Homeಮುಖಪುಟಹರಿಯಾಣ ಮುಖ್ಯಮಂತ್ರಿ ವಿರುದ್ಧ ಪ್ರತಿಭಟನೆ ನಡೆಸಿದ ರೈತರ ಮೇಲೆ ಲಾಠಿಚಾರ್ಜ್- ಹಲವರಿಗೆ ಗಾಯ

ಹರಿಯಾಣ ಮುಖ್ಯಮಂತ್ರಿ ವಿರುದ್ಧ ಪ್ರತಿಭಟನೆ ನಡೆಸಿದ ರೈತರ ಮೇಲೆ ಲಾಠಿಚಾರ್ಜ್- ಹಲವರಿಗೆ ಗಾಯ

- Advertisement -
- Advertisement -

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಭಾಗವಹಿಸಿದ ಕಾರ್ಯಕ್ರಮವೊಂದರಲ್ಲಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಹರಿಯಾಣ ಪೊಲೀಸರು ರೈತರ ಮೇಲೆ ಲಾಠಿಚಾರ್ಜ್ ನಡೆಸಿದ್ದಾರೆ. ಘಟನೆಯಲ್ಲಿ ಹಲವಾರು ರೈತರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ರೈತ ವಿರೋಧಿ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ಕಳೆದ 6 ತಿಂಗಳಿನಿಂದ, ಪಂಜಾಬ್‌ನಲ್ಲಿ ಕಳೆದ ಸೆಪ್ಟಂಬರ್‌ ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕಾನೂನುಗಳನ್ನು ಬೆಂಬಲಿಸುತ್ತಿರುವ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಹಿಸ್ಸಾರ್‌ ಜಿಲ್ಲೆಗೆ ಭೇಟಿ ನೀಡುವುದರ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ವೇಳೆ ರೈತರ ಮೇಲೆ ಪೊಲೀಸರು ಲಾಠಿಚಾರ್ಚ್‌ ಮಾಡಿದ್ದಾರೆ. ಇದರಲ್ಲಿ ಹಲವು ರೈತರು ಗಾಯಗೊಂಡಿದ್ದಾರೆ.

ಪೊಲೀಸರು ಪ್ಲಾಸ್ಟಿಕ್ ಗುಂಡುಗಳನ್ನು ಹಾರಿಸಿದ್ದಾರೆ ಮತ್ತು ಹಲವಾರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ. ಬ್ಯಾರಿಕೇಡ್‌ಗಳನ್ನು ತೆಗೆದ ರೈತರನ್ನು ಚದುರಿಸಲು ಪೊಲೀಸರು ಅಶ್ರುವಾಯು ಬಳಸಿದ್ದಾರೆ.ಹಲವು ರೈತರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು: ಮೇ 26 ರಂದು ಕಪ್ಪು ದಿನ ಆಚರಿಸಲು ರೈತರ ನಿರ್ಧಾರ

ಹರಿಯಾಣದ ಹಿಸಾರ್‌ನಲ್ಲಿ ಪೊಲೀಸರು ಮತ್ತು ರೈತರ ನಡುವೆ ನಡೆದ ಜಟಾಪಟಿ ವೇಳೆ ರೈತರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿ, ಅಶ್ರುವಾಯು ಸಿಡಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಘಟನೆಯ ನಂತರ ಸುಮಾರು ಎರಡು ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿ 9 ಯನ್ನು ರೈತರು ತಡೆದಿದ್ದರು. ಹಿಸಾರ್‌ಗೆ ಆಗಮಿಸಿದ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ಗುರ್ನಮ್ ಸಿಂಗ್ ಚಾರುಣಿ, ಬಂಧಿಸಿರುವ ಎಲ್ಲ ರೈತರನ್ನು ಬಿಡುಗಡೆ ಮಾಡದಿದ್ದರೆ, ಪ್ರತಿಭಟನಾಕಾರರು ಹರಿಯಾಣದ ಎಲ್ಲಾ ಪೊಲೀಸ್ ಠಾಣೆಗಳನ್ನು ಘೇರಾವ್ ಹಾಕಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲೂ ಕಾಣಿಸಲು ಶುರುವಾದ ’ಲಸಿಕೆ ಸಂಗ್ರಹವಿಲ್ಲ’ ಬೋರ್ಡ್‌ಗಳು!

ಹರಿಯಾಣದ ಹಿಸ್ಸಾರ್‌ನಲ್ಲಿ 500 ಬೆಡ್‌ಗಳ ಕೊರೊನಾ ಸೆಂಟರ್‌ ಉದ್ಘಾಟಿಸಲು ಮುಖ್ಯಮಂತ್ರಿ ಖಟ್ಟರ್‌ ಜಿಲ್ಲೆಗೆ  ಆಗಮಿಸಿದ್ದರು. ಕಳೆದ ಆರು ತಿಂಗಳಿನಿಂದ ನಡೆಯುತ್ತಿರುವ ರೈತ ಹೋರಾಟವನ್ನು ವಿರೋಧಿಸುತ್ತಲೇ ಬಂದಿರುವ ಖಟ್ಟರ್‌ ಅವರನ್ನು ಈವರೆಗೂ ಜಿಲ್ಲೆಗೆ ಬರಲು ರೈತರು ಅವಕಾಶ ನೀಡಿಲ್ಲ.

“ಅವರು ಉದ್ದೇಶಪೂರ್ವಕವಾಗಿ ಜಿಲ್ಲೆಗೆ ಬರುತ್ತಿ‌ದ್ದಾರೆ. ಅವರು ಕೊರೊನಾ ಹರಡುತ್ತಿದ್ದಾರೆ ಮತ್ತು ಅದಕ್ಕಾಗಿ ನಮ್ಮನ್ನು ದೂಷಿಸುತ್ತಿದ್ದಾರೆ” ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ಗುರ್ನಮ್ ಸಿಂಗ್ ಚಾರುಣಿ ಹಿಸಾರ್‌ಗೆ ಬರುವ ಮೊದಲು ವಿಡಿಯೋ ಸಂದೇಶದಲ್ಲಿ ಹೇಳಿದ್ದರು.

ಹರಿಯಾಣದಲ್ಲಿ ಕಳೆದ ಎರಡು ವಾರಗಳಿಂದ ಲಾಕ್‌ಡೌನ್ ಜಾರಿಯಲ್ಲಿದೆ. ಜೊತೆಗೆ ಸಾಂಕ್ರಾಮಿಕ ರೋಗದಿಂದಾಗಿ ಮೇ 24 ರವರೆಗೆ ಅದನ್ನು ಇನ್ನೊಂದು ವಾರ ವಿಸ್ತರಿಸಿದೆ. ಇವುಗಳ ನಡುವೆ ಕೊರೊನಾ ಆರೈಕೆ ಕೇಂದ್ರವನ್ನು ಉದ್ಘಾಟಿಸಲು ಮುಖ್ಯಮಂತ್ರಿ ಖಟ್ಟರ್ ಭಾನುವಾತ ಹಿಸಾರ್‌ಗೆ ಬಂದಿದ್ದರು.


ಇದನ್ನೂ ಓದಿ: ಕೊರೊನಾ ಲಸಿಕೆ ಖರೀದಿಗೆ ಕಾಂಗ್ರೆಸ್‌ನಿಂದ 100 ಕೋಟಿ ನೆರವು- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...