್ಷೇತ್ರದಲ್ಲಿನ ಬಿಜೆಪಿ ಕಾರ್ಯಕರ್ತರ ಆಂತರಿಕ ಕಚ್ಚಾಟ ಬಯಲಾಗಿದೆ. ಬಂಕುರಾ ಪೊಲೀಸರು ಸ್ಥಳಕ್ಕೆ ಬಂದು ಸಚಿವರನ್ನು ರಕ್ಷಿಸಿದ್ದಾರೆ.

ಘಟನೆಗೆ ಸಂಘಟನಾತ್ಮಕ  ವೈಷಮ್ಯ ಮತ್ತು ಪಕ್ಷದೊಳಗಿನ ಬಣ ರಾಜಕೀಯ ಕಾರಣ ಎಂದು ಪಕ್ಷದ ಮೂಲಗಳು ತಿಳಿಸಿವೆ. ಬಿಜೆಪಿಯ ಎರಡು ಗುಂಪುಗಳ ಕಾರ್ಯಕರ್ತರ ಮಾತಿನ ಚಕಮಕಿಯಿಂದಾಗಿ ಸ್ಥಳದಲ್ಲಿ ಭಾರೀ ಗೊಂದಲ ಉಂಟಾಗಿತ್ತು.

ಪೊಲೀಸರು ರಕ್ಷಿಸಿದ ನಂತರ ಸರ್ಕಾರ್ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಸರ್ಕಾರ್ ಅವರನ್ನು ಬಿಜೆಪಿ ಪಕ್ಷದ ಕಾರ್ಯಕರ್ತರು ಅವರ ಸ್ವಯಂ ಕ್ಷೇತ್ರದ ಪಕ್ಷದ ಕಚೇರಿಯಲ್ಲಿ ಕೂಡಿ ಹಾಕಿದ್ದರು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇದನ್ನು ತಿಳಿಸಿ: ವಂಚನೆ ಪ್ರಕರಣ: ಪ್ರಚೋದನಾಕಾರಿ ಭಾಷಣಗಾರ್ತಿ ಚೈತ್ರಾ ಕುಂದಾಪುರ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...