Homeಮುಖಪುಟಹರಿಯಾಣ ಮುಖ್ಯಮಂತ್ರಿ ವಿರುದ್ಧ ಪ್ರತಿಭಟನೆ ನಡೆಸಿದ ರೈತರ ಮೇಲೆ ಲಾಠಿಚಾರ್ಜ್- ಹಲವರಿಗೆ ಗಾಯ

ಹರಿಯಾಣ ಮುಖ್ಯಮಂತ್ರಿ ವಿರುದ್ಧ ಪ್ರತಿಭಟನೆ ನಡೆಸಿದ ರೈತರ ಮೇಲೆ ಲಾಠಿಚಾರ್ಜ್- ಹಲವರಿಗೆ ಗಾಯ

- Advertisement -
- Advertisement -

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಭಾಗವಹಿಸಿದ ಕಾರ್ಯಕ್ರಮವೊಂದರಲ್ಲಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಹರಿಯಾಣ ಪೊಲೀಸರು ರೈತರ ಮೇಲೆ ಲಾಠಿಚಾರ್ಜ್ ನಡೆಸಿದ್ದಾರೆ. ಘಟನೆಯಲ್ಲಿ ಹಲವಾರು ರೈತರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ರೈತ ವಿರೋಧಿ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ಕಳೆದ 6 ತಿಂಗಳಿನಿಂದ, ಪಂಜಾಬ್‌ನಲ್ಲಿ ಕಳೆದ ಸೆಪ್ಟಂಬರ್‌ ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕಾನೂನುಗಳನ್ನು ಬೆಂಬಲಿಸುತ್ತಿರುವ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಹಿಸ್ಸಾರ್‌ ಜಿಲ್ಲೆಗೆ ಭೇಟಿ ನೀಡುವುದರ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ವೇಳೆ ರೈತರ ಮೇಲೆ ಪೊಲೀಸರು ಲಾಠಿಚಾರ್ಚ್‌ ಮಾಡಿದ್ದಾರೆ. ಇದರಲ್ಲಿ ಹಲವು ರೈತರು ಗಾಯಗೊಂಡಿದ್ದಾರೆ.

ಪೊಲೀಸರು ಪ್ಲಾಸ್ಟಿಕ್ ಗುಂಡುಗಳನ್ನು ಹಾರಿಸಿದ್ದಾರೆ ಮತ್ತು ಹಲವಾರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ. ಬ್ಯಾರಿಕೇಡ್‌ಗಳನ್ನು ತೆಗೆದ ರೈತರನ್ನು ಚದುರಿಸಲು ಪೊಲೀಸರು ಅಶ್ರುವಾಯು ಬಳಸಿದ್ದಾರೆ.ಹಲವು ರೈತರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು: ಮೇ 26 ರಂದು ಕಪ್ಪು ದಿನ ಆಚರಿಸಲು ರೈತರ ನಿರ್ಧಾರ

ಹರಿಯಾಣದ ಹಿಸಾರ್‌ನಲ್ಲಿ ಪೊಲೀಸರು ಮತ್ತು ರೈತರ ನಡುವೆ ನಡೆದ ಜಟಾಪಟಿ ವೇಳೆ ರೈತರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿ, ಅಶ್ರುವಾಯು ಸಿಡಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಘಟನೆಯ ನಂತರ ಸುಮಾರು ಎರಡು ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿ 9 ಯನ್ನು ರೈತರು ತಡೆದಿದ್ದರು. ಹಿಸಾರ್‌ಗೆ ಆಗಮಿಸಿದ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ಗುರ್ನಮ್ ಸಿಂಗ್ ಚಾರುಣಿ, ಬಂಧಿಸಿರುವ ಎಲ್ಲ ರೈತರನ್ನು ಬಿಡುಗಡೆ ಮಾಡದಿದ್ದರೆ, ಪ್ರತಿಭಟನಾಕಾರರು ಹರಿಯಾಣದ ಎಲ್ಲಾ ಪೊಲೀಸ್ ಠಾಣೆಗಳನ್ನು ಘೇರಾವ್ ಹಾಕಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲೂ ಕಾಣಿಸಲು ಶುರುವಾದ ’ಲಸಿಕೆ ಸಂಗ್ರಹವಿಲ್ಲ’ ಬೋರ್ಡ್‌ಗಳು!

ಹರಿಯಾಣದ ಹಿಸ್ಸಾರ್‌ನಲ್ಲಿ 500 ಬೆಡ್‌ಗಳ ಕೊರೊನಾ ಸೆಂಟರ್‌ ಉದ್ಘಾಟಿಸಲು ಮುಖ್ಯಮಂತ್ರಿ ಖಟ್ಟರ್‌ ಜಿಲ್ಲೆಗೆ  ಆಗಮಿಸಿದ್ದರು. ಕಳೆದ ಆರು ತಿಂಗಳಿನಿಂದ ನಡೆಯುತ್ತಿರುವ ರೈತ ಹೋರಾಟವನ್ನು ವಿರೋಧಿಸುತ್ತಲೇ ಬಂದಿರುವ ಖಟ್ಟರ್‌ ಅವರನ್ನು ಈವರೆಗೂ ಜಿಲ್ಲೆಗೆ ಬರಲು ರೈತರು ಅವಕಾಶ ನೀಡಿಲ್ಲ.

“ಅವರು ಉದ್ದೇಶಪೂರ್ವಕವಾಗಿ ಜಿಲ್ಲೆಗೆ ಬರುತ್ತಿ‌ದ್ದಾರೆ. ಅವರು ಕೊರೊನಾ ಹರಡುತ್ತಿದ್ದಾರೆ ಮತ್ತು ಅದಕ್ಕಾಗಿ ನಮ್ಮನ್ನು ದೂಷಿಸುತ್ತಿದ್ದಾರೆ” ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ಗುರ್ನಮ್ ಸಿಂಗ್ ಚಾರುಣಿ ಹಿಸಾರ್‌ಗೆ ಬರುವ ಮೊದಲು ವಿಡಿಯೋ ಸಂದೇಶದಲ್ಲಿ ಹೇಳಿದ್ದರು.

ಹರಿಯಾಣದಲ್ಲಿ ಕಳೆದ ಎರಡು ವಾರಗಳಿಂದ ಲಾಕ್‌ಡೌನ್ ಜಾರಿಯಲ್ಲಿದೆ. ಜೊತೆಗೆ ಸಾಂಕ್ರಾಮಿಕ ರೋಗದಿಂದಾಗಿ ಮೇ 24 ರವರೆಗೆ ಅದನ್ನು ಇನ್ನೊಂದು ವಾರ ವಿಸ್ತರಿಸಿದೆ. ಇವುಗಳ ನಡುವೆ ಕೊರೊನಾ ಆರೈಕೆ ಕೇಂದ್ರವನ್ನು ಉದ್ಘಾಟಿಸಲು ಮುಖ್ಯಮಂತ್ರಿ ಖಟ್ಟರ್ ಭಾನುವಾತ ಹಿಸಾರ್‌ಗೆ ಬಂದಿದ್ದರು.


ಇದನ್ನೂ ಓದಿ: ಕೊರೊನಾ ಲಸಿಕೆ ಖರೀದಿಗೆ ಕಾಂಗ್ರೆಸ್‌ನಿಂದ 100 ಕೋಟಿ ನೆರವು- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...