Homeಮುಖಪುಟಪ್ರತಿಭಟನಾನಿರತ ವೈದ್ಯರ ಮೇಲೆ ಹಲ್ಲೆಗೆ ಸಂಚು ಎಂದು ಟಿಎಂಸಿ ಆರೋಪಿಸಿದ ನಂತರ ಸಿಪಿಐ(ಎಂ) ಮುಖಂಡ ಸೇರಿ...

ಪ್ರತಿಭಟನಾನಿರತ ವೈದ್ಯರ ಮೇಲೆ ಹಲ್ಲೆಗೆ ಸಂಚು ಎಂದು ಟಿಎಂಸಿ ಆರೋಪಿಸಿದ ನಂತರ ಸಿಪಿಐ(ಎಂ) ಮುಖಂಡ ಸೇರಿ ಇಬ್ಬರ ಬಂಧನ!

- Advertisement -
- Advertisement -

ಕೋಲ್ಕತ್ತಾದಲ್ಲಿ ಪ್ರತಿಭಟನಾ ನಿರತ ಕಿರಿಯ ವೈದ್ಯರ ಮೇಲೆ ಹಲ್ಲೆ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಟಿಎಂಸಿ ನಾಯಕ ಆರೋಪಿಸಿದ ನಂತರ ಪೊಲೀಸರು ಸಿಪಿಐ(ಎಂ) ನಾಯಕ ಕಲಾತನ್ ದಾಸ್‌ಗುಪ್ತ ಸೇರಿ ಇಬ್ಬರನ್ನು ಶನಿವಾರ ಬಂಧಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಿಪಿಐ(ಎಂ) ನಾಯಕರು “ಪೊಲೀಸರು ಪ್ರತಿಭಟನೆ ನಡೆಸುವವರ ಬೇಡಿಕೆಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ಪಿತೂರಿಯಾಗಿದ್ದು, ಆರ್ ಜಿ ಕರ್ ಪ್ರಕರಣದಲ್ಲಿ ನ್ಯಾಯ ಕೇಳುವವರಿಗೆ ಪೊಲೀಸರು ಅನಗತ್ಯ ಕಿರುಕುಳ ನೀಡುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಜ್ಯದ ಮಮತಾ ಬ್ಯಾನರ್ಜಿ ಸರ್ಕಾರದ ಮಾನಹಾನಿ ಮಾಡುವ ಉದ್ದೇಶದಿಂದ ಸಾಲ್ಟ್ ಲೇಕ್‌ನಲ್ಲಿರುವ ಸ್ವಾಸ್ಥ್ಯ ಭವನದ ಹೊರಗೆ ಪ್ರತಿಭಟನಾ ನಿರತ ಕಿರಿಯ ವೈದ್ಯರ ಮೇಲೆ ಹಲ್ಲೆ ನಡೆಸಲು ಸಂಚು ರೂಪಿಸಲಾಗುತ್ತಿದೆ ಎಂದು ಆರೋಪಿಸಿ ಟಿಎಂಸಿ ನಾಯಕ ಕುನಾಲ್ ಘೋಷ್ ಅವರು ದೂರವಾಣಿ ಕರೆಯ ಆಡಿಯೋ ಕ್ಲಿಪ್ ಅನ್ನು ಬಿಡುಗಡೆ ಮಾಡಿದ್ದರು. ಈ ಘಟನೆ ನಂತರ ಸಿಪಿಐಎಂ ನಾಯಕರನ್ನು ಬಂಧಿಸಲಾಗಿದೆ. ಆಡಿಯೋ ಕ್ಲಿಪ್‌ಗೆ ಸಂಬಂಧಿಸಿದಂತೆ ಬಿಧಾನನಗರ ಪೊಲೀಸ್ ಕಮಿಷನರೇಟ್ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ.

ತನಿಖೆಯ ಸಮಯದಲ್ಲಿ, ಸಂಜಿಬ್ ದಾಸ್ ಎಂದು ಗುರುತಿಸಲಾದ ವ್ಯಕ್ತಿಯನ್ನು ನಿನ್ನೆ ರಾತ್ರಿ ದಕ್ಷಿಣ ಕೋಲ್ಕತ್ತಾದ ಕಸ್ಬಾದ ಹಲ್ತು ಪ್ರದೇಶದಿಂದ ಈ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಬಂಧಿಸಲಾಯಿತು ಎಂದು ವರದಿಯಾಗಿದೆ. ಆಡಿಯೋ ಕ್ಲಿಪ್‌ನಲ್ಲಿ ಧ್ವನಿ ಕೇಳಿದ ಇಬ್ಬರಲ್ಲಿ ಸಂಜೀಬ್ ದಾಸ್ ಒಬ್ಬರು ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂಓದಿ:ಲಂಚ ಮತ್ತು ಜಾತಿ ನಿಂದನೆ | ಹಿರಿಯ ಬಿಜೆಪಿ ಶಾಸಕ ಮುನಿರತ್ನ ಬಂಧನ

ಕಲಾತನ್ ಮತ್ತು ಪಕ್ಷದ ಇನ್ನೊಬ್ಬ ಸಹೋದ್ಯೋಗಿ ಲಾಲ್‌ಬಜಾರ್‌ನಲ್ಲಿರುವ ಕೋಲ್ಕತ್ತಾ ಪೊಲೀಸ್ ಪ್ರಧಾನ ಕಛೇರಿಯ ಪಕ್ಕದಲ್ಲಿರುವ ಮಧ್ಯ ಕೋಲ್ಕತ್ತಾದ ಫಿಯರ್ಸ್ ಲೇನ್‌ನಲ್ಲಿ ಎಡರಂಗದ ರಾತ್ರಿಯ ಧರಣಿ ಪ್ರತಿಭಟನೆಯಿಂದ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಅವರನ್ನು ಮಧ್ಯದಲ್ಲಿ ತೆಡೆದು ವಶಕ್ಕೆ ಪಡೆಯಲಾಗಿತ್ತು. ಅವರನ್ನು ಆರಂಭದಲ್ಲಿ ವಿಚಾರಣೆಗಾಗಿ ವಶಕ್ಕೆ ಪಡೆದು, ನಂತರ ಬಂಧಿಸಲಾಯಿತು.

ಕಲಾತನ್‌ ಅವರನ್ನು ಬಂಧಿಸಿದ ಕೂಡಲೇ ಎಲೆಕ್ಟ್ರಾನಿಕ್ಸ್ ಕಾಂಪ್ಲೆಕ್ಸ್ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಸಂಜೀಬ್ ದಾಸ್ ಜೊತೆಗೆ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

“ನಾವು ಆಡಿಯೊ ಕ್ಲಿಪ್‌ನ ತಾಂತ್ರಿಕ ಮೌಲ್ಯಮಾಪನವನ್ನು ಮಾಡಿದ್ದೇವೆ ಮತ್ತು ತಜ್ಞರಿಂದ ಅಭಿಪ್ರಾಯವನ್ನು ತೆಗೆದುಕೊಂಡಿದ್ದೇವೆ. ಆಡಿಯೋ ಕ್ಲಿಪ್‌ನಲ್ಲಿರುವ ಒಂದು ಧ್ವನಿ ತನಗೆ ಸೇರಿದ್ದು ಎಂದು ಸಂಜಿಬ್ ದಾಸ್ ಈಗಾಗಲೇ ಒಪ್ಪಿಕೊಂಡಿದ್ದಾರೆ. ನಾವು ಇಬ್ಬರನ್ನೂ ಕಸ್ಟಡಿಗೆ ಕೋರುತ್ತೇವೆ” ಎಂದು ಬಿಧಾನನಗರದ ಉಪ ಪೊಲೀಸ್ ಆಯುಕ್ತ ಅನೀಶ್ ಸರ್ಕಾರ್ ಹೇಳಿದ್ದಾರೆ. ಕ್ಲಿಪ್‌ನಲ್ಲಿ ಹೆಸರಿಸಲಾದ ‘ಬಪ್ಪಾ’, ‘ಸಾಹೇಬ್’ ಮತ್ತು ‘ದಾದು’ ಅವರನ್ನು ಗುರುತಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಬಂಧಿತ ಇಬ್ಬರನ್ನೂ ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಮತ್ತು ಪೊಲೀಸರು 14 ದಿನಗಳ ಕಾಲ ಕಸ್ಟಡಿಗೆ ಕೋರಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಪೊಲೀಸ್ ಠಾಣೆಯೊಳಗೆ ಕರೆದೊಯ್ಯುವಾಗ ಮಾತನಾಡಿದ ಬಂಧಿತ ಸಿಪಿಐ(ಎಂ) ಮುಖಂಡ ಕಲಾತಾನ್ ಅವರು, “ಆರ್‌ಜಿ ಕರ್ ಮೆಡಿಕ್ ಅತ್ಯಾಚಾರ ಮತ್ತು ಕೊಲೆಗೆ ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದೇವೆ. ಪೊಲೀಸರು ಬೇಡಿಕೆಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸತ್ತಿದ್ದಾರೆ. ಇದು ನನ್ನ ವಿರುದ್ಧದ ಪಿತೂರಿ” ಎಂದು ಆರೋಪಿಸಿದ್ದಾರೆ.

ಇದನ್ನೂಓದಿ:ಪಾವಗಡದಲ್ಲಿ ಸಿಂಹ ಎಂದು ಸುಳ್ಳು ವಿಡಿಯೊ ಪ್ರಸಾರ ಮಾಡಿದ ‘ಝೀ ಕನ್ನಡ ನ್ಯೂಸ್’

“ಇದು ಪೊಲೀಸರ ಅಪಕ್ವ ನಡೆ. ರಾಜ್ಯ ಪೊಲೀಸರು ಮೊದಲು ಟಿಎಂಸಿ ನಾಯಕ ಕುನಾಲ್ ಘೋಷ್ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಬೇಕು. ಅವರು ಈ ಕ್ಲಿಪ್ ಹೇಗೆ ಪಡೆದರು ಎಂಬುದನ್ನು ಕಂಡುಹಿಡಿಯಬೇಕು. ಅದರ ಬದಲು ಆರ್ ಜಿ ಕರ್ ಪ್ರಕರಣದಲ್ಲಿ ನ್ಯಾಯ ಕೇಳುವವರಿಗೆ ಪೊಲೀಸರು ಅನಗತ್ಯ ಕಿರುಕುಳ ನೀಡುತ್ತಿದ್ದಾರೆ. ಇದರ ಅಂತ್ಯವನ್ನು ನಾವು ನೋಡಲಿದ್ದೇವೆ” ಎಂದು ಕೋಲ್ಕತ್ತಾದ ಮಾಜಿ ಮೇಯರ್ ಮತ್ತು ಸಿಪಿಐ(ಎಂ) ರಾಜ್ಯಸಭಾ ಸಂಸದ ಬಿಕಾಶ್ ಭಟ್ಟಾಚಾರ್ಯ ಹೇಳಿದ್ದಾರೆ.

ಈ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕೋರಿದ ಅವರು, ಪಿತೂರಿ ಎಷ್ಟು ಆಳವಾಗಿದೆ ಎಂಬುದನ್ನು ಪರಿಶೀಲಿಸಬೇಕು ಎಂದು ಹೇಳಿದ್ದಾರೆ. ಸಿಪಿಐ(ಎಂ) ನಾಯಕರಾದ ಸುಜನ್ ಚಕ್ರವರ್ತಿ ಮತ್ತು ಸತರುಪ್ ಘೋಷ್ ಅವರು ಕಲಾತನ್ ದಾಸ್‌ಗುಪ್ತಾ ಬಂಧನವನ್ನು ಟೀಕಿಸಿದ್ದು, ಆಡಿಯೊ ಕ್ಲಿಪ್ ಅನ್ನು ಎಐ ತಂತ್ರಜ್ಞಾನವನ್ನು ಬಳಸಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಭದ್ರತೆ ಮತ್ತು ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಉನ್ನತ ಅಧಿಕಾರಿಗಳನ್ನು ವಜಾಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳೊಂದಿಗೆ ವೈದ್ಯಾಧಿಕಾರಿಗಳು ಮಂಗಳವಾರದಿಂದ ರಾಜ್ಯ ಆರೋಗ್ಯ ಇಲಾಖೆಯ ಪ್ರಧಾನ ಕಛೇರಿಯಾದ ಸ್ವಾಸ್ಥ್ಯ ಭವನದ ಹೊರಗೆ ಮೊಕ್ಕಾಂ ಹೂಡಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ ಮತ್ತು ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...