Homeಚಳವಳಿಪ್ರತಿಭಟನಾ ನಿರತ ರೈತರಿಗೆ ಪ್ರಸ್ತಾವನೆ ಸಲ್ಲಿಸಿದ ಕೇಂದ್ರ ಸರ್ಕಾರ - ಮಂಡಿಯೂರಿತೆ ಬಿಜೆಪಿ?

ಪ್ರತಿಭಟನಾ ನಿರತ ರೈತರಿಗೆ ಪ್ರಸ್ತಾವನೆ ಸಲ್ಲಿಸಿದ ಕೇಂದ್ರ ಸರ್ಕಾರ – ಮಂಡಿಯೂರಿತೆ ಬಿಜೆಪಿ?

- Advertisement -
- Advertisement -

ಕೇಂದ್ರ ಸರ್ಕಾರದ ತಂಡವೊಂದು ಶನಿವಾರ ತಮಗೆ ಪ್ರಸ್ತಾವನೆಯೊಂದನ್ನು ನೀಡಿದ್ದು, ಅದನ್ನು ನಾವು ಪರಿಶೀಲಿಸುತ್ತಿದ್ದೇವೆ ಎಂದು ಖಾನೌರಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು ಹೇಳಿದ್ದಾರೆ. ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿರುವ ಭಾರತೀಯ ಅರಣ್ಯ ಸೇವಾ ಅಧಿಕಾರಿ ಪ್ರಿಯ ರಂಜನ್ ನೇತೃತ್ವದ ಉನ್ನತ ಮಟ್ಟದ ಕೇಂದ್ರ ಸರ್ಕಾರದ ತಂಡವು ಖಾನೌರಿ ಗಡಿಗೆ ಭೇಟಿ ನೀಡಿ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರನ್ನು ಭೇಟಿ ಮಾಡಿದೆ ಎಂದು ತಿಳಿದು ಬಂದಿದೆ. ಪ್ರತಿಭಟನಾ ನಿರತ

ದಲ್ಲೆವಾಲ್ ಅವರು ಕೇಂದ್ರ ಸರ್ಕಾರದ ವಿರುದ್ಧ ನಡೆಸುತ್ತಿರುವ ಆಮರಣಾಂತ ಉಪವಾಸ 54 ನೇ ದಿನಕ್ಕೆ ಕಾಲಿಟ್ಟಿದೆ. ದಲ್ಲೆವಾಲ್ ಅವರ ಆರೋಗ್ಯದ ಬಗ್ಗೆ ತಮಗೆ ಕಾಳಜಿಯಿದ್ದು, ಅವರ ಸ್ಥಿತಿಯ ಬಗ್ಗೆ ವಿಚಾರಿಸಲು ಬಂದಿರುವುದಾಗಿ ರಂಜನ್ ಹೇಳಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ.

ಕೇಂದ್ರದ ಅಧಿಕಾರಿಗಳು ದಲ್ಲೆವಾಲ್ ಅವರನ್ನು ಭೇಟಿಯಾಗಿದ್ದು, ಅವರು ಎರಡೂ ರೈತ ಸಂಘಗಳಾದ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ನಾಯಕರೊಂದಿಗೆ ಮಾತನಾಡಲು ಕೇಳಿಕೊಂಡಿದ್ದಾರೆ ಎಂದು ರೈತ ನಾಯಕ ಅಭಿಮನ್ಯು ಕೊಹರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರೈತರ ಬೇಡಿಕೆಗಳ ಕುರಿತು ಎರಡೂ ಸಂಘಗಳ ನಾಯಕರು ಕೇಂದ್ರ ಸರ್ಕಾರದ ಅಧಿಕಾರಿಗಳೊಂದಿಗೆ ಎರಡು ಗಂಟೆಗಳ ಕಾಲ ಸಭೆ ನಡೆಸಿದ್ದಾರೆ. ರೈತ ನಾಯಕ ಕಾಕಾ ಸಿಂಗ್ ಕೋಟಾಲ ಸಭೆಯಿಂದ ಹೊರಬಂದು ಅಧಿಕಾರಿಗಳು ತಮಗೆ ಪ್ರಸ್ತಾವನೆಯನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ. “ಎರಡೂ ಸಂಘಟನೆಗಳ ನಾಯಕರು ಇದರ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ” ಎಂದು ಅವರು ಹೇಳಿದ್ದಾರೆ. ಪ್ರತಿಭಟನಾ ನಿರತ

ಭಾನುವಾರ ಮುಂಜಾನೆ, 2020-21ರ ರೈತರ ಪ್ರತಿಭಟನೆಗೆ ನೇತೃತ್ವ ವಹಿಸಿದ್ದ ರೈತ ಸಂಘಗಳ ಒಕ್ಕೂಟವಾದ ಎಸ್‌ಕೆಎಂ (ರಾಜಕೀಯೇತರ) ಮತ್ತು ಕೆಎಂಎಂ ನಾಯಕರ ನಡುವೆ ಮತ್ತೊಮ್ಮೆ ಒಗ್ಗಟ್ಟು ಮೂಡಿಸಲು ನಡೆದ ಎರಡನೇ ಸಭೆ ಕೂಡಾ ವಿಫಲವಾಗಿದೆ ಎಂದು ವರದಿಯಾಗಿದೆ. ಪತ್ರಾನ್‌ನಲ್ಲಿ ನಡೆದ ರೈತ ಸಂಘಗಳ ನಡುವಿನ ಈ ಸಭೆಯು ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು ಅಂತಿಮಗೊಳಿಸುವ ಉದ್ದೇಶವನ್ನು ಹೊಂದಿತ್ತು.

ಮೂರು ಗಂಟೆಗಳಿಗೂ ಹೆಚ್ಚು ಕಾಲ ನಡೆದ ಸಭೆಯ ನಂತರ, ಕಿಸಾನ್ ಮಜ್ದೂರ್ ಮೋರ್ಚಾದ ಸಂಯೋಜಕ ಸರ್ವಾನ್ ಸಿಂಗ್ ಪಂಧೇರ್, ಅವರು ಕನಿಷ್ಠ ಏಕತೆಯತ್ತ ಹೆಜ್ಜೆ ಇಟ್ಟಿದ್ದಾರೆ ಆದರೆ ನಮ್ಮ ಉದ್ದೇಶ ಗರಿಷ್ಠ ಏಕತೆ ಎಂದು ಹೇಳಿಕೊಂಡಿದ್ದಾರೆ. ರೈತ ನಾಯಕ ದಲ್ಲೆವಾಲ್ ಅವರ ಆರೋಗ್ಯ ಕ್ಷೀಣಿಸುತ್ತಿರುವುದನ್ನು ಪರಿಗಣಿಸಿ ಮುಂದಿನ ಸಭೆಯನ್ನು ಮುಂದೂಡುವಂತೆ ಅವರು ಎಸ್‌ಕೆಎಂ ಆರು ಸದಸ್ಯರ ಸಮಿತಿಯನ್ನು ಒತ್ತಾಯಿಸಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಆಮರಣಾಂತ ಉಪವಾಸ ನಡೆಸುತ್ತಿರುವ ರೈತ ನಾಯಕ ಸುಖಜಿತ್ ಸಿಂಗ್ ಹಾರ್ಡೋ ಝಾಂಡೆ ಅವರು ಅನಾರೋಗ್ಯದಿಂದ ಸಭೆಯಿಂದ ಹೊರನಡೆಯಬೇಕಾಯಿತು. ಇದಲ್ಲದೆ, ರೈತ ನಾಯಕ ದಲ್ಲೆವಾಲ್ ಅವರ ಆರೋಗ್ಯ ಹದಗೆಟ್ಟ ಕಾರಣ ಸಭೆಯನ್ನು ಮೊಟಕುಗೊಳಿಸಲಾಯಿತು. ಜನವರಿ 24 ರಂದು ನಡೆಯಲಿರುವ ಎಸ್‌ಕೆಎಂ ಸಾಮಾನ್ಯ ಸಭೆಯ ನಂತರ ಮುಂದಿನ ಸಭೆಯ ದಿನಾಂಕವನ್ನು ಘೋಷಿಸಲಾಗುವುದು.

ಸಭೆಯಲ್ಲಿ ಭಾಗವಹಿಸಿದ್ದ ಪ್ರಮುಖ ರೈತ ನಾಯಕರಲ್ಲಿ ಜೋಗಿಂದರ್ ಸಿಂಗ್ ಉಗ್ರನ್, ಬಲ್ಬೀರ್ ಸಿಂಗ್ ರಾಜೇವಾಲ್, ದರ್ಶನ್ ಪಾಲ್ ಮತ್ತು ಸರ್ವಾನ್ ಸಿಂಗ್ ಪಂಧೇರ್ ಸೇರಿದ್ದಾರೆ. ಎಂಎಸ್‌ಪಿಗೆ ಕಾನೂನುಬದ್ಧ ಖಾತರಿ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ ಮತ್ತು ಸಾಲ ಮನ್ನಾ ಸೇರಿದಂತೆ ನಿರ್ಣಾಯಕ ಬೇಡಿಕೆಗಳ ಸುತ್ತ ಚರ್ಚೆಗಳು ನಡೆದಿದ್ದವು.

ಇದನ್ನೂಓದಿ:  ವೈದ್ಯನ ವಿರುದ್ಧ ದಲಿತ ಮಹಿಳೆಯಿಂದ ಲೈಂಗಿಕ ಕಿರುಕುಳ ದೂರು; ಎಸ್‌ಪಿಯಿಂದ ವಿವರಣೆ ಕೇಳಿದ ಎನ್‌ಸಿಎಸ್‌ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...