Homeಚಳವಳಿಪ್ರತಿಭಟನಾ ನಿರತ ರೈತರಿಗೆ ಪ್ರಸ್ತಾವನೆ ಸಲ್ಲಿಸಿದ ಕೇಂದ್ರ ಸರ್ಕಾರ - ಮಂಡಿಯೂರಿತೆ ಬಿಜೆಪಿ?

ಪ್ರತಿಭಟನಾ ನಿರತ ರೈತರಿಗೆ ಪ್ರಸ್ತಾವನೆ ಸಲ್ಲಿಸಿದ ಕೇಂದ್ರ ಸರ್ಕಾರ – ಮಂಡಿಯೂರಿತೆ ಬಿಜೆಪಿ?

- Advertisement -
- Advertisement -

ಕೇಂದ್ರ ಸರ್ಕಾರದ ತಂಡವೊಂದು ಶನಿವಾರ ತಮಗೆ ಪ್ರಸ್ತಾವನೆಯೊಂದನ್ನು ನೀಡಿದ್ದು, ಅದನ್ನು ನಾವು ಪರಿಶೀಲಿಸುತ್ತಿದ್ದೇವೆ ಎಂದು ಖಾನೌರಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು ಹೇಳಿದ್ದಾರೆ. ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿರುವ ಭಾರತೀಯ ಅರಣ್ಯ ಸೇವಾ ಅಧಿಕಾರಿ ಪ್ರಿಯ ರಂಜನ್ ನೇತೃತ್ವದ ಉನ್ನತ ಮಟ್ಟದ ಕೇಂದ್ರ ಸರ್ಕಾರದ ತಂಡವು ಖಾನೌರಿ ಗಡಿಗೆ ಭೇಟಿ ನೀಡಿ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರನ್ನು ಭೇಟಿ ಮಾಡಿದೆ ಎಂದು ತಿಳಿದು ಬಂದಿದೆ. ಪ್ರತಿಭಟನಾ ನಿರತ

ದಲ್ಲೆವಾಲ್ ಅವರು ಕೇಂದ್ರ ಸರ್ಕಾರದ ವಿರುದ್ಧ ನಡೆಸುತ್ತಿರುವ ಆಮರಣಾಂತ ಉಪವಾಸ 54 ನೇ ದಿನಕ್ಕೆ ಕಾಲಿಟ್ಟಿದೆ. ದಲ್ಲೆವಾಲ್ ಅವರ ಆರೋಗ್ಯದ ಬಗ್ಗೆ ತಮಗೆ ಕಾಳಜಿಯಿದ್ದು, ಅವರ ಸ್ಥಿತಿಯ ಬಗ್ಗೆ ವಿಚಾರಿಸಲು ಬಂದಿರುವುದಾಗಿ ರಂಜನ್ ಹೇಳಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ.

ಕೇಂದ್ರದ ಅಧಿಕಾರಿಗಳು ದಲ್ಲೆವಾಲ್ ಅವರನ್ನು ಭೇಟಿಯಾಗಿದ್ದು, ಅವರು ಎರಡೂ ರೈತ ಸಂಘಗಳಾದ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ನಾಯಕರೊಂದಿಗೆ ಮಾತನಾಡಲು ಕೇಳಿಕೊಂಡಿದ್ದಾರೆ ಎಂದು ರೈತ ನಾಯಕ ಅಭಿಮನ್ಯು ಕೊಹರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರೈತರ ಬೇಡಿಕೆಗಳ ಕುರಿತು ಎರಡೂ ಸಂಘಗಳ ನಾಯಕರು ಕೇಂದ್ರ ಸರ್ಕಾರದ ಅಧಿಕಾರಿಗಳೊಂದಿಗೆ ಎರಡು ಗಂಟೆಗಳ ಕಾಲ ಸಭೆ ನಡೆಸಿದ್ದಾರೆ. ರೈತ ನಾಯಕ ಕಾಕಾ ಸಿಂಗ್ ಕೋಟಾಲ ಸಭೆಯಿಂದ ಹೊರಬಂದು ಅಧಿಕಾರಿಗಳು ತಮಗೆ ಪ್ರಸ್ತಾವನೆಯನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ. “ಎರಡೂ ಸಂಘಟನೆಗಳ ನಾಯಕರು ಇದರ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ” ಎಂದು ಅವರು ಹೇಳಿದ್ದಾರೆ. ಪ್ರತಿಭಟನಾ ನಿರತ

ಭಾನುವಾರ ಮುಂಜಾನೆ, 2020-21ರ ರೈತರ ಪ್ರತಿಭಟನೆಗೆ ನೇತೃತ್ವ ವಹಿಸಿದ್ದ ರೈತ ಸಂಘಗಳ ಒಕ್ಕೂಟವಾದ ಎಸ್‌ಕೆಎಂ (ರಾಜಕೀಯೇತರ) ಮತ್ತು ಕೆಎಂಎಂ ನಾಯಕರ ನಡುವೆ ಮತ್ತೊಮ್ಮೆ ಒಗ್ಗಟ್ಟು ಮೂಡಿಸಲು ನಡೆದ ಎರಡನೇ ಸಭೆ ಕೂಡಾ ವಿಫಲವಾಗಿದೆ ಎಂದು ವರದಿಯಾಗಿದೆ. ಪತ್ರಾನ್‌ನಲ್ಲಿ ನಡೆದ ರೈತ ಸಂಘಗಳ ನಡುವಿನ ಈ ಸಭೆಯು ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು ಅಂತಿಮಗೊಳಿಸುವ ಉದ್ದೇಶವನ್ನು ಹೊಂದಿತ್ತು.

ಮೂರು ಗಂಟೆಗಳಿಗೂ ಹೆಚ್ಚು ಕಾಲ ನಡೆದ ಸಭೆಯ ನಂತರ, ಕಿಸಾನ್ ಮಜ್ದೂರ್ ಮೋರ್ಚಾದ ಸಂಯೋಜಕ ಸರ್ವಾನ್ ಸಿಂಗ್ ಪಂಧೇರ್, ಅವರು ಕನಿಷ್ಠ ಏಕತೆಯತ್ತ ಹೆಜ್ಜೆ ಇಟ್ಟಿದ್ದಾರೆ ಆದರೆ ನಮ್ಮ ಉದ್ದೇಶ ಗರಿಷ್ಠ ಏಕತೆ ಎಂದು ಹೇಳಿಕೊಂಡಿದ್ದಾರೆ. ರೈತ ನಾಯಕ ದಲ್ಲೆವಾಲ್ ಅವರ ಆರೋಗ್ಯ ಕ್ಷೀಣಿಸುತ್ತಿರುವುದನ್ನು ಪರಿಗಣಿಸಿ ಮುಂದಿನ ಸಭೆಯನ್ನು ಮುಂದೂಡುವಂತೆ ಅವರು ಎಸ್‌ಕೆಎಂ ಆರು ಸದಸ್ಯರ ಸಮಿತಿಯನ್ನು ಒತ್ತಾಯಿಸಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಆಮರಣಾಂತ ಉಪವಾಸ ನಡೆಸುತ್ತಿರುವ ರೈತ ನಾಯಕ ಸುಖಜಿತ್ ಸಿಂಗ್ ಹಾರ್ಡೋ ಝಾಂಡೆ ಅವರು ಅನಾರೋಗ್ಯದಿಂದ ಸಭೆಯಿಂದ ಹೊರನಡೆಯಬೇಕಾಯಿತು. ಇದಲ್ಲದೆ, ರೈತ ನಾಯಕ ದಲ್ಲೆವಾಲ್ ಅವರ ಆರೋಗ್ಯ ಹದಗೆಟ್ಟ ಕಾರಣ ಸಭೆಯನ್ನು ಮೊಟಕುಗೊಳಿಸಲಾಯಿತು. ಜನವರಿ 24 ರಂದು ನಡೆಯಲಿರುವ ಎಸ್‌ಕೆಎಂ ಸಾಮಾನ್ಯ ಸಭೆಯ ನಂತರ ಮುಂದಿನ ಸಭೆಯ ದಿನಾಂಕವನ್ನು ಘೋಷಿಸಲಾಗುವುದು.

ಸಭೆಯಲ್ಲಿ ಭಾಗವಹಿಸಿದ್ದ ಪ್ರಮುಖ ರೈತ ನಾಯಕರಲ್ಲಿ ಜೋಗಿಂದರ್ ಸಿಂಗ್ ಉಗ್ರನ್, ಬಲ್ಬೀರ್ ಸಿಂಗ್ ರಾಜೇವಾಲ್, ದರ್ಶನ್ ಪಾಲ್ ಮತ್ತು ಸರ್ವಾನ್ ಸಿಂಗ್ ಪಂಧೇರ್ ಸೇರಿದ್ದಾರೆ. ಎಂಎಸ್‌ಪಿಗೆ ಕಾನೂನುಬದ್ಧ ಖಾತರಿ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ ಮತ್ತು ಸಾಲ ಮನ್ನಾ ಸೇರಿದಂತೆ ನಿರ್ಣಾಯಕ ಬೇಡಿಕೆಗಳ ಸುತ್ತ ಚರ್ಚೆಗಳು ನಡೆದಿದ್ದವು.

ಇದನ್ನೂಓದಿ:  ವೈದ್ಯನ ವಿರುದ್ಧ ದಲಿತ ಮಹಿಳೆಯಿಂದ ಲೈಂಗಿಕ ಕಿರುಕುಳ ದೂರು; ಎಸ್‌ಪಿಯಿಂದ ವಿವರಣೆ ಕೇಳಿದ ಎನ್‌ಸಿಎಸ್‌ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...